Homeಸಾಮಾಜಿಕಒಮ್ಮೆ ಕಣ್ಣು ಮುಚ್ಚಿ ಹೀಗೆ ಕಲ್ಪಿಸಿಕೊಳ್ಳಿ. ನಿಧಾನಕ್ಕೆ ಇದೇನೆಂದು ಅರ್ಥವಾಗಬಹುದು

ಒಮ್ಮೆ ಕಣ್ಣು ಮುಚ್ಚಿ ಹೀಗೆ ಕಲ್ಪಿಸಿಕೊಳ್ಳಿ. ನಿಧಾನಕ್ಕೆ ಇದೇನೆಂದು ಅರ್ಥವಾಗಬಹುದು

- Advertisement -
- Advertisement -

 ಡಾ. ಕಾರ್ತಿಕ್ ಬಿಟ್ಟು
ಕನ್ನಡಕ್ಕೆ: ರಾಜಶೇಖರ ಅಕ್ಕಿ |

ನಿಮ್ಮ ಕಣ್ಣುಗಳನ್ನು ಮುಚ್ಚಿಕೊಳ್ಳಿ, ಅದರೊಂದಿಗೆ ನಿಮ್ಮ ಕೈಗಳನ್ನು ಮೇಲೆತ್ತಿ. ನೀವು ಏನು ಮಾಡುತ್ತಿದ್ದೀರಿ ಎಂದು ನಿಮಗೆ ಕಾಣಿಸದಿದ್ದರೂ ನೀವು ನಿಮ್ ಕೈಗಳನ್ನು ಮೇಲಕ್ಕೆತ್ತಿದ್ದು ನಿಮಗೆ ಖಂಡಿತವಾಗಿಯೂ ಅನುಭವವಾಗುತ್ತದೆ. ನಿಮ್ಮ ಕೈಗಳು ಎಲ್ಲಿವೆ ಎನ್ನುವುದು ನಿಮಗೆ ತಿಳಿಯುತ್ತದೆ. ಹೀಗೇಕೆ ಎಂದರೆ, ನಮ್ಮ ಮಿದುಳು ದೇಹದ ಅಂಗಗಳ ಆಂತರಿಕ ಸ್ಪರ್ಶವನ್ನು ಗ್ರಹಿಸಿ, ಯಾವ ಅಂಗ ಎಲ್ಲಿದೆ ಎನ್ನುವುದನ್ನು ತಿಳಿದುಕೊಳ್ಳುವಲ್ಲಿ ಸಶಕ್ತವಾಗಿದೆ.
ಯಾವುದಾದರೊಂದು ಅಪಘಾತಕ್ಕೀಡಾಗಿ ತಮ್ಮ ಕೈಯನ್ನು ಕಳೆದುಕೊಂಡ ವ್ಯಕ್ತಿಗಳಿಗೆ ಈಗ ಇಲ್ಲದಿರುವ ಆ ಕೈ ಇನ್ನೂ ಅಲ್ಲಿಯೇ ಇದೆ ಎನ್ನುವ ಅನುಭವ ಆಗುತ್ತಿರುತ್ತದೆ. ಆ ಕೈ ಅಲ್ಲಿ ಇಲ್ಲದಿರುವುದನ್ನು ಅವರು ಕಾಣಬಹುದು; ಆದರೆ ದೇಹದ ನರಗಳಿಂದ ಬರುವ ಮಾಹಿತಿಯಿಂದ ಆ ಕೈ ಇನ್ನೂ ಅಲ್ಲೇ ಇದೆ ಎಂದು ಮಿದುಳಿನ ಭಾಗ ಅರ್ಥೈಸುತ್ತದೆ. ಇದು ಆ ಕೈ ಜೊತೆಗೆ ಅಲ್ಲಿಯ ನರಗಳನ್ನೂ ತೆಗೆದುಹಾಕಿದ್ದರೂ ಈ ಅನುಭವ ಆಗುತ್ತಲೇ ಇರುತ್ತದೆ. ದೇಹದಲ್ಲಿ ಒಂದು ಅಂಗ ಇರದೇ ಇದ್ದರೂ, ಒಬ್ಬ ವ್ಯಕ್ತಿಯ ದೇಹದಿಂದ ಇಲ್ಲದೇ ಇರುವ ಅಂಗವನ್ನು ಹೇಗೆ ಅನುಭವಿಸಬಹುದು ಎನ್ನುವುದಕ್ಕೆ ಇದೊಂದು ಉದಾಹರಣೆ.
