Homeಕರ್ನಾಟಕಊರೂರು ನುಂಗುತ್ತಿರುವ ಕಡಲ ಮುಂದೆ ಆಡಳಿತಗಾರರ ಪಿಟೀಲು!

ಊರೂರು ನುಂಗುತ್ತಿರುವ ಕಡಲ ಮುಂದೆ ಆಡಳಿತಗಾರರ ಪಿಟೀಲು!

- Advertisement -
- Advertisement -

 ಶುದ್ದೋಧನ|

ಅರಬ್ಬೀ ಸಮುದ್ರದ ತೀರದಲ್ಲಿರುವ ಉತ್ತರ ಕನ್ನಡದ ಐದೂ ತಾಲ್ಲೂಕುಗಳಲ್ಲಿ ಕಡಲು ಕೊರೆತ ಭೂತ ಬೆನ್ನಿಗೆ ಬಿದ್ದು ಕಾಡುತ್ತಿದೆ. ಮಳೆಗಾಲ ಬಂತೆಂದರೆ ಸಾಕು; ಕಡಲತಡಿಯ ಮಂದಿ ಜೀವಭಯದಿಂದ ತತ್ತರಿಸುತ್ತಾರೆ. ಕಡಲಿನ ಹೆಬ್ಬಲೆಗಳು ಯಾವ ಗಳಿಗೆಯಲ್ಲಿ ತೋಟ-ಮನೆಗೆ ನುಗ್ಗಿ ಆಪೋಷನ ಪಡೆಯುತ್ತವೆಯೋ ಎಂಬ ಚಡಪಡಿಕೆ ಶುರುವಾಗುತ್ತದೆ. ರಾತ್ರಿಯಿಡೀ ನಿದ್ದೆ ಮಾಡದೆ ಎದ್ದು ಕೂರುವ ಪರಿಸ್ಥಿತಿ. ಮಳೆಗಾಲ ಎಂದರೆ ಸಮುದ್ರ ದಂಡೆಯ ಜನರ ಪಾಲಿಗೆ ಬದುಕು ಬರ್ಬಾದ್ ಆಗುವ ಆತಂಕದ ಕಾಲ!! ಈ ಕಡಲುಕೊರೆತವನ್ನು ಜಿಲ್ಲೆಯ ಆಳುವ ವರ್ಗ ಗಂಭೀರವಾಗಿ ಪರಿಗಣಿಸಿಲ್ಲ. ಈ ಎರಡು ದಶಕದಲ್ಲಿ ಕಡಲುಕೊರೆತ ಕಾಮಗಾರಿ ಹೆಸರಲ್ಲಿ ಕೋಟಿಕೋಟಿ ನುಂಗಿ ಕುಬೇರರಾದ ಗುತ್ತಿಗೆದಾರ-ಇಂಜಿನಿಯರ್-ರಾಜಕಾರಣಿಗಳ ದೊಡ್ಡ ದಂಡೇ ಇದೆ.

