Homeರಾಜಕೀಯಉದ್ಯೋಗ ನಿರ್ನಾಮ ಮುಚ್ಚಲು ಮಂದಿರ ನಿರ್ಮಾಣ!

ಉದ್ಯೋಗ ನಿರ್ನಾಮ ಮುಚ್ಚಲು ಮಂದಿರ ನಿರ್ಮಾಣ!

- Advertisement -
- Advertisement -

-ಮಲ್ಲನಗೌಡರ್. ಪಿ. ಕೆ. |

ಕಳೆದ ವಾರ ಪ್ರಮುಖ ದೈನಿಕಗಳಲ್ಲಿ ಎರಡು ಮುಖಪುಟ ಸುದ್ದಿಗಳಿದ್ದವು. ಒಂದು, ಉದ್ಯೋಗ-ನಿರುದ್ಯೋಗ ಕುರಿತ ಅಂಕಿಸಂಖ್ಯೆಗಳನ್ನು ಕೇಂದ್ರ ಸರ್ಕಾರ ಬೇಕೆಂತಲೇ ಬಿಡುಗಡೆ ಮಾಡುತ್ತಿಲ್ಲ ಎಂದು ‘ರಾಷ್ಟ್ರೀಯ ಸಾಂಖ್ಯಿಕ ಆಯೋಗ’(ಎನ್‍ಎಸ್‍ಸಿ)ದ ಇಬ್ಬರು ಸದಸ್ಯರು ಪ್ರತಿಭಟಿಸಿ ರಾಜಿನಾಮೆ ನೀಡಿದ್ದು.
ಇನ್ನೊಂದು, ಕೇಂದ್ರ ಸರ್ಕಾರವು ಸುಪ್ರಿಂಕೋರ್ಟಿಗೆ ಮನವಿ ಸಲ್ಲಿಸಿ, ಅಯೋಧ್ಯೆಯ ವಿವಾದಿತ ಪ್ರದೇಶದ ಸುತ್ತಲಿನ ಭೂಮಿಯನ್ನು ಸಂಬಂಧಪಟ್ಟವರಿಗೆ ಬಿಟ್ಟುಕೊಡಬೇಕೆಂದು ಕೇಳಿಕೊಂಡಿದ್ದರ ಕುರಿತ ಸುದ್ದಿ.
ಒಂದೇ ದಿನ ಇವೆರಡೂ ಸುದ್ದಿ ಬಂದಿದ್ದು ಕಾಕತಾಳೀಯ ಇರಬಹುದು. ಆದರೆ, ಒಟ್ಟೂ ಸರ್ಕಾರದ ನಿಲುವು, ನಾಟಕ, ಹುಚ್ಚಾಟಗಳಿಗೆ ಈ ಎರಡೂ ಸುದ್ದಿಗಳು ಸಾಂಕೇತಿಕ ಸಾಕ್ಷ್ಯಗಳು ಎಂಬುದರಲ್ಲಿ ಎರಡು ಮಾತಿಲ್ಲ.
2014ರಲ್ಲಿ ಚುನಾವಣಾ ಪ್ರಚಾರ ಮಾಡುವಾಗ, ಬಿಜೆಪಿಯ ಅಂದರೆ ನರೇಂದ್ರ ಮೋದಿಯ ಭಾಷಣದ ವಸ್ತುಗಳು: ಉದ್ಯೋಗ ಸೃಷ್ಟಿ ಮತ್ತು ಕಪ್ಪುಹಣ ವಾಪಸ್ ತರುವಿಕೆ. ಬಿಜೆಪಿಯ ಪ್ರಣಾಳಿಕೆಯಲ್ಲೂ ಉದ್ಯೋಗ ಸೃಷ್ಟಿಯ ಅಜೆಂಡಾವೇ ಪ್ರಧಾನವಾಗಿತ್ತು. ಅದರಲ್ಲಿ ರಾಮ ಮಂದಿರ ನಿರ್ಮಾಣದ ವಿಷಯ ಇತ್ತಾದರೂ, ಬೇಕೆಂತಲೇ ಅದನ್ನು ಅತಿ ಕಡಿಮೆ ಪ್ರಾಶಸ್ತ್ಯದ ಜಾಗದಲ್ಲಿ ಇಡಲಾಗಿತ್ತು!
