Homeರಾಜಕೀಯಉರ್ಸುಲಾ ಅ್ಯಂಡ್ರೆಸ್‍ಳನ್ನು ಸೋನಿಯಾ ಮಾಡಿದ ಸುಳ್ಳರು

ಉರ್ಸುಲಾ ಅ್ಯಂಡ್ರೆಸ್‍ಳನ್ನು ಸೋನಿಯಾ ಮಾಡಿದ ಸುಳ್ಳರು

- Advertisement -
- Advertisement -

ಪ್ರಿಯಾಂಕ ಗಾಂಧಿಯವರು ಅಧಿಕೃತವಾಗಿ ರಾಜಕೀಯ ಪ್ರವೇಶಿಸುವ ಸುದ್ದಿ ಬಂದಾಗಿನಿಂದ, ಅವರನ್ನು ಅವಹೇಳನ ಮಾಡುವ ಹಲವಾರು ಸುಳ್‍ಸುದ್ದಿಗಳು ಜಾಲತಾಣದಲ್ಲಿ ಹರಿದಾಡುತ್ತಿವೆ. ಹಿಂದೆ ಸೋನಿಯಾ ಗಾಂಧಿಯವರ ಕುರಿತು ಅಸಹ್ಯ ಸುಳ್ ಒಂದನ್ನು ಬಲಪಂಥೀಯರು ಹರಿಬಿಟ್ಟಿದ್ದರು. ಈಗ ಆ ಸುದ್ದಿಯೂ ಮತ್ತೆ ಓಡಾಡಲು ಆರಂಭಿಸಿದೆ.
ಹೆಣ್ಣು ಮಕ್ಕಳೇ ಎಚ್ಚರ, ಮೋದಿಯ ಉಗ್ರ ಅಭಿಮಾನಿಗಳು (ನಮೋಭಕ್ತರು) ಎಂದುಕೊಳ್ಳುವವರು ನಿಮಗೆ ಗೊತ್ತಿದ್ದರೆ ಹುಷಾರಾಗಿರಿ. ಅವರು ಯಾವಾಗ ನಿಮ್ಮ ಫೋಟೊವನ್ನು ಯಾವುದೋ ಅರೆ ಬೆತ್ತಲೆ ಫೋಟೊದೊಂದಿಗೆ ಕ್ಲಬ್ ಮಾಡಿ ವೈರಲ್ ಮಾಡುವರೋ ಗೊತ್ತಿಲ್ಲ. ಇಂತಹವರು ನನ್ನ ಅಭಿಮಾನಿಗಳಲ್ಲ ಎಂದು ಇವತ್ತಿಗೂ ಮೋದಿಯಾಗಲಿ, ಬಿಜೆಪಿಯಾಗಲಿ ನಿರಾಕರಣೆ ಮಾಡಿಲ್ಲ. ಮೋದಿಯವರು ಟ್ವಿಟರ್‍ನಲ್ಲಿ ಫಾಲೋ ಮಾಡುವ ವ್ಯಕ್ತಿಗಳಲ್ಲಿ ಹಲವಾರು ಲಂಪಟ ಬುದ್ದಿಯ ವಿಕೃತರಿದ್ದಾರೆ. ಅವರ ಟ್ವೀಟ್‍ಗಳನ್ನು ಗಮನಿಸಿದರೆ ಅವರ ಯೋಗ್ಯತೆ, ಅಭಿರುಚಿ ಗೊತ್ತಾಗಿ ಬಿಡುತ್ತದೆ.

