Homeಅಂಕಣಗಳುನಿಮ್ಮಪ್ಪ ಅಮ್ಮ ನೋಡಿದವ್ರನ್ನ ಕಣ್ಮುಚ್ಕಂಡು ಮದ್ವೆ ಆಗ್ಬುಡಿ

ನಿಮ್ಮಪ್ಪ ಅಮ್ಮ ನೋಡಿದವ್ರನ್ನ ಕಣ್ಮುಚ್ಕಂಡು ಮದ್ವೆ ಆಗ್ಬುಡಿ

- Advertisement -
- Advertisement -

ಕೇಳುಗರಿಗೆಲ್ಲ ನಮಸ್ಕಾರ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ. ಈಗ ವಾರ್ತೆಗಳ ವಿವರ..

ರಾಜ್ಯದ ಹೈಯರ್ ಎಜುಕೇಷನ್ ಮಿನಿಸ್ಟರ್ ‘ಜಟ್ಟಿ ದೆವ್ವೇಗೌಡ’ರ ಕಡೆಯಿಂದ ಕಾಲೇಜು ಸ್ಟೂಡೆಂಟುಗಳಿಗೆ ಬಿಸಿಬಿಸಿ ಸುದ್ದಿಯೊಂದು ಲಭ್ಯವಾಗಿದ್ದು, ಶಿಕ್ಷಣ ಮಂತ್ರಿಯ ಹೊಸ ಹೇಳಿಕೆಗೆ ಹುಡುಗ ಹುಡುಗಿಯರು ಕೆಂಡಾಮಂಡಲರಾಗಿದ್ದಾರೆ. ಆದರೆ ಈ ಮಂತ್ರಿಯ ಹೇಳಿಕೆ ಬ್ಲೂಜೆಪಿ ವಯೋವೃದ್ಧರಿಗೆ ರೋಮಾಂಚನ ಉಂಟುಮಾಡಿದೆ. ‘ಕಾಲೇಜಲ್ಲಿ ಓದೋ ಹುಡುಗ ಹುಡುಗೀರು ಲವ್ವುಗಿವ್ವು ಮಾಡ್ಬೇಡಿ, ಪಾರ್ಕು ಥೇಟ್ರು ಸುತ್ತಬೇಡಿ, ನಿಮ್ಮಪ್ಪ ಅಮ್ಮ ನೋಡಿದವ್ರನ್ನ ಕಣ್ಮುಚ್ಕಂಡು ಮದ್ವೆ ಆಗ್ಬುಡಿ’ ಅಂತ ಜಟ್ಟಿ ದೆವ್ವೇಗೌಡರು ಫತ್ವಾ ಹೊರಡಿಸಿದ್ದಾರೆ. ಇದರಿಂದ ಕನಲಿ ಕೆಂಡವಾಗಿರೋ ಕಾಲೇಜು ಯುವಕ ಯುವತಿಯರು “ನಾವು ಲವ್ವಾದ್ರೂ ಮಾಡ್ಕೋತೀವಿ, ಡವ್ವಾದ್ರು ಮಾಡ್ಕೋತೀವಿ, ಮೊದಲು ತಾವು ವಯಸ್ಕರ ಶಿಕ್ಷಣ ಶಾಲೆಗೆ ಸೇರ್ಕೊಂಡು ಹೈಸ್ಕೂಲ್ ಪಾಸಾಗೋದು ನೋಡಿ, ಎಸೆಸೆಲ್ಸಿಯೂ ಪಾಸಾಗದ ಟಪಾಸ್ ಗಿರಾಕಿಗಳು ನಮಗೆ ಬುದ್ದಿವಾದ ಹೇಳೋ ಅವಶ್ಯಕತೆ ಇಲ್ಲ, ಇನ್ನೊಂದ್ಸಲ ಅದು ಮಾಡ್ಬೇಡಿ, ಇದು ಮಾಡ್ಬೇಡಿ ಅಂತ ನಮಗೆ ರೂಲ್ಸ್ ಮಾಡೋಕೆ ಬಂದ್ರೆ ಭಾಷಣ ಮಾಡ್ತಿರೋ ಸ್ಟೇಜಲ್ಲೇ ನಿಮ್ಮ ಪೈಜಾಮ ಎಳೆದು ಅರೆಬೆತ್ತಲೆ ನಿಲ್ಲಿಸ್ತೀವಿ“ ಎಂದು ಇನ್ನೂ ಹೇಳಿಲ್ಲವೆಂದು ವರದಿಯಾಗಿದೆ.

