Homeರಾಜಕೀಯಉದ್ಯೋಗ ನಿರ್ನಾಮ ಮುಚ್ಚಲು ಮಂದಿರ ನಿರ್ಮಾಣ!

ಉದ್ಯೋಗ ನಿರ್ನಾಮ ಮುಚ್ಚಲು ಮಂದಿರ ನಿರ್ಮಾಣ!

- Advertisement -
- Advertisement -

-ಮಲ್ಲನಗೌಡರ್. ಪಿ. ಕೆ. |

ಕಳೆದ ವಾರ ಪ್ರಮುಖ ದೈನಿಕಗಳಲ್ಲಿ ಎರಡು ಮುಖಪುಟ ಸುದ್ದಿಗಳಿದ್ದವು. ಒಂದು, ಉದ್ಯೋಗ-ನಿರುದ್ಯೋಗ ಕುರಿತ ಅಂಕಿಸಂಖ್ಯೆಗಳನ್ನು ಕೇಂದ್ರ ಸರ್ಕಾರ ಬೇಕೆಂತಲೇ ಬಿಡುಗಡೆ ಮಾಡುತ್ತಿಲ್ಲ ಎಂದು ‘ರಾಷ್ಟ್ರೀಯ ಸಾಂಖ್ಯಿಕ ಆಯೋಗ’(ಎನ್‍ಎಸ್‍ಸಿ)ದ ಇಬ್ಬರು ಸದಸ್ಯರು ಪ್ರತಿಭಟಿಸಿ ರಾಜಿನಾಮೆ ನೀಡಿದ್ದು.
ಇನ್ನೊಂದು, ಕೇಂದ್ರ ಸರ್ಕಾರವು ಸುಪ್ರಿಂಕೋರ್ಟಿಗೆ ಮನವಿ ಸಲ್ಲಿಸಿ, ಅಯೋಧ್ಯೆಯ ವಿವಾದಿತ ಪ್ರದೇಶದ ಸುತ್ತಲಿನ ಭೂಮಿಯನ್ನು ಸಂಬಂಧಪಟ್ಟವರಿಗೆ ಬಿಟ್ಟುಕೊಡಬೇಕೆಂದು ಕೇಳಿಕೊಂಡಿದ್ದರ ಕುರಿತ ಸುದ್ದಿ.
ಒಂದೇ ದಿನ ಇವೆರಡೂ ಸುದ್ದಿ ಬಂದಿದ್ದು ಕಾಕತಾಳೀಯ ಇರಬಹುದು. ಆದರೆ, ಒಟ್ಟೂ ಸರ್ಕಾರದ ನಿಲುವು, ನಾಟಕ, ಹುಚ್ಚಾಟಗಳಿಗೆ ಈ ಎರಡೂ ಸುದ್ದಿಗಳು ಸಾಂಕೇತಿಕ ಸಾಕ್ಷ್ಯಗಳು ಎಂಬುದರಲ್ಲಿ ಎರಡು ಮಾತಿಲ್ಲ.
2014ರಲ್ಲಿ ಚುನಾವಣಾ ಪ್ರಚಾರ ಮಾಡುವಾಗ, ಬಿಜೆಪಿಯ ಅಂದರೆ ನರೇಂದ್ರ ಮೋದಿಯ ಭಾಷಣದ ವಸ್ತುಗಳು: ಉದ್ಯೋಗ ಸೃಷ್ಟಿ ಮತ್ತು ಕಪ್ಪುಹಣ ವಾಪಸ್ ತರುವಿಕೆ. ಬಿಜೆಪಿಯ ಪ್ರಣಾಳಿಕೆಯಲ್ಲೂ ಉದ್ಯೋಗ ಸೃಷ್ಟಿಯ ಅಜೆಂಡಾವೇ ಪ್ರಧಾನವಾಗಿತ್ತು. ಅದರಲ್ಲಿ ರಾಮ ಮಂದಿರ ನಿರ್ಮಾಣದ ವಿಷಯ ಇತ್ತಾದರೂ, ಬೇಕೆಂತಲೇ ಅದನ್ನು ಅತಿ ಕಡಿಮೆ ಪ್ರಾಶಸ್ತ್ಯದ ಜಾಗದಲ್ಲಿ ಇಡಲಾಗಿತ್ತು!
