Homeರಾಜಕೀಯಒಕ್ಕಲಿಗ ವರ್ಸಸ್ ಲಿಂಗಾಯತ : ಅಪಾಯಕಾರಿ ಜಾತಿ ರಣಾಂಗಣವಾಗುತ್ತಾ ಕರ್ನಾಟಕ?

ಒಕ್ಕಲಿಗ ವರ್ಸಸ್ ಲಿಂಗಾಯತ : ಅಪಾಯಕಾರಿ ಜಾತಿ ರಣಾಂಗಣವಾಗುತ್ತಾ ಕರ್ನಾಟಕ?

- Advertisement -
- Advertisement -

ಮಾಚಯ್ಯ |

2018ರ ವಿಧಾನಸಭಾ ಫಲಿತಾಂಶ ಹೇರಿರುವ ಅನಿಶ್ಚಿತತೆ ನಿಧಾನಕ್ಕೆ ರಾಜ್ಯವನ್ನು ಜಾತಿ ಕದನದ ಅಖಾಡವಾಗಿಸುವ ಅಪಾಯದತ್ತ ತಳ್ಳುತ್ತಿದೆ. ಇದಕ್ಕೆ ಮುನ್ನುಡಿ ಬರೆಯುತ್ತಿರೋದು ಬಿಜೆಪಿ! ಯಾವಾಗ ತಮಗೆ ಸ್ಪಷ್ಟ ಬಹುಮತ ಬರಲಿಲ್ಲ ಅನ್ನೋದು ಖಾತ್ರಿ ಆಯ್ತೋ, ಆಗ ಆಪರೇಷನ್ ಕಮಲ ಮಾಡಲು ಹೋಗಿ ವಿಲವಿಲ ಹೊದ್ದಾಡಿದರೂ ವಾಮ ಮಾರ್ಗದಲ್ಲಿ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿದಿದೆ. ಅಷ್ಟೇ ಅಲ್ಲ ಶತಾಯಗತಾಯ ಆ ಅಧಿಕಾರವನ್ನು ಉಳಿಸಿಕೊಳ್ಳಲು ಜಾತಿ ರಾಜಕಾರಣಕ್ಕೆ ಚಾಲನೆ ನೀಡಿದೆ. ಯಡ್ಯೂರಪ್ಪರನ್ನು ಸಿಎಂ ಮಾಡಿರುವ ಬಿಜೆಪಿ, ಇದೀಗ ಅವರ ಮೂಲಕ ಲಿಂಗಾಯತ ಟ್ರಂಪ್ ಕಾರ್ಡ್ ಬಳಸಲು ಮುಂದಾಗಿದೆ. ಇತರೆ ಪಕ್ಷಗಳು ಅವರನ್ನು ಕಾನೂನಾತ್ಮಕ ಕಾರಣಕ್ಕೆ ಕೆಳಗಿಳಿಸಲು ಮುಂದಾದರೂ, ಆ ಪ್ರಯತ್ನ ಮಾಡುತ್ತಿರುವ ಪಕ್ಷ ಲಿಂಗಾಯತರಿಂದ ಅಧಿಕಾರ ಕಿತ್ತುಕೊಳ್ಳಲು ಹವಣಿಸುತ್ತಿದೆ ಎಂಬ ಸುದ್ದಿಗೆ ಜನ್ಮ ನೀಡಲು ಬೇಕಾದ ತಯಾರಿಗಳನ್ನೆಲ್ಲ ಮಾಡಿಕೊಂಡಿದೆ.

ದೇವೇಗೌಡರ ವಿರುದ್ಧ ವ್ಯಾಟ್ಸಪ್ ನಲ್ಲಿ ಹರಿದಾಡಿಸಲಾಗುತ್ತಿರುವ ಪೋಸ್ಟರ್
ಕುಮಾರಸ್ವಾಮಿಯವರು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ವ್ಯಾಟ್ಸಪ್ ಗಳಲ್ಲಿ ಅವರನ್ನು ಲೇವಡಿ ಮಾಡುತ್ತಿರುವ ಎರಡು ನಾಲಗೆಯ ಫೋಟೊಶಾಪ್ ಪೋಸ್ಟರ್

