Homeರಾಜಕೀಯಊರ್ಜಿತ್ ಪಟೇಲ್ ರಾಜೀನಾಮೆ: ಮೋದಿ ಸರ್ಕಾರಕ್ಕೆ ಮುಖಭಂಗ

ಊರ್ಜಿತ್ ಪಟೇಲ್ ರಾಜೀನಾಮೆ: ಮೋದಿ ಸರ್ಕಾರಕ್ಕೆ ಮುಖಭಂಗ

- Advertisement -
- Advertisement -

ನರೇಂದ್ರ ಮೋದಿ ಸರ್ಕಾರದ ಆರ್ಥಿಕ ನೀತಿಯನ್ನು ಸ್ವಲ್ಪವಾದರೂ ಎಕನಾಮಿಕ್ಸ್ ಗೊತ್ತಿದ್ದವರಾರೂ ಒಪ್ಪಲಾರರು ಎಂಬುದಷ್ಟೇ ಊರ್ಜಿತ್ ಪಟೇಲ್ ರಾಜೀನಾಮೆಯನ್ನು ಅರ್ಥ ಮಾಡಿಕೊಳ್ಳಬಹುದಾದ ರೀತಿಯಾಗಿದೆ. ಏಕೆಂದರೆ, ಈ ಉರ್ಜಿತ್ ಪಟೇಲ್ ಸ್ವತಃ ಮೋದಿ ಮತ್ತು ಅರುಣ್ ಜೇಟ್ಲಿಯವರ ಆಯ್ಕೆಯಾಗಿದ್ದರು. ಮೋದಿಯವರ ಅತ್ಯಾಪ್ತ ಬಿಸಿನೆಸೋದ್ಯಮಿ ಅಂಬಾನಿಯ ರಿಲೆಯನ್ಸ್ ಗುಂಪಿಗೂ ಸಮೀಪವಾಗಿದ್ದರು. ಅಷ್ಟೇ ಏಕೆ, ನರೇಂದ್ರ ಮೋದಿಯವರ ಅತ್ಯಂತ ವಿಧ್ವಂಸಕಾರೀ ತೀರ್ಮಾನವೆಂದು ಬಗೆಯಲಾದ ನೋಟು ರದ್ದತಿ ನಡೆದಾಗಲೂ ಅವರೇ ರಿಸರ್ವ್ ಬ್ಯಾಂಕ್ ಗವರ್ನರ್. ನೋಟು ರದ್ದತಿಯಂತಹ ಅಪ್ರಯೋಜಕ, ಆದರೆ ನಷ್ಟಕಾರೀ ಕ್ರಮಕ್ಕೆ ಹಿಂದಿನ ಗವರ್ನರ್ ರಘುರಾಮ್ ರಾಜನ್‌ರ ಸಮ್ಮತಿಯಿರಲಿಲ್ಲವೆಂಬುದು ಸರ್ವವಿದಿತ. ಇದೀಗ ಊರ್ಜಿತ್ ಪಟೇಲ್ ಸಹಾ ರಾಜೀನಾಮೆ ನೀಡಿರುವಾಗ ಅವರ ಪಾತ್ರವಾದರೂ ಇತ್ತೇ ಇಲ್ಲವೇ ಎಂಬ ಸತ್ಯ ಹೊರ ಬೀಳಬಹುದೆಂಬ ಆಶಾಭಾವನೆ ಇದೆ.

ಈ ರಾಜೀನಾಮೆ ಸಂಭವಿಸಬಹುದೆಂಬ ಸುದ್ದಿ ಈಗಾಗಲೇ ದೆಹಲಿಯ ವಲಯದಲ್ಲಿ ಹಳೆಯದು. ಆರ್‌ಬಿಐನ ಡೆಪ್ಯುಟಿ ಗವರ್ನರ್ ವಿರಾಳ್ ಆಚಾರ್ಯ ಮಾಡಿದ ಭಾಷಣವೊಂದರಲ್ಲಿ ಹೀಗೆ ಹೇಳಿದ್ದರು ‘ಸ್ವಾಯತ್ತ ಸಂಸ್ಥೆಯಾಗಿರುವ ಆರ್‌ಬಿಐನ ನಿರ್ಣಯಗಳನ್ನು ಗೌರವಿಸದ ಸರ್ಕಾರವು ಆರ್ಥಿಕ ಅರಾಜಕತೆಯನ್ನು ಎದುರು ನೋಡುವುದರಲ್ಲಿ ಸಂಶಯವೇ ಇಲ್ಲ’. ಈ ಹೇಳಿಕೆಗೆ ಊರ್ಜಿತ್ ಪಟೇಲರ ಸಮ್ಮತಿಯಿತ್ತೆಂಬುದು ಸ್ಪಷ್ಟವಿತ್ತು.