ಈಗ 2019: ಚುನಾವಣೆಯ ವರ್ಷ. ಬಿಜೆಪಿಯ ಪಾಲಿಗೆ ಉದ್ಯೋಗ ಅಥವಾ ನಿರುದ್ಯೋಗ ಎಂಬ ಪದವೇ ಶಾಪವಾಗಿದೆ. ಹಾಗಾಗಿ ಈಗ ಅದು ಆ ವಿಷಯವನ್ನು ಹಿನ್ನೆಲೆಗೆ ಸರಿಸಿ, ಮಂದಿರ ನಿರ್ಮಾಣದಂತಹ ವಿಷಯಗಳಿಗೆ ಆದ್ಯತೆ ಕೊಡಲು ತಯ್ಯಾರಿ ನಡೆಸಿದೆ. ಇದಕ್ಕೆ ಪೂರಕವಾಗಿ ಮೇಲಿನ ಎರಡು ಸುದ್ದಿಗಳ ಹಿಂದಿನ ಅಸಲಿಯತ್ತು ಈಗ ಅನಾವರಣಗೊಳ್ಳುತ್ತಿದೆ.
ಸೃಷ್ಟಿಸಲಿಲ್ಲ, ಉದ್ಯೋಗ ನಿರ್ನಾಮ ಮಾಡಿದರು!
ವರ್ಷಕ್ಕೆ ಎರಡು ಕೋಟಿಯ ಉದ್ಯೋಗ ಸೃಷ್ಟಿಯ ಭಾರಿ ಭರವಸೆ ನೀಡಿದ್ದ ನರೇಂದ್ರ ಮೋದಿ ಪ್ರಧಾನಿಯಾದ ನಂತರ ಆ ಕುರಿತಂತೆ ಯಾವ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲೇ ಇಲ್ಲ. ಅಂತಹ ದೂರದೃಷ್ಟಿಯೂ ಈ ಸರ್ಕಾರಕ್ಕೆ ಇಲ್ಲವೇ ಇಲ್ಲ. ಅದು ದೊಡ್ಡ ಕೈಗಾರಿಕೋದ್ಯಮಿಗಳ ಹಿತ ಕಾಪಾಡುವಲ್ಲೇ ಮಗ್ನವಾಗಿತು. ಪ್ರಚಾರಕ್ಕಾಗಿ ಮೇಕ್ ಇನ್ ಇಂಡಿಯಾ, ಸ್ಕಿಲ್ ಇಂಡಿಯಾ, ಸ್ಟಾರ್ಟ್‍ಅಪ್ ಇಂಡಿಯಾ- ಎಂಬಂತಹ ರೋಚಕ ಹೆಸರಿನ ಘೋಷಣೆಗಳನ್ನು ಮಾಡಿತೇ ವಿನಃ, ಅವುಗಳ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನವನ್ನು ಮಾಡಲೇ ಇಲ್ಲ. ಅದು ನಿಜವಾಗಿಯೂ ಈ ಯೋಜನೆಗಳ ಗಂಭೀರವಾಗಿದ್ದರೆ, ಸ್ಕಿಲ್ ಇಂಡಿಯಾವನ್ನು ಅನಂತಕುಮಾರ ಹೆಗಡೆಯಂತಹ ಮುಠ್ಠಾಳನ ಕೈಗೆ ನೀಡುತ್ತಿರಲಿಲ್ಲ. ಮಾತೆತ್ತಿದರೆ ಹೊಡಿ, ಬಡಿ, ಕಡಿ ಎನ್ನುವ ಈ ಮನುಷ್ಯ ‘ಕಿಲ್ ಇಂಡಿಯಾ’ದ ಪ್ರತಿನಿಧಿಯಾದರಷ್ಟೇ. ಮೇಕ್ ಇನ್ ಇಂಡಿಯಾ ಯೋಜನೆಯು ಎಚ್‍ಎಎಲ್‍ನಂತಹ ಸಾರ್ವಜನಿಕ ಉದ್ಯಮಗಳನ್ನು ಬಲಿ ಕೊಟ್ಟು ಅನಿಲ್ ಅಂಬಾನಿಯಂತಹ ವಂಚಕ ಉದ್ಯಮಿಯನ್ನು ರಕ್ಷಿಸುವ ಕೆಲಸಕ್ಕೆ ಸಿಮೀತವಾಗಿತು. ಹಾಗಾಗಿಯೇ ಇವತ್ತು ಬಿಜೆಪಿಗೆ ಚುನಾವಣಾ ಬಾಂಡ್‍ಗಳ ಮೂಲಕ ವಿಪರೀತ ಎನ್ನುವಷ್ಟು ಪಾರ್ಟಿ ಫಂಡ್ ಹರಿದು ಬರುತ್ತಿದೆ.
