Homeಸಾಮಾಜಿಕಉಸಿರು ಕಟ್ಟಿಸುವ ಹೊಗೆ: ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ

ಉಸಿರು ಕಟ್ಟಿಸುವ ಹೊಗೆ: ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ

- Advertisement -
- Advertisement -

ಡಾ.ಎಚ್.ಎಸ್.ಅನುಪಮ |

೨೦೧೮ರ ನವೆಂಬರ್ ಕೊನೆಯ ವಾರ ಭಾರತಕ್ಕೆ ಬಂದಿದ್ದ ಟ್ವಿಟರ್ ಸಿಇಒ ಜಾಕ್ ಡಾರ್ಸ್ ‘ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ನಾಶವಾಗಲಿ’ (ಸ್ಮಾಷ್ ಬ್ರಾಹ್ಮಿನಿಕಲ್ ಪೇಟ್ರಿಯಾರ್ಕಿ) ಎಂಬ ಪೋಸ್ಟರನ್ನು ಕೈಲಿ ಹಿಡಿದು ಕೆಲವು ಭಾರತೀಯ ಪತ್ರಕರ್ತೆಯರ ಜೊತೆ ಫೋಟೋಗೆ ನಿಂತರು. ಈ ನೆಲದ ಎಲ್ಲ ವಿಕಾರ-ವಿಪರ್ಯಾಸಗಳ ಮೂಲಕಾರಣವಾಗಿರುವ, ವಿಶ್ವದ ಯಾವ ಸಮಾಜವೂ ಕೇಳರಿಯದಷ್ಟು ಅನಿರ್ಬಂಧಿತ, ಏಕಮುಖಿ ಅಧಿಕಾರ-ಸುಖಸವಲತ್ತನ್ನು ಬ್ರಾಹ್ಮಣರಿಗೆ, ಎಲ್ಲ ಪುರುಷರಿಗೆ ನೀಡಿರುವ ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ಕುರಿತು ಜಾಕ್‌ಗೆ ಗೊತ್ತಿತ್ತೋ ಇಲ್ಲವೋ, ಆದರೆ ಪೋಸ್ಟರ್ ಹಿಡಿದು ನಿಂತ ಫೋಟೋ ನೋಡಿದ್ದೇ ತಡ, ದಾರವಂತರು ಕೆರಳಿಹೋದರು. ಅಂಕಣಕಾರ್ತಿ ಸ್ಮಿತಾ ಬರೂವಾ, ಮಣಿಪಾಲ ಸಮೂಹ ಸಂಸ್ಥೆಗಳ ಮೋಹನದಾಸ ಪೈ, ಬಾಲಿವುಡ್ ಚಿತ್ರಕತೆಗಾರರಾದ ಅದ್ವೈತ್ ಕಲಾ, ರಿಪಬ್ಲಿಕ್ ಟಿವಿಯ ಚಿತ್ರಾ ಸುಬ್ರಹ್ಮಣಿಯನ್, ಲೇಖಕ ಹಿಂದೋಳ್ ಸೇನ್‌ಗುಪ್ತ ಮೊದಲಾದವರು ಈ ಘಟನೆಯನ್ನು ‘ಜನಾಂಗ ದ್ವೇಷ’, ‘ಜಾತಿ ನಿಂದನೆ’ ಎನ್ನುವಂತೆ ಬಿಂಬಿಸಿದರು. ಭಾರತೀಯ ಪತ್ರಿಕೋದ್ಯಮದ 49% ಉಚ್ಛ ಸ್ಥಾನಗಳನ್ನು ತುಂಬಿರುವ ‘ಅಲ್ಪಸಂಖ್ಯಾತ’ ಬ್ರಾಹ್ಮಣರು ಹಾಗೂ ಅನಿವಾಸಿ ಜಾಲಿಗ ಬ್ರಾಹ್ಮಣರು ಟ್ವಿಟರಿನಲ್ಲಿ ಧೂಳೆಬ್ಬಿಸಿ, ‘ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ’ ಎನ್ನುವುದೆಲ್ಲ ಸ್ತ್ರೀವಾದಿಗಳ ಕುತರ್ಕ, ಎಲ್ಲಿದೆ ಅವೆಲ್ಲ? ಎಂದು ಬೊಬ್ಬೆ ಹಾಕಿದರು.