ಕೈಗಳು, ಕಾಲುಗಳು ಹೀಗೆ ಗಂಡು ಮತ್ತು ಹೆಣ್ಣಿನ ದೇಹಗಳು ಬಹುತೇಕವಾಗಿ ಒಂದೇ ಬಗೆಯವಾಗಿರುತ್ತವೆ. ಜನನಾಂಗದ ಮತ್ತು ಎದೆಯ ಭಾಗಗಳು ಬೇರೆಯಾಗಿರುತ್ತವೆ. ಟ್ರಾನ್ಸ್‍ಜೆಂಡರ್ ವ್ಯಕ್ತಿಗಳ ಅನುಭವವನ್ನು ತಿಳಿಯುವ ಒಂದು ವಿಧಾನವೇನೆಂದರೆ, ನಮ್ಮ ದೇಹದಲ್ಲಿ ಇರದಿರುವ ಅಥವಾ ನಮ್ಮ ದೇಹದಲ್ಲಿದ್ದ ಅಂಗಕ್ಕಿಂತ ಬೇರೆಯದೇ ಆದ ಒಂದು ಅಂಗದ ಸಂವೇದನೆಯನ್ನು ನಮ್ಮ ಮಿದುಳು ಅಪೇಕ್ಷಿಸುವುದು. ಹಾಗಾಗಿ ಒಬ್ಬ ಟ್ರಾನ್ಸ್‍ಜೆಂಡರ್ ಮಹಿಳೆ ತನಗೆ ಇಲ್ಲದಿರುವ ಸ್ತನಗಳು ಇದ್ದಂತೆ ಭಾವಿಸಬಹುದು. ಹಾಗೂ ತಮ್ಮ ದೇಹದಲ್ಲಿರುವ ಒಂದು ಅಂಗದ ಗ್ರಹಿಕೆ ಮಿದುಳಿಗೆ ಇಲ್ಲದೇ ಇದ್ದಾಗ ತಮ್ಮ ಜನನಾಂಗವನ್ನು ನೋಡಿ ಆ ವ್ಯಕ್ತಿಗಳು ಗೊಂದಲಕ್ಕೊಳಗಾಗಬಹುದು. ಅದರಂತೆ ಟ್ರಾನ್ಸ್‍ಜೆಂಡರ್ ಪುರುಷರು ಎದೆಯ ಭಾಗದಲ್ಲಿ ಒಂದು ರೀತಿಯ ಭಾರವನ್ನು ಅನುಭವಿಸಿ ಗೊಂದಲಕ್ಕೊಳಗಾಗಬಹುದು, ಏಕೆಂದರೆ ಅವರ ಮಿದುಳು ಅದನ್ನು ಅಪೇಕ್ಷಿಸುವುದಿಲ್ಲ. ಅನೇಕ ಟ್ರಾನ್ಸ್‍ಜೆಂಡರ್ ಪುರುಷರು ಪುರುಷರಿಗಿರುವ ಜನನಾಂಗಗಳು ಇರುವಂತೇ ಅನುಭವವಕ್ಕೀಡಾಗಬಹುದು. ವ್ಯಕ್ತಿಗಳ ಅನುವಂಶಿಕ ವ್ಯತ್ಯಾಸದ (genetic variation) ಆಧಾರದ ಮೇಲೆ ದೇಹ ಮತ್ತು ಮಿದುಳುಗಳೆರಡೂ ಸ್ವಲ್ಪ ಮಟ್ಟಿಗೆ ವಿಭಿನ್ನವಾಗಿ ಬೆಳವಣಿಗೆಯಾಗಿ, ತಮ್ಮ ದೇಹದಿಂದ ಅವರ ಮಿದುಳು ಮತ್ತು ದೇಹದ ಅಪೇಕ್ಷೆಗಳು ಬೇರೆಬೇರೆಯಾಗುವುದನ್ನು ಡಿಸ್‍ಫೋರಿಯಾ ಎಂದು ಕರೆಯುತ್ತಾರೆ.
