Homeರಾಜಕೀಯಒಕ್ಕಲಿಗ ವರ್ಸಸ್ ಲಿಂಗಾಯತ : ಅಪಾಯಕಾರಿ ಜಾತಿ ರಣಾಂಗಣವಾಗುತ್ತಾ ಕರ್ನಾಟಕ?

ಒಕ್ಕಲಿಗ ವರ್ಸಸ್ ಲಿಂಗಾಯತ : ಅಪಾಯಕಾರಿ ಜಾತಿ ರಣಾಂಗಣವಾಗುತ್ತಾ ಕರ್ನಾಟಕ?

- Advertisement -
- Advertisement -

ಮಾಚಯ್ಯ |

2018ರ ವಿಧಾನಸಭಾ ಫಲಿತಾಂಶ ಹೇರಿರುವ ಅನಿಶ್ಚಿತತೆ ನಿಧಾನಕ್ಕೆ ರಾಜ್ಯವನ್ನು ಜಾತಿ ಕದನದ ಅಖಾಡವಾಗಿಸುವ ಅಪಾಯದತ್ತ ತಳ್ಳುತ್ತಿದೆ. ಇದಕ್ಕೆ ಮುನ್ನುಡಿ ಬರೆಯುತ್ತಿರೋದು ಬಿಜೆಪಿ! ಯಾವಾಗ ತಮಗೆ ಸ್ಪಷ್ಟ ಬಹುಮತ ಬರಲಿಲ್ಲ ಅನ್ನೋದು ಖಾತ್ರಿ ಆಯ್ತೋ, ಆಗ ಆಪರೇಷನ್ ಕಮಲ ಮಾಡಲು ಹೋಗಿ ವಿಲವಿಲ ಹೊದ್ದಾಡಿದರೂ ವಾಮ ಮಾರ್ಗದಲ್ಲಿ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿದಿದೆ. ಅಷ್ಟೇ ಅಲ್ಲ ಶತಾಯಗತಾಯ ಆ ಅಧಿಕಾರವನ್ನು ಉಳಿಸಿಕೊಳ್ಳಲು ಜಾತಿ ರಾಜಕಾರಣಕ್ಕೆ ಚಾಲನೆ ನೀಡಿದೆ. ಯಡ್ಯೂರಪ್ಪರನ್ನು ಸಿಎಂ ಮಾಡಿರುವ ಬಿಜೆಪಿ, ಇದೀಗ ಅವರ ಮೂಲಕ ಲಿಂಗಾಯತ ಟ್ರಂಪ್ ಕಾರ್ಡ್ ಬಳಸಲು ಮುಂದಾಗಿದೆ. ಇತರೆ ಪಕ್ಷಗಳು ಅವರನ್ನು ಕಾನೂನಾತ್ಮಕ ಕಾರಣಕ್ಕೆ ಕೆಳಗಿಳಿಸಲು ಮುಂದಾದರೂ, ಆ ಪ್ರಯತ್ನ ಮಾಡುತ್ತಿರುವ ಪಕ್ಷ ಲಿಂಗಾಯತರಿಂದ ಅಧಿಕಾರ ಕಿತ್ತುಕೊಳ್ಳಲು ಹವಣಿಸುತ್ತಿದೆ ಎಂಬ ಸುದ್ದಿಗೆ ಜನ್ಮ ನೀಡಲು ಬೇಕಾದ ತಯಾರಿಗಳನ್ನೆಲ್ಲ ಮಾಡಿಕೊಂಡಿದೆ.

ದೇವೇಗೌಡರ ವಿರುದ್ಧ ವ್ಯಾಟ್ಸಪ್ ನಲ್ಲಿ ಹರಿದಾಡಿಸಲಾಗುತ್ತಿರುವ ಪೋಸ್ಟರ್
ಕುಮಾರಸ್ವಾಮಿಯವರು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ವ್ಯಾಟ್ಸಪ್ ಗಳಲ್ಲಿ ಅವರನ್ನು ಲೇವಡಿ ಮಾಡುತ್ತಿರುವ ಎರಡು ನಾಲಗೆಯ ಫೋಟೊಶಾಪ್ ಪೋಸ್ಟರ್

