Homeಸಾಮಾಜಿಕಉಸಿರು ಕಟ್ಟಿಸುವ ಹೊಗೆ: ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ

ಉಸಿರು ಕಟ್ಟಿಸುವ ಹೊಗೆ: ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ

- Advertisement -
- Advertisement -

ಡಾ.ಎಚ್.ಎಸ್.ಅನುಪಮ |

೨೦೧೮ರ ನವೆಂಬರ್ ಕೊನೆಯ ವಾರ ಭಾರತಕ್ಕೆ ಬಂದಿದ್ದ ಟ್ವಿಟರ್ ಸಿಇಒ ಜಾಕ್ ಡಾರ್ಸ್ ‘ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ನಾಶವಾಗಲಿ’ (ಸ್ಮಾಷ್ ಬ್ರಾಹ್ಮಿನಿಕಲ್ ಪೇಟ್ರಿಯಾರ್ಕಿ) ಎಂಬ ಪೋಸ್ಟರನ್ನು ಕೈಲಿ ಹಿಡಿದು ಕೆಲವು ಭಾರತೀಯ ಪತ್ರಕರ್ತೆಯರ ಜೊತೆ ಫೋಟೋಗೆ ನಿಂತರು. ಈ ನೆಲದ ಎಲ್ಲ ವಿಕಾರ-ವಿಪರ್ಯಾಸಗಳ ಮೂಲಕಾರಣವಾಗಿರುವ, ವಿಶ್ವದ ಯಾವ ಸಮಾಜವೂ ಕೇಳರಿಯದಷ್ಟು ಅನಿರ್ಬಂಧಿತ, ಏಕಮುಖಿ ಅಧಿಕಾರ-ಸುಖಸವಲತ್ತನ್ನು ಬ್ರಾಹ್ಮಣರಿಗೆ, ಎಲ್ಲ ಪುರುಷರಿಗೆ ನೀಡಿರುವ ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ಕುರಿತು ಜಾಕ್‌ಗೆ ಗೊತ್ತಿತ್ತೋ ಇಲ್ಲವೋ, ಆದರೆ ಪೋಸ್ಟರ್ ಹಿಡಿದು ನಿಂತ ಫೋಟೋ ನೋಡಿದ್ದೇ ತಡ, ದಾರವಂತರು ಕೆರಳಿಹೋದರು. ಅಂಕಣಕಾರ್ತಿ ಸ್ಮಿತಾ ಬರೂವಾ, ಮಣಿಪಾಲ ಸಮೂಹ ಸಂಸ್ಥೆಗಳ ಮೋಹನದಾಸ ಪೈ, ಬಾಲಿವುಡ್ ಚಿತ್ರಕತೆಗಾರರಾದ ಅದ್ವೈತ್ ಕಲಾ, ರಿಪಬ್ಲಿಕ್ ಟಿವಿಯ ಚಿತ್ರಾ ಸುಬ್ರಹ್ಮಣಿಯನ್, ಲೇಖಕ ಹಿಂದೋಳ್ ಸೇನ್‌ಗುಪ್ತ ಮೊದಲಾದವರು ಈ ಘಟನೆಯನ್ನು ‘ಜನಾಂಗ ದ್ವೇಷ’, ‘ಜಾತಿ ನಿಂದನೆ’ ಎನ್ನುವಂತೆ ಬಿಂಬಿಸಿದರು. ಭಾರತೀಯ ಪತ್ರಿಕೋದ್ಯಮದ 49% ಉಚ್ಛ ಸ್ಥಾನಗಳನ್ನು ತುಂಬಿರುವ ‘ಅಲ್ಪಸಂಖ್ಯಾತ’ ಬ್ರಾಹ್ಮಣರು ಹಾಗೂ ಅನಿವಾಸಿ ಜಾಲಿಗ ಬ್ರಾಹ್ಮಣರು ಟ್ವಿಟರಿನಲ್ಲಿ ಧೂಳೆಬ್ಬಿಸಿ, ‘ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ’ ಎನ್ನುವುದೆಲ್ಲ ಸ್ತ್ರೀವಾದಿಗಳ ಕುತರ್ಕ, ಎಲ್ಲಿದೆ ಅವೆಲ್ಲ? ಎಂದು ಬೊಬ್ಬೆ ಹಾಕಿದರು.