******

ABP ನ್ಯೂಸ್ ಚಾನೆಲ್ ಇತ್ತೀಚೆಗೊಂದು ಕುಟುಕು ಕಾರ್ಯಾಚರಣೆ ನಡೆಸಿ ಗೋರಕ್ಷಕರ ಹೆಸರಿನಲ್ಲಿ ಕೊಲೆ ದರೋಡೆ ಮಾಡುತ್ತ ಹಫ್ತಾ ವಸೂಲಿ ದಂಧೆ ನಡೆಸುತ್ತಿದ್ದ ಹೋಪ್ಲೆಸ್ ಹೇತ್ಲಾಂಡಿಗಳನ್ನು ಜನರ ಮುಂದೆ ಬೆತ್ತಲು ಮಾಡಿದೆ. ಮನೆಯಲ್ಲಿ ಹೆಂಡ್ತಿಮಕ್ಕಳಿಗೆ ಎರಡೊತ್ತಿನ ಅನ್ನ ಹಾಕಲು ಯೋಗ್ಯತೆಯಿಲ್ಲದ ಚಿಳ್ಳೆಪಿಳ್ಳೆಗಳೆಲ್ಲ ಗಂಟಲಿಗೊಂದು ಬಾವುಟ ಹೆಟ್ಟಿಕೊಂಡು “ಜೈ ಶ್ರೀ ಮಾಮ್” ಎನ್ನುತ್ತ ಹಸು ದನ ಸಾಕಿದವರ ಮೇಲೆ ಬಿದ್ದು ಸಾಯ ಹೊಡೆದು ಕೊಂದು ಜೈಲು ಸೇರುತ್ತಿವೆ. ಇಂಥದ್ದೇ ಹೀನಾಯ ಸಾಹಸದಲ್ಲಿ ಇಬ್ಬರನ್ನು ಕೊಂದು ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರಬಂದ ಎರಡು ಹೇತ್ಲಾಂಡಿ ವೀರರನ್ನು ಓಆಖಿಗಿ ರಹಸ್ಯ ಕ್ಯಾಮೆರಾದೆದುರು ಬಾಯಿ ಬಿಡಿಸಿದೆ. ಇವರು ಕೋರ್ಟಿನಲ್ಲಿ ‘ನಮಗೇನೂ ಗೊತ್ತಿಲ್ಲ, ಆ ಕೊಲೆಗಳು ನಡೆದ ದಿನ ನಾವು “ಅಂತರರಾಷ್ಟ್ರೀಯ ಗೋಮೂತ್ರ ಸೇವಕರ ದಿನಾಚರಣೆ”ಯಲ್ಲಿ ಭಾಗವಹಿಸಿ ಬಕೇಟಿನಲ್ಲಿ ಗೋಮೂತ್ರ ಕುಡಿಯುತ್ತಿದ್ದೆವು, ಈ ಕೊಲೆಗೂ ನಮಗೂ ಸಂಬಂಧವಿಲ್ಲ’ ಎಂದಿದ್ದರು. ಜಾಮೀನು ಪಡೆದು ಹೊರಬಂದ ಕೂಡಲೆ ಇದ್ದಕ್ಕಿದ್ದಂತೆ ಗಂಡಸರಾದ ಈ ಕೊಲೆಗಡುಕರು ಓಆಖಿಗಿ ರಹಸ್ಯ ಕ್ಯಾಮೆರಾದೆದುರು ಆ ಕೊಲೆಗಳನ್ನು ಮಾಡಿದ್ದು ನಾವೇ, ನಮ್ ಸಪೋರ್ಟಿಗೆ ಪಿಳ್ಳಜುಟ್ಟು ಪಾರ್ಟಿಯವ್ರು ಇದ್ದಾರೆ, ಇನ್ನೊಂದೆರಡು ಕೊಲೆ ಮಾಡಿ ನೀವು ಸಾಯೋಮಟ ಜೈಲಿಗೆ ಹೋಗಿ, ನಿಮ್ಮ ಮನೆಮಂದಿ ಬಾಯಿಗೆ ಮಣ್ಣು ಹಾಕೋ ಜವಾಬ್ದಾರಿ ನಮ್ದು ಅಂತ ಪಿಳ್ಳಜುಟ್ಟು ಪಾರ್ಟಿಯ ಪುಟಗೋಸಿಗಳು ಒಪ್ಪಿಕೊಂಡಿದ್ದಾರೆಂದು ಹೇಳಿದ್ದಾರೆ. ತಮ್ಮ ಮನೆಮಕ್ಕಳನ್ನು ಹೈಯರ್ ಎಜುಕೇಷನ್ನಿಗೆ ಹೊರದೇಶಕ್ಕೆ ಕಳಿಸಿ ಅವರ ಬಾಳು ಬಂಗಾರ ಮಾಡುವ ಈ ಪಿಳ್ಳಜುಟ್ಟು ಪುಟಗೋಸಿಗಳು, ತಳ ಸಮುದಾಯದ ಜನರ ಬದುಕಿನ ಮೇಲೆ ಚಪ್ಪಡಿಕಲ್ಲು ಎಳೆದು ಅದರ ಮೇಲೆ ಬಾಳೆಎಲೆ ಹಾಸಿಕೊಂಡು ಪಾಯಸ ನೆಕ್ಕಿಕೊಂಡು ಕುಳಿತುಬಿಡುತ್ತಾರೆಂಬುದು ಬಡ ಸಮುದಾಯಗಳಿಗೆ ಇನ್ನೂ ಅರಿವಾಗಿಲ್ಲವೆಂಬ ವರದಿಗಳು ಬಂದಿವೆ. ಈ ಹಿನ್ನೆಲೆಯಲ್ಲಿ ‘ಗ್ಯಾಂಗ್ಸ್ ಆಫ್ ವಾಸ್ಸೆಪುರ್’ ಎಂಬ ಚಿತ್ರ ತೆಗೆದ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್, ಈ ಭಡವ ರಾಸ್ಕಲ್‍ಗಳ ಬಗ್ಗೆ “ ಗ್ಯಾಂಗ್ಸ್ ಆಫ್ ಗಂಜಳಾಪುರ್” ಎಂಬ ಚಿತ್ರ ತೆಗೆಯಲಿದ್ದಾರೆಂದು ನಂಬಲನರ್ಹ ಮೂಲಗಳು ತಿಳಿಸಿವೆ.

