Homeರಾಜಕೀಯಉರ್ಸುಲಾ ಅ್ಯಂಡ್ರೆಸ್‍ಳನ್ನು ಸೋನಿಯಾ ಮಾಡಿದ ಸುಳ್ಳರು

ಉರ್ಸುಲಾ ಅ್ಯಂಡ್ರೆಸ್‍ಳನ್ನು ಸೋನಿಯಾ ಮಾಡಿದ ಸುಳ್ಳರು

- Advertisement -
- Advertisement -

ಪ್ರಿಯಾಂಕ ಗಾಂಧಿಯವರು ಅಧಿಕೃತವಾಗಿ ರಾಜಕೀಯ ಪ್ರವೇಶಿಸುವ ಸುದ್ದಿ ಬಂದಾಗಿನಿಂದ, ಅವರನ್ನು ಅವಹೇಳನ ಮಾಡುವ ಹಲವಾರು ಸುಳ್‍ಸುದ್ದಿಗಳು ಜಾಲತಾಣದಲ್ಲಿ ಹರಿದಾಡುತ್ತಿವೆ. ಹಿಂದೆ ಸೋನಿಯಾ ಗಾಂಧಿಯವರ ಕುರಿತು ಅಸಹ್ಯ ಸುಳ್ ಒಂದನ್ನು ಬಲಪಂಥೀಯರು ಹರಿಬಿಟ್ಟಿದ್ದರು. ಈಗ ಆ ಸುದ್ದಿಯೂ ಮತ್ತೆ ಓಡಾಡಲು ಆರಂಭಿಸಿದೆ.
ಹೆಣ್ಣು ಮಕ್ಕಳೇ ಎಚ್ಚರ, ಮೋದಿಯ ಉಗ್ರ ಅಭಿಮಾನಿಗಳು (ನಮೋಭಕ್ತರು) ಎಂದುಕೊಳ್ಳುವವರು ನಿಮಗೆ ಗೊತ್ತಿದ್ದರೆ ಹುಷಾರಾಗಿರಿ. ಅವರು ಯಾವಾಗ ನಿಮ್ಮ ಫೋಟೊವನ್ನು ಯಾವುದೋ ಅರೆ ಬೆತ್ತಲೆ ಫೋಟೊದೊಂದಿಗೆ ಕ್ಲಬ್ ಮಾಡಿ ವೈರಲ್ ಮಾಡುವರೋ ಗೊತ್ತಿಲ್ಲ. ಇಂತಹವರು ನನ್ನ ಅಭಿಮಾನಿಗಳಲ್ಲ ಎಂದು ಇವತ್ತಿಗೂ ಮೋದಿಯಾಗಲಿ, ಬಿಜೆಪಿಯಾಗಲಿ ನಿರಾಕರಣೆ ಮಾಡಿಲ್ಲ. ಮೋದಿಯವರು ಟ್ವಿಟರ್‍ನಲ್ಲಿ ಫಾಲೋ ಮಾಡುವ ವ್ಯಕ್ತಿಗಳಲ್ಲಿ ಹಲವಾರು ಲಂಪಟ ಬುದ್ದಿಯ ವಿಕೃತರಿದ್ದಾರೆ. ಅವರ ಟ್ವೀಟ್‍ಗಳನ್ನು ಗಮನಿಸಿದರೆ ಅವರ ಯೋಗ್ಯತೆ, ಅಭಿರುಚಿ ಗೊತ್ತಾಗಿ ಬಿಡುತ್ತದೆ.