ಬಾಂಡ್ ಪಿಚ್ಚರ್ ಫೋಟೊ

ಮಿಥ್ಯ: ಈಗ ಸಾಮಾಜಿಕ ಜಾಲತಾಣಗಳಲ್ಲಿ ಒಂದು ಫೋಟೊವನ್ನು ವೈರಲ್ ಮಾಡಲಾಗಿದ್ದು ಸೋನಿಯಾ ಗಾಂಧಿಯವರ ತೇಜೋವಧೆ ಮಾಡುವ ಯತ್ನ ಮಾಡಲಾಗಿದೆ. ಈ ಫೋಟೊದಲ್ಲಿ ಸೋನಿಯಾ ಬೀಚ್ ಉಡುಪಿನಲ್ಲಿ ಗಂಡಸೊಬ್ಬರೊಂದಿಗಿದ್ದಾರೆ ಎಂಬ ಚಿತ್ರಣ ಸೃಷ್ಟಿಸುವುದು ಇದರ ಉದ್ದೇಶ. ‘ಹಲೋ ಕಾಂಗ್ರೆಸ್ಸಿಗರೇ, ನೋಡಿ ನಿಮ್ಮ ನಾಯಕಿ ಸೋನಿಯಾ ಅವಸ್ಥೆಯನ್ನು. ಇದೂ ಸುಳ್ಳು ಅಂತೀರಾ?’ ಎಂದು ‘ಫಿರ್ ಏಕ್ ಬಾರ್ ಮೋದಿ ಸರ್ಕಾರ್’ ಎಂಬ ಬಲಪಂಥೀಯ ಫೇಸ್‍ಬುಕ್ ಪೇಜ್ ಈ ಸಂಚು ರೂಪಿಸಿದೆ. ಇದು 24 ಗಂಟೆಗಳಲ್ಲಿ 10 ಸಾವಿರ ಬಾರಿ ಶೇರ್ ಆಗಿದೆ.
ಈ ನಕಲಿ ಫೋಟೊ ಇಟ್ಟಕೊಂಡು ‘ದೇಶ ರಕ್ಷಿಸಿ’ ಅಭಿಯಾನ ನಡೆಸುತ್ತಿರುವ ಮುಖೇಡಿ ಗುಂಪುಗಳ ಫೇಸ್Àಬುಕ್ ಪೇಜ್‍ಗಳು: ವಿ ಸಪೋರ್ಟ್ ಪಿಎಂ ಮೋದಿ, ವೋಟ್ ಫಾರ್ ಬಿಜೆಪಿ, ವೋಟ್ ಫಾರ್ ಯೊಗಿ ಆದಿತ್ಯನಾಥ್ ಇತ್ಯಾದಿ.
ಸತ್ಯ: ಈ ಫೋಟೊದಲ್ಲಿರುವುದು ಸೋನಿಯಾ ಅಲ್ಲವೇ ಅಲ್ಲ. ಮೊದಲ ಜೇಮ್ಸ್ ಬಾಂಡ್ ಚಿತ್ರ ‘ಆಡಿ. ಓಔ’ ಚಲನಚಿತ್ರದ ಸೆಟ್‍ನಲ್ಲಿ ಸ್ವಿಸ್ ನಟಿ ಉರ್ಸುಲಾ ಅ್ಯಂಡ್ರೆಸ್ ನಟನೆಯ ಸ್ಟಿಲ್ ಇವು. ಆಕೆಯ ಜೊತೆಗಿರುವಾತ ಬಾಂಡ್ ಪಾತ್ರ ಮಾಡಿದ ಸ್ಕಾಟಿಷ್ ನಟ ಸಿಯಾನ್ ಕಾನರಿ.
ಸತ್ಯ ಇಷ್ಟು ಸಿಂಪಲ್ಲಾಗಿದೆ. ಇದನ್ನು ಕೆಲವರು ವಿವರಿಸಿದರೂ ಸುಳ್ ಸುಬ್ಬರು ವಿಕೃತ ನಗೆಯಲ್ಲೇ ಕಾಲ ಹಾಕುತ್ತಿದ್ದಾರೆ. ಈ ಹಿಂದೆಯೂ ಸೋನಿಯಾ ಗಾಂಧಿ ತೇಜೋವಧೆಗೆ ಸಾಕಷ್ಟು ಯತ್ನ ಮಾಡಲಾಗಿದೆ. ಹಿಂದೆ ಇದೇ ‘ಫಿರ್ ಏಕ್ ಬಾರ್ ಮೋದಿ ಸರ್ಕಾರ್’ ಪೇಜ್‍ನಲ್ಲಿ ಫೋಟೊಶಾಪ್ ಮಾಡಿ ಸೋನಿಯಾ ಮತ್ತು ಮಾಲ್ಡಿವ್ಸ್‍ನ ಮಾಜಿ ಅಧ್ಯಕ್ಷ ಮೌಮೂನ್ ಅಬ್ದುಲ್ ಗಯೂಮ್ ಫೋಟೊ ಹಾಕಲಾಗಿತ್ತು. ಸೋನಿಯಾ ಗಯೂಮ್ ತೊಡೆ ಮೇಲೆ ಕುಳಿತಂತೆ ಫೋಟೊ ಸೃಷ್ಟಿಸಲಾಗಿತ್ತು.
ಹಾಲಿವುಡ್ ನಟಿ ರೀಸ್ ವಿಡರ್‍ಸ್ಪೂನ್ ಫೋಟೊ ಹಾಕಿ, ಸೋನಿಯಾ ಯುವತಿಯಾಗಿದ್ದಾಗ ಬಾರ್ ವೇಟ್ರೆಸ್ ಆಗಿದ್ದಳು ಎಂದು ಸುಳ್ ಹರಡಲಾಗಿತ್ತು. ಮರ್ಲಿನ್ ಮನ್ರೋ ಫೋಟೊಕ್ಕೆ ಸೋನಿಯಾ ಮುಖ ಪೇಸ್ಟ್ ಮಾಡಿ, ಬಾರ್‍ಗರ್ಲ್ ಸೋನಿಯಾ ಎಂದು ತಿರುಚಲಾಗಿತ್ತು.
ಸೋನಿಯಾ ಈಗ ರಾಜಕೀಯದಿಂದ ನಿವೃತ್ತರಾಗಿದ್ದಾರೆ. ಈಗಲೂ ಅವರ ವಿರುದ್ಧ ವಿಕೃತ ಸುಳ್‍ಗಳನ್ನು ಹರಡಲಾಗುತ್ತಿದೆ. ಈ ವಿಕೃತರ ಮಾಡೆಲ್‍ಗಳೇ ಸಾರ್ವಜನಿಕ ಸಭೆಗಳಲ್ಲೇ ಸುಳ್ಳುಗಳನ್ನು ಸತ್ಯ ಎಂಬಂತೆ ಕಿರುಚುವಾಗ ಇನ್ನೇನಾಗುತ್ತದೆ?
ಫೋಟೊ ಶಿರ್ಷಿಕೆ: ಚಿತ್ರದಲ್ಲಿರುವುದು ಸೋನಿಯಾ ಗಾಂಧಿ ಅಲ್ಲ, ‘ಆಡಿ. ಓಔ’ ಚಲನಚಿತ್ರದಲ್ಲಿ ನಟಿ ಉರ್ಸುಲಾ ಅ್ಯಂಡ್ರೆಸ್, ನಟ ಸಿಯಾನ್ ಕಾನರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋವಿಡ್-19 ಲಸಿಕೆ ಮತ್ತು ಯುವ ವಯಸ್ಕರ ಹಠಾತ್ ಸಾವುಗಳ ನಡುವೆ ಯಾವುದೇ ವೈಜ್ಞಾನಿಕ ಸಂಬಂಧ ಕಂಡುಬಂದಿಲ್ಲ: ಏಮ್ಸ್ ಅಧ್ಯಯನ