******

‘ಹಾಳೂರಿಗೆ ಉಳಿದೋನೆ ಐಲುಗಿರಾಕಿ’ ಎನ್ನೋ ಗಾದೆಗೆ ಕರೆಕ್ಟಾಗಿ ಫಿಟ್ ಆಗುವ ‘ಅನಂತ್ ಗಮಾಡ್ ಹೆಗಡೆ’ ಹೋದಲ್ಲಿ ಬಂದಲ್ಲೆಲ್ಲ ಕಯ್ಯಯ್ಯೋ ಕಯ್ಯಯ್ಯೋ ಅನ್ನುತ್ತ ಅತ್ತ ಪಕ್ಷದಿಂದಲೂ, ಇತ್ತ ಜನರಿಂದಲೂ ಸಮಪ್ರಮಾಣದಲ್ಲಿ ಉಗಿಸಿಕೊಂಡು ತಿರುಗುತ್ತಿರುವುದು ನಿಮಗೆಲ್ಲರಿಗೂ ತಿಳಿದಿದೆ. ಹೊಸಾ ವಿಷ್ಯ ಏನಪ್ಪ ಅಂತಂದ್ರೆ.. “ ಬ್ಲೂಜೆಪಿ”ಯವ್ರು ಹುಲಿ ಇದ್ದಂಗೆ ಮಿಕ್ಕಿದೋರೆಲ್ಲ ಜಿಂಕೆ ಪಂಕೆ ಇದ್ದಂಗೆ, ನಮ್ದು ಹಂಗೈತೆ-ಹಿಂಗೈತೆ, ಲೊಟ್ಟೆ-ಲೊಸಕು, ಮಣ್ಣು ಮಸಕು ಅಂತೆಲ್ಲ ಕಯ್ಯಯ್ಯೋ ಅಂದಿದೆ. ಇವೆಲ್ಲವನ್ನು ‘ಅನಿಮಲ್ ಪ್ಲಾನೆಟ್’ ಚಾನೆಲ್‍ನ ನೇರಪ್ರಸಾರದಲ್ಲಿ ನೋಡಿದದವರು ಈ ಟೈಗರ್ ಸ್ಟೋರಿಗೆ ಥರಾವರಿ ಟ್ವಿಸ್ಟುಗಳನ್ನು ಕೊಡುತ್ತಿದ್ದಾರೆ. ಬ್ಲೂಜೆಪಿಯವರು ಟೈಗರ್‍ಗಳಾದರೆ ಮೊದಲು ಬಟ್ಟೆ ಬಿಚ್ಚಿ ಬರೇಬೆತ್ತಲೆ ಓಡಾಡಬೇಕು, ಯಾಕಂದ್ರೆ ಟೈಗರ್‍ಗಳು ಬಟ್ಟೆ ಹಾಕ್ಕಳಲ್ಲ ಅಂತ ಒಬ್ರು ಅಂದಿದ್ದಾರೆ. ತೊಡೆ ಸಂದಿಯಿಂದ ಮೂರಡಿ ಬಾಲ ನೇತಾಡ್ತಿದ್ರೆ ಮಾತ್ರ ಅದು ಟೈಗರ್ ಅನಿಸಿಕೊಳ್ತದೆ, ಆದ್ರಿಂದ ಗಮಾಡ್ ಹೆಗಡೆಗೂ ಒಂದು ಬಾಲ ಸಿಗಿಸಿ ಅದನ್ನವನು ಲಳ ಲಳ ಅಲ್ಲಾಡಿಸಿಕೊಂಡು ಓಡಾಡಬೇಕು, ಅವಾಗಷ್ಟೇ ಟೈಗರ್ ಅಂತ ಕನ್ಸಿಡರ್ ಮಾಡಬಹುದೆಂದು ಮತ್ತೊಬ್ಬರು