Homeಎಕಾನಮಿಎಲೆಕ್ಟೋರಲ್ ಬಾಂಡ್ ಭ್ರಷ್ಟಾಚಾರವನ್ನು ಕಾನೂನುಬದ್ಧಗೊಳಿಸಿತೇ ಕೇಂದ್ರ ಸರ್ಕಾರ!?

ಎಲೆಕ್ಟೋರಲ್ ಬಾಂಡ್ ಭ್ರಷ್ಟಾಚಾರವನ್ನು ಕಾನೂನುಬದ್ಧಗೊಳಿಸಿತೇ ಕೇಂದ್ರ ಸರ್ಕಾರ!?

- Advertisement -
- Advertisement -

ಭ್ರಷ್ಟಾಚಾರಭರಿತ ಎಲೆಕ್ಟೋರಲ್ ಬಾಂಡ್ ಎಂಬ ಕಾನೂನುಬಾಹಿರ ಬಾಂಡನ್ನು ಮೋದಿ ಸರ್ಕಾರ ಬಿಡುಗಡೆ ಮಾಡಿದೆ. ರಿಸರ್ವ್ ಬ್ಯಾಂಕ್ ಮತ್ತು ಚುನಾವಣಾ ಆಯೋಗಗಳು ಈ ಕಣ್‍ಕಟ್ಟಿನ ರಾಜಕೀಯ ನಿಧಿ ಹಂಚಿಕೆಯ ಬಗೆಗೆ ವ್ಯಾಪಕ ಚರ್ಚೆ ಮಾಡಬೇಕಾಗಿದೆ. ಕೇಂದ್ರ ಸರ್ಕಾರ ಈ ಕರಾಳಕೃತ್ಯದ ವಿವರಗಳು ಹೊರಬರದಂತೆ ತಡೆಗೋಡೆ ನಿರ್ಮಿಸಿದೆ.
2017ರಲ್ಲಿ ಚುನಾವಣೆಗೆ ನಿಧಿಯನ್ನು ನೀಡುವ ಬಾಂಡ್‍ಗಳ ಬಿಡುಗಡೆಗೆ ಮೊದಲು, ಹಣಕಾಸು ಸಚಿವಾಲಯ ರಿಸರ್ವ್ ಬ್ಯಾಂಕ್‍ನ ಸಲಹೆ ಕೋರಿತ್ತು. ಈ ಬಾಂಡ್‍ಗಳ ಪ್ರಸ್ತಾವನೆಗೆ ರಿಸರ್ವ್ ಬ್ಯಾಂಕ್ ಗಂಭೀರ ವಿರೋಧ ವ್ಯಕ್ತಪಡಿಸಿತ್ತು. ಈ ಚುನಾವಣೆ ಬಾಂಡ್‍ಗಳನ್ನು ಸರ್ಕಾರ ಬಿಡುಗಡೆ ಮಾಡುವುದಾದರೆ ಹಣಕಾಸು ದುವ್ರ್ಯವಹಾರಕ್ಕೆ ಅವಕಾಶ ಮಾಡಿಕೊಟ್ಟಂತಾಗುತ್ತದೆ ಮತ್ತು ಬಾಂಡುಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಿಡುಗಡೆ ಮಾಡಿದರೆ ಭಾರತೀಯ ಬ್ಯಾಂಕುಗಳ ಬಗೆಗೆ ನಂಬಿಕೆ ಕಳೆದುಹೋಗುತ್ತದೆ ಎಂದು ರಿಸರ್ವ್ ಬ್ಯಾಂಕ್ ಎಚ್ಚರಿಕೆ ನೀಡಿತ್ತು.