‘ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ’ ಎಲ್ಲಿದೆಯೆ! ಅಹಹ, ಹೊಗೆ ದೆಹಲಿಯನ್ನು ಆವರಿಸಿರುವಂತೆ ಈ ದೇಶದ ಜೀವಜಂತುಗಳ ಉಸಿರುಕಟ್ಟಿಸಿರುವುದೇ ಬ್ರಾಹ್ಮಣೀಯ ಪಿತೃಪ್ರಾಧಾನ್ಯ. ಮತ್ತೇನೂ ಬೇಡ, ತಮ್ಮದೇ ಜಾತಿಯ ನಿಷ್ಪಾಪಿ ವಿಧವೆಯರು, ಪರಿತ್ಯಕ್ತೆಯರು, ಅಡುಗೆ ಕೋಣೆಯಲ್ಲಿ ಬೇಯುವ ತಾಯಂದಿರನ್ನು ನೆನಪಿಸಿಕೊಂಡಿದ್ದರೂ ಸಾಕಿತ್ತು, ‘ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ’ ಎಲ್ಲಿದೆ ಎಂದು ಗೊತ್ತಾಗುತ್ತಿತ್ತು. ಆದರೆ ಜಾತಿ ಅಭಿಮಾನ ಅವರನ್ನು ಎಷ್ಟು ಕುರುಡಾಗಿಸಿತು ಎಂದರೆ ತಮ್ಮ ಜಾತಿಯ ಹೆಣ್ಣುಗಳನ್ನೂ ಸೇರಿದಂತೆ ಬಾಧಿಸುತ್ತಿರುವ ಒಂದು ಕೇಡನ್ನು ಕಣ್ಣು ತೆರೆದು ನೋಡುವುದೂ ಅಸಾಧ್ಯವಾಯಿತು.

ಏನಿದು ಬ್ರಾಹ್ಮಣೀಯ ಪಿತೃಪ್ರಧಾನತೆ?

ಜೈವಿಕವಾಗಿ ಗಂಡುಹೆಣ್ಣುಗಳ ನಡುವೆ ಕೆಲವು ಭಿನ್ನತೆಗಳಿವೆ, ಹಾಗೆಯೇ ಅನನ್ಯತೆಗಳಿವೆ. ದೈಹಿಕ ಭಿನ್ನತೆಯನ್ನೇ ಮುಂದಿಟ್ಟುಕೊಂಡು ಸಮಾನತೆ, ಸ್ವಾತಂತ್ರ್ಯ, ಪೌರ ಹಕ್ಕುಗಳಿಂದ ಹೆಣ್ಣನ್ನು ವಂಚಿಸುವ ವ್ಯವಸ್ಥೆ ಪಿತೃಪ್ರಾಧಾನ್ಯತೆ. ಹೊಸ ಜೀವವನ್ನು ಹೆರುವ ಶಕ್ತಿಯಿರುವ, ಜೀವ ಪೊರೆವ ಆಹಾರವಾಗಿ ಮೊಲೆಹಾಲು ಸ್ರವಿಸಬಲ್ಲ ಹೆಣ್ಣೆಂಬ ಅದ್ಭುತವನ್ನು ತನ್ನ ಅಂಕೆಯಲ್ಲಿಟ್ಟುಕೊಳ್ಳಲು ಯತ್ನಿಸದ ಗಂಡು ಸಮುದಾಯವೇ ಇಲ್ಲ. ಹೆಣ್ಣನ್ನು ಅಂಕೆಯಲ್ಲಿಟ್ಟುಕೊಳ್ಳುವ ಪ್ರಯತ್ನಗಳಿಗೆ ಮನ್ನಣೆ ಪಡೆಯುವ ಸಲುವಾಗಿ, ಅದಕ್ಕೆ ಧಾರ್ಮಿಕ ಸಮ್ಮತಿ ಇದೆ ಎಂಬಂತೆ ಬಿಂಬಿಸುವ ಹುನ್ನಾರವಾಗಿ ಮೊದಲು ಅವಳ ಧಾರ್ಮಿಕ ಹಕ್ಕುಗಳನ್ನು ಮೊಟಕುಗೊಳಿಸಲಾಯಿತು. ಅದಕ್ಕಾಗಿ ಪುರಾಣ, ಕಟ್ಟುಕತೆ, ಐತಿಹ್ಯಗಳ ಸೃಷ್ಟಿಸಲಾಯಿತು. ನಂತರ ಸಾಮಾಜಿಕ, ರಾಜಕೀಯ ಅವಕಾಶಗಳನ್ನು ಕಡಿತಗೊಳಿಸಲಾಯ್ತು. ಕಾಲಕಾಲಕ್ಕೆ ಹೊಸಪ್ರಶ್ನೆಗಳು ಏಳತೊಡಗಿದಾಗ ಅವುಗಳನ್ನು ಹತ್ತಿಕ್ಕಲು ಹೊಸಹೊಸ ಆಚರಣೆಗಳ ಜಾರಿಗೊಳಿಸಲಾಯ್ತು.