ಅಂದಿದ್ದಾರೆ. ಇಲ್ಲ, ಇಲ್ಲ, ಟೈಗರ್‍ಗಳು ಹಸಿವಾದರೆ ಪುದೀನ ಕೊತ್ತಂಬರಿ ಸೊಪ್ಪು ತಿನ್ನೋದಿಲ್ಲ, ಅವಕ್ಕೆ ಹಸೀಮಾಂಸವೇ ಆಗಬೇಕು, ಆದ್ದರಿಂದ ಅನಂತ್ ಗಮಾಡ್ ಹೆಗಡೆ ಪಕ್ಷದೋರು ಊರಲ್ಲಿರೋ ಕೋಳಿ ಅಂಗಡಿ, ಮಟನ್ ಅಂಗಡಿಗಳಿಗೆ ಹುಲಿಗಳಂತೆ ಮಂಡಿ ಕೈಗಳನ್ನು ನೆಲಕ್ಕೂರಿ ನಾಲಿಗೆ ಹೊರಚಾಚಿ ನಡೆದುಕೊಂಡು ಹೋಗಿ ಅಲ್ಲಿ ವೇಸ್ಟ್ ಎಂದು ಎಸೆಯುವ ತ್ಯಾಜ್ಯಮಾಂಸವನ್ನು ಕಸದಡಬ್ಬಿಗೆ ಬಾಯಿ ಹಾಕಿ ಕಚಪಚನೆ ತಿನ್ನಬೇಕು, ಆಗಷ್ಟೇ ಇವರೆಲ್ಲ ಹುಲಿಗಳಾಗಲು ಸಾಧ್ಯ ಎಂದು ಜನರು ತರಾವರಿ ಐಡಿಯಾಗಳನ್ನು ಅನಂತ್ ಗಮಾಡ್ ಹೆಗಡೆಗೆ ಕೊಡುತ್ತಿದ್ದಾರೆ. ಅಗಣಿ ಹಾಕೋಕೆ ಹೋಗಿ ಇನ್ನೇನೋ ಸಿಗಿಸಿಕೊಂಡಂತಾಯ್ತಲ್ಲ ಎಂದು ಗಾಬರಿಯಾಗಿರೋ ಗಮಾರ್ ಹೆಗಡೆ ತನ್ನ ರಷ್ಯನ್ ಹೇರ್ ಸ್ಟೈಲ್ ತಲೆಗೂದಲಿಗೆ ಕೇಸರಿ ಕಲರ್ ಹೊಡೆಸಿಕೊಳ್ಳಲು ಕಟಿಂಗ್ ಶಾಪ್‍ಗೆ ಹೋದವರು ಇನ್ನೂ ಮನೆಗೆ ವಾಪಸಾಗಿಲ್ಲ ಎಂದು ತಿಳಿದುಬಂದಿದೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ನಮ್ಮ ನಿಮ್ಮ ಬೇಟಿ ಮುಂದಿನವಾರ. ಅಲ್ಲೀತನಕ ನೀವೂ ನೆಮ್ದಿಯಾಗಿರಿ, ನಾವೂ ನೆಮ್ದಿಯಾಗಿರುತ್ತೇವೆ ಅಂತ ಹೇಳುತ್ತ, ವಾರ್ತಾಪ್ರಸಾರಕ್ಕೆ ಮಂಗಳ ಹಾಡುತ್ತಿದ್ದೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...