Homeಸಾಮಾಜಿಕಒಮ್ಮೆ ಕಣ್ಣು ಮುಚ್ಚಿ ಹೀಗೆ ಕಲ್ಪಿಸಿಕೊಳ್ಳಿ. ನಿಧಾನಕ್ಕೆ ಇದೇನೆಂದು ಅರ್ಥವಾಗಬಹುದು

ಒಮ್ಮೆ ಕಣ್ಣು ಮುಚ್ಚಿ ಹೀಗೆ ಕಲ್ಪಿಸಿಕೊಳ್ಳಿ. ನಿಧಾನಕ್ಕೆ ಇದೇನೆಂದು ಅರ್ಥವಾಗಬಹುದು

- Advertisement -
- Advertisement -

 ಡಾ. ಕಾರ್ತಿಕ್ ಬಿಟ್ಟು
ಕನ್ನಡಕ್ಕೆ: ರಾಜಶೇಖರ ಅಕ್ಕಿ |

ನಿಮ್ಮ ಕಣ್ಣುಗಳನ್ನು ಮುಚ್ಚಿಕೊಳ್ಳಿ, ಅದರೊಂದಿಗೆ ನಿಮ್ಮ ಕೈಗಳನ್ನು ಮೇಲೆತ್ತಿ. ನೀವು ಏನು ಮಾಡುತ್ತಿದ್ದೀರಿ ಎಂದು ನಿಮಗೆ ಕಾಣಿಸದಿದ್ದರೂ ನೀವು ನಿಮ್ ಕೈಗಳನ್ನು ಮೇಲಕ್ಕೆತ್ತಿದ್ದು ನಿಮಗೆ ಖಂಡಿತವಾಗಿಯೂ ಅನುಭವವಾಗುತ್ತದೆ. ನಿಮ್ಮ ಕೈಗಳು ಎಲ್ಲಿವೆ ಎನ್ನುವುದು ನಿಮಗೆ ತಿಳಿಯುತ್ತದೆ. ಹೀಗೇಕೆ ಎಂದರೆ, ನಮ್ಮ ಮಿದುಳು ದೇಹದ ಅಂಗಗಳ ಆಂತರಿಕ ಸ್ಪರ್ಶವನ್ನು ಗ್ರಹಿಸಿ, ಯಾವ ಅಂಗ ಎಲ್ಲಿದೆ ಎನ್ನುವುದನ್ನು ತಿಳಿದುಕೊಳ್ಳುವಲ್ಲಿ ಸಶಕ್ತವಾಗಿದೆ.
ಯಾವುದಾದರೊಂದು ಅಪಘಾತಕ್ಕೀಡಾಗಿ ತಮ್ಮ ಕೈಯನ್ನು ಕಳೆದುಕೊಂಡ ವ್ಯಕ್ತಿಗಳಿಗೆ ಈಗ ಇಲ್ಲದಿರುವ ಆ ಕೈ ಇನ್ನೂ ಅಲ್ಲಿಯೇ ಇದೆ ಎನ್ನುವ ಅನುಭವ ಆಗುತ್ತಿರುತ್ತದೆ. ಆ ಕೈ ಅಲ್ಲಿ ಇಲ್ಲದಿರುವುದನ್ನು ಅವರು ಕಾಣಬಹುದು; ಆದರೆ ದೇಹದ ನರಗಳಿಂದ ಬರುವ ಮಾಹಿತಿಯಿಂದ ಆ ಕೈ ಇನ್ನೂ ಅಲ್ಲೇ ಇದೆ ಎಂದು ಮಿದುಳಿನ ಭಾಗ ಅರ್ಥೈಸುತ್ತದೆ. ಇದು ಆ ಕೈ ಜೊತೆಗೆ ಅಲ್ಲಿಯ ನರಗಳನ್ನೂ ತೆಗೆದುಹಾಕಿದ್ದರೂ ಈ ಅನುಭವ ಆಗುತ್ತಲೇ ಇರುತ್ತದೆ. ದೇಹದಲ್ಲಿ ಒಂದು ಅಂಗ ಇರದೇ ಇದ್ದರೂ, ಒಬ್ಬ ವ್ಯಕ್ತಿಯ ದೇಹದಿಂದ ಇಲ್ಲದೇ ಇರುವ ಅಂಗವನ್ನು ಹೇಗೆ ಅನುಭವಿಸಬಹುದು ಎನ್ನುವುದಕ್ಕೆ ಇದೊಂದು ಉದಾಹರಣೆ.