ಜಿಲ್ಲೆಯ ಮಂತ್ರಿ, ಸಂಸದ-ಶಾಸಕರಿಗೆ ತಂತಮ್ಮ ಕ್ಷೇತ್ರದ ಕಡಲು ಕೊರೆತ ಶಾಶ್ವತವಾಗಿ ನಿಲ್ಲಿಸಿ ಜನರಿಗೆ ನೆಮ್ಮದಿ ಕೊಡಬೇಕೆಂಬ ಕನಿಷ್ಠ ಕಾಳಜಿಯೂ ಇಲ್ಲ. ಬೇಸಿಗೆಯಲ್ಲೇ ಸಮುದ್ರ ದಾಳಿ ಆಗಬಹುದಾದ ಏರಿಯಾದ ಸ್ಪಷ್ಟ ಕಲ್ಪನೆ, ಮಾಹಿತಿಯಿದ್ದರೂ ಜಿಲ್ಲಾಡಳಿತ ಉದಾಸೀನದಿಂದಲೇ ಉಳಿದುಬಿಡುತ್ತದೆ. ಯಾವಾಗ ಮಳೆ ಜೋರಾಗುತ್ತದೋ ಆಗ ಅಲೆಗಳ ಅಬ್ಬರ ಕಡಲತಡಿಯವರನ್ನು ದಿಕ್ಕೆಡಿಸುತ್ತದೆ. ಜನರ ಚೀತ್ಕಾರ ಆರಂಭವಾದಾಗ ಸಂಬಂಧಿಸಿದ ಅಧಿಕಾರಿ-ಶಾಸಕ-ಮಂತ್ರಿಗಳು ಕಣ್ಣೊರೆಸುವ “ಆಟ” ಆರಂಭಿಸುತ್ತಾರೆ. ಸಮುದ್ರಕ್ಕೆ ಕಲ್ಲುಹಾಕುವ ಬೋಗಸ್ ಕಾಮಗಾರಿ ಮಾಡಿ ಸಿಕ್ಕಷ್ಟು ಸ್ವಾಹಾ ಮಾಡುತ್ತಾರೆ. ಮುಂದಿನ ವರ್ಷಕ್ಕೆ ಪಿಡುಗು ಹಾಗೇ ಉಳಿಸುತ್ತಾರೆ.
ಪಕ್ಕದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕಡಲ್ಕೊರೆತದ ಹಾವಳಿ ಇಲ್ಲವೆಂದಲ್ಲ. ಆದರೆ ಅಲ್ಲಿಯ ಆಳುವವರ್ಗ ಸವiಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುತ್ತಿದ್ದಾರೆ. ವಿಶೇಷ ಅನುದಾನ ತಂದು ತೊಂದರೆ ಮರುಕಳಿಸದಂತೆ ನಿಗಾ ವಹಿಸುತ್ತಿದೆ. ಇಂಥ ಇಚ್ಛಾಶಕ್ತಿ ಉತ್ತರಕನ್ನಡವು ಹೆತ್ತ ಜನಪ್ರತಿನಿಧಿ ಭೂಪರಿಗಿಲ್ಲ! ಹೀಗಾಗಿ ಜನಸಾಮಾನ್ಯರ ಜೀವನಕ್ಕಾಧಾರವಾದ ಗದ್ದೆ-ತೋಟ-ಬಾವಿ-ಕಸುಬಿಗೆಲ್ಲಾ ಉಪ್ಪು ನೀರು ನುಗ್ಗಿ ಬಂಜರಾಗುತ್ತಿದೆ; ಮನೆಗಳು ಕಣ್ಣೆದುರೇ ಕಡಲಲ್ಲಿ ಕರಗುತ್ತಿವೆ. ಕಲ್ಲು ಹೃದಯದ ಪಡಪೋಸಿ ಜನಪ್ರತಿನಿಧಿಗಳು ಏನೂ ಆಗಿಲ್ಲ ಎಂಬಂತೆ ಆರಾಮಾಗಿದ್ದರೆ.

ಆಳುವ ಮಂದಿಯ ಉದಾಸೀನ-ಹೊಣೆಗೇಡಿತನದಿಂದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳದಲ್ಲಿ ಕಡಲ್ಕೊರೆತದ ಆರ್ಭಟ ಜೋರಾಗುತ್ತಲೇ ಇದೆ. ಕಳೆದ ಮೂರು ವರ್ಷದಿಂದ ಅಂದಿನ-ಇಂದಿನ ಸಿಎಂಗಳು, ಸಂಸದರು, ಮಂತ್ರಿಗಳು, ಎಮ್ಮೆಲ್ಲೆಗಳಿಗೆಲ್ಲಾ ತಮ್ಮನ್ನು ಸಮುದ್ರದ ಬಾಯಿಂದ ಬಚಾವು ಮಾಡಿರೆಂದು ಮನವಿ ಮೇಲೆ ಮನವಿ ಮಾಡಿಕೊಳ್ಳುತ್ತಲೇ ಬಂದಿರುವ ಹೊನ್ನಾವರ ತಾಲ್ಲೂಕಿನ ಕರ್ಕಿ ಗ್ರಾಮದ ತೊಪ್ಪಲಕೇರಿ ಕಡಲು ಕಿನಾರೆಯ ಮಂದಿ ಅಳಲು ಅರಣ್ಯ ರೋದನದಂತೆ ಆಗಿರುವುದು ವ್ಯವಸ್ಥೆಯ ಕ್ರೌರ್ಯಕ್ಕೆ ಹಿಡಿದ ಕನ್ನಡಿಯಂತಿದೆ.

