Homeಕರ್ನಾಟಕಊರೂರು ನುಂಗುತ್ತಿರುವ ಕಡಲ ಮುಂದೆ ಆಡಳಿತಗಾರರ ಪಿಟೀಲು!

ಊರೂರು ನುಂಗುತ್ತಿರುವ ಕಡಲ ಮುಂದೆ ಆಡಳಿತಗಾರರ ಪಿಟೀಲು!

- Advertisement -
- Advertisement -

 ಶುದ್ದೋಧನ|

ಅರಬ್ಬೀ ಸಮುದ್ರದ ತೀರದಲ್ಲಿರುವ ಉತ್ತರ ಕನ್ನಡದ ಐದೂ ತಾಲ್ಲೂಕುಗಳಲ್ಲಿ ಕಡಲು ಕೊರೆತ ಭೂತ ಬೆನ್ನಿಗೆ ಬಿದ್ದು ಕಾಡುತ್ತಿದೆ. ಮಳೆಗಾಲ ಬಂತೆಂದರೆ ಸಾಕು; ಕಡಲತಡಿಯ ಮಂದಿ ಜೀವಭಯದಿಂದ ತತ್ತರಿಸುತ್ತಾರೆ. ಕಡಲಿನ ಹೆಬ್ಬಲೆಗಳು ಯಾವ ಗಳಿಗೆಯಲ್ಲಿ ತೋಟ-ಮನೆಗೆ ನುಗ್ಗಿ ಆಪೋಷನ ಪಡೆಯುತ್ತವೆಯೋ ಎಂಬ ಚಡಪಡಿಕೆ ಶುರುವಾಗುತ್ತದೆ. ರಾತ್ರಿಯಿಡೀ ನಿದ್ದೆ ಮಾಡದೆ ಎದ್ದು ಕೂರುವ ಪರಿಸ್ಥಿತಿ. ಮಳೆಗಾಲ ಎಂದರೆ ಸಮುದ್ರ ದಂಡೆಯ ಜನರ ಪಾಲಿಗೆ ಬದುಕು ಬರ್ಬಾದ್ ಆಗುವ ಆತಂಕದ ಕಾಲ!! ಈ ಕಡಲುಕೊರೆತವನ್ನು ಜಿಲ್ಲೆಯ ಆಳುವ ವರ್ಗ ಗಂಭೀರವಾಗಿ ಪರಿಗಣಿಸಿಲ್ಲ. ಈ ಎರಡು ದಶಕದಲ್ಲಿ ಕಡಲುಕೊರೆತ ಕಾಮಗಾರಿ ಹೆಸರಲ್ಲಿ ಕೋಟಿಕೋಟಿ ನುಂಗಿ ಕುಬೇರರಾದ ಗುತ್ತಿಗೆದಾರ-ಇಂಜಿನಿಯರ್-ರಾಜಕಾರಣಿಗಳ ದೊಡ್ಡ ದಂಡೇ ಇದೆ.