ಇದುವೆ ಪಿತೃಪ್ರಾಧಾನ್ಯ ಅಥವಾ ಗಂಡು ಮೇಲರಿಮೆ. ಪಿತೃಪ್ರಾಧಾನ್ಯ ವಿಶ್ವದ ಬಹುತೇಕ ಸಮಾಜಗಳಲ್ಲಿ ಚಾಲ್ತಿಯಲ್ಲಿದೆ. ಇದು ಜಾಕ್ ಪ್ರತಿನಿಧಿಸುವ ಸಮಾಜಕ್ಕೂ, ಅವರು ಪ್ರತಿನಿಧಿಸುವ ಸಂಸ್ಥೆಗೂ ಅನ್ವಯಿಸುತ್ತದೆ. ಮುಂದುವರಿದ ಪಾಶ್ಚಾತ್ಯ ಸಮಾಜಗಳಲ್ಲೂ ನಾನಾ ಲಿಂಗಾಧಾರಿತ ತಾರತಮ್ಯಗಳು ಇವತ್ತಿಗೂ ಚಾಲ್ತಿಯಲ್ಲಿವೆ. ಬಹುಪಾಲು ಬಹುರಾಷ್ಟ್ರೀಯ ಕಂಪನಿಗಳಲ್ಲಿ ಲಿಂಗಾಧಾರಿತ ಉದ್ಯೋಗ ತಾರತಮ್ಯ, ವೇತನ ತಾರತಮ್ಯ ಮುಂದುವರೆದಿದೆ. ಹಾಗಾಗಿ ಜಾಕ್ ಆ ಪೋಸ್ಟರ್ ಹಿಡಿಯುವ ಮೂಲಕ ತಮ್ಮ ಸಮಾಜ-ಕಂಪನಿಯ ಪಿತೃಪ್ರಾಧಾನ್ಯ ಕೊನೆಗೊಳಿಸಲು ಮುಂದಾಗುವ ಇಚ್ಛೆ ಹೊಂದಿದ್ದಲ್ಲಿ ಅದು ಸ್ವಾಗತಾರ್ಹ ಎನ್ನಬಹುದು.

