Homeರಾಜಕೀಯಉದ್ಯೋಗ ನಿರ್ನಾಮ ಮುಚ್ಚಲು ಮಂದಿರ ನಿರ್ಮಾಣ!

ಉದ್ಯೋಗ ನಿರ್ನಾಮ ಮುಚ್ಚಲು ಮಂದಿರ ನಿರ್ಮಾಣ!

- Advertisement -
- Advertisement -

-ಮಲ್ಲನಗೌಡರ್. ಪಿ. ಕೆ. |

ಕಳೆದ ವಾರ ಪ್ರಮುಖ ದೈನಿಕಗಳಲ್ಲಿ ಎರಡು ಮುಖಪುಟ ಸುದ್ದಿಗಳಿದ್ದವು. ಒಂದು, ಉದ್ಯೋಗ-ನಿರುದ್ಯೋಗ ಕುರಿತ ಅಂಕಿಸಂಖ್ಯೆಗಳನ್ನು ಕೇಂದ್ರ ಸರ್ಕಾರ ಬೇಕೆಂತಲೇ ಬಿಡುಗಡೆ ಮಾಡುತ್ತಿಲ್ಲ ಎಂದು ‘ರಾಷ್ಟ್ರೀಯ ಸಾಂಖ್ಯಿಕ ಆಯೋಗ’(ಎನ್‍ಎಸ್‍ಸಿ)ದ ಇಬ್ಬರು ಸದಸ್ಯರು ಪ್ರತಿಭಟಿಸಿ ರಾಜಿನಾಮೆ ನೀಡಿದ್ದು.
ಇನ್ನೊಂದು, ಕೇಂದ್ರ ಸರ್ಕಾರವು ಸುಪ್ರಿಂಕೋರ್ಟಿಗೆ ಮನವಿ ಸಲ್ಲಿಸಿ, ಅಯೋಧ್ಯೆಯ ವಿವಾದಿತ ಪ್ರದೇಶದ ಸುತ್ತಲಿನ ಭೂಮಿಯನ್ನು ಸಂಬಂಧಪಟ್ಟವರಿಗೆ ಬಿಟ್ಟುಕೊಡಬೇಕೆಂದು ಕೇಳಿಕೊಂಡಿದ್ದರ ಕುರಿತ ಸುದ್ದಿ.
ಒಂದೇ ದಿನ ಇವೆರಡೂ ಸುದ್ದಿ ಬಂದಿದ್ದು ಕಾಕತಾಳೀಯ ಇರಬಹುದು. ಆದರೆ, ಒಟ್ಟೂ ಸರ್ಕಾರದ ನಿಲುವು, ನಾಟಕ, ಹುಚ್ಚಾಟಗಳಿಗೆ ಈ ಎರಡೂ ಸುದ್ದಿಗಳು ಸಾಂಕೇತಿಕ ಸಾಕ್ಷ್ಯಗಳು ಎಂಬುದರಲ್ಲಿ ಎರಡು ಮಾತಿಲ್ಲ.
2014ರಲ್ಲಿ ಚುನಾವಣಾ ಪ್ರಚಾರ ಮಾಡುವಾಗ, ಬಿಜೆಪಿಯ ಅಂದರೆ ನರೇಂದ್ರ ಮೋದಿಯ ಭಾಷಣದ ವಸ್ತುಗಳು: ಉದ್ಯೋಗ ಸೃಷ್ಟಿ ಮತ್ತು ಕಪ್ಪುಹಣ ವಾಪಸ್ ತರುವಿಕೆ. ಬಿಜೆಪಿಯ ಪ್ರಣಾಳಿಕೆಯಲ್ಲೂ ಉದ್ಯೋಗ ಸೃಷ್ಟಿಯ ಅಜೆಂಡಾವೇ ಪ್ರಧಾನವಾಗಿತ್ತು. ಅದರಲ್ಲಿ ರಾಮ ಮಂದಿರ ನಿರ್ಮಾಣದ ವಿಷಯ ಇತ್ತಾದರೂ, ಬೇಕೆಂತಲೇ ಅದನ್ನು ಅತಿ ಕಡಿಮೆ ಪ್ರಾಶಸ್ತ್ಯದ ಜಾಗದಲ್ಲಿ ಇಡಲಾಗಿತ್ತು!
