Homeರಾಜಕೀಯಊರ್ಜಿತ್ ಪಟೇಲ್ ರಾಜೀನಾಮೆ: ಮೋದಿ ಸರ್ಕಾರಕ್ಕೆ ಮುಖಭಂಗ

ಊರ್ಜಿತ್ ಪಟೇಲ್ ರಾಜೀನಾಮೆ: ಮೋದಿ ಸರ್ಕಾರಕ್ಕೆ ಮುಖಭಂಗ

- Advertisement -
- Advertisement -

ನರೇಂದ್ರ ಮೋದಿ ಸರ್ಕಾರದ ಆರ್ಥಿಕ ನೀತಿಯನ್ನು ಸ್ವಲ್ಪವಾದರೂ ಎಕನಾಮಿಕ್ಸ್ ಗೊತ್ತಿದ್ದವರಾರೂ ಒಪ್ಪಲಾರರು ಎಂಬುದಷ್ಟೇ ಊರ್ಜಿತ್ ಪಟೇಲ್ ರಾಜೀನಾಮೆಯನ್ನು ಅರ್ಥ ಮಾಡಿಕೊಳ್ಳಬಹುದಾದ ರೀತಿಯಾಗಿದೆ. ಏಕೆಂದರೆ, ಈ ಉರ್ಜಿತ್ ಪಟೇಲ್ ಸ್ವತಃ ಮೋದಿ ಮತ್ತು ಅರುಣ್ ಜೇಟ್ಲಿಯವರ ಆಯ್ಕೆಯಾಗಿದ್ದರು. ಮೋದಿಯವರ ಅತ್ಯಾಪ್ತ ಬಿಸಿನೆಸೋದ್ಯಮಿ ಅಂಬಾನಿಯ ರಿಲೆಯನ್ಸ್ ಗುಂಪಿಗೂ ಸಮೀಪವಾಗಿದ್ದರು. ಅಷ್ಟೇ ಏಕೆ, ನರೇಂದ್ರ ಮೋದಿಯವರ ಅತ್ಯಂತ ವಿಧ್ವಂಸಕಾರೀ ತೀರ್ಮಾನವೆಂದು ಬಗೆಯಲಾದ ನೋಟು ರದ್ದತಿ ನಡೆದಾಗಲೂ ಅವರೇ ರಿಸರ್ವ್ ಬ್ಯಾಂಕ್ ಗವರ್ನರ್. ನೋಟು ರದ್ದತಿಯಂತಹ ಅಪ್ರಯೋಜಕ, ಆದರೆ ನಷ್ಟಕಾರೀ ಕ್ರಮಕ್ಕೆ ಹಿಂದಿನ ಗವರ್ನರ್ ರಘುರಾಮ್ ರಾಜನ್‌ರ ಸಮ್ಮತಿಯಿರಲಿಲ್ಲವೆಂಬುದು ಸರ್ವವಿದಿತ. ಇದೀಗ ಊರ್ಜಿತ್ ಪಟೇಲ್ ಸಹಾ ರಾಜೀನಾಮೆ ನೀಡಿರುವಾಗ ಅವರ ಪಾತ್ರವಾದರೂ ಇತ್ತೇ ಇಲ್ಲವೇ ಎಂಬ ಸತ್ಯ ಹೊರ ಬೀಳಬಹುದೆಂಬ ಆಶಾಭಾವನೆ ಇದೆ.

ಈ ರಾಜೀನಾಮೆ ಸಂಭವಿಸಬಹುದೆಂಬ ಸುದ್ದಿ ಈಗಾಗಲೇ ದೆಹಲಿಯ ವಲಯದಲ್ಲಿ ಹಳೆಯದು. ಆರ್‌ಬಿಐನ ಡೆಪ್ಯುಟಿ ಗವರ್ನರ್ ವಿರಾಳ್ ಆಚಾರ್ಯ ಮಾಡಿದ ಭಾಷಣವೊಂದರಲ್ಲಿ ಹೀಗೆ ಹೇಳಿದ್ದರು ‘ಸ್ವಾಯತ್ತ ಸಂಸ್ಥೆಯಾಗಿರುವ ಆರ್‌ಬಿಐನ ನಿರ್ಣಯಗಳನ್ನು ಗೌರವಿಸದ ಸರ್ಕಾರವು ಆರ್ಥಿಕ ಅರಾಜಕತೆಯನ್ನು ಎದುರು ನೋಡುವುದರಲ್ಲಿ ಸಂಶಯವೇ ಇಲ್ಲ’. ಈ ಹೇಳಿಕೆಗೆ ಊರ್ಜಿತ್ ಪಟೇಲರ ಸಮ್ಮತಿಯಿತ್ತೆಂಬುದು ಸ್ಪಷ್ಟವಿತ್ತು.