ಕೈಗಳು, ಕಾಲುಗಳು ಹೀಗೆ ಗಂಡು ಮತ್ತು ಹೆಣ್ಣಿನ ದೇಹಗಳು ಬಹುತೇಕವಾಗಿ ಒಂದೇ ಬಗೆಯವಾಗಿರುತ್ತವೆ. ಜನನಾಂಗದ ಮತ್ತು ಎದೆಯ ಭಾಗಗಳು ಬೇರೆಯಾಗಿರುತ್ತವೆ. ಟ್ರಾನ್ಸ್‍ಜೆಂಡರ್ ವ್ಯಕ್ತಿಗಳ ಅನುಭವವನ್ನು ತಿಳಿಯುವ ಒಂದು ವಿಧಾನವೇನೆಂದರೆ, ನಮ್ಮ ದೇಹದಲ್ಲಿ ಇರದಿರುವ ಅಥವಾ ನಮ್ಮ ದೇಹದಲ್ಲಿದ್ದ ಅಂಗಕ್ಕಿಂತ ಬೇರೆಯದೇ ಆದ ಒಂದು ಅಂಗದ ಸಂವೇದನೆಯನ್ನು ನಮ್ಮ ಮಿದುಳು ಅಪೇಕ್ಷಿಸುವುದು. ಹಾಗಾಗಿ ಒಬ್ಬ ಟ್ರಾನ್ಸ್‍ಜೆಂಡರ್ ಮಹಿಳೆ ತನಗೆ ಇಲ್ಲದಿರುವ ಸ್ತನಗಳು ಇದ್ದಂತೆ ಭಾವಿಸಬಹುದು. ಹಾಗೂ ತಮ್ಮ ದೇಹದಲ್ಲಿರುವ ಒಂದು ಅಂಗದ ಗ್ರಹಿಕೆ ಮಿದುಳಿಗೆ ಇಲ್ಲದೇ ಇದ್ದಾಗ ತಮ್ಮ ಜನನಾಂಗವನ್ನು ನೋಡಿ ಆ ವ್ಯಕ್ತಿಗಳು ಗೊಂದಲಕ್ಕೊಳಗಾಗಬಹುದು. ಅದರಂತೆ ಟ್ರಾನ್ಸ್‍ಜೆಂಡರ್ ಪುರುಷರು ಎದೆಯ ಭಾಗದಲ್ಲಿ ಒಂದು ರೀತಿಯ ಭಾರವನ್ನು ಅನುಭವಿಸಿ ಗೊಂದಲಕ್ಕೊಳಗಾಗಬಹುದು, ಏಕೆಂದರೆ ಅವರ ಮಿದುಳು ಅದನ್ನು ಅಪೇಕ್ಷಿಸುವುದಿಲ್ಲ. ಅನೇಕ ಟ್ರಾನ್ಸ್‍ಜೆಂಡರ್ ಪುರುಷರು ಪುರುಷರಿಗಿರುವ ಜನನಾಂಗಗಳು ಇರುವಂತೇ ಅನುಭವವಕ್ಕೀಡಾಗಬಹುದು. ವ್ಯಕ್ತಿಗಳ ಅನುವಂಶಿಕ ವ್ಯತ್ಯಾಸದ (genetic variation) ಆಧಾರದ ಮೇಲೆ ದೇಹ ಮತ್ತು ಮಿದುಳುಗಳೆರಡೂ ಸ್ವಲ್ಪ ಮಟ್ಟಿಗೆ ವಿಭಿನ್ನವಾಗಿ ಬೆಳವಣಿಗೆಯಾಗಿ, ತಮ್ಮ ದೇಹದಿಂದ ಅವರ ಮಿದುಳು ಮತ್ತು ದೇಹದ ಅಪೇಕ್ಷೆಗಳು ಬೇರೆಬೇರೆಯಾಗುವುದನ್ನು ಡಿಸ್‍ಫೋರಿಯಾ ಎಂದು ಕರೆಯುತ್ತಾರೆ.