ಬಾಂಡ್ ಪಿಚ್ಚರ್ ಫೋಟೊ

ಮಿಥ್ಯ: ಈಗ ಸಾಮಾಜಿಕ ಜಾಲತಾಣಗಳಲ್ಲಿ ಒಂದು ಫೋಟೊವನ್ನು ವೈರಲ್ ಮಾಡಲಾಗಿದ್ದು ಸೋನಿಯಾ ಗಾಂಧಿಯವರ ತೇಜೋವಧೆ ಮಾಡುವ ಯತ್ನ ಮಾಡಲಾಗಿದೆ. ಈ ಫೋಟೊದಲ್ಲಿ ಸೋನಿಯಾ ಬೀಚ್ ಉಡುಪಿನಲ್ಲಿ ಗಂಡಸೊಬ್ಬರೊಂದಿಗಿದ್ದಾರೆ ಎಂಬ ಚಿತ್ರಣ ಸೃಷ್ಟಿಸುವುದು ಇದರ ಉದ್ದೇಶ. ‘ಹಲೋ ಕಾಂಗ್ರೆಸ್ಸಿಗರೇ, ನೋಡಿ ನಿಮ್ಮ ನಾಯಕಿ ಸೋನಿಯಾ ಅವಸ್ಥೆಯನ್ನು. ಇದೂ ಸುಳ್ಳು ಅಂತೀರಾ?’ ಎಂದು ‘ಫಿರ್ ಏಕ್ ಬಾರ್ ಮೋದಿ ಸರ್ಕಾರ್’ ಎಂಬ ಬಲಪಂಥೀಯ ಫೇಸ್‍ಬುಕ್ ಪೇಜ್ ಈ ಸಂಚು ರೂಪಿಸಿದೆ. ಇದು 24 ಗಂಟೆಗಳಲ್ಲಿ 10 ಸಾವಿರ ಬಾರಿ ಶೇರ್ ಆಗಿದೆ.
ಈ ನಕಲಿ ಫೋಟೊ ಇಟ್ಟಕೊಂಡು ‘ದೇಶ ರಕ್ಷಿಸಿ’ ಅಭಿಯಾನ ನಡೆಸುತ್ತಿರುವ ಮುಖೇಡಿ ಗುಂಪುಗಳ ಫೇಸ್Àಬುಕ್ ಪೇಜ್‍ಗಳು: ವಿ ಸಪೋರ್ಟ್ ಪಿಎಂ ಮೋದಿ, ವೋಟ್ ಫಾರ್ ಬಿಜೆಪಿ, ವೋಟ್ ಫಾರ್ ಯೊಗಿ ಆದಿತ್ಯನಾಥ್ ಇತ್ಯಾದಿ.
ಸತ್ಯ: ಈ ಫೋಟೊದಲ್ಲಿರುವುದು ಸೋನಿಯಾ ಅಲ್ಲವೇ ಅಲ್ಲ. ಮೊದಲ ಜೇಮ್ಸ್ ಬಾಂಡ್ ಚಿತ್ರ ‘ಆಡಿ. ಓಔ’ ಚಲನಚಿತ್ರದ ಸೆಟ್‍ನಲ್ಲಿ ಸ್ವಿಸ್ ನಟಿ ಉರ್ಸುಲಾ ಅ್ಯಂಡ್ರೆಸ್ ನಟನೆಯ ಸ್ಟಿಲ್ ಇವು. ಆಕೆಯ ಜೊತೆಗಿರುವಾತ ಬಾಂಡ್ ಪಾತ್ರ ಮಾಡಿದ ಸ್ಕಾಟಿಷ್ ನಟ ಸಿಯಾನ್ ಕಾನರಿ.
ಸತ್ಯ ಇಷ್ಟು ಸಿಂಪಲ್ಲಾಗಿದೆ. ಇದನ್ನು ಕೆಲವರು ವಿವರಿಸಿದರೂ ಸುಳ್ ಸುಬ್ಬರು ವಿಕೃತ ನಗೆಯಲ್ಲೇ ಕಾಲ ಹಾಕುತ್ತಿದ್ದಾರೆ. ಈ ಹಿಂದೆಯೂ ಸೋನಿಯಾ ಗಾಂಧಿ ತೇಜೋವಧೆಗೆ ಸಾಕಷ್ಟು ಯತ್ನ ಮಾಡಲಾಗಿದೆ. ಹಿಂದೆ ಇದೇ ‘ಫಿರ್ ಏಕ್ ಬಾರ್ ಮೋದಿ ಸರ್ಕಾರ್’ ಪೇಜ್‍ನಲ್ಲಿ ಫೋಟೊಶಾಪ್ ಮಾಡಿ ಸೋನಿಯಾ ಮತ್ತು ಮಾಲ್ಡಿವ್ಸ್‍ನ ಮಾಜಿ ಅಧ್ಯಕ್ಷ ಮೌಮೂನ್ ಅಬ್ದುಲ್ ಗಯೂಮ್ ಫೋಟೊ ಹಾಕಲಾಗಿತ್ತು. ಸೋನಿಯಾ ಗಯೂಮ್ ತೊಡೆ ಮೇಲೆ ಕುಳಿತಂತೆ ಫೋಟೊ ಸೃಷ್ಟಿಸಲಾಗಿತ್ತು.
ಹಾಲಿವುಡ್ ನಟಿ ರೀಸ್ ವಿಡರ್‍ಸ್ಪೂನ್ ಫೋಟೊ ಹಾಕಿ, ಸೋನಿಯಾ ಯುವತಿಯಾಗಿದ್ದಾಗ ಬಾರ್ ವೇಟ್ರೆಸ್ ಆಗಿದ್ದಳು ಎಂದು ಸುಳ್ ಹರಡಲಾಗಿತ್ತು. ಮರ್ಲಿನ್ ಮನ್ರೋ ಫೋಟೊಕ್ಕೆ ಸೋನಿಯಾ ಮುಖ ಪೇಸ್ಟ್ ಮಾಡಿ, ಬಾರ್‍ಗರ್ಲ್ ಸೋನಿಯಾ ಎಂದು ತಿರುಚಲಾಗಿತ್ತು.
ಸೋನಿಯಾ ಈಗ ರಾಜಕೀಯದಿಂದ ನಿವೃತ್ತರಾಗಿದ್ದಾರೆ. ಈಗಲೂ ಅವರ ವಿರುದ್ಧ ವಿಕೃತ ಸುಳ್‍ಗಳನ್ನು ಹರಡಲಾಗುತ್ತಿದೆ. ಈ ವಿಕೃತರ ಮಾಡೆಲ್‍ಗಳೇ ಸಾರ್ವಜನಿಕ ಸಭೆಗಳಲ್ಲೇ ಸುಳ್ಳುಗಳನ್ನು ಸತ್ಯ ಎಂಬಂತೆ ಕಿರುಚುವಾಗ ಇನ್ನೇನಾಗುತ್ತದೆ?
ಫೋಟೊ ಶಿರ್ಷಿಕೆ: ಚಿತ್ರದಲ್ಲಿರುವುದು ಸೋನಿಯಾ ಗಾಂಧಿ ಅಲ್ಲ, ‘ಆಡಿ. ಓಔ’ ಚಲನಚಿತ್ರದಲ್ಲಿ ನಟಿ ಉರ್ಸುಲಾ ಅ್ಯಂಡ್ರೆಸ್, ನಟ ಸಿಯಾನ್ ಕಾನರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....