ಈಗ 2019: ಚುನಾವಣೆಯ ವರ್ಷ. ಬಿಜೆಪಿಯ ಪಾಲಿಗೆ ಉದ್ಯೋಗ ಅಥವಾ ನಿರುದ್ಯೋಗ ಎಂಬ ಪದವೇ ಶಾಪವಾಗಿದೆ. ಹಾಗಾಗಿ ಈಗ ಅದು ಆ ವಿಷಯವನ್ನು ಹಿನ್ನೆಲೆಗೆ ಸರಿಸಿ, ಮಂದಿರ ನಿರ್ಮಾಣದಂತಹ ವಿಷಯಗಳಿಗೆ ಆದ್ಯತೆ ಕೊಡಲು ತಯ್ಯಾರಿ ನಡೆಸಿದೆ. ಇದಕ್ಕೆ ಪೂರಕವಾಗಿ ಮೇಲಿನ ಎರಡು ಸುದ್ದಿಗಳ ಹಿಂದಿನ ಅಸಲಿಯತ್ತು ಈಗ ಅನಾವರಣಗೊಳ್ಳುತ್ತಿದೆ.
ಸೃಷ್ಟಿಸಲಿಲ್ಲ, ಉದ್ಯೋಗ ನಿರ್ನಾಮ ಮಾಡಿದರು!
ವರ್ಷಕ್ಕೆ ಎರಡು ಕೋಟಿಯ ಉದ್ಯೋಗ ಸೃಷ್ಟಿಯ ಭಾರಿ ಭರವಸೆ ನೀಡಿದ್ದ ನರೇಂದ್ರ ಮೋದಿ ಪ್ರಧಾನಿಯಾದ ನಂತರ ಆ ಕುರಿತಂತೆ ಯಾವ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲೇ ಇಲ್ಲ. ಅಂತಹ ದೂರದೃಷ್ಟಿಯೂ ಈ ಸರ್ಕಾರಕ್ಕೆ ಇಲ್ಲವೇ ಇಲ್ಲ. ಅದು ದೊಡ್ಡ ಕೈಗಾರಿಕೋದ್ಯಮಿಗಳ ಹಿತ ಕಾಪಾಡುವಲ್ಲೇ ಮಗ್ನವಾಗಿತು. ಪ್ರಚಾರಕ್ಕಾಗಿ ಮೇಕ್ ಇನ್ ಇಂಡಿಯಾ, ಸ್ಕಿಲ್ ಇಂಡಿಯಾ, ಸ್ಟಾರ್ಟ್‍ಅಪ್ ಇಂಡಿಯಾ- ಎಂಬಂತಹ ರೋಚಕ ಹೆಸರಿನ ಘೋಷಣೆಗಳನ್ನು ಮಾಡಿತೇ ವಿನಃ, ಅವುಗಳ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನವನ್ನು ಮಾಡಲೇ ಇಲ್ಲ. ಅದು ನಿಜವಾಗಿಯೂ ಈ ಯೋಜನೆಗಳ ಗಂಭೀರವಾಗಿದ್ದರೆ, ಸ್ಕಿಲ್ ಇಂಡಿಯಾವನ್ನು ಅನಂತಕುಮಾರ ಹೆಗಡೆಯಂತಹ ಮುಠ್ಠಾಳನ ಕೈಗೆ ನೀಡುತ್ತಿರಲಿಲ್ಲ. ಮಾತೆತ್ತಿದರೆ ಹೊಡಿ, ಬಡಿ, ಕಡಿ ಎನ್ನುವ ಈ ಮನುಷ್ಯ ‘ಕಿಲ್ ಇಂಡಿಯಾ’ದ ಪ್ರತಿನಿಧಿಯಾದರಷ್ಟೇ. ಮೇಕ್ ಇನ್ ಇಂಡಿಯಾ ಯೋಜನೆಯು ಎಚ್‍ಎಎಲ್‍ನಂತಹ ಸಾರ್ವಜನಿಕ ಉದ್ಯಮಗಳನ್ನು ಬಲಿ ಕೊಟ್ಟು ಅನಿಲ್ ಅಂಬಾನಿಯಂತಹ ವಂಚಕ ಉದ್ಯಮಿಯನ್ನು ರಕ್ಷಿಸುವ ಕೆಲಸಕ್ಕೆ ಸಿಮೀತವಾಗಿತು. ಹಾಗಾಗಿಯೇ ಇವತ್ತು ಬಿಜೆಪಿಗೆ ಚುನಾವಣಾ ಬಾಂಡ್‍ಗಳ ಮೂಲಕ ವಿಪರೀತ ಎನ್ನುವಷ್ಟು ಪಾರ್ಟಿ ಫಂಡ್ ಹರಿದು ಬರುತ್ತಿದೆ.
