Homeರಾಜಕೀಯಒಕ್ಕಲಿಗ ವರ್ಸಸ್ ಲಿಂಗಾಯತ : ಅಪಾಯಕಾರಿ ಜಾತಿ ರಣಾಂಗಣವಾಗುತ್ತಾ ಕರ್ನಾಟಕ?

ಒಕ್ಕಲಿಗ ವರ್ಸಸ್ ಲಿಂಗಾಯತ : ಅಪಾಯಕಾರಿ ಜಾತಿ ರಣಾಂಗಣವಾಗುತ್ತಾ ಕರ್ನಾಟಕ?

- Advertisement -
- Advertisement -

ಮಾಚಯ್ಯ |

2018ರ ವಿಧಾನಸಭಾ ಫಲಿತಾಂಶ ಹೇರಿರುವ ಅನಿಶ್ಚಿತತೆ ನಿಧಾನಕ್ಕೆ ರಾಜ್ಯವನ್ನು ಜಾತಿ ಕದನದ ಅಖಾಡವಾಗಿಸುವ ಅಪಾಯದತ್ತ ತಳ್ಳುತ್ತಿದೆ. ಇದಕ್ಕೆ ಮುನ್ನುಡಿ ಬರೆಯುತ್ತಿರೋದು ಬಿಜೆಪಿ! ಯಾವಾಗ ತಮಗೆ ಸ್ಪಷ್ಟ ಬಹುಮತ ಬರಲಿಲ್ಲ ಅನ್ನೋದು ಖಾತ್ರಿ ಆಯ್ತೋ, ಆಗ ಆಪರೇಷನ್ ಕಮಲ ಮಾಡಲು ಹೋಗಿ ವಿಲವಿಲ ಹೊದ್ದಾಡಿದರೂ ವಾಮ ಮಾರ್ಗದಲ್ಲಿ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿದಿದೆ. ಅಷ್ಟೇ ಅಲ್ಲ ಶತಾಯಗತಾಯ ಆ ಅಧಿಕಾರವನ್ನು ಉಳಿಸಿಕೊಳ್ಳಲು ಜಾತಿ ರಾಜಕಾರಣಕ್ಕೆ ಚಾಲನೆ ನೀಡಿದೆ. ಯಡ್ಯೂರಪ್ಪರನ್ನು ಸಿಎಂ ಮಾಡಿರುವ ಬಿಜೆಪಿ, ಇದೀಗ ಅವರ ಮೂಲಕ ಲಿಂಗಾಯತ ಟ್ರಂಪ್ ಕಾರ್ಡ್ ಬಳಸಲು ಮುಂದಾಗಿದೆ. ಇತರೆ ಪಕ್ಷಗಳು ಅವರನ್ನು ಕಾನೂನಾತ್ಮಕ ಕಾರಣಕ್ಕೆ ಕೆಳಗಿಳಿಸಲು ಮುಂದಾದರೂ, ಆ ಪ್ರಯತ್ನ ಮಾಡುತ್ತಿರುವ ಪಕ್ಷ ಲಿಂಗಾಯತರಿಂದ ಅಧಿಕಾರ ಕಿತ್ತುಕೊಳ್ಳಲು ಹವಣಿಸುತ್ತಿದೆ ಎಂಬ ಸುದ್ದಿಗೆ ಜನ್ಮ ನೀಡಲು ಬೇಕಾದ ತಯಾರಿಗಳನ್ನೆಲ್ಲ ಮಾಡಿಕೊಂಡಿದೆ.

ದೇವೇಗೌಡರ ವಿರುದ್ಧ ವ್ಯಾಟ್ಸಪ್ ನಲ್ಲಿ ಹರಿದಾಡಿಸಲಾಗುತ್ತಿರುವ ಪೋಸ್ಟರ್
ಕುಮಾರಸ್ವಾಮಿಯವರು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ವ್ಯಾಟ್ಸಪ್ ಗಳಲ್ಲಿ ಅವರನ್ನು ಲೇವಡಿ ಮಾಡುತ್ತಿರುವ ಎರಡು ನಾಲಗೆಯ ಫೋಟೊಶಾಪ್ ಪೋಸ್ಟರ್