ಇದನ್ನು ತಿಳಿದುಕೊಳ್ಳಲು ಇದನ್ನು ಊಹಿಸಿ; ನಾಳೆ ಬೆಳಗ್ಗೆ ನೀವು ನಿದ್ರೆಯಿಂದ ಎದ್ದಾಗ, ನಿಮ್ಮ ಮಿದುಳು ಮತ್ತು ಮನೋಭಾವಗಳಲ್ಲಿ ಯಾವುದೇ ಬದಲಾವಣೆ ಆಗದೆ, ನಿಮ್ಮ ಭುಜದಿಂದ ಒಂದು ಹೆಚ್ಚಿನ ಕೈ ಉದ್ಭವಿಸಿದೆ ಎಂದುಕೊಳ್ಳಿ. ಈ ಹೊಸ ಕೈ ನಿಮ್ಮ ದೈನಂದಿನ ಚಟುವಟಿಕೆಗಳಿಗೆ ಅಡ್ಡಿ ಮಾಡುತ್ತಿಲ್ಲ ಎಂದು ಅಂದುಕೊಳ್ಳೊಣ. ಆದರೂ ಏನೋ ಕಿರಿಕಿರಿ ಅನುಭವಿಸುತ್ತೀರಿ, ಇರಬಾರದ್ದೇಕಿದೇ ಎನ್ನುವ ತೊಂದರೆ ಇರುತ್ತದೆ. ಈ ಅಂಗದಿಂದ ನಿಮಗೆ ಉಂಟಾಗುವ ಅಸೌಖ್ಯದ ಅನುಭವವು, ನಿಮ್ಮ ದೈನಂದಿನ ಚಟುವಟಿಕೆಗಳಿಗೆ ಈ ಹೊಸ ಅಂಗ ಎಷ್ಟು ಅಡ್ಡಿಪಡಿಸುತ್ತೆ ಎನ್ನುವುದರ ಜೊತೆಗೆ ನೀವು ಮುಂಚೆ ಮಾಡುತ್ತಿದ್ದ ದೈನಂದಿನ ಚಟುವಟಿಕೆಗಳನ್ನು ಹಾಗೆಯೇ ಮುಂದುವರೆಸಲು ಈ ಅಂಗದಿಂದ ಎಷ್ಟು ಅಡೆತಡೆ ಎದುರಾಗುತ್ತದೆ ಎಂಬುದನ್ನೂ ಸೇರಿ ಅವಲಂಬಿಸಿದೆ.
ಅದರ ಮೇಲೆ, ನೀವು ಎದುರಿಸುವ ಎಲ್ಲಾ ಜನರೂ ಆಶ್ಚರ್ಯ ಹಾಗೂ ಕೌತುಕದಿಂದ ಪ್ರತಿಕ್ರಿಯಿಸಿದಾಗ, ನಿಮ್ಮನ್ನು ಭೇಟಿಯಾಗುವ ಎಲ್ಲರೂ ನಿಮ್ಮ ಭುಜದಿಂದ ಈ ಕೈ ಏಕೆ ಉದ್ಭವಿಸಿದೆ ಎಂದು ಕೇಳಿದಾಗ, ನೀವು ಸಾರ್ವಜನಿಕ ಸಾರಿಗೆಯನ್ನು ಬಳಸಿದಲ್ಲಿ ನೂರಾರು ಜನರು ನಿಮ್ಮನ್ನು ನೋಡಿ ಆಶ್ಚರ್ಯ ಮತ್ತು ಕೌತುಕ ವ್ಯಕ್ತಪಡಿಸಿ, ತಮ್ಮಲ್ಲೇ ಮಾತನಾಡಿಕೊಳ್ಳುತ್ತ ನಿಮ್ಮನ್ನು ಗೇಲಿ ಮಾಡಿದಾಗ, ಇದೇನು ಎಂದು ಕೇಳಿದಾಗ, ಒಬ್ಬ ಟ್ರಾನ್ಸ್‍ಜೆಂಡರ್ ವ್ಯಕ್ತಿ ಯಾವ ಅನುಭವಗಳಿಂದ ಹಾದು ಹೋಗಬೇಕಾಗುತ್ತದೆ ಎನ್ನುವುದು ನಿಮಗೆ ಗೊತ್ತಾಗುತ್ತದೆ. ದೈಹಿಕ ಅಂಗವೈಕಲ್ಯತೆಯುಳ್ಳವರೂ ಇಂತಹ ಅನುಭವ ಹೊಂದಿರುತ್ತಾರೆ.