ಇದನ್ನು ತಿಳಿದುಕೊಳ್ಳಲು ಇದನ್ನು ಊಹಿಸಿ; ನಾಳೆ ಬೆಳಗ್ಗೆ ನೀವು ನಿದ್ರೆಯಿಂದ ಎದ್ದಾಗ, ನಿಮ್ಮ ಮಿದುಳು ಮತ್ತು ಮನೋಭಾವಗಳಲ್ಲಿ ಯಾವುದೇ ಬದಲಾವಣೆ ಆಗದೆ, ನಿಮ್ಮ ಭುಜದಿಂದ ಒಂದು ಹೆಚ್ಚಿನ ಕೈ ಉದ್ಭವಿಸಿದೆ ಎಂದುಕೊಳ್ಳಿ. ಈ ಹೊಸ ಕೈ ನಿಮ್ಮ ದೈನಂದಿನ ಚಟುವಟಿಕೆಗಳಿಗೆ ಅಡ್ಡಿ ಮಾಡುತ್ತಿಲ್ಲ ಎಂದು ಅಂದುಕೊಳ್ಳೊಣ. ಆದರೂ ಏನೋ ಕಿರಿಕಿರಿ ಅನುಭವಿಸುತ್ತೀರಿ, ಇರಬಾರದ್ದೇಕಿದೇ ಎನ್ನುವ ತೊಂದರೆ ಇರುತ್ತದೆ. ಈ ಅಂಗದಿಂದ ನಿಮಗೆ ಉಂಟಾಗುವ ಅಸೌಖ್ಯದ ಅನುಭವವು, ನಿಮ್ಮ ದೈನಂದಿನ ಚಟುವಟಿಕೆಗಳಿಗೆ ಈ ಹೊಸ ಅಂಗ ಎಷ್ಟು ಅಡ್ಡಿಪಡಿಸುತ್ತೆ ಎನ್ನುವುದರ ಜೊತೆಗೆ ನೀವು ಮುಂಚೆ ಮಾಡುತ್ತಿದ್ದ ದೈನಂದಿನ ಚಟುವಟಿಕೆಗಳನ್ನು ಹಾಗೆಯೇ ಮುಂದುವರೆಸಲು ಈ ಅಂಗದಿಂದ ಎಷ್ಟು ಅಡೆತಡೆ ಎದುರಾಗುತ್ತದೆ ಎಂಬುದನ್ನೂ ಸೇರಿ ಅವಲಂಬಿಸಿದೆ.
ಅದರ ಮೇಲೆ, ನೀವು ಎದುರಿಸುವ ಎಲ್ಲಾ ಜನರೂ ಆಶ್ಚರ್ಯ ಹಾಗೂ ಕೌತುಕದಿಂದ ಪ್ರತಿಕ್ರಿಯಿಸಿದಾಗ, ನಿಮ್ಮನ್ನು ಭೇಟಿಯಾಗುವ ಎಲ್ಲರೂ ನಿಮ್ಮ ಭುಜದಿಂದ ಈ ಕೈ ಏಕೆ ಉದ್ಭವಿಸಿದೆ ಎಂದು ಕೇಳಿದಾಗ, ನೀವು ಸಾರ್ವಜನಿಕ ಸಾರಿಗೆಯನ್ನು ಬಳಸಿದಲ್ಲಿ ನೂರಾರು ಜನರು ನಿಮ್ಮನ್ನು ನೋಡಿ ಆಶ್ಚರ್ಯ ಮತ್ತು ಕೌತುಕ ವ್ಯಕ್ತಪಡಿಸಿ, ತಮ್ಮಲ್ಲೇ ಮಾತನಾಡಿಕೊಳ್ಳುತ್ತ ನಿಮ್ಮನ್ನು ಗೇಲಿ ಮಾಡಿದಾಗ, ಇದೇನು ಎಂದು ಕೇಳಿದಾಗ, ಒಬ್ಬ ಟ್ರಾನ್ಸ್‍ಜೆಂಡರ್ ವ್ಯಕ್ತಿ ಯಾವ ಅನುಭವಗಳಿಂದ ಹಾದು ಹೋಗಬೇಕಾಗುತ್ತದೆ ಎನ್ನುವುದು ನಿಮಗೆ ಗೊತ್ತಾಗುತ್ತದೆ. ದೈಹಿಕ ಅಂಗವೈಕಲ್ಯತೆಯುಳ್ಳವರೂ ಇಂತಹ ಅನುಭವ ಹೊಂದಿರುತ್ತಾರೆ.