ತೊಪ್ಪಲಕೇರಿಯ ಮನೆ-ಮರ-ಬಾವಿಗಳನ್ನೆಲ್ಲ ಸಮುದ್ರ ಒಂದೊಂದಾಗಿ ನುಂಗಲು ಶುರುಮಾಡಿ ಹಲವು ವರ್ಷವಾಗಿದೆ. ಮೂರು ವರ್ಷದ ಹಿಂದೆ ಅಲೆಗಳ ಆರ್ಭಟಕ್ಕೆ ಆ ಪುಟ್ಟ ಕೇರಿ ತತ್ತರಿಸಿಹೋಯಿತು. ಕಂಗಾಲಾದ ಜನ ಕಾಪಾಡಿ ಎಂದು ಜಿಲ್ಲಾಧಿಕಾರಿ, ಅಂದಿನ ಶಾಸಕಿ ಶಾರದಾ ಶೆಟ್ಟಿ, ಇಂದಿನ ಶಾಸಕ ದಿನಕರ ಶೆಟ್ಟಿ, ಸಂಸದ ಅನಂತ್ಮಾಣಿ, ಮಂತ್ರಿ ಮಹಾಶಯ ದೇಶ್‍ಪಾಂಡೆ, ಹಿಂದಿನ ಸಿಎಂ ಸಿದ್ಧು, ಇಂದಿನ ಸಿಎಂ ಕುಮ್ಮಿ ಕೈ-ಕಾಲು ಹಿಡಿದು ಅಂಗಲಾಚಿದರೂ ಪ್ರಯೋಜನವೇನೂ ಆಗಲಿಲ್ಲ. ರಾಜ್ಯದ ಮಾನವ ಹಕ್ಕು ಆಯೋಗಕ್ಕೆ ಪರಿಸ್ಥಿತಿಯ ಗಂಭೀರತೆ ಬಗ್ಗೆ ಮನವಿ ಕಳಿಸಿದರು. ದುರಂತವೆಂದರೆ ಮಾನವಹಕ್ಕು ಆಯೋಗಕ್ಕೂ ಈ ಮಂದಿಯ ಸಾವುಬದುಕಿನ ಹೋರಾಟ ಅರ್ಥವಾಗಲಿಲ್ಲ.

ತೊಪ್ಪಲಕೇರಿಯ ಜನರ ದೂರು ಸರ್ಕಾರಿ ಕಚೇರಿಗಳ ಟೇಬಲ್‍ನಿಂದ ಟೇಬಲ್‍ಗೆ ಹಾರಾಡಿತೇ ಹೊರತು ಜನಪರವಾಗಿ ಯಾರೂ ಚಿಂತಿಸಲಿಲ್ಲ. ಕೊನೆಗೊಮ್ಮೆ ಶಾಸಕ, ಎಸಿ, ತಹಸೀಲ್ದಾರ್ ತೊಪ್ಪಲಕೇರಿಗೆ ಬರುವುದು ಅನಿವಾರ್ಯವಾಯ್ತು. ಬಂದವರು ಜನರಿಗೆ ಸಾಂತ್ವನ ಹೇಳಲಿಲ್ಲ; ಪುನರ್ವಸತಿ ಬಗ್ಗೆ ಮಾತಾಡಲಿಲ್ಲ; ಸಮುದ್ರ ಕೊರೆತ ತಡೆಯುವ ಕಾಮಗಾರಿ ಆರಂಭಿಸುವ ಬಗ್ಗೆಯೂ ಭರವಸೆ ಕೊಡಲಿಲ್ಲ. ಬದಲಿಗೆ ನೊಂದವರನ್ನು ಇನ್ನಷ್ಟು ಧೃತಿಗೆಡಿಸುವ ಮಾತಾಡಿದರು. ಕಾಮಗಾರಿಗೆ ಹಣಕಾಸಿನ ಅಡಚಣೆಯಿದೆ; ಬಜೆಟ್‍ನಲ್ಲಿ ತೊಪ್ಪಲಕೇರಿ ಕಡಲ್‍ಕೊರೆತ ಸೇರಿಲ್ಲ ಎಂದು ಹೊಣೆಗೇಡಿತನ ಪ್ರದರ್ಶಿಸಿ ಹೋದರು.

