Homeರಾಜಕೀಯಉರ್ಸುಲಾ ಅ್ಯಂಡ್ರೆಸ್‍ಳನ್ನು ಸೋನಿಯಾ ಮಾಡಿದ ಸುಳ್ಳರು

ಉರ್ಸುಲಾ ಅ್ಯಂಡ್ರೆಸ್‍ಳನ್ನು ಸೋನಿಯಾ ಮಾಡಿದ ಸುಳ್ಳರು

- Advertisement -
- Advertisement -

ಪ್ರಿಯಾಂಕ ಗಾಂಧಿಯವರು ಅಧಿಕೃತವಾಗಿ ರಾಜಕೀಯ ಪ್ರವೇಶಿಸುವ ಸುದ್ದಿ ಬಂದಾಗಿನಿಂದ, ಅವರನ್ನು ಅವಹೇಳನ ಮಾಡುವ ಹಲವಾರು ಸುಳ್‍ಸುದ್ದಿಗಳು ಜಾಲತಾಣದಲ್ಲಿ ಹರಿದಾಡುತ್ತಿವೆ. ಹಿಂದೆ ಸೋನಿಯಾ ಗಾಂಧಿಯವರ ಕುರಿತು ಅಸಹ್ಯ ಸುಳ್ ಒಂದನ್ನು ಬಲಪಂಥೀಯರು ಹರಿಬಿಟ್ಟಿದ್ದರು. ಈಗ ಆ ಸುದ್ದಿಯೂ ಮತ್ತೆ ಓಡಾಡಲು ಆರಂಭಿಸಿದೆ.
ಹೆಣ್ಣು ಮಕ್ಕಳೇ ಎಚ್ಚರ, ಮೋದಿಯ ಉಗ್ರ ಅಭಿಮಾನಿಗಳು (ನಮೋಭಕ್ತರು) ಎಂದುಕೊಳ್ಳುವವರು ನಿಮಗೆ ಗೊತ್ತಿದ್ದರೆ ಹುಷಾರಾಗಿರಿ. ಅವರು ಯಾವಾಗ ನಿಮ್ಮ ಫೋಟೊವನ್ನು ಯಾವುದೋ ಅರೆ ಬೆತ್ತಲೆ ಫೋಟೊದೊಂದಿಗೆ ಕ್ಲಬ್ ಮಾಡಿ ವೈರಲ್ ಮಾಡುವರೋ ಗೊತ್ತಿಲ್ಲ. ಇಂತಹವರು ನನ್ನ ಅಭಿಮಾನಿಗಳಲ್ಲ ಎಂದು ಇವತ್ತಿಗೂ ಮೋದಿಯಾಗಲಿ, ಬಿಜೆಪಿಯಾಗಲಿ ನಿರಾಕರಣೆ ಮಾಡಿಲ್ಲ. ಮೋದಿಯವರು ಟ್ವಿಟರ್‍ನಲ್ಲಿ ಫಾಲೋ ಮಾಡುವ ವ್ಯಕ್ತಿಗಳಲ್ಲಿ ಹಲವಾರು ಲಂಪಟ ಬುದ್ದಿಯ ವಿಕೃತರಿದ್ದಾರೆ. ಅವರ ಟ್ವೀಟ್‍ಗಳನ್ನು ಗಮನಿಸಿದರೆ ಅವರ ಯೋಗ್ಯತೆ, ಅಭಿರುಚಿ ಗೊತ್ತಾಗಿ ಬಿಡುತ್ತದೆ.

