Homeರಾಜಕೀಯಉರ್ಸುಲಾ ಅ್ಯಂಡ್ರೆಸ್‍ಳನ್ನು ಸೋನಿಯಾ ಮಾಡಿದ ಸುಳ್ಳರು

ಉರ್ಸುಲಾ ಅ್ಯಂಡ್ರೆಸ್‍ಳನ್ನು ಸೋನಿಯಾ ಮಾಡಿದ ಸುಳ್ಳರು

- Advertisement -
- Advertisement -

ಪ್ರಿಯಾಂಕ ಗಾಂಧಿಯವರು ಅಧಿಕೃತವಾಗಿ ರಾಜಕೀಯ ಪ್ರವೇಶಿಸುವ ಸುದ್ದಿ ಬಂದಾಗಿನಿಂದ, ಅವರನ್ನು ಅವಹೇಳನ ಮಾಡುವ ಹಲವಾರು ಸುಳ್‍ಸುದ್ದಿಗಳು ಜಾಲತಾಣದಲ್ಲಿ ಹರಿದಾಡುತ್ತಿವೆ. ಹಿಂದೆ ಸೋನಿಯಾ ಗಾಂಧಿಯವರ ಕುರಿತು ಅಸಹ್ಯ ಸುಳ್ ಒಂದನ್ನು ಬಲಪಂಥೀಯರು ಹರಿಬಿಟ್ಟಿದ್ದರು. ಈಗ ಆ ಸುದ್ದಿಯೂ ಮತ್ತೆ ಓಡಾಡಲು ಆರಂಭಿಸಿದೆ.
ಹೆಣ್ಣು ಮಕ್ಕಳೇ ಎಚ್ಚರ, ಮೋದಿಯ ಉಗ್ರ ಅಭಿಮಾನಿಗಳು (ನಮೋಭಕ್ತರು) ಎಂದುಕೊಳ್ಳುವವರು ನಿಮಗೆ ಗೊತ್ತಿದ್ದರೆ ಹುಷಾರಾಗಿರಿ. ಅವರು ಯಾವಾಗ ನಿಮ್ಮ ಫೋಟೊವನ್ನು ಯಾವುದೋ ಅರೆ ಬೆತ್ತಲೆ ಫೋಟೊದೊಂದಿಗೆ ಕ್ಲಬ್ ಮಾಡಿ ವೈರಲ್ ಮಾಡುವರೋ ಗೊತ್ತಿಲ್ಲ. ಇಂತಹವರು ನನ್ನ ಅಭಿಮಾನಿಗಳಲ್ಲ ಎಂದು ಇವತ್ತಿಗೂ ಮೋದಿಯಾಗಲಿ, ಬಿಜೆಪಿಯಾಗಲಿ ನಿರಾಕರಣೆ ಮಾಡಿಲ್ಲ. ಮೋದಿಯವರು ಟ್ವಿಟರ್‍ನಲ್ಲಿ ಫಾಲೋ ಮಾಡುವ ವ್ಯಕ್ತಿಗಳಲ್ಲಿ ಹಲವಾರು ಲಂಪಟ ಬುದ್ದಿಯ ವಿಕೃತರಿದ್ದಾರೆ. ಅವರ ಟ್ವೀಟ್‍ಗಳನ್ನು ಗಮನಿಸಿದರೆ ಅವರ ಯೋಗ್ಯತೆ, ಅಭಿರುಚಿ ಗೊತ್ತಾಗಿ ಬಿಡುತ್ತದೆ.