ತೊಪ್ಪಲಕೇರಿಯ ಮಂದಿಯ ಅಳಲು ಹೃದಯವಿದ್ರಾವಕವಾಗಿದೆ. ರಾತ್ರಿ ಮಲಗಿದಾಗ ಮನೆ ಎಷ್ಟೊತ್ತಿಗೆ ಅಲೆಗಳ ಹೊಡೆತಕ್ಕೆ ಉರುಳುತ್ತದೋ ಗೊತ್ತಾಗುತ್ತಿಲ್ಲ. ಇಂಥ ಭಯದಲ್ಲಿ ಹೆಂಗಸರು, ಮಕ್ಕಳನ್ನು ಇಟ್ಟುಕೊಂಡು ರಾತ್ರಿ ಹೇಗೆ ಕಳೆಯಬೇಕು? ಪತ್ರಿಕೆ-ಟಿವಿಯಲ್ಲಿ ನಮ್ಮ ಪರಿಸ್ಥಿತಿ ಸುದ್ದಿಯಾದರೂ ಜಿಲ್ಲಾಡಳಿತಕ್ಕೆ, ಶಾಸಕನಿಗೆ, ಕನಿಷ್ಟ ಮಾನವ ಹಕ್ಕು ಆಯೋಗಕ್ಕೂ ಎಚ್ಚರ ಆಗಿಲ್ಲ ಎಂದು ಕಂಗೆಟ್ಟಿರುವ ಮಂದಿ ಹೇಳುತ್ತಾರೆ. ಮಾನವ ಹಕ್ಕು ಆಯೋಗದ ನಿರ್ಲಕ್ಷ ಧೋರಣೆಗೆ ಬೇಸತ್ತರೂ ನೊಂದವರು ಸರಣಿ ಪತ್ರ ಬರೆಯುತ್ತಲೇ ಇದ್ದರು. ಕೊನೆಗೊಂದು ದಿನ “ನಾವೆಲ್ಲ ಸತ್ತ ನಂತರ ಲೆಕ್ಕ ಮಾಡಲು ಬರ್ತೀರಾ, ಸರ್…” ಎಂದೂ ಪತ್ರ ಬರೆದರು. ಆದರೂ ಎಮ್ಮೆಲ್ಲೆಯಿಂದ ಹಿಡಿದು ಮುಖ್ಯಮಂತ್ರಿವರೆಗಿನ ಎಲ್ಲರೂ ಕಣ್ಣು-ಬಾಯಿ ಮುಚ್ಚಿಕೊಂಡೇ ಇದ್ದಾರೆ.

ಈಗ ತೊಪ್ಪಲಕೇರಿಯ ಕಡಲ ಗುಮ್ಮದ ಅಂಜಿಕೆಯಲ್ಲೇ ದಿನ ಕಳೆಯುತ್ತಿರುವ ಮಂದಿ ಕೊನೇ ಪ್ರಯತ್ನವೆಂದು ಪ್ರಧಾನಿ ಮೋದಿಗೆ ಕಾಪಾಡುವಂತೆ ಟ್ವೀಟ್ ಮಾಡಿದ್ದಾರೆ. ನಮೋ ಆ್ಯಪ್ ಮೂಲಕ ದೂರು ಕಳಿಸಿದ್ದಾರೆ. ಸಿಎಂ ಆಫೀಸಿನಲ್ಲೂ ಆ ಟ್ವೀಟ್‍ಗೆ ಸ್ಪಂದನೆ ಬಂದಿಲ್ಲ. ಕಡಲು ಮಾತ್ರ ಮುನ್ನುಗ್ಗಿ ಬರುತ್ತಲೇ ಇದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...