ಜಿಲ್ಲೆಯ ಮಂತ್ರಿ, ಸಂಸದ-ಶಾಸಕರಿಗೆ ತಂತಮ್ಮ ಕ್ಷೇತ್ರದ ಕಡಲು ಕೊರೆತ ಶಾಶ್ವತವಾಗಿ ನಿಲ್ಲಿಸಿ ಜನರಿಗೆ ನೆಮ್ಮದಿ ಕೊಡಬೇಕೆಂಬ ಕನಿಷ್ಠ ಕಾಳಜಿಯೂ ಇಲ್ಲ. ಬೇಸಿಗೆಯಲ್ಲೇ ಸಮುದ್ರ ದಾಳಿ ಆಗಬಹುದಾದ ಏರಿಯಾದ ಸ್ಪಷ್ಟ ಕಲ್ಪನೆ, ಮಾಹಿತಿಯಿದ್ದರೂ ಜಿಲ್ಲಾಡಳಿತ ಉದಾಸೀನದಿಂದಲೇ ಉಳಿದುಬಿಡುತ್ತದೆ. ಯಾವಾಗ ಮಳೆ ಜೋರಾಗುತ್ತದೋ ಆಗ ಅಲೆಗಳ ಅಬ್ಬರ ಕಡಲತಡಿಯವರನ್ನು ದಿಕ್ಕೆಡಿಸುತ್ತದೆ. ಜನರ ಚೀತ್ಕಾರ ಆರಂಭವಾದಾಗ ಸಂಬಂಧಿಸಿದ ಅಧಿಕಾರಿ-ಶಾಸಕ-ಮಂತ್ರಿಗಳು ಕಣ್ಣೊರೆಸುವ “ಆಟ” ಆರಂಭಿಸುತ್ತಾರೆ. ಸಮುದ್ರಕ್ಕೆ ಕಲ್ಲುಹಾಕುವ ಬೋಗಸ್ ಕಾಮಗಾರಿ ಮಾಡಿ ಸಿಕ್ಕಷ್ಟು ಸ್ವಾಹಾ ಮಾಡುತ್ತಾರೆ. ಮುಂದಿನ ವರ್ಷಕ್ಕೆ ಪಿಡುಗು ಹಾಗೇ ಉಳಿಸುತ್ತಾರೆ.
ಪಕ್ಕದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕಡಲ್ಕೊರೆತದ ಹಾವಳಿ ಇಲ್ಲವೆಂದಲ್ಲ. ಆದರೆ ಅಲ್ಲಿಯ ಆಳುವವರ್ಗ ಸವiಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುತ್ತಿದ್ದಾರೆ. ವಿಶೇಷ ಅನುದಾನ ತಂದು ತೊಂದರೆ ಮರುಕಳಿಸದಂತೆ ನಿಗಾ ವಹಿಸುತ್ತಿದೆ. ಇಂಥ ಇಚ್ಛಾಶಕ್ತಿ ಉತ್ತರಕನ್ನಡವು ಹೆತ್ತ ಜನಪ್ರತಿನಿಧಿ ಭೂಪರಿಗಿಲ್ಲ! ಹೀಗಾಗಿ ಜನಸಾಮಾನ್ಯರ ಜೀವನಕ್ಕಾಧಾರವಾದ ಗದ್ದೆ-ತೋಟ-ಬಾವಿ-ಕಸುಬಿಗೆಲ್ಲಾ ಉಪ್ಪು ನೀರು ನುಗ್ಗಿ ಬಂಜರಾಗುತ್ತಿದೆ; ಮನೆಗಳು ಕಣ್ಣೆದುರೇ ಕಡಲಲ್ಲಿ ಕರಗುತ್ತಿವೆ. ಕಲ್ಲು ಹೃದಯದ ಪಡಪೋಸಿ ಜನಪ್ರತಿನಿಧಿಗಳು ಏನೂ ಆಗಿಲ್ಲ ಎಂಬಂತೆ ಆರಾಮಾಗಿದ್ದರೆ.

ಆಳುವ ಮಂದಿಯ ಉದಾಸೀನ-ಹೊಣೆಗೇಡಿತನದಿಂದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳದಲ್ಲಿ ಕಡಲ್ಕೊರೆತದ ಆರ್ಭಟ ಜೋರಾಗುತ್ತಲೇ ಇದೆ. ಕಳೆದ ಮೂರು ವರ್ಷದಿಂದ ಅಂದಿನ-ಇಂದಿನ ಸಿಎಂಗಳು, ಸಂಸದರು, ಮಂತ್ರಿಗಳು, ಎಮ್ಮೆಲ್ಲೆಗಳಿಗೆಲ್ಲಾ ತಮ್ಮನ್ನು ಸಮುದ್ರದ ಬಾಯಿಂದ ಬಚಾವು ಮಾಡಿರೆಂದು ಮನವಿ ಮೇಲೆ ಮನವಿ ಮಾಡಿಕೊಳ್ಳುತ್ತಲೇ ಬಂದಿರುವ ಹೊನ್ನಾವರ ತಾಲ್ಲೂಕಿನ ಕರ್ಕಿ ಗ್ರಾಮದ ತೊಪ್ಪಲಕೇರಿ ಕಡಲು ಕಿನಾರೆಯ ಮಂದಿ ಅಳಲು ಅರಣ್ಯ ರೋದನದಂತೆ ಆಗಿರುವುದು ವ್ಯವಸ್ಥೆಯ ಕ್ರೌರ್ಯಕ್ಕೆ ಹಿಡಿದ ಕನ್ನಡಿಯಂತಿದೆ.