ನವದೆಹಲಿ: ದೆಹಲಿಯ ಏಮ್ಸ್‌ನಲ್ಲಿ ನಡೆಸಿದ ಒಂದು ವರ್ಷದ ಸಮಗ್ರ, ಶವಪರೀಕ್ಷೆ ಆಧಾರಿತ ವೀಕ್ಷಣಾ ಅಧ್ಯಯನವು, ಯುವ ವಯಸ್ಕರಲ್ಲಿ ಕೋವಿಡ್-19 ಲಸಿಕೆಯನ್ನು ಹಠಾತ್ ಸಾವುಗಳೊಂದಿಗೆ ಸಂಪರ್ಕಿಸುವ ಯಾವುದೇ ಪುರಾವೆಗಳು ಕಂಡುಬಂದಿಲ್ಲ, ಇದು ಕೋವಿಡ್ ಲಸಿಕೆಗಳ...

ಬಿಜೆಪಿ ಜನ ನಾಟಕೀಯರು, ದೇಶದ್ರೋಹಿಗಳು; ಅವರನ್ನು ಅಧಿಕಾರದಿಂದ ಕಿತ್ತೊಗೆಯಬೇಕು: ಮಲ್ಲಿಕಾರ್ಜುನ ಖರ್ಗೆ

"ಬಿಜೆಪಿಯವರು 'ಗದ್ದಾರ್‌ಗಳು' (ದೇಶದ್ರೋಹಿಗಳು) ಮತ್ತು 'ಡ್ರಮೆಬಾಜ್' (ನಾಟಕೀಯದಲ್ಲಿ ತೊಡಗಿಸಿಕೊಳ್ಳುವವರು). ಅವರನ್ನು ಅಧಿಕಾರದಿಂದ ತೆಗೆದುಹಾಕಬೇಕು" ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ಕೊಟ್ಟಿದ್ದಾರೆ.  ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ವೋಟ್ ಚೋರಿ ಕುರಿತ...