ನ್ಯಾಷನಲ್ ಸ್ಯಾಂಪಲ್ ಸರ್ವೆ ಸಂಸ್ಥೆಯ ಅಧ್ಯಯನದ ಪ್ರಕಾರ, ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಆದರೆ ಬಿಜೆಪಿ ಪ್ರಕಾರ, ಉದ್ಯೋಗಗಳಲ್ಲಿ ಹೆಚ್ಚಳವಾಗಿದೆಯಂತೆ! ಅದಕ್ಕಾಗಿ ತಿರುಚಿದ ಭವಿಷ್ಯ ನಿಧಿ ಅಂಕಿಸಂಖ್ಯೆಗಳನ್ನು ಮುಂದಿಡುತ್ತಿದೆ! ಕಾರ್ಮಿಕ ಇಲಾಖೆಯ ಅಧ್ಯಯನ ಕೂಡ ಉದ್ಯೋಗ ನಷ್ಟದ ಬಗ್ಗೆ ವರದಿ ನೀಡಿದ್ದು, ಅದನ್ನೂ ಈ ಕಳ್ ಸರ್ಕಾರ ಮುಚ್ಚಿಡುತ್ತ ಬಂದಿದೆ.
ಈ 45 ವರ್ಷಗಳಲ್ಲಿ ದೇಶ ಕಂಡರಿಯದಷ್ಟು ಪ್ರಮಾಣದಲ್ಲಿ ಉದ್ಯೋಗದ ಸಮಸ್ಯೆ ಸದ್ಯ ದೇಶವನ್ನು ಕಾಡುತ್ತಿದೆ. ಉದ್ಯೋಗ ಸೃಷ್ಟಿ ಹಾಳಾಗಿ ಹೋಗಲಿ, ಇದ್ದಬದ್ದ ಸಣ್ಣಪುಟ್ಟ ಉದ್ಯೋಗಗಳನ್ನೂ ಈ ಸರ್ಕಾರ ತನ್ನ ಮೂರ್ಖ ನೋಟು ರದ್ದತಿಯಿಂದ ನಾಶ ಮಾಡಿದ್ದರ ಪರಿಣಾಮವಿದು.
ಕೃಷಿ ಬಿಕ್ಕಟ್ಟಿನಲ್ಲಿದೆ, ಯುವಕರು ಹತಾಶರಾಗಿದ್ದಾರೆ. ಆ ಬಗ್ಗೆ ಬಜೆಟ್‍ನಲ್ಲಿ ಯಾವುದೇ ಪ್ರಾಮಾಣಿಕ ಭರವಸೆಗಳಿಲ್ಲ. ಬದಲಿಗೆ ಸುಪ್ರಿಂಕೋರ್ಟಿಗೆ ಮನವಿ ಮಾಡುವ ಕೇಂದ್ರ ಸರ್ಕಾರವು, ಅಯೋಧ್ಯೆಯ ವಿವಾದಿತ ಜಾಗವನ್ನು ಬಿಟ್ಟು ಉಳಿದ ಜಾಗವನ್ನು ‘ಸಂಬಂಧಿಸಿದವರಿಗೆ’ ನೀಡಿ ಎಂದು ಕಿಡಿ ಹಚ್ಚಲು ಹೊರಟಿದೆ. ವಿವಾದಿತ ಜಾಗದ ಸುತ್ತಲಿನ ಜಾಗವನ್ನು ‘ಸಂಬಂಧಿಸಿದವರಿಗೆ’ ನೀಡಿದರೆ ಅದು ಕೋಮು ಗಲಭೆಗಳಿಗೆ ಅವಕಾಶ ಮಾಡಿಕೊಡಲು ಮುನ್ನುಡಿ ಬರೆದಂತಾಗುತ್ತದೆ ಎಂದು ಸುಪ್ರಿಂಕೋರ್ಟು 2003ರಲ್ಲೇ ತನ್ನ ಅಭಿಪ್ರಾಯವನ್ನು ದಾಖಲಿಸಿದ್ದು ಗೊತ್ತಿದ್ದೂ ಮೋದಿ ಸರ್ಕಾರ ದೇಶದ ನಿರುದ್ಯೋಗ ಸಮಸ್ಯೆಯನ್ನು ಹಿನ್ನೆಲೆಗೆ ಸರಿಸಿ, ಯುವಕರನ್ನು ಭಾವನಾತ್ಮಕ ನೆಲೆಗೆ ಒಯ್ದು ಲಾಭ ಮಾಡಿಕೊಳ್ಳಲು ಹವಣಿಸುತ್ತಿದೆ.
ಆದರೆ, ಅದು ಅಷ್ಟು ಸುಲಭ ಸಾಧ್ಯವಲ್ಲ ಎಂಬುದು ಅದಕ್ಕೂ ಗೊತ್ತಿರುವುದರಿಂದ, ಇನ್ನಷ್ಟು ಬಗೆಬಗೆಯ ನಾಟಕಗಳನ್ನು ಆರಂಭಿಸಿ, ಧ್ರುವೀಕರಂಕ್ಕೆ ಯತ್ನಿಸುವುದಂತೂ ಖಂಡಿತ. ಜನ ಹುಶಾರಾಗಿರಬೇಕಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...