“ಈ ಬಾಂಡುಗಳ bearer bond ಜಗಳು. ಅವುಗಳನ್ನು ಬೇರೆಯವರಿಗೆ ವರ್ಗಾವಣೆ ಮಾಡಲೂ ಅವಕಾಶ ಕಲ್ಪಿಸಿರುವುದರಿಂದ ಯಾರು ಹಣವನ್ನು ನೀಡಿದ್ದಾರೆ ಎಂಬುದು ಪತ್ತೆಯಾಗುವುದೇ ಇಲ್ಲ” ಎಂದು ರಿಸರ್ವ್ ಬ್ಯಾಂಕ್ ತಿಳಿಸಿತು. ಆದರೆ ಸರ್ಕಾರ ಆರ್‍ಬಿಐನ ಎಚ್ಚರಿಕೆಯ ಮಾತುಗಳನ್ನು ಗಮನಕ್ಕೆ ತೆಗೆದುಕೊಳ್ಳಲೇ ಇಲ್ಲ. ಆಗಿನ ಕಂದಾಯ ವಿಭಾಗದ ಕಾರ್ಯದರ್ಶಿಯಾಗಿದ್ದ ಹಸಮುಖ್ ಅಧಿಯ “ರಿಸರ್ವ ಬ್ಯಾಂಕ್ ಸರ್ಕಾರದ ಕಾರ್ಯತಂತ್ರವನ್ನು ಅರ್ಥಮಾಡಿಕೊಂಡಿಲ್ಲ. ಅಲ್ಲದೆ ಫೈನಾನ್ಸ್ ಬಿಲ್ ಅಚ್ಚಾದ ಮೇಲೆ ಈ ಸಲಹೆ ನೀಡಿದೆ. ಈ ವಿಳಂಬ ಸಲಹೆಯನ್ನು ಪರಿಗಣಿಸಲು ಸಾಧ್ಯವಿಲ್ಲ” ಎಂದು ಹೇಳಿ ಆರ್.ಬಿ.ಐ ಸಲಹೆಯನ್ನು ತಳ್ಳಿಹಾಕಿದ್ದರು. 2017 ಫೆಬ್ರವರಿ ಮೊದಲ ತಾರೀಖು ಆಗಿನ ಅರ್ಥಸಚಿವರಾದ ಜೈಟ್ಲಿಯವರು ತಮ್ಮ ಬಜೆಟ್ ಭಾಷಣದಲ್ಲಿ ಚುನಾವಣೆ ಬಾಂಡ್‍ಗಳನ್ನು ಸೃಷ್ಟಿಮಾಡುವ ಪ್ರಸ್ತಾಪ ಮಾಡಿದರು ಹಾಗೂ ರಾಜಕೀಯ ಪಕ್ಷಗಳಿಗೆ ಹಣ ಒದಗಿಸುವ ಪದ್ಧತಿಯಲ್ಲಿ ನುಸುಳಿರುವ ಲೋಪದೋಷಗಳನ್ನು ಅಳಿಸಿಹಾಕುವ ಕಾರಣಕ್ಕಾಗಿ ಈ ಆರ್.ಬಿ.ಐ ತಿದ್ದುಪಡಿ ಬಿಲ್ ಮಾಡಿರುವುದಾಗಿ ಹೇಳಿದರು.
ಅದಾದನಂತರ ಚುನಾವಣೆ ಆಯೋಗವು ಕೂಡಾ ಮೇ 2017ರಲ್ಲಿ ಕಾನೂನು ಇಲಾಖೆ ಮಂತ್ರಾಲಯಕ್ಕೆ ಚುನಾವಣೆ ಬಾಂಡ್ ಬಿಡುಗಡೆ ಮಾಡುವ ಬಗೆಗೆ ಎಚ್ಚರಿಕೆ ನೀಡಿತ್ತು. 2017 ಮೇ 26ರ ಕಾಗದದಲ್ಲಿ “Representation of People Actನ 29 ಸಿ ವಿಧಿಗೆ ಸರ್ಕಾರ ಮಾಡಿರುವ ತಿದ್ದುಪಡಿ ಸರಿಯಲ್ಲ, ಇದು ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುವವರ ಹೆಸರುಗಳನ್ನು ಮುಚ್ಚಿಡುವ ಹುನ್ನಾರ” ಎಂದು ಪತ್ರ ಬರೆಯಿತು. ಈ ತಿದ್ದುಪಡಿಯನ್ನು ವಾಪಾಸ್ ಪಡೆಯಿರಿ ಎಂಬ ಸಲಹೆಯನ್ನೂ ನೀಡಿತ್ತು.