ನ್ಯಾಷನಲ್ ಸ್ಯಾಂಪಲ್ ಸರ್ವೆ ಸಂಸ್ಥೆಯ ಅಧ್ಯಯನದ ಪ್ರಕಾರ, ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಆದರೆ ಬಿಜೆಪಿ ಪ್ರಕಾರ, ಉದ್ಯೋಗಗಳಲ್ಲಿ ಹೆಚ್ಚಳವಾಗಿದೆಯಂತೆ! ಅದಕ್ಕಾಗಿ ತಿರುಚಿದ ಭವಿಷ್ಯ ನಿಧಿ ಅಂಕಿಸಂಖ್ಯೆಗಳನ್ನು ಮುಂದಿಡುತ್ತಿದೆ! ಕಾರ್ಮಿಕ ಇಲಾಖೆಯ ಅಧ್ಯಯನ ಕೂಡ ಉದ್ಯೋಗ ನಷ್ಟದ ಬಗ್ಗೆ ವರದಿ ನೀಡಿದ್ದು, ಅದನ್ನೂ ಈ ಕಳ್ ಸರ್ಕಾರ ಮುಚ್ಚಿಡುತ್ತ ಬಂದಿದೆ.
ಈ 45 ವರ್ಷಗಳಲ್ಲಿ ದೇಶ ಕಂಡರಿಯದಷ್ಟು ಪ್ರಮಾಣದಲ್ಲಿ ಉದ್ಯೋಗದ ಸಮಸ್ಯೆ ಸದ್ಯ ದೇಶವನ್ನು ಕಾಡುತ್ತಿದೆ. ಉದ್ಯೋಗ ಸೃಷ್ಟಿ ಹಾಳಾಗಿ ಹೋಗಲಿ, ಇದ್ದಬದ್ದ ಸಣ್ಣಪುಟ್ಟ ಉದ್ಯೋಗಗಳನ್ನೂ ಈ ಸರ್ಕಾರ ತನ್ನ ಮೂರ್ಖ ನೋಟು ರದ್ದತಿಯಿಂದ ನಾಶ ಮಾಡಿದ್ದರ ಪರಿಣಾಮವಿದು.
ಕೃಷಿ ಬಿಕ್ಕಟ್ಟಿನಲ್ಲಿದೆ, ಯುವಕರು ಹತಾಶರಾಗಿದ್ದಾರೆ. ಆ ಬಗ್ಗೆ ಬಜೆಟ್‍ನಲ್ಲಿ ಯಾವುದೇ ಪ್ರಾಮಾಣಿಕ ಭರವಸೆಗಳಿಲ್ಲ. ಬದಲಿಗೆ ಸುಪ್ರಿಂಕೋರ್ಟಿಗೆ ಮನವಿ ಮಾಡುವ ಕೇಂದ್ರ ಸರ್ಕಾರವು, ಅಯೋಧ್ಯೆಯ ವಿವಾದಿತ ಜಾಗವನ್ನು ಬಿಟ್ಟು ಉಳಿದ ಜಾಗವನ್ನು ‘ಸಂಬಂಧಿಸಿದವರಿಗೆ’ ನೀಡಿ ಎಂದು ಕಿಡಿ ಹಚ್ಚಲು ಹೊರಟಿದೆ. ವಿವಾದಿತ ಜಾಗದ ಸುತ್ತಲಿನ ಜಾಗವನ್ನು ‘ಸಂಬಂಧಿಸಿದವರಿಗೆ’ ನೀಡಿದರೆ ಅದು ಕೋಮು ಗಲಭೆಗಳಿಗೆ ಅವಕಾಶ ಮಾಡಿಕೊಡಲು ಮುನ್ನುಡಿ ಬರೆದಂತಾಗುತ್ತದೆ ಎಂದು ಸುಪ್ರಿಂಕೋರ್ಟು 2003ರಲ್ಲೇ ತನ್ನ ಅಭಿಪ್ರಾಯವನ್ನು ದಾಖಲಿಸಿದ್ದು ಗೊತ್ತಿದ್ದೂ ಮೋದಿ ಸರ್ಕಾರ ದೇಶದ ನಿರುದ್ಯೋಗ ಸಮಸ್ಯೆಯನ್ನು ಹಿನ್ನೆಲೆಗೆ ಸರಿಸಿ, ಯುವಕರನ್ನು ಭಾವನಾತ್ಮಕ ನೆಲೆಗೆ ಒಯ್ದು ಲಾಭ ಮಾಡಿಕೊಳ್ಳಲು ಹವಣಿಸುತ್ತಿದೆ.
ಆದರೆ, ಅದು ಅಷ್ಟು ಸುಲಭ ಸಾಧ್ಯವಲ್ಲ ಎಂಬುದು ಅದಕ್ಕೂ ಗೊತ್ತಿರುವುದರಿಂದ, ಇನ್ನಷ್ಟು ಬಗೆಬಗೆಯ ನಾಟಕಗಳನ್ನು ಆರಂಭಿಸಿ, ಧ್ರುವೀಕರಂಕ್ಕೆ ಯತ್ನಿಸುವುದಂತೂ ಖಂಡಿತ. ಜನ ಹುಶಾರಾಗಿರಬೇಕಷ್ಟೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...