ಅದಕ್ಕಾಗೇ ಪ್ರಕಾಶ್ ಜಾವ್ಡೇಕರ್ ಕಾಂಗ್ರೆಸ್ಸಿನಲ್ಲಿರುವ 14 ಮಂದಿ ಲಿಂಗಾಯತ ಶಾಸಕರ ಬಗ್ಗೆ ನಿರ್ದಿಷ್ಟವಾಗಿ ಉಲ್ಲೇಖಿಸಿ ಅವರು ಬೆಂಬಲ ನೀಡುತ್ತಾರೆ ಎಂಬ ಗೊಂದಲ ಸೃಷ್ಟಿಸಿದರೆ, ಸಿಎಂ ಹುದ್ದೆ ಯಾವ ಕ್ಷಣದಲ್ಲಾದರು ಕೈಬಿಟ್ಟುಹೋಗುವ ಆತಂಕದ ನಡುವೆಯೂ ತರಾತುರಿಯಲ್ಲಿ ಯಡ್ಯೂರಪ್ಪ ಸಿದ್ದಗಂಗಾ ಮಠವನ್ನು ಎಡತಾಕಿ ತಮ್ಮ ಅಧಿಕಾರ ಪದಗ್ರಹಣಕ್ಕೆ ಲಿಂಗಾಯತ ಲೇಪ ಹಚ್ಚಲು ನೋಡಿದ್ದರು. ಈ ಹಿಂದೆ ವೀರೇಂದ್ರ ಪಾಟೀಲರನ್ನು ಕೆಳಗಿಳಿಸಿದ ಕಾರಣಕ್ಕೆ ಲಿಂಗಾಯತರು ಸಾರಾಸಗಟಾಗಿ ಕಾಂಗ್ರೆಸ್ ವಿರುದ್ಧ ಇಲ್ಲಿಯವರೆಗೂ ತಿರುಗಿ ಬಿದ್ದಿರುವ ಇತಿಹಾಸ ಬಿಜೆಪಿಯನ್ನು ಇಂಥಾ ತಂತ್ರಗಾರಿಕೆಗೆ ಪ್ರಚೋದಿಸುತ್ತಿದೆ. ಇಂಥಾ ಜಾತಿ ತಂತ್ರಕ್ಕೆ ಅಪಾಯಕಾರಿ ಸೈಡ್ ಎಫೆಕ್ಟ್ ಇರೋದು ಪ್ರಜ್ಞಾವಂತರನ್ನು ಆತಂಕಕ್ಕೆ ತಳ್ಳಿದೆ. ಈ ಪ್ರಯತ್ನದಲ್ಲಿ ಸಿಎಂ ಹುದ್ದೆಯ ಸನಿಹದಲ್ಲಿದ್ದ ಒಕ್ಕಲಿಗ ಸಮುದಾಯದ ಕುಮಾರಸ್ವಾಮಿಗೆ ಲಿಂಗಾಯತರ ಯಡ್ಯೂರಪ್ಪನಿಂದ ಅನ್ಯಾಯವಾಗುತ್ತಿದೆ ಎಂಬ ಸಂದೇಶ ಹಳೇ ಮೈಸೂರು ಭಾಗದಲ್ಲಿ ಈಗಾಗಲೇ ಹರಿದಾಡಲು ಶುರುವಾಗಿತ್ತು. ಇದೀಗ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಯಿಂದ ಮುಖ್ಯಮಂತ್ರಿ ಗಾದಿ ಸಿಗುವಂತ ಸನ್ನಿವೇಶ ನಿರ್ಮಾಣವಾದಾಗ ಬಿಜೆಪಿಯ ಐಟಿ ಸೆಲ್ಲು ಮೊದಲೇ ಪ್ಲ್ಯಾನ್ ಮಾಡಿಕೊಂಡಂತೆ ದೇವೇಗೌಡ ಮತ್ತು ಕುಮಾರಸ್ವಾಮಿಗಳ ಫೋಟೊಗೆ `ಲಿಂಗಾಯತರು ಮುಖ್ಯಮಂತ್ರಿ ಆಗೋದನ್ನು ತಪ್ಪಿಸುತ್ತಿರುವ ಇವರು ಲಿಂಗಾಯತ ವಿರೋಧಿಗಳು’ ಎಂವ ವಾಟ್ಸಾಪ್ ಸಂದೇಶಗಳು ಹರಿದಾಡಲು ಶುರುವಾಗಿವೆ. ಮುಂದಿನ ದಿನಗಳಲ್ಲಿ ಇದು ಎರಡು ಬಲಾಢ್ಯ ಸಮುದಾಯಗಳ ನಡುವಿನ ಕಾದಾಟಕ್ಕೆ ನಾಂದಿಯಾದರೂ ಅಚ್ಚರಿಯಿಲ್ಲ. ಇದು ಕರ್ನಾಟಕದ ಭವಿಷ್ಯದ ದೃಷ್ಟಿಯಿಂದ ನಿಜಕ್ಕೂ ಒಳ್ಳೆಯ ಬೆಳವಣಿಗೆಯಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...