Homeಮುಖಪುಟಒಂದು whistle blowers ಪಡೆ ಹುಟ್ಟು ಹಾಕೋಣ

ಒಂದು whistle blowers ಪಡೆ ಹುಟ್ಟು ಹಾಕೋಣ

- Advertisement -
- Advertisement -
  • ದೇವನೂರ ಮಹಾದೇವ |

ಈಗ ಚುನಾವಣೆ ನಮ್ಮ ಮುಂದಿದೆ. ಈ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ದೊಡ್ಡದೊಡ್ಡ ನಾಯಕರು ಆಡುವ ಮಾತುಗಳನ್ನು ಕೇಳಿದರೆ ಚುನಾವಣೆ ಅಂದರೆ ಅದು ನಾಡು ಕಟ್ಟುವ ಕೆಲಸ ಅಂದುಕೊಂಡಿಲ್ಲ, ಬದಲಾಗಿ ರಣರಂಗ ಅಂದ್ಕೊಂಡಿದ್ದಾರೆ. ಅದಕ್ಕಾಗಿ ಠೇಂಕಾರದ ಮಾತಾಡ್ತಾರೆ. ಜೊತೆಗೆ – ಜಾದೂ ಭಾಷೇಲಿ ಮಾತಾಡ್ತಾರೆ, ಹರಾಜು ಹಾಕುವ ಭಾಷೇಲಿ ಮಾತಾಡ್ತಾರೆ. ಒಟ್ಟಿನಲ್ಲಿ ಇವರೆಲ್ಲ ಮರಳಲ್ಲಿ ಮನೆ ಕಟ್ಟುತ್ತಿರುವವರಂತೆ ಕಾಣಿಸ್ತಾರೆ.

ಒಂದೇ ಉದಾಹರಣೆ ಸಾಕು, ಬಿಜೆಪಿ ಪದೇ ಪದೇ ಹೇಳ್ತಾ ಇದೆ- “ನಾವು ಕಾಂಗ್ರೆಸ್‍ಮುಕ್ತ ಕರ್ನಾಟಕ ಮಾಡ್ತೇವೆ” ಅಂತ. ಇದಕ್ಕೆ ಪ್ರತಿಕ್ರಿಯೆಯಾಗಿ ಕಾಂಗ್ರೆಸ್ ಕೂಡ ಹೇಳ್ತಾ ಇದೆ- ‘ನಾವು ಬಿಜೆಪಿಮುಕ್ತ ಕರ್ನಾಟಕ ಮಾಡ್ತೇವೆ’ ಅಂತ. ಇವರು ಏನನ್ನು ಮುಕ್ತ ಮಾಡ್ತಾ ಇದ್ದಾರೆ? ತಾನು ಕೂತ ಮರದ ಕೊಂಬೆಯನ್ನೇ ಕತ್ತರಿಸುವವನ ಮೂರ್ಖತನವಲ್ಲವೆ ಇದು? ಜನತಂತ್ರ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ವಿಧ್ವಂಸಕ ಕೃತ್ಯವಲ್ಲವೆ ಇದು? – ಇದು ಹೊಣೆಗೇಡಿ ರಾಜಕಾರಣ.

ನಾಡಿಗೆ ತುರ್ತಾಗಿ ಬೇಕಾಗಿರುವುದು ಬರಮುಕ್ತ ಕರ್ನಾಟಕ, ನಿರುದ್ಯೋಗ ಮುಕ್ತ ಕರ್ನಾಟಕ. ನಾವು ಈ ಹೊಣೆಗೇಡಿ ರಾಜಕಾರಣಕ್ಕೆ ಇದನ್ನು ನೆನಪಿಸಬೇಕಾಗಿದೆ.