ಎಲ್ಲಕ್ಕಿಂತ ಮುಖ್ಯವಾಗಿ ಆರ್‌ಬಿಐನಲ್ಲಿ ಇರಲೇಬೇಕಾದ ಮೀಸಲು ನಿಧಿಯ ಮೇಲೆ ಸರ್ಕಾರದ ಕಣ್ಣು ಬಿದ್ದಿತ್ತು. 3.75 ಲಕ್ಷ ಕೋಟಿಗಳ ಹಣವನ್ನು ಸರ್ಕಾರಕ್ಕೆ ವರ್ಗಾವಣೆ ಮಾಡಬೇಕೆಂಬುದನ್ನು ಆರ್‌ಬಿಐ ಒಪ್ಪಿರಲಿಲ್ಲ. ಆಗ, ಅತ್ಯಂತ ವಿರಳವಾಗಿ ಬಳಸಬಹುದಾದ, ಸರ್ಕಾರದ ನೇರ ಕಾರ್ಯಾಚರಣೆಗೆ ಅವಕಾಶ ನೀಡುವ ನಿಯಮವನ್ನು ಬಳಸಿಕೊಂಡು ಹಣಕ್ಕೆ ಕೈ ಹಾಕಲು ಸರ್ಕಾರವು ಮುಂದಾಗಿತ್ತು. ಆಗಲೇ ಊರ್ಜಿತ್ ರಾಜೀನಾಮೆ ನೀಡಲು ಬಯಸಿದ್ದರು ಎನ್ನಲಾಗಿದೆ.

ವೈಯಕ್ತಿಕ ಕಾರಣಗಳಿಂದಾಗಿ ರಾಜೀನಾಮೆ ನೀಡುತ್ತೇನೆ ಎಂದು ಹೇಳಿರುವ ಊರ್ಜಿತ್ ಪಟೇಲ್ ರಿಸರ್ವ್ ಬ್ಯಾಂಕ್ ಸಿಬ್ಬಂದಿಗೆ ಧನ್ಯವಾದ ಹೇಳಿದ್ದಾರೆಯೇ ಹೊರತು, ಸರ್ಕಾರಕ್ಕೆ ನೆಪ ಮಾತ್ರಕ್ಕೂ ಕೃತಜ್ಞತೆ ಹೇಳಿಲ್ಲ. ಆದರೆ, ಹಣಕಾಸು ಮಂತ್ರಿ ಅರುಣ್ ಜೇಟ್ಲಿ ತಾವೇ ಪ್ರತಿಕ್ರಿಯಿಸಿ, ಪಟೇಲರಿಗೆ ಶುಭ ಹಾರೈಸಿದ್ದಾರೆ.

ಆರ್ಥಿಕ ಅಪಘಾತಗಳನ್ನು ಮಾತ್ರ ಮಾಡಿಕೊಂಡಿರುವ ಈ ಸರ್ಕಾರವು ಕಡೆಯ ಆರು ತಿಂಗಳಲ್ಲಿ ಏನಾದರೂ ಒಂದಷ್ಟನ್ನು ಸಾಧಿಸಿ ತೋರಿಸಬೇಕಾದ ಅನಿವಾರ್ಯತೆ ಇದ್ದುದರಿಂದ ರಿಸರ್ವ್ ಬ್ಯಾಂಕ್‌ನ ಹಣಕ್ಕೆ ಕೈ ಹಾಕಿತ್ತು ಎನ್ನಲಾಗಿದೆ. ನರೇಂದ್ರ ಮೋದಿ ಸರ್ಕಾರಕ್ಕೆ ಆಗಿರುವ ದೊಡ್ಡ ಮುಖಭಂಗಗಳಲ್ಲಿ ಇದೂ ಒಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....