‘ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ’ ಎಲ್ಲಿದೆಯೆ! ಅಹಹ, ಹೊಗೆ ದೆಹಲಿಯನ್ನು ಆವರಿಸಿರುವಂತೆ ಈ ದೇಶದ ಜೀವಜಂತುಗಳ ಉಸಿರುಕಟ್ಟಿಸಿರುವುದೇ ಬ್ರಾಹ್ಮಣೀಯ ಪಿತೃಪ್ರಾಧಾನ್ಯ. ಮತ್ತೇನೂ ಬೇಡ, ತಮ್ಮದೇ ಜಾತಿಯ ನಿಷ್ಪಾಪಿ ವಿಧವೆಯರು, ಪರಿತ್ಯಕ್ತೆಯರು, ಅಡುಗೆ ಕೋಣೆಯಲ್ಲಿ ಬೇಯುವ ತಾಯಂದಿರನ್ನು ನೆನಪಿಸಿಕೊಂಡಿದ್ದರೂ ಸಾಕಿತ್ತು, ‘ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ’ ಎಲ್ಲಿದೆ ಎಂದು ಗೊತ್ತಾಗುತ್ತಿತ್ತು. ಆದರೆ ಜಾತಿ ಅಭಿಮಾನ ಅವರನ್ನು ಎಷ್ಟು ಕುರುಡಾಗಿಸಿತು ಎಂದರೆ ತಮ್ಮ ಜಾತಿಯ ಹೆಣ್ಣುಗಳನ್ನೂ ಸೇರಿದಂತೆ ಬಾಧಿಸುತ್ತಿರುವ ಒಂದು ಕೇಡನ್ನು ಕಣ್ಣು ತೆರೆದು ನೋಡುವುದೂ ಅಸಾಧ್ಯವಾಯಿತು.

ಏನಿದು ಬ್ರಾಹ್ಮಣೀಯ ಪಿತೃಪ್ರಧಾನತೆ?

ಜೈವಿಕವಾಗಿ ಗಂಡುಹೆಣ್ಣುಗಳ ನಡುವೆ ಕೆಲವು ಭಿನ್ನತೆಗಳಿವೆ, ಹಾಗೆಯೇ ಅನನ್ಯತೆಗಳಿವೆ. ದೈಹಿಕ ಭಿನ್ನತೆಯನ್ನೇ ಮುಂದಿಟ್ಟುಕೊಂಡು ಸಮಾನತೆ, ಸ್ವಾತಂತ್ರ್ಯ, ಪೌರ ಹಕ್ಕುಗಳಿಂದ ಹೆಣ್ಣನ್ನು ವಂಚಿಸುವ ವ್ಯವಸ್ಥೆ ಪಿತೃಪ್ರಾಧಾನ್ಯತೆ. ಹೊಸ ಜೀವವನ್ನು ಹೆರುವ ಶಕ್ತಿಯಿರುವ, ಜೀವ ಪೊರೆವ ಆಹಾರವಾಗಿ ಮೊಲೆಹಾಲು ಸ್ರವಿಸಬಲ್ಲ ಹೆಣ್ಣೆಂಬ ಅದ್ಭುತವನ್ನು ತನ್ನ ಅಂಕೆಯಲ್ಲಿಟ್ಟುಕೊಳ್ಳಲು ಯತ್ನಿಸದ ಗಂಡು ಸಮುದಾಯವೇ ಇಲ್ಲ. ಹೆಣ್ಣನ್ನು ಅಂಕೆಯಲ್ಲಿಟ್ಟುಕೊಳ್ಳುವ ಪ್ರಯತ್ನಗಳಿಗೆ ಮನ್ನಣೆ ಪಡೆಯುವ ಸಲುವಾಗಿ, ಅದಕ್ಕೆ ಧಾರ್ಮಿಕ ಸಮ್ಮತಿ ಇದೆ ಎಂಬಂತೆ ಬಿಂಬಿಸುವ ಹುನ್ನಾರವಾಗಿ ಮೊದಲು ಅವಳ ಧಾರ್ಮಿಕ ಹಕ್ಕುಗಳನ್ನು ಮೊಟಕುಗೊಳಿಸಲಾಯಿತು. ಅದಕ್ಕಾಗಿ ಪುರಾಣ, ಕಟ್ಟುಕತೆ, ಐತಿಹ್ಯಗಳ ಸೃಷ್ಟಿಸಲಾಯಿತು. ನಂತರ ಸಾಮಾಜಿಕ, ರಾಜಕೀಯ ಅವಕಾಶಗಳನ್ನು ಕಡಿತಗೊಳಿಸಲಾಯ್ತು. ಕಾಲಕಾಲಕ್ಕೆ ಹೊಸಪ್ರಶ್ನೆಗಳು ಏಳತೊಡಗಿದಾಗ ಅವುಗಳನ್ನು ಹತ್ತಿಕ್ಕಲು ಹೊಸಹೊಸ ಆಚರಣೆಗಳ ಜಾರಿಗೊಳಿಸಲಾಯ್ತು.

