Homeರಾಜಕೀಯಊರ್ಜಿತ್ ಪಟೇಲ್ ರಾಜೀನಾಮೆ: ಮೋದಿ ಸರ್ಕಾರಕ್ಕೆ ಮುಖಭಂಗ

ಊರ್ಜಿತ್ ಪಟೇಲ್ ರಾಜೀನಾಮೆ: ಮೋದಿ ಸರ್ಕಾರಕ್ಕೆ ಮುಖಭಂಗ

- Advertisement -
- Advertisement -

ನರೇಂದ್ರ ಮೋದಿ ಸರ್ಕಾರದ ಆರ್ಥಿಕ ನೀತಿಯನ್ನು ಸ್ವಲ್ಪವಾದರೂ ಎಕನಾಮಿಕ್ಸ್ ಗೊತ್ತಿದ್ದವರಾರೂ ಒಪ್ಪಲಾರರು ಎಂಬುದಷ್ಟೇ ಊರ್ಜಿತ್ ಪಟೇಲ್ ರಾಜೀನಾಮೆಯನ್ನು ಅರ್ಥ ಮಾಡಿಕೊಳ್ಳಬಹುದಾದ ರೀತಿಯಾಗಿದೆ. ಏಕೆಂದರೆ, ಈ ಉರ್ಜಿತ್ ಪಟೇಲ್ ಸ್ವತಃ ಮೋದಿ ಮತ್ತು ಅರುಣ್ ಜೇಟ್ಲಿಯವರ ಆಯ್ಕೆಯಾಗಿದ್ದರು. ಮೋದಿಯವರ ಅತ್ಯಾಪ್ತ ಬಿಸಿನೆಸೋದ್ಯಮಿ ಅಂಬಾನಿಯ ರಿಲೆಯನ್ಸ್ ಗುಂಪಿಗೂ ಸಮೀಪವಾಗಿದ್ದರು. ಅಷ್ಟೇ ಏಕೆ, ನರೇಂದ್ರ ಮೋದಿಯವರ ಅತ್ಯಂತ ವಿಧ್ವಂಸಕಾರೀ ತೀರ್ಮಾನವೆಂದು ಬಗೆಯಲಾದ ನೋಟು ರದ್ದತಿ ನಡೆದಾಗಲೂ ಅವರೇ ರಿಸರ್ವ್ ಬ್ಯಾಂಕ್ ಗವರ್ನರ್. ನೋಟು ರದ್ದತಿಯಂತಹ ಅಪ್ರಯೋಜಕ, ಆದರೆ ನಷ್ಟಕಾರೀ ಕ್ರಮಕ್ಕೆ ಹಿಂದಿನ ಗವರ್ನರ್ ರಘುರಾಮ್ ರಾಜನ್‌ರ ಸಮ್ಮತಿಯಿರಲಿಲ್ಲವೆಂಬುದು ಸರ್ವವಿದಿತ. ಇದೀಗ ಊರ್ಜಿತ್ ಪಟೇಲ್ ಸಹಾ ರಾಜೀನಾಮೆ ನೀಡಿರುವಾಗ ಅವರ ಪಾತ್ರವಾದರೂ ಇತ್ತೇ ಇಲ್ಲವೇ ಎಂಬ ಸತ್ಯ ಹೊರ ಬೀಳಬಹುದೆಂಬ ಆಶಾಭಾವನೆ ಇದೆ.

ಈ ರಾಜೀನಾಮೆ ಸಂಭವಿಸಬಹುದೆಂಬ ಸುದ್ದಿ ಈಗಾಗಲೇ ದೆಹಲಿಯ ವಲಯದಲ್ಲಿ ಹಳೆಯದು. ಆರ್‌ಬಿಐನ ಡೆಪ್ಯುಟಿ ಗವರ್ನರ್ ವಿರಾಳ್ ಆಚಾರ್ಯ ಮಾಡಿದ ಭಾಷಣವೊಂದರಲ್ಲಿ ಹೀಗೆ ಹೇಳಿದ್ದರು ‘ಸ್ವಾಯತ್ತ ಸಂಸ್ಥೆಯಾಗಿರುವ ಆರ್‌ಬಿಐನ ನಿರ್ಣಯಗಳನ್ನು ಗೌರವಿಸದ ಸರ್ಕಾರವು ಆರ್ಥಿಕ ಅರಾಜಕತೆಯನ್ನು ಎದುರು ನೋಡುವುದರಲ್ಲಿ ಸಂಶಯವೇ ಇಲ್ಲ’. ಈ ಹೇಳಿಕೆಗೆ ಊರ್ಜಿತ್ ಪಟೇಲರ ಸಮ್ಮತಿಯಿತ್ತೆಂಬುದು ಸ್ಪಷ್ಟವಿತ್ತು.

