Homeಕರ್ನಾಟಕಎಸ್‍ಬಿಎಂ ಮತ್ತು ಎಟಿಎಂಗಳು, ಗಣಿಧೂಳು ಕಾಣದಂತೆ ಪೌಡರ್ ಮೆತ್ತಿರುವ ಆನಂದ್‍ಸಿಂಗ್‍ಗಳೂ….

ಎಸ್‍ಬಿಎಂ ಮತ್ತು ಎಟಿಎಂಗಳು, ಗಣಿಧೂಳು ಕಾಣದಂತೆ ಪೌಡರ್ ಮೆತ್ತಿರುವ ಆನಂದ್‍ಸಿಂಗ್‍ಗಳೂ….

‘ಮೊಟ್ಟೆ ಮೊದಲೋ, ಕೋಳಿ ಮೊದಲೋ ಅನ್ನೋ ಥರ ಆಗಿದೆ. ರಾಜೀನಾಮೆ ಮೊದಲೋ, ಅನರ್ಹತೆ ಮೊದಲೋ ಅನ್ನಂಗಿಲ್ಲ.. ಎರಡೂ ಒಟ್ಟಿಗೆ ಸಂಬಂಧ ಹೊಂದಿವೆ...’

- Advertisement -
- Advertisement -

‘ಶಾಸಕರು (ಮುಂಬೈನಲ್ಲಿರುವವರು) ರಾಜೀನಾಮೆ ನೀಡುವುದನ್ನು ಅಂಗೀಕರಿಸದಿರುವುದು ಅವರ ಬದುಕುವ ಹಕ್ಕನ್ನು ಕಿತ್ತುಕೊಂಡಂತೆ. ಅವರು ರಾಜೀನಾಮೆ ನೀಡಿ ಬೇರೆ ವೃತ್ತಿಗೆ ಹೋಗಬಹುದು….’

ಅರೆ ಇವ್ನಾ, ಅಂದರೆ ಈಗ ರಿಯಲ್ (ಎ)ಸ್ಟೇಟ್‍ಗಾಗಿ ಫೈಟ್ ಮಾಡ್ತಿರೋ ಎಸ್‍ಬಿಎಂ (ಸೋಮಶೇಖರ್, ಬೈರತಿ ಬಸವರಾಜು, ಮುನಿರತ್ನ), ಎಂಟಿಬಿ ನಾಗರಾಜ್, ವರ್ಷದಿಂದ ಕುಮಟಳ್ಳಿ ಎಳಕೊಂಡು ಜಾರುತ್ತಲೇ ಇದ್ದರೂ ಡೆಸ್ಟಿನೇಷನ್ ತಲುಪಲು ತಿಣುಕಾಡ್ತಿರೋ ಜಾರಕಿಹೊಳಿ, ಗಣಿಧೂಳು ಕಾಣದಂತೆ ಪೌಡರ್ ಮೆತ್ತಿಕೊಂಡಿರೋ ಆನಂದಸಿಂಗ್, ಫೇಸ್‍ಬುಕ್‍ನಲ್ಲೇ ಕ್ಷೇತ್ರದ ಜನರ ಸೇವೆ ಮಾಡ್ತೀರೋ ಶಿವರಾಮ್ ಹೆಬ್ಬಾರ್, ಮುಂಬೈ ದಂಧೆ ಮೂಲಕವೇ ಇಲ್ಲಿ ಶಾಸಕರಾಗಿ ಮತ್ತೆ ಮುಂಬೈ ತಲುಪಿರೋ ನಾರಾಯಣಗೌಡ, ನಾಯಕರಿಗೆ ‘ಸಕಲ’ ವ್ಯವಸ್ಥೆ ಮಾಡಬಲ್ಲ ಚತುರ ಸುಧಾಕರ್, ಸಚಿವಗಿರಿ ಸಿಕ್ಕರೂ ಓಡಿ ಹೋಗಿರುವ ಶಂಕರ್, ನಾಗೇಶ್…….ಅಬ್ಬಬ್ಬಾ, ರಾಜೀನಾಮೆ ಸ್ವೀಕರಿಸದೇ ಇದ್ದರೆ ಇವರ ಬದುಕುವ ಹಕ್ಕಿನ ಉಲ್ಲಂಘನೆ ಆಗುತ್ತಾ?