ಆದರೆ ಅವರ ಪೋಸ್ಟರು ಕೆಲವು ಭಾರತೀಯರನ್ನು ಕೆರಳಿಸಲು ಕಾರಣ ಅದರಲ್ಲಿದ್ದ ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ಎಂಬ ಪದ. ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡಂತೆ, ಒಂದು ಶೋಷಕ ಮನಸ್ಥಿತಿಯ ಪ್ರತೀಕವಾದ ಪದದ ಮೊದಲೆರೆಡು ಅಕ್ಷರಗಳನ್ನು ತಮ್ಮ ಜಾತಿಯ ಹೆಸರಲ್ಲಿಟ್ಟುಕೊಂಡವರು ತಮ್ಮನ್ನೇ ನಿಂದಿಸಿದಂತೆ ಕೆರಳಿದರು. ಆ ಬ್ರಹ್ಮಜ್ಞಾನಿಗಳಿಗೆ ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ಎನ್ನುವುದು ಬ್ರಾಹ್ಮಣ ಜಾತಿಯಲ್ಲಿ ಹುಟ್ಟಿದವರನ್ನು ಬೈಯಲು ರೂಪಿಸಿದ ಪದವಲ್ಲ, ಬದಲಾಗಿ ಅದೊಂದು ಮನಸ್ಥಿತಿ; ಈ ದೇಶದ ಹೆಣ್ಣುಗಳನ್ನು, ಅಧಿಕಾರಹೀನರನ್ನು ತುಳಿಯಲು ಮಾಡಿಕೊಂಡ ಒಂದು ದುಷ್ಟ ಚೌಕಟ್ಟು ಎಂದು ಅರ್ಥವೇ ಆಗಲಿಲ್ಲ. ದಾರವಂತರು ತಿಳಿಯಲಿ: ಜಾತಿ-ಲಿಂಗದ ಕಾರಣವಾಗಿ ಮನುಷ್ಯರನ್ನು ಕೀಳಾಗಿ ನಡೆಸಿಕೊಳ್ಳುವುದು, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವವನ್ನು ನಿರಾಕರಿಸುವುದು, ತಾನು ಶ್ರೇಷ್ಠ ಎಂಬ ಜಾತಿ/ಲಿಂಗ ಮೇಲರಿಮೆಯನ್ನು ಉಳಿದವರ ಮೇಲೆ ಹೇರುವುದು ಬ್ರಾಹ್ಮಣೀಯ ಪಿತೃಪ್ರಾಧಾನ್ಯ. ಅದು ಈ ನೆಲದ, ಸಂವಿಧಾನದ ಆಶಯಗಳಿಗೆ ವಿರುದ್ಧ. ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆಯ ನಾಶ ಎಂದರೆ ಬ್ರಾಹ್ಮಣರ ನಾಶವಲ್ಲ; ಜಾತಿ ಮೇಲರಿಮೆಯ ನಾಶ.