ಚುನಾವಣೆ ಆಯೋಗದ ಸೂಚನೆಯನ್ನು ಧಿಕ್ಕರಿಸಿದ ಹಣಕಾಸು ಇಲಾಖೆಯ ರಾಜ್ಯ ಖಾತೆ ಸಚಿವ ಪೊನ್ ರಾಧಾಕೃಷ್ಣನ್ 2018ರ ಚಳಿಗಾಲದ ಪಾರ್ಲಿಮೆಂಟ್ ಅಧಿವೇಶನದಲ್ಲಿ ‘ಈ ವಿಚಾರದಲ್ಲಿ ಚುನಾವಣಾ ಆಯೋಗ ಯಾವುದೇ ಸೂಚನೆ ನೀಡಿಲ್ಲ’ ಎಂದು ತಿಳಿಸಿದರು. Breach of privilege notice ನೀಡಿದಾಗ ಸಚಿವರು ಪಾರ್ಲಿಮೆಂಟಿನ ದಾರಿತಪ್ಪಿಸಲು ಯತ್ನಿಸುತ್ತಿದ್ದಾರೆ ಎಂಬುದು ಬಯಲಿಗೆ ಬಂದಿತ್ತು.

ಮಾರ್ಚ್ 2018ರವರೆಗೆ 6128 ಕೋಟಿ ರೂ. ಮೌಲ್ಯದ ಚುನಾವಣೆ ಬಾಂಡ್‍ಗಳು ಮಾರಾಟವಾಗಿವೆ. ಇದರಲ್ಲಿ ಶೇ.95ರಷ್ಟು ಹಣ ಬಿಜೆಪಿಗೇ ಪಾವತಿಯಾಗಿದೆ. ಚುನಾವಣೆ ಬಾಂಡ್‍ಗಳು ಒಂದು ಸಾವಿರ, 10 ಸಾವಿರ, ಒಂದು ಲಕ್ಷ, 10 ಲಕ್ಷ, ಒಂದು ಕೋಟಿ ಮೌಲ್ಯಗಳ ಮುಖಬೆಲೆಯಲ್ಲಿ ಬಿಡುಗಡೆ ಆಗಿವೆ. ಭಾರತೀಯ ಸ್ಟೇಟ್ ಬ್ಯಾಂಕ್ ಮಾತ್ರ ಈ ಬಾಂಡ್‍ಗಳನ್ನು ಮಾರಾಟ ಮಾಡಲು ಅವಕಾಶ ನೀಡಲಾಗಿದೆ. ಈ ಬಾಂಡುಗಳನ್ನು ವರ್ಷದಲ್ಲಿ 4 ಸಾರಿ ಮಾತ್ರ ತಲಾ 8-10 ದಿನಗಳ ಅಲ್ಪಾವಧಿಗಳಲ್ಲಿ ಮಾರಾಟ ಮಾಡಲಾಗುತ್ತದೆ. ಆದರೆ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯುವ ವರ್ಷದಲ್ಲಿ ಮಾತ್ರ ಈ ನಾಲ್ಕು ಅವಧಿಯಲ್ಲದೆ 30 ದಿನಗಳ ಒಂದು ದೀರ್ಘಾವಧಿಯ ವಿಶೇಷ ಮಾರಾಟದ ಅವಕಾಶ ಕಲ್ಪಿಸಲಾಗುವುದು. ಬಾಂಡ್ ಕೊಂಡವರು ಅದನ್ನು ತಮಗೆ ಇಷ್ಟಬಂದ ರಾಜಕೀಯ ಪಕ್ಷಕ್ಕೆ ನೀಡಬಹುದು. ಹಿಂದಿನ ಚುನಾವಣೆಯಲ್ಲಿ ಚಲಾವಣೆಯಾದ ಒಟ್ಟು ಮತಗಳಲ್ಲಿ ಕನಿಷ್ಠ ಶೇ.1ಕ್ಕಿಂತ ಹೆಚ್ಚು ಮತಗಳಿಸಿದ ಪಕ್ಷಗಳಿಗೆ ಮಾತ್ರ ಈ ಬಾಂಡ್‍ಗಳನ್ನು ನೀಡಬಹುದಾಗಿದೆ. ಬ್ಯಾಂಕ್‍ನಿಂದ ಬಾಂಡ್ ಕೊಂಡುಕೊಂಡ ಹದಿನೈದು ದಿನಗಳ ಒಳಗಾಗಿ ಅದನ್ನು ನಗದು ಮಾಡಿಕೊಳ್ಳಬೇಕು. ಅಂದರೆ ಅಷ್ಟರೊಳಗೆ ಕೊಂಡವರು, ಅದನ್ನು ತಮಗಿಷ್ಟ ಬಂದ ಪಕ್ಷಕ್ಕೆ ಕೊಟ್ಟು, ಆ ಪಕ್ಷ ಅದನ್ನು ಕ್ಯಾಶ್ ಮಾಡಿಕೊಳ್ಳಬೇಕು.
ಈ ಬಾಂಡ್‍ಗಳಲ್ಲಿ ಕ್ರಮಾಂಕ ಸೂಚಿಸಬಾರದೆಂದು ಬಿಜೆಪಿ ಪಕ್ಷ ಸರ್ಕಾರಕ್ಕೆ ಸೂಚಿಸಿತ್ತು. ಬಾಂಡ್‍ಗಳಿಗೆ ಕ್ರಮಸಂಖ್ಯೆ ಹಾಕದಿದ್ದರೆ ಯಾವ ಮೊತ್ತದ ಬಾಂಡ್ ಯಾರ ಕೈಸೇರಿತು ಎಂಬುದು ಗೊತ್ತಾಗುವುದಿಲ್ಲ. ಗೊತ್ತಾಗಬಾರದು ಎಂಬುದೇ ಉದ್ದೇಶ. ಈ ಮೊದಲು ಬೇರೆ ದೇಶದವರು ದೇಣಿಗೆ ಕೊಡಲು ನಿಷೇಧವಿತ್ತು. ಈಗ ಬೇರೆ ದೇಶದವರು ದೇಣಿಗೆ ಕೊಟ್ಟರೂ ಅದರಿಂದ ನಮ್ಮ ಪಕ್ಷಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಬಿಜೆಪಿ ಸರ್ಕಾರ ಸೂಚಿಸಿತ್ತು.