ಅದಕ್ಕಾಗೇ ಪ್ರಕಾಶ್ ಜಾವ್ಡೇಕರ್ ಕಾಂಗ್ರೆಸ್ಸಿನಲ್ಲಿರುವ 14 ಮಂದಿ ಲಿಂಗಾಯತ ಶಾಸಕರ ಬಗ್ಗೆ ನಿರ್ದಿಷ್ಟವಾಗಿ ಉಲ್ಲೇಖಿಸಿ ಅವರು ಬೆಂಬಲ ನೀಡುತ್ತಾರೆ ಎಂಬ ಗೊಂದಲ ಸೃಷ್ಟಿಸಿದರೆ, ಸಿಎಂ ಹುದ್ದೆ ಯಾವ ಕ್ಷಣದಲ್ಲಾದರು ಕೈಬಿಟ್ಟುಹೋಗುವ ಆತಂಕದ ನಡುವೆಯೂ ತರಾತುರಿಯಲ್ಲಿ ಯಡ್ಯೂರಪ್ಪ ಸಿದ್ದಗಂಗಾ ಮಠವನ್ನು ಎಡತಾಕಿ ತಮ್ಮ ಅಧಿಕಾರ ಪದಗ್ರಹಣಕ್ಕೆ ಲಿಂಗಾಯತ ಲೇಪ ಹಚ್ಚಲು ನೋಡಿದ್ದರು. ಈ ಹಿಂದೆ ವೀರೇಂದ್ರ ಪಾಟೀಲರನ್ನು ಕೆಳಗಿಳಿಸಿದ ಕಾರಣಕ್ಕೆ ಲಿಂಗಾಯತರು ಸಾರಾಸಗಟಾಗಿ ಕಾಂಗ್ರೆಸ್ ವಿರುದ್ಧ ಇಲ್ಲಿಯವರೆಗೂ ತಿರುಗಿ ಬಿದ್ದಿರುವ ಇತಿಹಾಸ ಬಿಜೆಪಿಯನ್ನು ಇಂಥಾ ತಂತ್ರಗಾರಿಕೆಗೆ ಪ್ರಚೋದಿಸುತ್ತಿದೆ. ಇಂಥಾ ಜಾತಿ ತಂತ್ರಕ್ಕೆ ಅಪಾಯಕಾರಿ ಸೈಡ್ ಎಫೆಕ್ಟ್ ಇರೋದು ಪ್ರಜ್ಞಾವಂತರನ್ನು ಆತಂಕಕ್ಕೆ ತಳ್ಳಿದೆ. ಈ ಪ್ರಯತ್ನದಲ್ಲಿ ಸಿಎಂ ಹುದ್ದೆಯ ಸನಿಹದಲ್ಲಿದ್ದ ಒಕ್ಕಲಿಗ ಸಮುದಾಯದ ಕುಮಾರಸ್ವಾಮಿಗೆ ಲಿಂಗಾಯತರ ಯಡ್ಯೂರಪ್ಪನಿಂದ ಅನ್ಯಾಯವಾಗುತ್ತಿದೆ ಎಂಬ ಸಂದೇಶ ಹಳೇ ಮೈಸೂರು ಭಾಗದಲ್ಲಿ ಈಗಾಗಲೇ ಹರಿದಾಡಲು ಶುರುವಾಗಿತ್ತು. ಇದೀಗ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಯಿಂದ ಮುಖ್ಯಮಂತ್ರಿ ಗಾದಿ ಸಿಗುವಂತ ಸನ್ನಿವೇಶ ನಿರ್ಮಾಣವಾದಾಗ ಬಿಜೆಪಿಯ ಐಟಿ ಸೆಲ್ಲು ಮೊದಲೇ ಪ್ಲ್ಯಾನ್ ಮಾಡಿಕೊಂಡಂತೆ ದೇವೇಗೌಡ ಮತ್ತು ಕುಮಾರಸ್ವಾಮಿಗಳ ಫೋಟೊಗೆ `ಲಿಂಗಾಯತರು ಮುಖ್ಯಮಂತ್ರಿ ಆಗೋದನ್ನು ತಪ್ಪಿಸುತ್ತಿರುವ ಇವರು ಲಿಂಗಾಯತ ವಿರೋಧಿಗಳು’ ಎಂವ ವಾಟ್ಸಾಪ್ ಸಂದೇಶಗಳು ಹರಿದಾಡಲು ಶುರುವಾಗಿವೆ. ಮುಂದಿನ ದಿನಗಳಲ್ಲಿ ಇದು ಎರಡು ಬಲಾಢ್ಯ ಸಮುದಾಯಗಳ ನಡುವಿನ ಕಾದಾಟಕ್ಕೆ ನಾಂದಿಯಾದರೂ ಅಚ್ಚರಿಯಿಲ್ಲ. ಇದು ಕರ್ನಾಟಕದ ಭವಿಷ್ಯದ ದೃಷ್ಟಿಯಿಂದ ನಿಜಕ್ಕೂ ಒಳ್ಳೆಯ ಬೆಳವಣಿಗೆಯಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...