ಭಾರತದ ಪಿತೃಪ್ರಾಧಾನ್ಯತೆಯನ್ನು ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ಎನ್ನಲು ಕಾರಣಗಳಿವೆ. ಪಿತೃಪ್ರಾಧಾನ್ಯವನ್ನು ಭಾರತದಲ್ಲಿ ಮತ್ತಷ್ಟು ಅಸಹನೀಯಗೊಳಿಸಿರುವುದು ಮತ್ತು ದುಷ್ಟಗೊಳಿಸಿರುವುದು ಇಲ್ಲಿನ ಜಾತಿವ್ಯವಸ್ಥೆ. ಅದು ಎರಡಲಗಿನ ಕತ್ತಿಯಾಗಿ ಈ ದೇಶದ ಹೆಣ್ಣುಗಳ ಘನತೆಯ ಬದುಕಿಗೆ ಎರವಾಗಿದೆ. ಭಾರತದ ಜಾತಿಪದ್ಧತಿಯು ನಡತೆ, ವ್ಯಕ್ತಿತ್ವ, ಸಾಧನೆ, ಉದಾತ್ತತೆ ಮುಂತಾದ ಗುಣಗಳಿಂದ ಅಲ್ಲ; ಹುಟ್ಟಿನಿಂದ ಬ್ರಾಹ್ಮಣರನ್ನು ಶ್ರೇಷ್ಠರೆಂದು ವರ್ಗೀಕರಿಸಿದೆ. ಅವರಿಗೆ ಎಲ್ಲ ವಿಶೇಷ ಸವಲತ್ತು, ಮೀಸಲಾತಿಗಳನ್ನು ಪ್ರಶ್ನಾತೀತವಾಗಿ ಕೊಟ್ಟಿದೆ. ಹುಟ್ಟಿನಿಂದಲೇ ಯಾವುದಾದರೂ ಮೇಲು ಅಥವಾ ಕೀಳೆಂದು ನಿರ್ಧಾರ ಮಾಡುವುದು ಪ್ರಕೃತಿ ವಿರೋಧಿ ತತ್ವ. ಆದರೆ ಜಾತಿಹೆಮ್ಮೆ, ಜಾತಿಪ್ರಜ್ಞೆ, ಜಾತಿ ಶ್ರೇಷ್ಠತೆಯ ವ್ಯಸನಗಳು ಬ್ರಾಹ್ಮಣರ ನಂತರದವೆಂದು ಗುರುತಿಸಲ್ಪಟ್ಟ ಸಾವಿರಾರು ಜಾತಿಗಳಿಗೂ ಹಾಗೇ ಸೋಸಿಕೊಂಡು ಇಳಿಯಿತು. ಅಂಬೇಡ್ಕರ್ ಮನೋಜ್ಞವಾಗಿ ವಿಶ್ಲೇಷಿಸಿರುವಂತೆ ಭಾರತದ ಪ್ರತಿಜಾತಿಯೂ ತಾನು ಮತ್ತೊಂದು ಜಾತಿಗಿಂತ ಶ್ರೇಷ್ಠ ಎಂಬ ಹಿರಿಮೆಯಲ್ಲಿ ಕೆಳಗಿನ ಜಾತಿಯನ್ನು ತುಳಿಯುವುದರಲ್ಲಿ ಮೇಲಿನ ಜಾತಿಯ ತುಳಿತವನ್ನು ಮರೆಯುತ್ತದೆ. ಹೀಗೆ ಬ್ರಾಹ್ಮಣ್ಯವು – ಎಂದರೆ ಅಸಮಾನತೆಯ ಉತ್ಸಾಹ, ಜಾತಿ ಮೇಲರಿಮೆ, ಜನ್ಮಜಾತ ಜಾತಿಅಸ್ಮಿತೆಗಳು – ಪ್ರತಿಜಾತಿಗೂ ಸೋಸಿಕೊಂಡು ಇಳಿದಿವೆ. ಬ್ರಾಹ್ಮಣ್ಯ ಮತ್ತು ಪಿತೃಪ್ರಾಧಾನ್ಯ ಸೇರಿ ಪ್ರತಿ ಜಾತಿಯ ಹೆಣ್ಣುಗಳನ್ನೂ ಬಾಧಿಸುತ್ತಿರುವುದು ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ಎನಿಸಿಕೊಂಡಿದೆ. ಭಾರತದ ಪ್ರತಿಜಾತಿಯಲ್ಲೂ, ಪ್ರತಿಧರ್ಮದಲ್ಲೂ ಪಿತೃಪ್ರಾಧಾನ್ಯವಿದೆ; ಪಿತೃಪ್ರಾಧಾನ್ಯತೆ ಅಷ್ಟೇ ಅಲ್ಲ, ಬ್ರಾಹ್ಮಣೀಯ ಪಿತೃಪ್ರಾಧಾನ್ಯವಿದೆ.