ರಾಜಕೀಯ ಪಕ್ಷಗಳಿಗೆ ತಾವಾಗಿಯೇ ಯಾರೂ ಚುನಾವಣೆಗೆ ಹಣ ನೀಡುವುದಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಕಾರ್ಪೊರೇಟ್ ಸಂಸ್ಥೆಗಳಂತೂ ತಮಗೆ ಲಾಭ ಮಾಡಿಕೊಡುವವರಿಗೆ ದೇಣಿಗೆ ಕೂಡುವರೆಂಬುದೂ ಗುಟ್ಟಿನ ವಿಚಾರವೇನಲ್ಲ. ತನಿಖಾ ಇಲಾಖೆ ಹಾಗೂ Regulatory bodyಜಥಿಗಳು ಸರ್ಕಾರವನ್ನು ಬಳಸಿಕೊಂಡು ಕಾರ್ಪೊರೇಟ್ ಕಂಪೆನಿಗಳನ್ನು ಹಣ್ಣು ಮಾಡುವ ವ್ಯವಸ್ಥೆ ಇದ್ದೇಇದೆ. ಆ ಮೂಲಕ ಚುನಾವಣೆಗೆ ಹಣ ತಾನಾಗಿಯೇ ಬಂದುಬೀಳುತ್ತದೆ. ಈ ಸೌಲಭ್ಯ ದೊರೆಯುವುದು ಆಡಳಿತ ಪಕ್ಷಕ್ಕೆ ಮಾತ್ರ.
`ಕಾಮನ್ ಕಾಸ್’ ಸಂಸ್ಥೆ ಸರ್ವೋಚ್ಚ ನ್ಯಾಯಾಲಯದಲ್ಲಿ ಚುನಾವಣೆ ಬಾಂಡ್ ವಿಚಾರವಾಗಿ ಖಟ್ಲೆ ಹೂಡಿದೆ. ರಾಜಕೀಯ ಪಕ್ಷಗಳು ತಮಗೆ ಸಂದಾಯವಾಗಿರುವ ಎಲೆಕ್ಟೋರಲ್ ಬಾಂಡುಗಳ ವಿವರಗಳನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿ ಎಂದು ನಿರ್ದೇಶನ ನೀಡಿತ್ತು. ಈ ನಡುವೆ ಚುನಾವಣೆ ಆಯೋಗ ಕೂಡ ನ್ಯಾಯಾಲಯಕ್ಕೆ ಚುನಾವಣಾ ಬಾಂಡ್ ಬಿಡುಗಡೆಯನ್ನು ಪ್ರಶ್ನಿಸಿ ಒಂದು ಅಫಿಡವಿಟ್ ಸಲ್ಲಿಸಿದೆ.