ಈ ಹೊಣೆಗೇಡಿ ರಾಜಕಾರಣದ ಜೊತೆಗೆ ಅಪ್ರಬುದ್ಧ ರಾಜಕಾರಣವೂ ವಿಜೃಂಭಿಸುತ್ತಿದೆ. ಉದಾಹರಣೆಗೆ ‘ವಿಶ್ವೇಶ್ವರಯ್ಯ ಹೆಸರು ಉಚ್ಚಾರಣೆ ಮಾಡೋ ಕೆಲವರಿಗೆ ಬರೋಲ್ಲ’ ಅಂತ ಇವರು ಹೇಳ್ತಾರೆ, ‘ಇವರಿಗೆ ಬಳ್ಳಾರಿ ಹೆಸರು ಉಚ್ಚಾರಣೆ ಮಾಡೋಕೆ ಬರೋಲ್ಲ’ ಅಂತ ಅವರು ಹೇಳ್ತಾರೆ! ಇಂಥವೇ ಮಾತುಗಳು. ನನಗೂ ಉಚ್ಚಾರಣೆ ಬರಲ್ಲಪ್ಪ, ಏನೀಗ? ಇದೇನು ಘನಂದಾರಿ ಚರ್ಚೆಯೆ? ಇಂಥವರಿಗೆ ಏನೆಂದು ಹೇಳಬೇಕು? ‘ನಿಮಗೆಲ್ಲ ವಯಸ್ಸಾಗಿದೆ, ನಿಜ. ಆದರೆ ನೀವು ಪ್ರೈಮರಿ ಶಾಲೆಯಲ್ಲಿ ಇರಬೇಕಾದವರು’ ಎಂದು ಹೇಳಬೇಕಾಗಿದೆ. ಮಾಧ್ಯಮಗಳು ಇಂಥ ಕ್ಷುಲ್ಲಕವನ್ನೆಲ್ಲಾ ಚರ್ಚಿಸಬಾರದು, ದಯವಿಟ್ಟು.

ಮೊನ್ನೆ ಮೊನ್ನೆ ತಾನೇ ಮೈಸೂರಿನಲ್ಲಿ – ‘ಉದ್ಯೋಗಕ್ಕಾಗಿ ಯುವಜನರು’ ಸಂಘಟನೆಯವರು ಪ್ರವಾಸದಲ್ಲಿದ್ದ ನಮ್ಮ ಪ್ರಧಾನಿಗೆ ಒಂದು ಪ್ರಶ್ನೆ ಕೇಳಿದರು- ‘ಕಳೆದ ಲೋಕಸಭಾ ಚುನಾವಣೆಯಲ್ಲಿ ವರ್ಷಕ್ಕೆ ಒಂದು ಕೋಟಿ ಉದ್ಯೋಗ ನೀಡುತ್ತೇನೆ ಎಂದು ಭರವಸೆ ನೀಡಿದ್ದಿರಿ. ಕಿಂಚಿತ್ತೂ ಈಡೇರಲಿಲ್ಲ. ಈ ಬಗ್ಗೆ ಮಾತಾಡಿ’ ಅಂತ. ಇದಕ್ಕೆ ಉತ್ತರಿಸಬೇಕಾದ್ದು ಮಾತು ಕೊಟ್ಟ ಪ್ರಧಾನಿಯವರ ಹೊಣೆಗಾರಿಕೆ. ಆದರೆ ಅವರು ಉತ್ತರಿಸಲಿಲ್ಲ. ಬದಲಾಗಿ, ಮುಂದಿನ ಸಭೆಯಲ್ಲಿ ಅವರು ಆಡಿದ ಮಾತುಗಳು ಏನು ಗೊತ್ತೆ?- ‘ನಾವು ಕಾಮ್‍ಧಾರಿಗಳು, ಅವರು (ಅಂದರೆ ವಿರೋಧ ಪಕ್ಷದವರು) ನಾಮ್‍ಧಾರಿಗಳು’ ಅಂತ! ನುಣುಚಿಕೊಳ್ಳುವ ಇದು ದ್ರೋಹವಲ್ಲವೆ? ಇದು ಮಹಾದ್ರೋಹ. ಇವರು ನಾಡನ್ನು ಕಟ್ಟುತ್ತಿದ್ದಾರೋ ಅಥವ ಪದಗಳನ್ನು ಕಟ್ಟುತ್ತಿದ್ದಾರೋ? ಈ ರಾಜಕಾರಣ ನೋಡುತ್ತಿದ್ದರೆ ಜಿಗುಪ್ಸೆಯಾಗುತ್ತದೆ. ಭಯವೂ ಆಗುತ್ತದೆ.