ಈಗ ಇನ್ನೊಂದು ಪ್ರಸಂಗವನ್ನು ಊಹಿಸಿ, ನೀವು ಬೆಳಗ್ಗೆ ಎದ್ದಾಗ, ನೀವು ಗಂಡಾಗಿದ್ದರೆ ನಿಮ್ಮ ದೇಹ ಹೆಣ್ಣಿನಂತೆ, ಹೆಣ್ಣಾಗಿದ್ದರೆ ಗಂಡಿನಂತೆ ಬದಲಾಗಿದೆ. ಜನರೊಂದಿಗೆ ವ್ಯವಹರಿಸುವಾಗ ಎಷ್ಟು ಬಾರಿ ಒಬ್ಬ ವ್ಯಕ್ತಿಯ ಜೆಂಡರ್ ಅನ್ನು ನೋಡಲಾಗುತ್ತದೆ ಹಾಗೂ ಎಷ್ಟು ಬಾರಿ ನಿಮ್ಮನ್ನು ನೋಡಿ ನಗಲಾಗುತ್ತದೆ, ಅಸಂಬದ್ಧ ಪ್ರಶ್ನೆಗಳನ್ನು ಕೇಳಲಾಗುತ್ತದೆ ಎನ್ನುವುದನ್ನು ಕಂಡುಕೊಳ್ಳಲು ಪ್ರಯತ್ನಿಸಿ. ಹಾಗೂ ನಿಮ್ಮ ಗುರುತು ಮುಂಚಿನಂತೆಯೇ ಇದ್ದು, ನಿಮ್ಮ ಉಡುಪೂ ಮುಂಚಿನಂತಿದ್ದು ಹಾಗೂ ನೀವು ಮುಂಚಿನಂತೇ ವರ್ತಿಸುತ್ತಿದ್ದೀರಿ, ಆದರೆ ನಿಮ್ಮ ದೇಹ ಬದಲಾಗಿದ್ದರೆ?
ಇನ್ನು ಕೊನೆಯ ಒಂದು ಪ್ರಯೋಗ: ನಿಮ್ಮ ಕಣ್ಣುಗಳನ್ನು ಮುಚ್ಚಿಕೊಂಡು ಒಬ್ಬ ವ್ಯಕ್ತಿಯನ್ನು ಊಹಿಸಿ, ಒಬ್ಬ ಡಾಕ್ಟರ್ ಅಂತಿಟ್ಟುಕೊಳ್ಳಿ, ಆ ವ್ಯಕ್ತಿಯ ಜೊತೆಗೆ ಮಾತನಾಡುತ್ತಿದ್ದೀರಿ ಎಂದು ಊಹಿಸಿ. ಈಗ ಕಣ್ಣು ಬಿಡಿ. ನಿಮಗೆ ಆ ಡಾಕ್ಟರ್‍ನ ಜೆಂಡರ್ ನೆನಪಿದೆಯೇ? ಗಂಡೋ, ಹೆಣ್ಣೋ, ಎರಡೂ ಅಲ್ಲವೋ? ನಾವು ಯಾವುದೇ ವ್ಯಕ್ತಿಯೊಂದಿಗೆ ವ್ಯವಹರಿಸುವುದನ್ನು ಊಹೆ ಮಾಡಿದಾಗ, ಮೊಟ್ಟಮೊದಲಿಗೆ ಆ ವ್ಯಕ್ತಿಯ ಜೆಂಡರ್ ಅನ್ನು ಊಹಿಸುತ್ತೇವೆ. ಇದಕ್ಕೆ ನಮ್ಮ ಭಾಷೆಗಳೂ ಸಹಕರಿಸುತ್ತವೆ. ಅಧಿಕಾಂಶ ಭಾಷೆಗಳ ಸರ್ವನಾಮಗಳು ಒಬ್ಬ ವ್ಯಕ್ತಿಯ ಜೆಂಡರ್ ಅನ್ನು ಸೂಚಿಸುತ್ತವೆ (ಬಂಗಾಳಿ ಭಾಷೆ ಹೊರತುಪಡಿಸಿ). ಹಾಗಾಗಿ ಒಬ್ಬ ವ್ಯಕ್ತಿಯೊಂದಿಗೆ ವ್ಯವಹರಿಸುವುದನ್ನು ನಾವು ಊಹೆ ಮಾಡಿದಾಗ, ಆ ವ್ಯಕ್ತಿಯ ವರ್ಗ, ಜಾತಿ, ಧರ್ಮ ಇತ್ಯಾದಿಗಳಿಗಿಂತ ಮುಂಚೆ ಮೂಲಭೂತವಾಗಿ ಆ ವ್ಯಕ್ತಿಯ ಜೆಂಡರ್ ಅನ್ನು ಊಹಿಸಿಕೊಂಡಿರುತ್ತೇವೆ. ನೀವು