ಈಗ 2019: ಚುನಾವಣೆಯ ವರ್ಷ. ಬಿಜೆಪಿಯ ಪಾಲಿಗೆ ಉದ್ಯೋಗ ಅಥವಾ ನಿರುದ್ಯೋಗ ಎಂಬ ಪದವೇ ಶಾಪವಾಗಿದೆ. ಹಾಗಾಗಿ ಈಗ ಅದು ಆ ವಿಷಯವನ್ನು ಹಿನ್ನೆಲೆಗೆ ಸರಿಸಿ, ಮಂದಿರ ನಿರ್ಮಾಣದಂತಹ ವಿಷಯಗಳಿಗೆ ಆದ್ಯತೆ ಕೊಡಲು ತಯ್ಯಾರಿ ನಡೆಸಿದೆ. ಇದಕ್ಕೆ ಪೂರಕವಾಗಿ ಮೇಲಿನ ಎರಡು ಸುದ್ದಿಗಳ ಹಿಂದಿನ ಅಸಲಿಯತ್ತು ಈಗ ಅನಾವರಣಗೊಳ್ಳುತ್ತಿದೆ.
ಸೃಷ್ಟಿಸಲಿಲ್ಲ, ಉದ್ಯೋಗ ನಿರ್ನಾಮ ಮಾಡಿದರು!
ವರ್ಷಕ್ಕೆ ಎರಡು ಕೋಟಿಯ ಉದ್ಯೋಗ ಸೃಷ್ಟಿಯ ಭಾರಿ ಭರವಸೆ ನೀಡಿದ್ದ ನರೇಂದ್ರ ಮೋದಿ ಪ್ರಧಾನಿಯಾದ ನಂತರ ಆ ಕುರಿತಂತೆ ಯಾವ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲೇ ಇಲ್ಲ. ಅಂತಹ ದೂರದೃಷ್ಟಿಯೂ ಈ ಸರ್ಕಾರಕ್ಕೆ ಇಲ್ಲವೇ ಇಲ್ಲ. ಅದು ದೊಡ್ಡ ಕೈಗಾರಿಕೋದ್ಯಮಿಗಳ ಹಿತ ಕಾಪಾಡುವಲ್ಲೇ ಮಗ್ನವಾಗಿತು. ಪ್ರಚಾರಕ್ಕಾಗಿ ಮೇಕ್ ಇನ್ ಇಂಡಿಯಾ, ಸ್ಕಿಲ್ ಇಂಡಿಯಾ, ಸ್ಟಾರ್ಟ್‍ಅಪ್ ಇಂಡಿಯಾ- ಎಂಬಂತಹ ರೋಚಕ ಹೆಸರಿನ ಘೋಷಣೆಗಳನ್ನು ಮಾಡಿತೇ ವಿನಃ, ಅವುಗಳ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನವನ್ನು ಮಾಡಲೇ ಇಲ್ಲ. ಅದು ನಿಜವಾಗಿಯೂ ಈ ಯೋಜನೆಗಳ ಗಂಭೀರವಾಗಿದ್ದರೆ, ಸ್ಕಿಲ್ ಇಂಡಿಯಾವನ್ನು ಅನಂತಕುಮಾರ ಹೆಗಡೆಯಂತಹ ಮುಠ್ಠಾಳನ ಕೈಗೆ ನೀಡುತ್ತಿರಲಿಲ್ಲ. ಮಾತೆತ್ತಿದರೆ ಹೊಡಿ, ಬಡಿ, ಕಡಿ ಎನ್ನುವ ಈ ಮನುಷ್ಯ ‘ಕಿಲ್ ಇಂಡಿಯಾ’ದ ಪ್ರತಿನಿಧಿಯಾದರಷ್ಟೇ. ಮೇಕ್ ಇನ್ ಇಂಡಿಯಾ ಯೋಜನೆಯು ಎಚ್‍ಎಎಲ್‍ನಂತಹ ಸಾರ್ವಜನಿಕ ಉದ್ಯಮಗಳನ್ನು ಬಲಿ ಕೊಟ್ಟು ಅನಿಲ್ ಅಂಬಾನಿಯಂತಹ ವಂಚಕ ಉದ್ಯಮಿಯನ್ನು ರಕ್ಷಿಸುವ ಕೆಲಸಕ್ಕೆ ಸಿಮೀತವಾಗಿತು. ಹಾಗಾಗಿಯೇ ಇವತ್ತು ಬಿಜೆಪಿಗೆ ಚುನಾವಣಾ ಬಾಂಡ್‍ಗಳ ಮೂಲಕ ವಿಪರೀತ ಎನ್ನುವಷ್ಟು ಪಾರ್ಟಿ ಫಂಡ್ ಹರಿದು ಬರುತ್ತಿದೆ.