ಅಯ್ಯೋ ಶಿವನೇ, ಇವರೆಲ್ಲ ರಾಜೀನಾಮೆ ನೀಡಿ ಬೇರೆ ವೃತ್ತಿಗೆ ಹೋಗಬಹುದಂತೆ! ‘ಬೇರೆ’ ಅಂದರೆ ಏನರ್ಥ? ಈಗಿರುವ ಶಾಸಕ ‘ವೃತ್ತಿ’ಯಿಂದ ಇನ್ನೊಂದು ದಂಧೆಗೆ ಅಲ್ಲವೇ? ಹಂಗಂದ್ರ, ಶಾಸಕನಾಗಿರುವುದೂ ಒಂದು ವೃತ್ತಿ ಅಂತೀರಾ ರೋಹ್ಟಗಿ ಸಾಹೇಬರೇ? ಇವರ್ಯಾರು ಈಗ ಬೇರೆ ವ್ಯವಹಾರವನ್ನೇ ಮಾಡ್ತಿಲ್ಲವೇ? ಈ ಪುಣ್ಯಾತ್ಮರು ಕ್ಷೇತ್ರವನ್ನೇ ಮರೆತು ಎಲ್ಲೋ ಓಡಿ ಹೋಗಿದ್ದಾರಲ್ಲ, ಅದು ನಮ್ಮ ಅಂದರೆ ಮತದಾರರ ಹಕ್ಕಿನ ಉಲ್ಲಂಘನೆ ಅಲ್ಲವೇ? ನಮಗಂತೂ ಗೊತ್ತಾಗ್ತಿಲ್ಲ. ಬಿಡ್ರಿ, ಅಲ್ಲಿ ಕುಳಿತ ಮೂರ್ಮಂದಿನೇ ತಲೆ ಕೆರೆದುಕೊಂಡು ನಾಳೆವರೆಗೆ ಏನ್ ಹೇಳಕ್ಕಾಗಲ್ಲ ಅಂದವ್ರೆ, ನಮ್ಮಂಥವರಿಗೇನು ಗೊತ್ತಾಗುತ್ತೆ…..

‘ಮೊಟ್ಟೆ ಮೊದಲೋ, ಕೋಳಿ ಮೊದಲೋ ಅನ್ನೋ ಥರ ಆಗಿದೆ. ರಾಜೀನಾಮೆ ಮೊದಲೋ, ಅನರ್ಹತೆ ಮೊದಲೋ ಅನ್ನಂಗಿಲ್ಲ.. ಎರಡೂ ಒಟ್ಟಿಗೆ ಸಂಬಂಧ ಹೊಂದಿವೆ…’

ಕರೆಕ್ಟು ವಕೀಲರೇ, ಫೆಬ್ರುವರಿ 11ಕ್ಕೆ ಮೊಟ್ಟೆಯೇ (ಜಾರಕಿ, ಕುಮಟಳ್ಳಿ ಅನರ್ಹತೆ) ಕೈಗೇ ಸಿಕ್ಕಿತ್ತಲ್ಲ್ಲ? ಇಲ್ಲಿವರೆಗೆ ಅದನ್ನ ಕೋಳಿ ಮಾಡೋಕೆ ಹೊರಟಿದ್ದರಾ? ಹುಂಜಗಳ ಸಹವಾಸದಲ್ಲಿ ಮೈಮರೆತು ಬಿಟ್ಟರಾ ನಿಮ್ಮ ಸಾಹೇಬರು…?

‘ಜುಲೈ 5ರಿಂದ 11ರವರೆಗೆ ಸ್ಪೀಕರ್ ಏನ್ ಮಾಡ್ತಿದ್ದರು?  ರಾಜೀನಾಮೆ ಅಂಗೀಕಾರ ಮಾಡೋಕೆ ಅಷಟೊಂದು ಟೈಮ್ ಬೇಕಿತ್ತಾ?’

ಪಟ್ಟಂತ ಡಿಸೈಡ್ ಮಾಡಬಹುದಿತ್ತು. ಆದರೆ ಸ್ಟಡಿ ಮಾಡಬೇಕು, ವಿಚಾರಣೆ ಮಾಡಬೇಕು ಅಲ್ಲವಾ? ಹಂಗೆಲ್ಲ ಏಕಾಏಕಿ ನಿರ್ಧಾರ ತಗೊಳ್ಳಕ್ಕೆ ಸಾಧ್ಯವಾ? ಈಗ ನೋಡಿ ಮುಂಬೈವಾಲಾಗಳು ದೆಹಲಿಗೆ ಅರ್ಜಿ ಸಲ್ಲಿಸಿ ಎಷ್ಟು ದಿನಾ ಆಯ್ತು? ನಿರ್ಧಾರ ತಗೊಳ್ಳಕ್ಕೆ ಆಯ್ತಾ? ತಲೆಕೆಟ್ಟು ಕೆರ ಹಿಡಿದು, ನೀವೇ ಒಂದ್ ಸಲ ಮುಂದಕ್ಕೆ ಹಾಕಿದ್ರಿ. ಇವತ್ ನೋಡಿದ್ರೆ 4 ತಾಸು ವಿಚಾರಣೆ ನಡೆಸಿದರೂ ಮೂರ್ಮಂದಿಗೆ ನಿರ್ಣಯ ತಗಳಕ್ಕೆ ಆಗ್ಲಿಲ್ಲ. ಅಂಥದ್ದರಲ್ಲಿ ಒಬ್ಬರೇ ಸ್ಪೀಕರ್ ಪಟ್ಟಂತ ನಿರ್ಣಯ ಕೈಗೊಳಬೇಕಿತ್ತು ಅನ್ನಾದು ನ್ಯಾಯವೇ ಸ್ವಾಮಿ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...