ಬಾಂಡ್ ಪಿಚ್ಚರ್ ಫೋಟೊ

ಮಿಥ್ಯ: ಈಗ ಸಾಮಾಜಿಕ ಜಾಲತಾಣಗಳಲ್ಲಿ ಒಂದು ಫೋಟೊವನ್ನು ವೈರಲ್ ಮಾಡಲಾಗಿದ್ದು ಸೋನಿಯಾ ಗಾಂಧಿಯವರ ತೇಜೋವಧೆ ಮಾಡುವ ಯತ್ನ ಮಾಡಲಾಗಿದೆ. ಈ ಫೋಟೊದಲ್ಲಿ ಸೋನಿಯಾ ಬೀಚ್ ಉಡುಪಿನಲ್ಲಿ ಗಂಡಸೊಬ್ಬರೊಂದಿಗಿದ್ದಾರೆ ಎಂಬ ಚಿತ್ರಣ ಸೃಷ್ಟಿಸುವುದು ಇದರ ಉದ್ದೇಶ. ‘ಹಲೋ ಕಾಂಗ್ರೆಸ್ಸಿಗರೇ, ನೋಡಿ ನಿಮ್ಮ ನಾಯಕಿ ಸೋನಿಯಾ ಅವಸ್ಥೆಯನ್ನು. ಇದೂ ಸುಳ್ಳು ಅಂತೀರಾ?’ ಎಂದು ‘ಫಿರ್ ಏಕ್ ಬಾರ್ ಮೋದಿ ಸರ್ಕಾರ್’ ಎಂಬ ಬಲಪಂಥೀಯ ಫೇಸ್‍ಬುಕ್ ಪೇಜ್ ಈ ಸಂಚು ರೂಪಿಸಿದೆ. ಇದು 24 ಗಂಟೆಗಳಲ್ಲಿ 10 ಸಾವಿರ ಬಾರಿ ಶೇರ್ ಆಗಿದೆ.
ಈ ನಕಲಿ ಫೋಟೊ ಇಟ್ಟಕೊಂಡು ‘ದೇಶ ರಕ್ಷಿಸಿ’ ಅಭಿಯಾನ ನಡೆಸುತ್ತಿರುವ ಮುಖೇಡಿ ಗುಂಪುಗಳ ಫೇಸ್Àಬುಕ್ ಪೇಜ್‍ಗಳು: ವಿ ಸಪೋರ್ಟ್ ಪಿಎಂ ಮೋದಿ, ವೋಟ್ ಫಾರ್ ಬಿಜೆಪಿ, ವೋಟ್ ಫಾರ್ ಯೊಗಿ ಆದಿತ್ಯನಾಥ್ ಇತ್ಯಾದಿ.
ಸತ್ಯ: ಈ ಫೋಟೊದಲ್ಲಿರುವುದು ಸೋನಿಯಾ ಅಲ್ಲವೇ ಅಲ್ಲ. ಮೊದಲ ಜೇಮ್ಸ್ ಬಾಂಡ್ ಚಿತ್ರ ‘ಆಡಿ. ಓಔ’ ಚಲನಚಿತ್ರದ ಸೆಟ್‍ನಲ್ಲಿ ಸ್ವಿಸ್ ನಟಿ ಉರ್ಸುಲಾ ಅ್ಯಂಡ್ರೆಸ್ ನಟನೆಯ ಸ್ಟಿಲ್ ಇವು. ಆಕೆಯ ಜೊತೆಗಿರುವಾತ ಬಾಂಡ್ ಪಾತ್ರ ಮಾಡಿದ ಸ್ಕಾಟಿಷ್ ನಟ ಸಿಯಾನ್ ಕಾನರಿ.
ಸತ್ಯ ಇಷ್ಟು ಸಿಂಪಲ್ಲಾಗಿದೆ. ಇದನ್ನು ಕೆಲವರು ವಿವರಿಸಿದರೂ ಸುಳ್ ಸುಬ್ಬರು ವಿಕೃತ ನಗೆಯಲ್ಲೇ ಕಾಲ ಹಾಕುತ್ತಿದ್ದಾರೆ. ಈ ಹಿಂದೆಯೂ ಸೋನಿಯಾ ಗಾಂಧಿ ತೇಜೋವಧೆಗೆ ಸಾಕಷ್ಟು ಯತ್ನ ಮಾಡಲಾಗಿದೆ. ಹಿಂದೆ ಇದೇ ‘ಫಿರ್ ಏಕ್ ಬಾರ್ ಮೋದಿ ಸರ್ಕಾರ್’ ಪೇಜ್‍ನಲ್ಲಿ ಫೋಟೊಶಾಪ್ ಮಾಡಿ ಸೋನಿಯಾ ಮತ್ತು ಮಾಲ್ಡಿವ್ಸ್‍ನ ಮಾಜಿ ಅಧ್ಯಕ್ಷ ಮೌಮೂನ್ ಅಬ್ದುಲ್ ಗಯೂಮ್ ಫೋಟೊ ಹಾಕಲಾಗಿತ್ತು. ಸೋನಿಯಾ ಗಯೂಮ್ ತೊಡೆ ಮೇಲೆ ಕುಳಿತಂತೆ ಫೋಟೊ ಸೃಷ್ಟಿಸಲಾಗಿತ್ತು.
ಹಾಲಿವುಡ್ ನಟಿ ರೀಸ್ ವಿಡರ್‍ಸ್ಪೂನ್ ಫೋಟೊ ಹಾಕಿ, ಸೋನಿಯಾ ಯುವತಿಯಾಗಿದ್ದಾಗ ಬಾರ್ ವೇಟ್ರೆಸ್ ಆಗಿದ್ದಳು ಎಂದು ಸುಳ್ ಹರಡಲಾಗಿತ್ತು. ಮರ್ಲಿನ್ ಮನ್ರೋ ಫೋಟೊಕ್ಕೆ ಸೋನಿಯಾ ಮುಖ ಪೇಸ್ಟ್ ಮಾಡಿ, ಬಾರ್‍ಗರ್ಲ್ ಸೋನಿಯಾ ಎಂದು ತಿರುಚಲಾಗಿತ್ತು.
ಸೋನಿಯಾ ಈಗ ರಾಜಕೀಯದಿಂದ ನಿವೃತ್ತರಾಗಿದ್ದಾರೆ. ಈಗಲೂ ಅವರ ವಿರುದ್ಧ ವಿಕೃತ ಸುಳ್‍ಗಳನ್ನು ಹರಡಲಾಗುತ್ತಿದೆ. ಈ ವಿಕೃತರ ಮಾಡೆಲ್‍ಗಳೇ ಸಾರ್ವಜನಿಕ ಸಭೆಗಳಲ್ಲೇ ಸುಳ್ಳುಗಳನ್ನು ಸತ್ಯ ಎಂಬಂತೆ ಕಿರುಚುವಾಗ ಇನ್ನೇನಾಗುತ್ತದೆ?
ಫೋಟೊ ಶಿರ್ಷಿಕೆ: ಚಿತ್ರದಲ್ಲಿರುವುದು ಸೋನಿಯಾ ಗಾಂಧಿ ಅಲ್ಲ, ‘ಆಡಿ. ಓಔ’ ಚಲನಚಿತ್ರದಲ್ಲಿ ನಟಿ ಉರ್ಸುಲಾ ಅ್ಯಂಡ್ರೆಸ್, ನಟ ಸಿಯಾನ್ ಕಾನರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...