ಅಂಬೇಡ್ಕರರು ಹೇಳಿದ್ದು 

ಅಂಬೇಡ್ಕರರು ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆದ ಜಿಐಪಿ ರೈಲ್ವೇ ವರ್ಕ್‌ಮೆನ್ಸ್ ಕಾನ್ಫರೆನ್ಸ್‌ನಲ್ಲಿ ಇಂಡಿಪೆಂಡೆಂಟ್ ಲೇಬರ್ ಪಾರ್ಟಿ ಅಧ್ಯಕ್ಷರಾಗಿ ಹಾಗೂ ಸಮ್ಮೇಳನದ ಅಧ್ಯಕ್ಷರಾಗಿ ಮಾತನಾಡುತ್ತ ೧೯೩೮ರಲ್ಲಿ ಮನೋಜ್ಞವಾಗಿ ಹೇಳಿದ್ದು ಗಮನಾರ್ಹವಾಗಿದೆ:

” ‘ಬ್ರಾಹ್ಮಣಿಕೆಯು ಪರಿಗಣಿಸಲೇಬೇಕಾದ ಶತ್ರು’ ಎಂಬ ನನ್ನ ಹೇಳಿಕೆ ಅಪಾರ್ಥಕ್ಕೊಳಗಾಗುವುದು ನನಗಿಷ್ಟವಿಲ್ಲ. ಬ್ರಾಹ್ಮಣಿಕೆಯೆಂದರೆ ಒಂದು ಸಮುದಾಯವಾಗಿ ಬ್ರಾಹ್ಮಣರ ಶಕ್ತಿ, ಅಧಿಕಾರ, ಅವಕಾಶ, ಆಸಕ್ತಿಯೆಂದಷ್ಟೇ ನಾನು ತಿಳಿಯುವುದಿಲ್ಲ. ಬ್ರಾಹ್ಮಣಿಕೆಯೆಂದರೆ ಸ್ವಾತಂತ್ರ್ಯ, ಸೋದರತೆ, ಸಮಾನತೆಯನ್ನು ನಾಶ ಮಾಡುವ ಶಕ್ತಿ. ಈ ಅರ್ಥದಲ್ಲಿ ಎಲ್ಲ ಜಾತಿ-ವರ್ಗಗಳಲ್ಲೂ ಬ್ರಾಹ್ಮಣಿಕೆಯಿದೆ ಮತ್ತು ಇದನ್ನು ಹುಟ್ಟುಹಾಕಿದವರು ಬ್ರಾಹ್ಮಣರಾದರೂ ಅವರಿಗಷ್ಟೇ ಇದು ಸೀಮಿತವಾಗಿಲ್ಲ. ಎಲ್ಲ ಕಡೆ ಕಾಣುವ, ಎಲ್ಲರ ಯೋಚನೆ-ಕ್ರಿಯೆಯನ್ನು ಹಿಡಿತದಲ್ಲಿಟ್ಟುಕೊಂಡಿರುವುದು ಇದೇ ಬ್ರಾಹ್ಮಣಿಕೆಯೆಂಬುದು ಅವಿವಾದಿತ ಸತ್ಯ. ಇದು ಕೆಲವರಿಗಷ್ಟೇ ಹೆಚ್ಚು ಅವಕಾಶ ಮಾಡಿಕೊಡುತ್ತದೆಂಬುದೂ ವಿವಾದಾತೀತ ಸಂಗತಿ. ಕೆಲ ವರ್ಗಗಳಿಗೆ ಇದು ಅವಕಾಶಗಳಲ್ಲಿ ಸಮಾನತೆಯನ್ನು ನಿರಾಕರಿಸುತ್ತದೆ. ಬ್ರಾಹ್ಮಣಿಕೆಯು ಅಂತರ್ಜಾತಿ ಭೋಜನ, ಅಂತರ್ಜಾತಿ ವಿವಾಹಗಳಂಥ ಸಾಮಾಜಿಕ ಹಕ್ಕುಗಳನ್ನು ತಡೆಯುವುದಕ್ಕಷ್ಟೇ ಸೀಮಿತವಾಗಿಲ್ಲ. ಅದು ಪೌರ ಹಕ್ಕುಗಳಿಗೂ ವಿಸ್ತರಿಸುತ್ತದೆ… ಕೋಟಿಗಟ್ಟಲೆ ಜನರಿಗೆ ಪೌರ ಹಕ್ಕುಗಳನ್ನು ನಿರಾಕರಿಸಲಾಗಿದೆ. ಸಾವಿರಾರು ವರ್ಷಗಳಿಂದ ಆಚರಣೆಯಲ್ಲಿರುವ, ಈಗಲೂ ಉರಿಯುವ ಕೊಳ್ಳಿಯಂತೆ ಜೀವಂತವಾಗಿರುವ ಬ್ರಾಹ್ಮಣಿಕೆಯೇ ಇಂದಿನ ಸಮಸ್ಯೆಗಳಿಗೆ ಕಾರಣವೆಂಬುದನ್ನು ಯಾರಾದರೂ ಸಂಶಯಿಸಲು ಸಾಧ್ಯವೆ?

ಬ್ರಾಹ್ಮಣಿಕೆ ಎಂದರೆ ಅಸಮಾನತೆಯ ಉತ್ಸಾಹ.. ಬ್ರಾಹ್ಮಣ್ಯವು ಜೀವಂತ ಶಕ್ತಿಯಾಗಿರುವ ತನಕ, ಅದು ಕೊಡುವ ಸವಲತ್ತಿಗಾಗಿ ಕೆಲವರು ಬ್ರಾಹ್ಮಣ್ಯಕ್ಕೆ ಅಂಟಿಕೊಂಡಿರುವ ತನಕ ಅದರಿಂದ ತೊಂದರೆಗೊಳಗಾದವರು ಸಂಘಟಿತರಾಗಲೇಬೇಕಾಗಿದೆ. ಹಾಗೆ ಅದರ ವಿರುದ್ಧ ಸಂಘಟಿತರಾಗುವುದರಲ್ಲಿ ತಪ್ಪೇನಿದೆ?”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...