ಮೊದಲ ಬಾರಿಗೆ ಯಾರನ್ನಾದರೂ ಭೇಟಿಯಾದಾಗ ಮೊದಲು ಅವರ ಜೆಂಡರ್ ಅನ್ನು ಗುರುತಿಸಿ ಅವರನ್ನು ಸಂಬೋಧಿಸಲು ಯಾವ ಭಾಷೆಯನ್ನು ಬಳಸಬೇಕು ಎನ್ನುವುದನ್ನು ಖಚಿತಪಡಿಸಿಕೊಳ್ಳುತ್ತೀರಿ. ಒಬ್ಬ ವ್ಯಕ್ತಿಯ ದೇಹರಚನೆ ಸಾಮಾಜಿಕವಾಗಿ ಗುರುತಿಸಿಕೊಂಡ ಗಂಡು ಅಥವಾ ಹೆಣ್ಣಿನಂತೆ ಇಲ್ಲದಿದ್ದಾಗ ಗಂಭೀರ ಸಮಸ್ಯೆ ಎದುರಾಗುತ್ತದೆ. ಅನೇಕ ಸಲ ಆ ವ್ಯಕ್ತಿಯನ್ನು ಇನ್ನಷ್ಟು ಸೂಕ್ಷ್ಮವಾಗಿ, ಉಡುಪಿನ ಒಳಗೆ ಎಂತಹ ದೇಹ ಇರಬಹುದು ಎಂದು ನೋಡಲಾಗುತ್ತದೆ. ಆಗ ಟ್ರಾನ್ಸ್‍ಜೆಂಡರ್ ವ್ಯಕ್ತಿಗಳಿಗೆ ತಮ್ಮ ದೇಹದ ಜೊತೆಗೆ ಇರುವ ಮುಜುಗರ ಇನ್ನಷ್ಟು ಉಲ್ಬಣಗೊಳ್ಳುತ್ತದೆ. ತಾನು ಯಾವ ಜೆಂಡರ್‍ನೊಂದಿಗೆ ಗುರುತಿಸಿಕೊಳ್ಳಲು ಇಚ್ಛಿಸುತ್ತಾರೋ ಆ ಜೆಂಡರ್ ಬದಲಾಗಿ ಬೇರೆ ಜೆಂಡರ್‍ನೊಂದಿಗೆ ಜನರು ಆ ವ್ಯಕ್ತಿಯನ್ನು ಗುರುತಿಸಿದಾಗ ಟ್ರಾನ್ಸ್‍ಜೆಂಡರ್ ವ್ಯಕ್ತಿಗಳು ಖಿನ್ನತೆಗೆ ಒಳಗಾಗಬಹುದು. ಇದು ಡಿಸ್‍ಫೋರಿಯಾದ ಸಾಮಾಜಿಕ ಅಂಶ.
ಹಾಗಾಗಿ ಜೆಂಡರ್ ಅನ್ನು ನೋಡುವ ರೀತಿಯಲ್ಲಿ ಬದಲಾವಣೆ ಮಾಡುತ್ತ, ಸಾಮಾಜಿಕ ಡಿಸ್‍ಫೋರಿಯಾವನ್ನು ಕಡಿಮೆ ಮಾಡಲು ನಮ್ಮ ಸಮಾಜದಲ್ಲಿ ಅನೇಕ ಅವಕಾಶಗಳಿವೆ. ಸಮಾಜವು ಜೆಂಡರ್‍ಗಳ ಮೇಲೆ ಹೇರಿದ ನಿರೀಕ್ಷೆಗಳನ್ನು ಕೆಲವರು ಪೂರ್ಣಗೊಳಿಸುತ್ತಾರೋ ಇಲ್ಲವೋ ಎನ್ನುವುದರ ಆಧಾರದ ಮೇಲೆ ಗೇಲಿ ಮಾಡುವುದನ್ನು ಬಿಡಬೇಕಿದೆ. ಸಮಾಜವು ಇಂತಹ ಅಪಹಾಸ್ಯ ಮಾಡುವುದನ್ನು ಬಿಟ್ಟರೆ ಟ್ರಾನ್ಸ್‍ಜೆಂಡರ್ ವ್ಯಕ್ತಿಗಳು ಹಾಗೂ ಸಿಸ್‍ಜೆಂಡರ್ ವ್ಯಕ್ತಿಗಳೂ ಕೂಡ ಮುಕ್ತವಾಗಿ ಸಂಚರಿಸಬಹುದು ಮತ್ತು ಜಗತ್ತನ್ನು ಸಾವಧಾನವಾಗಿ ಅನುಭವಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...