ಇದುವೆ ಪಿತೃಪ್ರಾಧಾನ್ಯ ಅಥವಾ ಗಂಡು ಮೇಲರಿಮೆ. ಪಿತೃಪ್ರಾಧಾನ್ಯ ವಿಶ್ವದ ಬಹುತೇಕ ಸಮಾಜಗಳಲ್ಲಿ ಚಾಲ್ತಿಯಲ್ಲಿದೆ. ಇದು ಜಾಕ್ ಪ್ರತಿನಿಧಿಸುವ ಸಮಾಜಕ್ಕೂ, ಅವರು ಪ್ರತಿನಿಧಿಸುವ ಸಂಸ್ಥೆಗೂ ಅನ್ವಯಿಸುತ್ತದೆ. ಮುಂದುವರಿದ ಪಾಶ್ಚಾತ್ಯ ಸಮಾಜಗಳಲ್ಲೂ ನಾನಾ ಲಿಂಗಾಧಾರಿತ ತಾರತಮ್ಯಗಳು ಇವತ್ತಿಗೂ ಚಾಲ್ತಿಯಲ್ಲಿವೆ. ಬಹುಪಾಲು ಬಹುರಾಷ್ಟ್ರೀಯ ಕಂಪನಿಗಳಲ್ಲಿ ಲಿಂಗಾಧಾರಿತ ಉದ್ಯೋಗ ತಾರತಮ್ಯ, ವೇತನ ತಾರತಮ್ಯ ಮುಂದುವರೆದಿದೆ. ಹಾಗಾಗಿ ಜಾಕ್ ಆ ಪೋಸ್ಟರ್ ಹಿಡಿಯುವ ಮೂಲಕ ತಮ್ಮ ಸಮಾಜ-ಕಂಪನಿಯ ಪಿತೃಪ್ರಾಧಾನ್ಯ ಕೊನೆಗೊಳಿಸಲು ಮುಂದಾಗುವ ಇಚ್ಛೆ ಹೊಂದಿದ್ದಲ್ಲಿ ಅದು ಸ್ವಾಗತಾರ್ಹ ಎನ್ನಬಹುದು.