ತೊಪ್ಪಲಕೇರಿಯ ಮನೆ-ಮರ-ಬಾವಿಗಳನ್ನೆಲ್ಲ ಸಮುದ್ರ ಒಂದೊಂದಾಗಿ ನುಂಗಲು ಶುರುಮಾಡಿ ಹಲವು ವರ್ಷವಾಗಿದೆ. ಮೂರು ವರ್ಷದ ಹಿಂದೆ ಅಲೆಗಳ ಆರ್ಭಟಕ್ಕೆ ಆ ಪುಟ್ಟ ಕೇರಿ ತತ್ತರಿಸಿಹೋಯಿತು. ಕಂಗಾಲಾದ ಜನ ಕಾಪಾಡಿ ಎಂದು ಜಿಲ್ಲಾಧಿಕಾರಿ, ಅಂದಿನ ಶಾಸಕಿ ಶಾರದಾ ಶೆಟ್ಟಿ, ಇಂದಿನ ಶಾಸಕ ದಿನಕರ ಶೆಟ್ಟಿ, ಸಂಸದ ಅನಂತ್ಮಾಣಿ, ಮಂತ್ರಿ ಮಹಾಶಯ ದೇಶ್‍ಪಾಂಡೆ, ಹಿಂದಿನ ಸಿಎಂ ಸಿದ್ಧು, ಇಂದಿನ ಸಿಎಂ ಕುಮ್ಮಿ ಕೈ-ಕಾಲು ಹಿಡಿದು ಅಂಗಲಾಚಿದರೂ ಪ್ರಯೋಜನವೇನೂ ಆಗಲಿಲ್ಲ. ರಾಜ್ಯದ ಮಾನವ ಹಕ್ಕು ಆಯೋಗಕ್ಕೆ ಪರಿಸ್ಥಿತಿಯ ಗಂಭೀರತೆ ಬಗ್ಗೆ ಮನವಿ ಕಳಿಸಿದರು. ದುರಂತವೆಂದರೆ ಮಾನವಹಕ್ಕು ಆಯೋಗಕ್ಕೂ ಈ ಮಂದಿಯ ಸಾವುಬದುಕಿನ ಹೋರಾಟ ಅರ್ಥವಾಗಲಿಲ್ಲ.

ತೊಪ್ಪಲಕೇರಿಯ ಜನರ ದೂರು ಸರ್ಕಾರಿ ಕಚೇರಿಗಳ ಟೇಬಲ್‍ನಿಂದ ಟೇಬಲ್‍ಗೆ ಹಾರಾಡಿತೇ ಹೊರತು ಜನಪರವಾಗಿ ಯಾರೂ ಚಿಂತಿಸಲಿಲ್ಲ. ಕೊನೆಗೊಮ್ಮೆ ಶಾಸಕ, ಎಸಿ, ತಹಸೀಲ್ದಾರ್ ತೊಪ್ಪಲಕೇರಿಗೆ ಬರುವುದು ಅನಿವಾರ್ಯವಾಯ್ತು. ಬಂದವರು ಜನರಿಗೆ ಸಾಂತ್ವನ ಹೇಳಲಿಲ್ಲ; ಪುನರ್ವಸತಿ ಬಗ್ಗೆ ಮಾತಾಡಲಿಲ್ಲ; ಸಮುದ್ರ ಕೊರೆತ ತಡೆಯುವ ಕಾಮಗಾರಿ ಆರಂಭಿಸುವ ಬಗ್ಗೆಯೂ ಭರವಸೆ ಕೊಡಲಿಲ್ಲ. ಬದಲಿಗೆ ನೊಂದವರನ್ನು ಇನ್ನಷ್ಟು ಧೃತಿಗೆಡಿಸುವ ಮಾತಾಡಿದರು. ಕಾಮಗಾರಿಗೆ ಹಣಕಾಸಿನ ಅಡಚಣೆಯಿದೆ; ಬಜೆಟ್‍ನಲ್ಲಿ ತೊಪ್ಪಲಕೇರಿ ಕಡಲ್‍ಕೊರೆತ ಸೇರಿಲ್ಲ ಎಂದು ಹೊಣೆಗೇಡಿತನ ಪ್ರದರ್ಶಿಸಿ ಹೋದರು.