ಅದಕ್ಕಾಗೇ ಪ್ರಕಾಶ್ ಜಾವ್ಡೇಕರ್ ಕಾಂಗ್ರೆಸ್ಸಿನಲ್ಲಿರುವ 14 ಮಂದಿ ಲಿಂಗಾಯತ ಶಾಸಕರ ಬಗ್ಗೆ ನಿರ್ದಿಷ್ಟವಾಗಿ ಉಲ್ಲೇಖಿಸಿ ಅವರು ಬೆಂಬಲ ನೀಡುತ್ತಾರೆ ಎಂಬ ಗೊಂದಲ ಸೃಷ್ಟಿಸಿದರೆ, ಸಿಎಂ ಹುದ್ದೆ ಯಾವ ಕ್ಷಣದಲ್ಲಾದರು ಕೈಬಿಟ್ಟುಹೋಗುವ ಆತಂಕದ ನಡುವೆಯೂ ತರಾತುರಿಯಲ್ಲಿ ಯಡ್ಯೂರಪ್ಪ ಸಿದ್ದಗಂಗಾ ಮಠವನ್ನು ಎಡತಾಕಿ ತಮ್ಮ ಅಧಿಕಾರ ಪದಗ್ರಹಣಕ್ಕೆ ಲಿಂಗಾಯತ ಲೇಪ ಹಚ್ಚಲು ನೋಡಿದ್ದರು. ಈ ಹಿಂದೆ ವೀರೇಂದ್ರ ಪಾಟೀಲರನ್ನು ಕೆಳಗಿಳಿಸಿದ ಕಾರಣಕ್ಕೆ ಲಿಂಗಾಯತರು ಸಾರಾಸಗಟಾಗಿ ಕಾಂಗ್ರೆಸ್ ವಿರುದ್ಧ ಇಲ್ಲಿಯವರೆಗೂ ತಿರುಗಿ ಬಿದ್ದಿರುವ ಇತಿಹಾಸ ಬಿಜೆಪಿಯನ್ನು ಇಂಥಾ ತಂತ್ರಗಾರಿಕೆಗೆ ಪ್ರಚೋದಿಸುತ್ತಿದೆ. ಇಂಥಾ ಜಾತಿ ತಂತ್ರಕ್ಕೆ ಅಪಾಯಕಾರಿ ಸೈಡ್ ಎಫೆಕ್ಟ್ ಇರೋದು ಪ್ರಜ್ಞಾವಂತರನ್ನು ಆತಂಕಕ್ಕೆ ತಳ್ಳಿದೆ. ಈ ಪ್ರಯತ್ನದಲ್ಲಿ ಸಿಎಂ ಹುದ್ದೆಯ ಸನಿಹದಲ್ಲಿದ್ದ ಒಕ್ಕಲಿಗ ಸಮುದಾಯದ ಕುಮಾರಸ್ವಾಮಿಗೆ ಲಿಂಗಾಯತರ ಯಡ್ಯೂರಪ್ಪನಿಂದ ಅನ್ಯಾಯವಾಗುತ್ತಿದೆ ಎಂಬ ಸಂದೇಶ ಹಳೇ ಮೈಸೂರು ಭಾಗದಲ್ಲಿ ಈಗಾಗಲೇ ಹರಿದಾಡಲು ಶುರುವಾಗಿತ್ತು. ಇದೀಗ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಯಿಂದ ಮುಖ್ಯಮಂತ್ರಿ ಗಾದಿ ಸಿಗುವಂತ ಸನ್ನಿವೇಶ ನಿರ್ಮಾಣವಾದಾಗ ಬಿಜೆಪಿಯ ಐಟಿ ಸೆಲ್ಲು ಮೊದಲೇ ಪ್ಲ್ಯಾನ್ ಮಾಡಿಕೊಂಡಂತೆ ದೇವೇಗೌಡ ಮತ್ತು ಕುಮಾರಸ್ವಾಮಿಗಳ ಫೋಟೊಗೆ `ಲಿಂಗಾಯತರು ಮುಖ್ಯಮಂತ್ರಿ ಆಗೋದನ್ನು ತಪ್ಪಿಸುತ್ತಿರುವ ಇವರು ಲಿಂಗಾಯತ ವಿರೋಧಿಗಳು’ ಎಂವ ವಾಟ್ಸಾಪ್ ಸಂದೇಶಗಳು ಹರಿದಾಡಲು ಶುರುವಾಗಿವೆ. ಮುಂದಿನ ದಿನಗಳಲ್ಲಿ ಇದು ಎರಡು ಬಲಾಢ್ಯ ಸಮುದಾಯಗಳ ನಡುವಿನ ಕಾದಾಟಕ್ಕೆ ನಾಂದಿಯಾದರೂ ಅಚ್ಚರಿಯಿಲ್ಲ. ಇದು ಕರ್ನಾಟಕದ ಭವಿಷ್ಯದ ದೃಷ್ಟಿಯಿಂದ ನಿಜಕ್ಕೂ ಒಳ್ಳೆಯ ಬೆಳವಣಿಗೆಯಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...