ಆದರೆ ಅವರ ಪೋಸ್ಟರು ಕೆಲವು ಭಾರತೀಯರನ್ನು ಕೆರಳಿಸಲು ಕಾರಣ ಅದರಲ್ಲಿದ್ದ ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ಎಂಬ ಪದ. ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡಂತೆ, ಒಂದು ಶೋಷಕ ಮನಸ್ಥಿತಿಯ ಪ್ರತೀಕವಾದ ಪದದ ಮೊದಲೆರೆಡು ಅಕ್ಷರಗಳನ್ನು ತಮ್ಮ ಜಾತಿಯ ಹೆಸರಲ್ಲಿಟ್ಟುಕೊಂಡವರು ತಮ್ಮನ್ನೇ ನಿಂದಿಸಿದಂತೆ ಕೆರಳಿದರು. ಆ ಬ್ರಹ್ಮಜ್ಞಾನಿಗಳಿಗೆ ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ಎನ್ನುವುದು ಬ್ರಾಹ್ಮಣ ಜಾತಿಯಲ್ಲಿ ಹುಟ್ಟಿದವರನ್ನು ಬೈಯಲು ರೂಪಿಸಿದ ಪದವಲ್ಲ, ಬದಲಾಗಿ ಅದೊಂದು ಮನಸ್ಥಿತಿ; ಈ ದೇಶದ ಹೆಣ್ಣುಗಳನ್ನು, ಅಧಿಕಾರಹೀನರನ್ನು ತುಳಿಯಲು ಮಾಡಿಕೊಂಡ ಒಂದು ದುಷ್ಟ ಚೌಕಟ್ಟು ಎಂದು ಅರ್ಥವೇ ಆಗಲಿಲ್ಲ. ದಾರವಂತರು ತಿಳಿಯಲಿ: ಜಾತಿ-ಲಿಂಗದ ಕಾರಣವಾಗಿ ಮನುಷ್ಯರನ್ನು ಕೀಳಾಗಿ ನಡೆಸಿಕೊಳ್ಳುವುದು, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವವನ್ನು ನಿರಾಕರಿಸುವುದು, ತಾನು ಶ್ರೇಷ್ಠ ಎಂಬ ಜಾತಿ/ಲಿಂಗ ಮೇಲರಿಮೆಯನ್ನು ಉಳಿದವರ ಮೇಲೆ ಹೇರುವುದು ಬ್ರಾಹ್ಮಣೀಯ ಪಿತೃಪ್ರಾಧಾನ್ಯ. ಅದು ಈ ನೆಲದ, ಸಂವಿಧಾನದ ಆಶಯಗಳಿಗೆ ವಿರುದ್ಧ. ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆಯ ನಾಶ ಎಂದರೆ ಬ್ರಾಹ್ಮಣರ ನಾಶವಲ್ಲ; ಜಾತಿ ಮೇಲರಿಮೆಯ ನಾಶ.