ಈಗ ಇನ್ನೊಂದು ಪ್ರಸಂಗವನ್ನು ಊಹಿಸಿ, ನೀವು ಬೆಳಗ್ಗೆ ಎದ್ದಾಗ, ನೀವು ಗಂಡಾಗಿದ್ದರೆ ನಿಮ್ಮ ದೇಹ ಹೆಣ್ಣಿನಂತೆ, ಹೆಣ್ಣಾಗಿದ್ದರೆ ಗಂಡಿನಂತೆ ಬದಲಾಗಿದೆ. ಜನರೊಂದಿಗೆ ವ್ಯವಹರಿಸುವಾಗ ಎಷ್ಟು ಬಾರಿ ಒಬ್ಬ ವ್ಯಕ್ತಿಯ ಜೆಂಡರ್ ಅನ್ನು ನೋಡಲಾಗುತ್ತದೆ ಹಾಗೂ ಎಷ್ಟು ಬಾರಿ ನಿಮ್ಮನ್ನು ನೋಡಿ ನಗಲಾಗುತ್ತದೆ, ಅಸಂಬದ್ಧ ಪ್ರಶ್ನೆಗಳನ್ನು ಕೇಳಲಾಗುತ್ತದೆ ಎನ್ನುವುದನ್ನು ಕಂಡುಕೊಳ್ಳಲು ಪ್ರಯತ್ನಿಸಿ. ಹಾಗೂ ನಿಮ್ಮ ಗುರುತು ಮುಂಚಿನಂತೆಯೇ ಇದ್ದು, ನಿಮ್ಮ ಉಡುಪೂ ಮುಂಚಿನಂತಿದ್ದು ಹಾಗೂ ನೀವು ಮುಂಚಿನಂತೇ ವರ್ತಿಸುತ್ತಿದ್ದೀರಿ, ಆದರೆ ನಿಮ್ಮ ದೇಹ ಬದಲಾಗಿದ್ದರೆ?
ಇನ್ನು ಕೊನೆಯ ಒಂದು ಪ್ರಯೋಗ: ನಿಮ್ಮ ಕಣ್ಣುಗಳನ್ನು ಮುಚ್ಚಿಕೊಂಡು ಒಬ್ಬ ವ್ಯಕ್ತಿಯನ್ನು ಊಹಿಸಿ, ಒಬ್ಬ ಡಾಕ್ಟರ್ ಅಂತಿಟ್ಟುಕೊಳ್ಳಿ, ಆ ವ್ಯಕ್ತಿಯ ಜೊತೆಗೆ ಮಾತನಾಡುತ್ತಿದ್ದೀರಿ ಎಂದು ಊಹಿಸಿ. ಈಗ ಕಣ್ಣು ಬಿಡಿ. ನಿಮಗೆ ಆ ಡಾಕ್ಟರ್‍ನ ಜೆಂಡರ್ ನೆನಪಿದೆಯೇ? ಗಂಡೋ, ಹೆಣ್ಣೋ, ಎರಡೂ ಅಲ್ಲವೋ? ನಾವು ಯಾವುದೇ ವ್ಯಕ್ತಿಯೊಂದಿಗೆ ವ್ಯವಹರಿಸುವುದನ್ನು ಊಹೆ ಮಾಡಿದಾಗ, ಮೊಟ್ಟಮೊದಲಿಗೆ ಆ ವ್ಯಕ್ತಿಯ ಜೆಂಡರ್ ಅನ್ನು ಊಹಿಸುತ್ತೇವೆ. ಇದಕ್ಕೆ ನಮ್ಮ ಭಾಷೆಗಳೂ ಸಹಕರಿಸುತ್ತವೆ. ಅಧಿಕಾಂಶ ಭಾಷೆಗಳ ಸರ್ವನಾಮಗಳು ಒಬ್ಬ ವ್ಯಕ್ತಿಯ ಜೆಂಡರ್ ಅನ್ನು ಸೂಚಿಸುತ್ತವೆ (ಬಂಗಾಳಿ ಭಾಷೆ ಹೊರತುಪಡಿಸಿ). ಹಾಗಾಗಿ ಒಬ್ಬ ವ್ಯಕ್ತಿಯೊಂದಿಗೆ ವ್ಯವಹರಿಸುವುದನ್ನು ನಾವು ಊಹೆ ಮಾಡಿದಾಗ, ಆ ವ್ಯಕ್ತಿಯ ವರ್ಗ, ಜಾತಿ, ಧರ್ಮ ಇತ್ಯಾದಿಗಳಿಗಿಂತ ಮುಂಚೆ ಮೂಲಭೂತವಾಗಿ ಆ ವ್ಯಕ್ತಿಯ ಜೆಂಡರ್ ಅನ್ನು ಊಹಿಸಿಕೊಂಡಿರುತ್ತೇವೆ. ನೀವು