ಎಲ್ಲಕ್ಕಿಂತ ಮುಖ್ಯವಾಗಿ ಆರ್‌ಬಿಐನಲ್ಲಿ ಇರಲೇಬೇಕಾದ ಮೀಸಲು ನಿಧಿಯ ಮೇಲೆ ಸರ್ಕಾರದ ಕಣ್ಣು ಬಿದ್ದಿತ್ತು. 3.75 ಲಕ್ಷ ಕೋಟಿಗಳ ಹಣವನ್ನು ಸರ್ಕಾರಕ್ಕೆ ವರ್ಗಾವಣೆ ಮಾಡಬೇಕೆಂಬುದನ್ನು ಆರ್‌ಬಿಐ ಒಪ್ಪಿರಲಿಲ್ಲ. ಆಗ, ಅತ್ಯಂತ ವಿರಳವಾಗಿ ಬಳಸಬಹುದಾದ, ಸರ್ಕಾರದ ನೇರ ಕಾರ್ಯಾಚರಣೆಗೆ ಅವಕಾಶ ನೀಡುವ ನಿಯಮವನ್ನು ಬಳಸಿಕೊಂಡು ಹಣಕ್ಕೆ ಕೈ ಹಾಕಲು ಸರ್ಕಾರವು ಮುಂದಾಗಿತ್ತು. ಆಗಲೇ ಊರ್ಜಿತ್ ರಾಜೀನಾಮೆ ನೀಡಲು ಬಯಸಿದ್ದರು ಎನ್ನಲಾಗಿದೆ.

ವೈಯಕ್ತಿಕ ಕಾರಣಗಳಿಂದಾಗಿ ರಾಜೀನಾಮೆ ನೀಡುತ್ತೇನೆ ಎಂದು ಹೇಳಿರುವ ಊರ್ಜಿತ್ ಪಟೇಲ್ ರಿಸರ್ವ್ ಬ್ಯಾಂಕ್ ಸಿಬ್ಬಂದಿಗೆ ಧನ್ಯವಾದ ಹೇಳಿದ್ದಾರೆಯೇ ಹೊರತು, ಸರ್ಕಾರಕ್ಕೆ ನೆಪ ಮಾತ್ರಕ್ಕೂ ಕೃತಜ್ಞತೆ ಹೇಳಿಲ್ಲ. ಆದರೆ, ಹಣಕಾಸು ಮಂತ್ರಿ ಅರುಣ್ ಜೇಟ್ಲಿ ತಾವೇ ಪ್ರತಿಕ್ರಿಯಿಸಿ, ಪಟೇಲರಿಗೆ ಶುಭ ಹಾರೈಸಿದ್ದಾರೆ.

ಆರ್ಥಿಕ ಅಪಘಾತಗಳನ್ನು ಮಾತ್ರ ಮಾಡಿಕೊಂಡಿರುವ ಈ ಸರ್ಕಾರವು ಕಡೆಯ ಆರು ತಿಂಗಳಲ್ಲಿ ಏನಾದರೂ ಒಂದಷ್ಟನ್ನು ಸಾಧಿಸಿ ತೋರಿಸಬೇಕಾದ ಅನಿವಾರ್ಯತೆ ಇದ್ದುದರಿಂದ ರಿಸರ್ವ್ ಬ್ಯಾಂಕ್‌ನ ಹಣಕ್ಕೆ ಕೈ ಹಾಕಿತ್ತು ಎನ್ನಲಾಗಿದೆ. ನರೇಂದ್ರ ಮೋದಿ ಸರ್ಕಾರಕ್ಕೆ ಆಗಿರುವ ದೊಡ್ಡ ಮುಖಭಂಗಗಳಲ್ಲಿ ಇದೂ ಒಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...