ಭಾರತದ ಪಿತೃಪ್ರಾಧಾನ್ಯತೆಯನ್ನು ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ಎನ್ನಲು ಕಾರಣಗಳಿವೆ. ಪಿತೃಪ್ರಾಧಾನ್ಯವನ್ನು ಭಾರತದಲ್ಲಿ ಮತ್ತಷ್ಟು ಅಸಹನೀಯಗೊಳಿಸಿರುವುದು ಮತ್ತು ದುಷ್ಟಗೊಳಿಸಿರುವುದು ಇಲ್ಲಿನ ಜಾತಿವ್ಯವಸ್ಥೆ. ಅದು ಎರಡಲಗಿನ ಕತ್ತಿಯಾಗಿ ಈ ದೇಶದ ಹೆಣ್ಣುಗಳ ಘನತೆಯ ಬದುಕಿಗೆ ಎರವಾಗಿದೆ. ಭಾರತದ ಜಾತಿಪದ್ಧತಿಯು ನಡತೆ, ವ್ಯಕ್ತಿತ್ವ, ಸಾಧನೆ, ಉದಾತ್ತತೆ ಮುಂತಾದ ಗುಣಗಳಿಂದ ಅಲ್ಲ; ಹುಟ್ಟಿನಿಂದ ಬ್ರಾಹ್ಮಣರನ್ನು ಶ್ರೇಷ್ಠರೆಂದು ವರ್ಗೀಕರಿಸಿದೆ. ಅವರಿಗೆ ಎಲ್ಲ ವಿಶೇಷ ಸವಲತ್ತು, ಮೀಸಲಾತಿಗಳನ್ನು ಪ್ರಶ್ನಾತೀತವಾಗಿ ಕೊಟ್ಟಿದೆ. ಹುಟ್ಟಿನಿಂದಲೇ ಯಾವುದಾದರೂ ಮೇಲು ಅಥವಾ ಕೀಳೆಂದು ನಿರ್ಧಾರ ಮಾಡುವುದು ಪ್ರಕೃತಿ ವಿರೋಧಿ ತತ್ವ. ಆದರೆ ಜಾತಿಹೆಮ್ಮೆ, ಜಾತಿಪ್ರಜ್ಞೆ, ಜಾತಿ ಶ್ರೇಷ್ಠತೆಯ ವ್ಯಸನಗಳು ಬ್ರಾಹ್ಮಣರ ನಂತರದವೆಂದು ಗುರುತಿಸಲ್ಪಟ್ಟ ಸಾವಿರಾರು ಜಾತಿಗಳಿಗೂ ಹಾಗೇ ಸೋಸಿಕೊಂಡು ಇಳಿಯಿತು. ಅಂಬೇಡ್ಕರ್ ಮನೋಜ್ಞವಾಗಿ ವಿಶ್ಲೇಷಿಸಿರುವಂತೆ ಭಾರತದ ಪ್ರತಿಜಾತಿಯೂ ತಾನು ಮತ್ತೊಂದು ಜಾತಿಗಿಂತ ಶ್ರೇಷ್ಠ ಎಂಬ ಹಿರಿಮೆಯಲ್ಲಿ ಕೆಳಗಿನ ಜಾತಿಯನ್ನು ತುಳಿಯುವುದರಲ್ಲಿ ಮೇಲಿನ ಜಾತಿಯ ತುಳಿತವನ್ನು ಮರೆಯುತ್ತದೆ. ಹೀಗೆ ಬ್ರಾಹ್ಮಣ್ಯವು – ಎಂದರೆ ಅಸಮಾನತೆಯ ಉತ್ಸಾಹ, ಜಾತಿ ಮೇಲರಿಮೆ, ಜನ್ಮಜಾತ ಜಾತಿಅಸ್ಮಿತೆಗಳು – ಪ್ರತಿಜಾತಿಗೂ ಸೋಸಿಕೊಂಡು ಇಳಿದಿವೆ. ಬ್ರಾಹ್ಮಣ್ಯ ಮತ್ತು ಪಿತೃಪ್ರಾಧಾನ್ಯ ಸೇರಿ ಪ್ರತಿ ಜಾತಿಯ ಹೆಣ್ಣುಗಳನ್ನೂ ಬಾಧಿಸುತ್ತಿರುವುದು ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ಎನಿಸಿಕೊಂಡಿದೆ. ಭಾರತದ ಪ್ರತಿಜಾತಿಯಲ್ಲೂ, ಪ್ರತಿಧರ್ಮದಲ್ಲೂ ಪಿತೃಪ್ರಾಧಾನ್ಯವಿದೆ; ಪಿತೃಪ್ರಾಧಾನ್ಯತೆ ಅಷ್ಟೇ ಅಲ್ಲ, ಬ್ರಾಹ್ಮಣೀಯ ಪಿತೃಪ್ರಾಧಾನ್ಯವಿದೆ.