ಮೊದಲ ಬಾರಿಗೆ ಯಾರನ್ನಾದರೂ ಭೇಟಿಯಾದಾಗ ಮೊದಲು ಅವರ ಜೆಂಡರ್ ಅನ್ನು ಗುರುತಿಸಿ ಅವರನ್ನು ಸಂಬೋಧಿಸಲು ಯಾವ ಭಾಷೆಯನ್ನು ಬಳಸಬೇಕು ಎನ್ನುವುದನ್ನು ಖಚಿತಪಡಿಸಿಕೊಳ್ಳುತ್ತೀರಿ. ಒಬ್ಬ ವ್ಯಕ್ತಿಯ ದೇಹರಚನೆ ಸಾಮಾಜಿಕವಾಗಿ ಗುರುತಿಸಿಕೊಂಡ ಗಂಡು ಅಥವಾ ಹೆಣ್ಣಿನಂತೆ ಇಲ್ಲದಿದ್ದಾಗ ಗಂಭೀರ ಸಮಸ್ಯೆ ಎದುರಾಗುತ್ತದೆ. ಅನೇಕ ಸಲ ಆ ವ್ಯಕ್ತಿಯನ್ನು ಇನ್ನಷ್ಟು ಸೂಕ್ಷ್ಮವಾಗಿ, ಉಡುಪಿನ ಒಳಗೆ ಎಂತಹ ದೇಹ ಇರಬಹುದು ಎಂದು ನೋಡಲಾಗುತ್ತದೆ. ಆಗ ಟ್ರಾನ್ಸ್‍ಜೆಂಡರ್ ವ್ಯಕ್ತಿಗಳಿಗೆ ತಮ್ಮ ದೇಹದ ಜೊತೆಗೆ ಇರುವ ಮುಜುಗರ ಇನ್ನಷ್ಟು ಉಲ್ಬಣಗೊಳ್ಳುತ್ತದೆ. ತಾನು ಯಾವ ಜೆಂಡರ್‍ನೊಂದಿಗೆ ಗುರುತಿಸಿಕೊಳ್ಳಲು ಇಚ್ಛಿಸುತ್ತಾರೋ ಆ ಜೆಂಡರ್ ಬದಲಾಗಿ ಬೇರೆ ಜೆಂಡರ್‍ನೊಂದಿಗೆ ಜನರು ಆ ವ್ಯಕ್ತಿಯನ್ನು ಗುರುತಿಸಿದಾಗ ಟ್ರಾನ್ಸ್‍ಜೆಂಡರ್ ವ್ಯಕ್ತಿಗಳು ಖಿನ್ನತೆಗೆ ಒಳಗಾಗಬಹುದು. ಇದು ಡಿಸ್‍ಫೋರಿಯಾದ ಸಾಮಾಜಿಕ ಅಂಶ.
ಹಾಗಾಗಿ ಜೆಂಡರ್ ಅನ್ನು ನೋಡುವ ರೀತಿಯಲ್ಲಿ ಬದಲಾವಣೆ ಮಾಡುತ್ತ, ಸಾಮಾಜಿಕ ಡಿಸ್‍ಫೋರಿಯಾವನ್ನು ಕಡಿಮೆ ಮಾಡಲು ನಮ್ಮ ಸಮಾಜದಲ್ಲಿ ಅನೇಕ ಅವಕಾಶಗಳಿವೆ. ಸಮಾಜವು ಜೆಂಡರ್‍ಗಳ ಮೇಲೆ ಹೇರಿದ ನಿರೀಕ್ಷೆಗಳನ್ನು ಕೆಲವರು ಪೂರ್ಣಗೊಳಿಸುತ್ತಾರೋ ಇಲ್ಲವೋ ಎನ್ನುವುದರ ಆಧಾರದ ಮೇಲೆ ಗೇಲಿ ಮಾಡುವುದನ್ನು ಬಿಡಬೇಕಿದೆ. ಸಮಾಜವು ಇಂತಹ ಅಪಹಾಸ್ಯ ಮಾಡುವುದನ್ನು ಬಿಟ್ಟರೆ ಟ್ರಾನ್ಸ್‍ಜೆಂಡರ್ ವ್ಯಕ್ತಿಗಳು ಹಾಗೂ ಸಿಸ್‍ಜೆಂಡರ್ ವ್ಯಕ್ತಿಗಳೂ ಕೂಡ ಮುಕ್ತವಾಗಿ ಸಂಚರಿಸಬಹುದು ಮತ್ತು ಜಗತ್ತನ್ನು ಸಾವಧಾನವಾಗಿ ಅನುಭವಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...