ಆಸ್ಟ್ರೇಲಿಯಾ | ಸಿಡ್ನಿಯ ಬೋಂಡಿ ಬೀಚ್‌ನಲ್ಲಿ ಗುಂಡಿನ ದಾಳಿ : 12 ಜನರು ಸಾವು

ಭಾನುವಾರ (ಡಿ.14) ಆಸ್ಟ್ರೇಲಿಯಾದ ಸಿಡ್ನಿ ನಗರದ ಪ್ರಸಿದ್ಧ ಬೋಂಡಿ ಬೀಚ್‌ನಲ್ಲಿ ಆಯೋಜಿಸಿದ್ದ ಯಹೂದಿ ಸಮುದಾಯದ 'ಹನುಕ್ಕಾ' ಕಾರ್ಯಕ್ರಮದಲ್ಲಿ ಇಬ್ಬರು ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ ಪರಿಣಾಮ 12 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ....

ಕೋಲ್ಕತ್ತಾದಲ್ಲಿ ನಡೆದ ಅವ್ಯವಸ್ಥೆ: ‘ಮೆಸ್ಸಿ ಭಾರತ ಪ್ರವಾಸ 2025’ರ ಪ್ರಮುಖ ಆಯೋಜಕರಿಗೆ 14 ದಿನಗಳ ಕಸ್ಟಡಿ

ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೊಡ್ಡ ಪ್ರಮಾಣದ ಅವ್ಯವಸ್ಥೆ ಉಂಟಾದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಪೊಲೀಸರು ಲಿಯೋನೆಲ್ ಮೆಸ್ಸಿ ಅವರ ಇಂಡಿಯಾ ಟೂರ್ 2025 ರ ಪ್ರಮುಖ ಆಯೋಜಕರನ್ನು ವಶಕ್ಕೆ ಪಡೆದಿದ್ದಾರೆ.  ಈ ಘಟನೆಯು ಪ್ರತಿಭಟನೆಗಳಿಗೆ...

ಹೆಡ್ಗೆವಾರ್ ಸ್ಮಾರಕ ಭೇಟಿ ತಪ್ಪಿಸಿಕೊಂಡ ಅಜಿತ್ ಪವಾರ್ : ನಮ್ಮದು ಅಂಬೇಡ್ಕರ್, ಫುಲೆ ಸಿದ್ಧಾಂತ ಎಂದ ಎನ್‌ಸಿಪಿ ವಕ್ತಾರ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಭಾನುವಾರ (ಡಿ.14) ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಸಂಸ್ಥಾಪಕ ಕೆ.ಬಿ. ಹೆಡ್ಗೆವಾರ್ ಸ್ಮಾರಕ ಭೇಟಿ ಕಾರ್ಯಕ್ರಮದಿಂದ ತಪ್ಪಿಸಿಕೊಂಡಿದ್ದು, ಅವರ ಪಕ್ಷ ಎನ್‌ಸಿಪಿ ರಾಜ್ಯದ ಅಭಿವೃದ್ಧಿಗಾಗಿ ಮಹಾಯುತಿ ಮೈತ್ರಿಕೂಟಕ್ಕೆ ಸೇರಿರುವುದಾಗಿ ಒತ್ತಿ...

ದೆಹಲಿಗೆ ಬರುವ ನಮ್ಮ ವಾಹನಗಳನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ : ಡಿಕೆಶಿ

ದೆಹಲಿ ಬರುತ್ತಿರುವ ನಮ್ಮವರ ವಾಹನಗಳನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ ಎಂಬ ಮಾಹಿತಿ ಬಂದಿದೆ. ಈ ಬಿಜೆಪಿಯವರಿಗೆ ಯಾಕಿಷ್ಟು ಆತಂಕ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಶ್ನಿಸಿದರು. ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯ ರಾಮ್‌ಲೀಲಾ...