ಅಂಬೇಡ್ಕರರು ಹೇಳಿದ್ದು 

ಅಂಬೇಡ್ಕರರು ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆದ ಜಿಐಪಿ ರೈಲ್ವೇ ವರ್ಕ್‌ಮೆನ್ಸ್ ಕಾನ್ಫರೆನ್ಸ್‌ನಲ್ಲಿ ಇಂಡಿಪೆಂಡೆಂಟ್ ಲೇಬರ್ ಪಾರ್ಟಿ ಅಧ್ಯಕ್ಷರಾಗಿ ಹಾಗೂ ಸಮ್ಮೇಳನದ ಅಧ್ಯಕ್ಷರಾಗಿ ಮಾತನಾಡುತ್ತ ೧೯೩೮ರಲ್ಲಿ ಮನೋಜ್ಞವಾಗಿ ಹೇಳಿದ್ದು ಗಮನಾರ್ಹವಾಗಿದೆ:

” ‘ಬ್ರಾಹ್ಮಣಿಕೆಯು ಪರಿಗಣಿಸಲೇಬೇಕಾದ ಶತ್ರು’ ಎಂಬ ನನ್ನ ಹೇಳಿಕೆ ಅಪಾರ್ಥಕ್ಕೊಳಗಾಗುವುದು ನನಗಿಷ್ಟವಿಲ್ಲ. ಬ್ರಾಹ್ಮಣಿಕೆಯೆಂದರೆ ಒಂದು ಸಮುದಾಯವಾಗಿ ಬ್ರಾಹ್ಮಣರ ಶಕ್ತಿ, ಅಧಿಕಾರ, ಅವಕಾಶ, ಆಸಕ್ತಿಯೆಂದಷ್ಟೇ ನಾನು ತಿಳಿಯುವುದಿಲ್ಲ. ಬ್ರಾಹ್ಮಣಿಕೆಯೆಂದರೆ ಸ್ವಾತಂತ್ರ್ಯ, ಸೋದರತೆ, ಸಮಾನತೆಯನ್ನು ನಾಶ ಮಾಡುವ ಶಕ್ತಿ. ಈ ಅರ್ಥದಲ್ಲಿ ಎಲ್ಲ ಜಾತಿ-ವರ್ಗಗಳಲ್ಲೂ ಬ್ರಾಹ್ಮಣಿಕೆಯಿದೆ ಮತ್ತು ಇದನ್ನು ಹುಟ್ಟುಹಾಕಿದವರು ಬ್ರಾಹ್ಮಣರಾದರೂ ಅವರಿಗಷ್ಟೇ ಇದು ಸೀಮಿತವಾಗಿಲ್ಲ. ಎಲ್ಲ ಕಡೆ ಕಾಣುವ, ಎಲ್ಲರ ಯೋಚನೆ-ಕ್ರಿಯೆಯನ್ನು ಹಿಡಿತದಲ್ಲಿಟ್ಟುಕೊಂಡಿರುವುದು ಇದೇ ಬ್ರಾಹ್ಮಣಿಕೆಯೆಂಬುದು ಅವಿವಾದಿತ ಸತ್ಯ. ಇದು ಕೆಲವರಿಗಷ್ಟೇ ಹೆಚ್ಚು ಅವಕಾಶ ಮಾಡಿಕೊಡುತ್ತದೆಂಬುದೂ ವಿವಾದಾತೀತ ಸಂಗತಿ. ಕೆಲ ವರ್ಗಗಳಿಗೆ ಇದು ಅವಕಾಶಗಳಲ್ಲಿ ಸಮಾನತೆಯನ್ನು ನಿರಾಕರಿಸುತ್ತದೆ. ಬ್ರಾಹ್ಮಣಿಕೆಯು ಅಂತರ್ಜಾತಿ ಭೋಜನ, ಅಂತರ್ಜಾತಿ ವಿವಾಹಗಳಂಥ ಸಾಮಾಜಿಕ ಹಕ್ಕುಗಳನ್ನು ತಡೆಯುವುದಕ್ಕಷ್ಟೇ ಸೀಮಿತವಾಗಿಲ್ಲ. ಅದು ಪೌರ ಹಕ್ಕುಗಳಿಗೂ ವಿಸ್ತರಿಸುತ್ತದೆ… ಕೋಟಿಗಟ್ಟಲೆ ಜನರಿಗೆ ಪೌರ ಹಕ್ಕುಗಳನ್ನು ನಿರಾಕರಿಸಲಾಗಿದೆ. ಸಾವಿರಾರು ವರ್ಷಗಳಿಂದ ಆಚರಣೆಯಲ್ಲಿರುವ, ಈಗಲೂ ಉರಿಯುವ ಕೊಳ್ಳಿಯಂತೆ ಜೀವಂತವಾಗಿರುವ ಬ್ರಾಹ್ಮಣಿಕೆಯೇ ಇಂದಿನ ಸಮಸ್ಯೆಗಳಿಗೆ ಕಾರಣವೆಂಬುದನ್ನು ಯಾರಾದರೂ ಸಂಶಯಿಸಲು ಸಾಧ್ಯವೆ?

ಬ್ರಾಹ್ಮಣಿಕೆ ಎಂದರೆ ಅಸಮಾನತೆಯ ಉತ್ಸಾಹ.. ಬ್ರಾಹ್ಮಣ್ಯವು ಜೀವಂತ ಶಕ್ತಿಯಾಗಿರುವ ತನಕ, ಅದು ಕೊಡುವ ಸವಲತ್ತಿಗಾಗಿ ಕೆಲವರು ಬ್ರಾಹ್ಮಣ್ಯಕ್ಕೆ ಅಂಟಿಕೊಂಡಿರುವ ತನಕ ಅದರಿಂದ ತೊಂದರೆಗೊಳಗಾದವರು ಸಂಘಟಿತರಾಗಲೇಬೇಕಾಗಿದೆ. ಹಾಗೆ ಅದರ ವಿರುದ್ಧ ಸಂಘಟಿತರಾಗುವುದರಲ್ಲಿ ತಪ್ಪೇನಿದೆ?”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...