ತೊಪ್ಪಲಕೇರಿಯ ಮಂದಿಯ ಅಳಲು ಹೃದಯವಿದ್ರಾವಕವಾಗಿದೆ. ರಾತ್ರಿ ಮಲಗಿದಾಗ ಮನೆ ಎಷ್ಟೊತ್ತಿಗೆ ಅಲೆಗಳ ಹೊಡೆತಕ್ಕೆ ಉರುಳುತ್ತದೋ ಗೊತ್ತಾಗುತ್ತಿಲ್ಲ. ಇಂಥ ಭಯದಲ್ಲಿ ಹೆಂಗಸರು, ಮಕ್ಕಳನ್ನು ಇಟ್ಟುಕೊಂಡು ರಾತ್ರಿ ಹೇಗೆ ಕಳೆಯಬೇಕು? ಪತ್ರಿಕೆ-ಟಿವಿಯಲ್ಲಿ ನಮ್ಮ ಪರಿಸ್ಥಿತಿ ಸುದ್ದಿಯಾದರೂ ಜಿಲ್ಲಾಡಳಿತಕ್ಕೆ, ಶಾಸಕನಿಗೆ, ಕನಿಷ್ಟ ಮಾನವ ಹಕ್ಕು ಆಯೋಗಕ್ಕೂ ಎಚ್ಚರ ಆಗಿಲ್ಲ ಎಂದು ಕಂಗೆಟ್ಟಿರುವ ಮಂದಿ ಹೇಳುತ್ತಾರೆ. ಮಾನವ ಹಕ್ಕು ಆಯೋಗದ ನಿರ್ಲಕ್ಷ ಧೋರಣೆಗೆ ಬೇಸತ್ತರೂ ನೊಂದವರು ಸರಣಿ ಪತ್ರ ಬರೆಯುತ್ತಲೇ ಇದ್ದರು. ಕೊನೆಗೊಂದು ದಿನ “ನಾವೆಲ್ಲ ಸತ್ತ ನಂತರ ಲೆಕ್ಕ ಮಾಡಲು ಬರ್ತೀರಾ, ಸರ್…” ಎಂದೂ ಪತ್ರ ಬರೆದರು. ಆದರೂ ಎಮ್ಮೆಲ್ಲೆಯಿಂದ ಹಿಡಿದು ಮುಖ್ಯಮಂತ್ರಿವರೆಗಿನ ಎಲ್ಲರೂ ಕಣ್ಣು-ಬಾಯಿ ಮುಚ್ಚಿಕೊಂಡೇ ಇದ್ದಾರೆ.

ಈಗ ತೊಪ್ಪಲಕೇರಿಯ ಕಡಲ ಗುಮ್ಮದ ಅಂಜಿಕೆಯಲ್ಲೇ ದಿನ ಕಳೆಯುತ್ತಿರುವ ಮಂದಿ ಕೊನೇ ಪ್ರಯತ್ನವೆಂದು ಪ್ರಧಾನಿ ಮೋದಿಗೆ ಕಾಪಾಡುವಂತೆ ಟ್ವೀಟ್ ಮಾಡಿದ್ದಾರೆ. ನಮೋ ಆ್ಯಪ್ ಮೂಲಕ ದೂರು ಕಳಿಸಿದ್ದಾರೆ. ಸಿಎಂ ಆಫೀಸಿನಲ್ಲೂ ಆ ಟ್ವೀಟ್‍ಗೆ ಸ್ಪಂದನೆ ಬಂದಿಲ್ಲ. ಕಡಲು ಮಾತ್ರ ಮುನ್ನುಗ್ಗಿ ಬರುತ್ತಲೇ ಇದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...