ಹೊಸೂರು ವಿಮಾನ ನಿಲ್ದಾಣ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ 12 ಹಳ್ಳಿಗಳಿಂದ 2,900 ಎಕರೆ ಸ್ವಾಧೀನ ಸಾಧ್ಯತೆ

ಚೆನ್ನೈ: ಬೆಂಗಳೂರಿಗೆ ಬಹಳ ಹತ್ತಿರದಲ್ಲಿರುವ ವೇಗವಾಗಿ ಬೆಳೆಯುತ್ತಿರುವ ಕೈಗಾರಿಕಾ ನಗರ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ 12 ಹಳ್ಳಿಗಳಲ್ಲಿ ಸರ್ಕಾರಿ ಸ್ವಾಮ್ಯದ 800 ಎಕರೆ ಸೇರಿದಂತೆ ಸುಮಾರು 3,000...

ಸೋನಮ್ ವಾಂಗ್‌ಚುಕ್ ಸಂಸ್ಥೆ ಅನುಕರಣೀಯ ಕೆಲಸ ಮಾಡುತ್ತಿದೆ, ಯುಜಿಸಿ ಮಾನ್ಯತೆ ನೀಡಬೇಕು ಎಂದ ಸಂಸದೀಯ ಸಮಿತಿ

ಲಡಾಖ್‌ನ ಶಿಕ್ಷಣ ತಜ್ಞ ಹಾಗೂ ಹೋರಾಟಗಾರ ಸೋನಮ್ ವಾಂಗ್‌ಚುಕ್ ಸ್ಥಾಪಿಸಿರುವ ಹಿಮಾಲಯನ್ ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್ (ಹೆಚ್‌ಐಎಎಲ್‌) 'ಅನುಕರಣೀಯ' ಕೆಲಸ ಮಾಡುತ್ತಿದೆ. ಹಾಗಾಗಿ, ಆ ಸಂಸ್ಥೆಗೆ ವಿಶ್ವವಿದ್ಯಾಲಯ ಅನುದಾನ ಆಯೋಗದಿಂದ (ಯುಜಿಸಿ) ಮಾನ್ಯತೆ...

ಮುಸ್ಲಿಂ ಎಂದು ಪರಿಶೀಲಿಸಿ ಗುಂಪುಹಲ್ಲೆ: ತೀವ್ರ ದಾಳಿಗೆ ಒಳಗಾಗಿದ್ದ 50 ವರ್ಷದ ಬಟ್ಟೆ ವ್ಯಾಪಾರಿ  ಸಾವು

ನವಾಡಾ ಜಿಲ್ಲೆಯ ರೋಹ್ ಪೊಲೀಸ್ ಠಾಣೆ ಪ್ರದೇಶದಲ್ಲಿ ನಡೆದ ಗುಂಪು ಹಲ್ಲೆಯಲ್ಲಿ ಕ್ರೂರವಾಗಿ ಹಲ್ಲೆಗೊಳಗಾಗಿದ್ದ 50 ವರ್ಷದ ಬಟ್ಟೆ ವ್ಯಾಪಾರಿ ಮೊಹಮ್ಮದ್ ಅಥರ್ ಹುಸೇನ್ ಶುಕ್ರವಾರ ತಡರಾತ್ರಿ ಬಿಹಾರ್ಷರೀಫ್ ಸದರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಡಿಸೆಂಬರ್...

ಅಮೆರಿಕಾದ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಗುಂಡಿನ ದಾಳಿ: 2 ಸಾವು, 8 ಜನರಿಗೆ ತೀವ್ರ ಗಾಯಗಳಾಗಿವೆ

ಅಮೆರಿಕಾದ ರೊಡ್ ಐಲ್ಯಂಡ್ ರಾಜ್ಯದ ಪ್ರೊವಿಡೆನ್ಸ್ ನಗರದಲ್ಲಿರುವ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಪರೀಕ್ಷೆ ಸಮಯದಲ್ಲಿ ಎಂಜಿನಿಯರಿಂಗ್ ಕಟ್ಟಡದಲ್ಲಿ ಗುಂಡಿನ ದಾಳಿ ನಡೆದಿದೆ, ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 8 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.  ಡಿಸೆಂಬರ್ 13ರ,...