ಕೆ.ಎಸ್.ಪುಟ್ಟಣ್ಣಯ್ಯ

ಇನ್ನೊಂದು ರಾಜಕಾರಣದ ಮಾತಿನ ಠೇಂಕಾರ; “ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ, ಭ್ರಷ್ಟರನ್ನೆಲ್ಲಾ ಜೈಲಿಗೆ ಅಟ್ಟುತ್ತೇವೆ”. ಈ ಮಾತಿಗೆ ನಮ್ಮ ಕೆಎಸ್ ಪುಟ್ಟಣ್ಣಯ್ಯ ಹೇಳ್ತಾ ಇದ್ದರು; “ವಿಧಾನಸೌಧದ ಬಾಗಿಲಿಗೆ ಒಂದು ‘ಭ್ರಷ್ಟರ ತಡೆ ಮಿಷಿನ್’ ಇಟ್ಟುಬಿಡೋಣ. ಭ್ರಷ್ಟರು ಬಂದರೆ ಆ ಬಾಗಿಲು ಆಟೋಮ್ಯಾಟಿಕ್ ಮುಚ್ಕೋಬೇಕು – ಅಂಥದ್ದು. ಆ ಮಿಷಿನ್ನೂ ಲಂಚ ಈಸ್ಕಂಡು ಒಳಿಕೆ ಬಿಡ್ದೇ ಇದ್ರೆ – ವಿಧಾನ ಸೌಧದ ಒಳೀಕೆ ಎಷ್ಟು ಜನರಪ್ಪ ಹೋಗೌರು?” ಅಂತಿದ್ದರು. ಇದು ರಾಜಕಾರಣದ ಇಂದಿನ ಪರಿಸ್ಥಿತಿ. ವ್ಯವಸ್ಥೇನೆ ಭ್ರಷ್ಟಗೊಂಡಿದೆ.

ಇಂಥ ದುರಂತ ರಾಜಕಾರಣದ ಸಂದರ್ಭದಲ್ಲಿ- ಸ್ವರಾಜ್ ಇಂಡಿಯಾ ತನ್ನ ಪ್ರಣಾಳಿಕೆ ಬಿಡುಗಡೆ ಮಾಡ್ತಾ ಇದೆ. ‘ಕೆಲವರಿಗೆ ಅಲ್ಲ; ಸಮುದಾಯಕ್ಕೆ ಎಲ್ಲಾ’ ಎಂಬ ಆಶಯದ ಸಸಿ ನೆಡುತ್ತಿದೆ. ಈ ಸ್ವರಾಜ್ ಪ್ರಣಾಳಿಕೆಗೆ ಕಾಪಿರೈಟ್ ಇಲ್ಲ. ಯಾರೇ ಪ್ರಕಟಿಸಬಹುದು. ದಯವಿಟ್ಟು ಚರ್ಚಿಸಿ, ಟೀಕೆ ಮಾಡಿ, ಸಲಹೆ, ಸೂಚನೆ, ಟಿಪ್ಪಣಿ ನೀಡಿ. ಇದು ಮುಕ್ತವಾಗಿದೆ.

ಕೊನೆಯದಾಗಿ, ನಾಡಿನ ಜಾಗೃತ ಪ್ರಜ್ಞೆಗೆ ಒಂದು ವಿನಂತಿ ಮಾಡುವೆ. ಅದೇನೆಂದರೆ, ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಪ್ರಣಾಳಿಕೆಯ ಆಶ್ವಾಸನೆಗಳು ಹಾಗೂ ರಾಜಕಾರಣಿಗಳು ನೀಡುವ ಭರವಸೆಗಳು- ಇವುಗಳನ್ನೆಲ್ಲಾ ನೆನಪಿಸುವ ಒಂದು ತಿhisಣಟe bಟoತಿeಡಿs ಪಡೆಯನ್ನು ಹುಟ್ಟು ಹಾಕಬೇಕಾಗಿದೆ. ರಾಜ್ಯಕ್ಕೆ ಹತ್ತು ಜನ ಸಾಕು. ಜಿಲ್ಲೆಗೆ ಮೂರು ಜನ. ರಾಜಕೀಯ ಪಕ್ಷಗಳ ಪ್ರಣಾಳಿಕೆಗಳ ಆಶ್ವಾಸನೆಗಳು ಹಾಗೂ ರಾಜಕಾರಣಿಗಳು ಚುನಾವಣಾ ಸಂದರ್ಭದಲ್ಲಿ ನೀಡಿದ ಭರವಸೆಗಳನ್ನು ತಿಂಗಳಿಗೊಮ್ಮೆ ಅವರವರ ಮೂತಿಗೆ ಹಿಡಿಯುವ ಒಂದು ಜಾಗರೂಕ ಪಡೆ ಅತ್ಯಗತ್ಯವಾಗಿದೆ. ಇದರಿಂದ ಹೊಣೆಗೇಡಿ ರಾಜಕಾರಣಕ್ಕೆ ಸ್ವಲ್ಪವಾದರೂ ಹೊಣೆಗಾರಿಕೆ ಬರಬಹುದು. ರಾಜಕಾರಣಕ್ಕೆ ಮಾನಮರ್ಯಾದೆ ತಂದುಕೊಡುವ ದಿಕ್ಕಲ್ಲಿ ಇದು ಮೊದಲ ಹೆಜ್ಜೆಯಾಗಲೂಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...