ಎಲ್ಲಕ್ಕಿಂತ ಮುಖ್ಯವಾಗಿ ಆರ್‌ಬಿಐನಲ್ಲಿ ಇರಲೇಬೇಕಾದ ಮೀಸಲು ನಿಧಿಯ ಮೇಲೆ ಸರ್ಕಾರದ ಕಣ್ಣು ಬಿದ್ದಿತ್ತು. 3.75 ಲಕ್ಷ ಕೋಟಿಗಳ ಹಣವನ್ನು ಸರ್ಕಾರಕ್ಕೆ ವರ್ಗಾವಣೆ ಮಾಡಬೇಕೆಂಬುದನ್ನು ಆರ್‌ಬಿಐ ಒಪ್ಪಿರಲಿಲ್ಲ. ಆಗ, ಅತ್ಯಂತ ವಿರಳವಾಗಿ ಬಳಸಬಹುದಾದ, ಸರ್ಕಾರದ ನೇರ ಕಾರ್ಯಾಚರಣೆಗೆ ಅವಕಾಶ ನೀಡುವ ನಿಯಮವನ್ನು ಬಳಸಿಕೊಂಡು ಹಣಕ್ಕೆ ಕೈ ಹಾಕಲು ಸರ್ಕಾರವು ಮುಂದಾಗಿತ್ತು. ಆಗಲೇ ಊರ್ಜಿತ್ ರಾಜೀನಾಮೆ ನೀಡಲು ಬಯಸಿದ್ದರು ಎನ್ನಲಾಗಿದೆ.

ವೈಯಕ್ತಿಕ ಕಾರಣಗಳಿಂದಾಗಿ ರಾಜೀನಾಮೆ ನೀಡುತ್ತೇನೆ ಎಂದು ಹೇಳಿರುವ ಊರ್ಜಿತ್ ಪಟೇಲ್ ರಿಸರ್ವ್ ಬ್ಯಾಂಕ್ ಸಿಬ್ಬಂದಿಗೆ ಧನ್ಯವಾದ ಹೇಳಿದ್ದಾರೆಯೇ ಹೊರತು, ಸರ್ಕಾರಕ್ಕೆ ನೆಪ ಮಾತ್ರಕ್ಕೂ ಕೃತಜ್ಞತೆ ಹೇಳಿಲ್ಲ. ಆದರೆ, ಹಣಕಾಸು ಮಂತ್ರಿ ಅರುಣ್ ಜೇಟ್ಲಿ ತಾವೇ ಪ್ರತಿಕ್ರಿಯಿಸಿ, ಪಟೇಲರಿಗೆ ಶುಭ ಹಾರೈಸಿದ್ದಾರೆ.

ಆರ್ಥಿಕ ಅಪಘಾತಗಳನ್ನು ಮಾತ್ರ ಮಾಡಿಕೊಂಡಿರುವ ಈ ಸರ್ಕಾರವು ಕಡೆಯ ಆರು ತಿಂಗಳಲ್ಲಿ ಏನಾದರೂ ಒಂದಷ್ಟನ್ನು ಸಾಧಿಸಿ ತೋರಿಸಬೇಕಾದ ಅನಿವಾರ್ಯತೆ ಇದ್ದುದರಿಂದ ರಿಸರ್ವ್ ಬ್ಯಾಂಕ್‌ನ ಹಣಕ್ಕೆ ಕೈ ಹಾಕಿತ್ತು ಎನ್ನಲಾಗಿದೆ. ನರೇಂದ್ರ ಮೋದಿ ಸರ್ಕಾರಕ್ಕೆ ಆಗಿರುವ ದೊಡ್ಡ ಮುಖಭಂಗಗಳಲ್ಲಿ ಇದೂ ಒಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...