ಬಾಂಡ್ ಪಿಚ್ಚರ್ ಫೋಟೊ

ಮಿಥ್ಯ: ಈಗ ಸಾಮಾಜಿಕ ಜಾಲತಾಣಗಳಲ್ಲಿ ಒಂದು ಫೋಟೊವನ್ನು ವೈರಲ್ ಮಾಡಲಾಗಿದ್ದು ಸೋನಿಯಾ ಗಾಂಧಿಯವರ ತೇಜೋವಧೆ ಮಾಡುವ ಯತ್ನ ಮಾಡಲಾಗಿದೆ. ಈ ಫೋಟೊದಲ್ಲಿ ಸೋನಿಯಾ ಬೀಚ್ ಉಡುಪಿನಲ್ಲಿ ಗಂಡಸೊಬ್ಬರೊಂದಿಗಿದ್ದಾರೆ ಎಂಬ ಚಿತ್ರಣ ಸೃಷ್ಟಿಸುವುದು ಇದರ ಉದ್ದೇಶ. ‘ಹಲೋ ಕಾಂಗ್ರೆಸ್ಸಿಗರೇ, ನೋಡಿ ನಿಮ್ಮ ನಾಯಕಿ ಸೋನಿಯಾ ಅವಸ್ಥೆಯನ್ನು. ಇದೂ ಸುಳ್ಳು ಅಂತೀರಾ?’ ಎಂದು ‘ಫಿರ್ ಏಕ್ ಬಾರ್ ಮೋದಿ ಸರ್ಕಾರ್’ ಎಂಬ ಬಲಪಂಥೀಯ ಫೇಸ್‍ಬುಕ್ ಪೇಜ್ ಈ ಸಂಚು ರೂಪಿಸಿದೆ. ಇದು 24 ಗಂಟೆಗಳಲ್ಲಿ 10 ಸಾವಿರ ಬಾರಿ ಶೇರ್ ಆಗಿದೆ.
ಈ ನಕಲಿ ಫೋಟೊ ಇಟ್ಟಕೊಂಡು ‘ದೇಶ ರಕ್ಷಿಸಿ’ ಅಭಿಯಾನ ನಡೆಸುತ್ತಿರುವ ಮುಖೇಡಿ ಗುಂಪುಗಳ ಫೇಸ್Àಬುಕ್ ಪೇಜ್‍ಗಳು: ವಿ ಸಪೋರ್ಟ್ ಪಿಎಂ ಮೋದಿ, ವೋಟ್ ಫಾರ್ ಬಿಜೆಪಿ, ವೋಟ್ ಫಾರ್ ಯೊಗಿ ಆದಿತ್ಯನಾಥ್ ಇತ್ಯಾದಿ.
ಸತ್ಯ: ಈ ಫೋಟೊದಲ್ಲಿರುವುದು ಸೋನಿಯಾ ಅಲ್ಲವೇ ಅಲ್ಲ. ಮೊದಲ ಜೇಮ್ಸ್ ಬಾಂಡ್ ಚಿತ್ರ ‘ಆಡಿ. ಓಔ’ ಚಲನಚಿತ್ರದ ಸೆಟ್‍ನಲ್ಲಿ ಸ್ವಿಸ್ ನಟಿ ಉರ್ಸುಲಾ ಅ್ಯಂಡ್ರೆಸ್ ನಟನೆಯ ಸ್ಟಿಲ್ ಇವು. ಆಕೆಯ ಜೊತೆಗಿರುವಾತ ಬಾಂಡ್ ಪಾತ್ರ ಮಾಡಿದ ಸ್ಕಾಟಿಷ್ ನಟ ಸಿಯಾನ್ ಕಾನರಿ.
ಸತ್ಯ ಇಷ್ಟು ಸಿಂಪಲ್ಲಾಗಿದೆ. ಇದನ್ನು ಕೆಲವರು ವಿವರಿಸಿದರೂ ಸುಳ್ ಸುಬ್ಬರು ವಿಕೃತ ನಗೆಯಲ್ಲೇ ಕಾಲ ಹಾಕುತ್ತಿದ್ದಾರೆ. ಈ ಹಿಂದೆಯೂ ಸೋನಿಯಾ ಗಾಂಧಿ ತೇಜೋವಧೆಗೆ ಸಾಕಷ್ಟು ಯತ್ನ ಮಾಡಲಾಗಿದೆ. ಹಿಂದೆ ಇದೇ ‘ಫಿರ್ ಏಕ್ ಬಾರ್ ಮೋದಿ ಸರ್ಕಾರ್’ ಪೇಜ್‍ನಲ್ಲಿ ಫೋಟೊಶಾಪ್ ಮಾಡಿ ಸೋನಿಯಾ ಮತ್ತು ಮಾಲ್ಡಿವ್ಸ್‍ನ ಮಾಜಿ ಅಧ್ಯಕ್ಷ ಮೌಮೂನ್ ಅಬ್ದುಲ್ ಗಯೂಮ್ ಫೋಟೊ ಹಾಕಲಾಗಿತ್ತು. ಸೋನಿಯಾ ಗಯೂಮ್ ತೊಡೆ ಮೇಲೆ ಕುಳಿತಂತೆ ಫೋಟೊ ಸೃಷ್ಟಿಸಲಾಗಿತ್ತು.
ಹಾಲಿವುಡ್ ನಟಿ ರೀಸ್ ವಿಡರ್‍ಸ್ಪೂನ್ ಫೋಟೊ ಹಾಕಿ, ಸೋನಿಯಾ ಯುವತಿಯಾಗಿದ್ದಾಗ ಬಾರ್ ವೇಟ್ರೆಸ್ ಆಗಿದ್ದಳು ಎಂದು ಸುಳ್ ಹರಡಲಾಗಿತ್ತು. ಮರ್ಲಿನ್ ಮನ್ರೋ ಫೋಟೊಕ್ಕೆ ಸೋನಿಯಾ ಮುಖ ಪೇಸ್ಟ್ ಮಾಡಿ, ಬಾರ್‍ಗರ್ಲ್ ಸೋನಿಯಾ ಎಂದು ತಿರುಚಲಾಗಿತ್ತು.
ಸೋನಿಯಾ ಈಗ ರಾಜಕೀಯದಿಂದ ನಿವೃತ್ತರಾಗಿದ್ದಾರೆ. ಈಗಲೂ ಅವರ ವಿರುದ್ಧ ವಿಕೃತ ಸುಳ್‍ಗಳನ್ನು ಹರಡಲಾಗುತ್ತಿದೆ. ಈ ವಿಕೃತರ ಮಾಡೆಲ್‍ಗಳೇ ಸಾರ್ವಜನಿಕ ಸಭೆಗಳಲ್ಲೇ ಸುಳ್ಳುಗಳನ್ನು ಸತ್ಯ ಎಂಬಂತೆ ಕಿರುಚುವಾಗ ಇನ್ನೇನಾಗುತ್ತದೆ?
ಫೋಟೊ ಶಿರ್ಷಿಕೆ: ಚಿತ್ರದಲ್ಲಿರುವುದು ಸೋನಿಯಾ ಗಾಂಧಿ ಅಲ್ಲ, ‘ಆಡಿ. ಓಔ’ ಚಲನಚಿತ್ರದಲ್ಲಿ ನಟಿ ಉರ್ಸುಲಾ ಅ್ಯಂಡ್ರೆಸ್, ನಟ ಸಿಯಾನ್ ಕಾನರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...