ನ್ಯಾಷನಲ್ ಸ್ಯಾಂಪಲ್ ಸರ್ವೆ ಸಂಸ್ಥೆಯ ಅಧ್ಯಯನದ ಪ್ರಕಾರ, ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಆದರೆ ಬಿಜೆಪಿ ಪ್ರಕಾರ, ಉದ್ಯೋಗಗಳಲ್ಲಿ ಹೆಚ್ಚಳವಾಗಿದೆಯಂತೆ! ಅದಕ್ಕಾಗಿ ತಿರುಚಿದ ಭವಿಷ್ಯ ನಿಧಿ ಅಂಕಿಸಂಖ್ಯೆಗಳನ್ನು ಮುಂದಿಡುತ್ತಿದೆ! ಕಾರ್ಮಿಕ ಇಲಾಖೆಯ ಅಧ್ಯಯನ ಕೂಡ ಉದ್ಯೋಗ ನಷ್ಟದ ಬಗ್ಗೆ ವರದಿ ನೀಡಿದ್ದು, ಅದನ್ನೂ ಈ ಕಳ್ ಸರ್ಕಾರ ಮುಚ್ಚಿಡುತ್ತ ಬಂದಿದೆ.
ಈ 45 ವರ್ಷಗಳಲ್ಲಿ ದೇಶ ಕಂಡರಿಯದಷ್ಟು ಪ್ರಮಾಣದಲ್ಲಿ ಉದ್ಯೋಗದ ಸಮಸ್ಯೆ ಸದ್ಯ ದೇಶವನ್ನು ಕಾಡುತ್ತಿದೆ. ಉದ್ಯೋಗ ಸೃಷ್ಟಿ ಹಾಳಾಗಿ ಹೋಗಲಿ, ಇದ್ದಬದ್ದ ಸಣ್ಣಪುಟ್ಟ ಉದ್ಯೋಗಗಳನ್ನೂ ಈ ಸರ್ಕಾರ ತನ್ನ ಮೂರ್ಖ ನೋಟು ರದ್ದತಿಯಿಂದ ನಾಶ ಮಾಡಿದ್ದರ ಪರಿಣಾಮವಿದು.
ಕೃಷಿ ಬಿಕ್ಕಟ್ಟಿನಲ್ಲಿದೆ, ಯುವಕರು ಹತಾಶರಾಗಿದ್ದಾರೆ. ಆ ಬಗ್ಗೆ ಬಜೆಟ್‍ನಲ್ಲಿ ಯಾವುದೇ ಪ್ರಾಮಾಣಿಕ ಭರವಸೆಗಳಿಲ್ಲ. ಬದಲಿಗೆ ಸುಪ್ರಿಂಕೋರ್ಟಿಗೆ ಮನವಿ ಮಾಡುವ ಕೇಂದ್ರ ಸರ್ಕಾರವು, ಅಯೋಧ್ಯೆಯ ವಿವಾದಿತ ಜಾಗವನ್ನು ಬಿಟ್ಟು ಉಳಿದ ಜಾಗವನ್ನು ‘ಸಂಬಂಧಿಸಿದವರಿಗೆ’ ನೀಡಿ ಎಂದು ಕಿಡಿ ಹಚ್ಚಲು ಹೊರಟಿದೆ. ವಿವಾದಿತ ಜಾಗದ ಸುತ್ತಲಿನ ಜಾಗವನ್ನು ‘ಸಂಬಂಧಿಸಿದವರಿಗೆ’ ನೀಡಿದರೆ ಅದು ಕೋಮು ಗಲಭೆಗಳಿಗೆ ಅವಕಾಶ ಮಾಡಿಕೊಡಲು ಮುನ್ನುಡಿ ಬರೆದಂತಾಗುತ್ತದೆ ಎಂದು ಸುಪ್ರಿಂಕೋರ್ಟು 2003ರಲ್ಲೇ ತನ್ನ ಅಭಿಪ್ರಾಯವನ್ನು ದಾಖಲಿಸಿದ್ದು ಗೊತ್ತಿದ್ದೂ ಮೋದಿ ಸರ್ಕಾರ ದೇಶದ ನಿರುದ್ಯೋಗ ಸಮಸ್ಯೆಯನ್ನು ಹಿನ್ನೆಲೆಗೆ ಸರಿಸಿ, ಯುವಕರನ್ನು ಭಾವನಾತ್ಮಕ ನೆಲೆಗೆ ಒಯ್ದು ಲಾಭ ಮಾಡಿಕೊಳ್ಳಲು ಹವಣಿಸುತ್ತಿದೆ.
ಆದರೆ, ಅದು ಅಷ್ಟು ಸುಲಭ ಸಾಧ್ಯವಲ್ಲ ಎಂಬುದು ಅದಕ್ಕೂ ಗೊತ್ತಿರುವುದರಿಂದ, ಇನ್ನಷ್ಟು ಬಗೆಬಗೆಯ ನಾಟಕಗಳನ್ನು ಆರಂಭಿಸಿ, ಧ್ರುವೀಕರಂಕ್ಕೆ ಯತ್ನಿಸುವುದಂತೂ ಖಂಡಿತ. ಜನ ಹುಶಾರಾಗಿರಬೇಕಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...