ಸರ್ಕಾರ ಭ್ರಷ್ಟಾಚಾರವನ್ನು ಈ ಕಾನೂನುಬದ್ಧವಾಗಿ ಜಾರಿಗೆ ತಂದಿರುವ ಈ ಚುನಾವಣೆ ಬಾಂಡನ್ನು ಹಿಂತೆಗೆಯಬೇಕೆಂದು ಒತ್ತಾಯ ತರಬೇಕಿದೆ. ರಾಜಕೀಯ ಪಕ್ಷಗಳಿಗೆ ದೇಣಿಗೆ ಕೊಡುವ ಕ್ರಮವನ್ನು ಪರಿಶುದ್ಧಗೊಳಿಸುತ್ತೇನೆ ಎಂದೇಳಿದ್ದ ಮೋದಿ ಸರ್ಕಾರ, ಚುನಾವಣಾ ಬಾಂಡ್ ವಿತರಣೆ ಮಾಡುವ ಮೂಲಕ ಕಾರ್ಪೊರೇಟ್ ಕಂಪನಿಗಳ ಕಪ್ಪುಹಣ ಆಡಳಿತ ನಡೆಸುವವರ ಕೈಸೇರುವಂತೆ ವ್ಯವಸ್ಥೆ ಮಾಡಿಕೊಂಡಿದೆ. ತಮ್ಮ ಬಳಿ ಇರುವ ಬ್ಲ್ಯಾಕ್‍ಮನಿಯನ್ನು ಸರ್ಕಾರದ ಚುಕ್ಕಾಣಿ ಹಿಡಿದವರಿಗೆ ಒಪ್ಪಿಸುವ ಕಾರ್ಪೊರೇಟ್ ಕಂಪನಿಗಳು ತಮ್ಮ ಬೇಳೆ ಬೇಯಿಸಿಕೊಳ್ಳಲು ಅನುಕೂಲವಾಗುತ್ತದೆ. ದೇಣಿಗೆ ಪಡೆದ ಋಣಕ್ಕೆ ಪ್ರತಿಯಾಗಿ ಸರ್ಕಾರದ ಗದ್ದುಗೆ ಏರುವ ರಾಜಕೀಯ ಪಕ್ಷವೂ ಅಂತಹ ಕಂಪನಿಗಳ ಲಾಭಕೋರತನಕ್ಕೆ ಬೆಂಬಲ ನೀಡಬೇಕಾಗುತ್ತದೆ. ಕೊನೆಗೆ ಕತ್ತರಿ ಬೀಳುವುದು ಶ್ರೀಸಾಮಾನ್ಯನ ಜೇಬಿಗೆ!

ಭ್ರಷ್ಟಾಚಾರವನ್ನು ಮಾನ್ಯಮಾಡುವ ಈ ಅನೀತಿಯನ್ನು ಮನಗಂಡು ಸರ್ಕಾರ ಈ ಕೂಡಲೇ ಚುನಾವಣಾ ಬಾಂಡ್ ಸ್ಕೀಮನ್ನು ರದ್ದುಗೊಳಿಸುವಂತೆ ಒತ್ತಾಯಿಸುವುದು ಇಂದಿನ ತುರ್ತಾಗಿದೆ. ಇಲ್ಲವಾದಲ್ಲಿ ಚುನಾವಣೆಗಳಲ್ಲಿ ಸಿದ್ಧಾಂತ, ಜನಪರ ಚಿಂತನೆಗಳು ಶಾಶ್ವತವಾಗಿ ಮೂಲೆಗುಂಪಾಗಿ ಹಣವೇ ಫಲಿತಾಂಶವನ್ನು ಖಾಯಮ್ಮಾಗಿ ನಿರ್ಧರಿಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...