Homeಚಳವಳಿಓ ಸರ್ಕಾರವೇ, ಇತ್ತ ಗಮನ ಕೊಡು

ಓ ಸರ್ಕಾರವೇ, ಇತ್ತ ಗಮನ ಕೊಡು

- Advertisement -
ನೂರ್ ಶ್ರೀಧರ್  |
ಫಲಿತಾಂಶ ಹೊರಬಿದ್ದಿದೆ. ಮತಾಂಧ ಶಕ್ತಿಗಳು ಮೊದಲ ಸ್ಥಾನದಲ್ಲಿ ಬಂದು ನಿಂತಿವೆ. ‘ಜಾತ್ಯತೀತ’ ಎಂದು ಕರೆದುಕೊಳ್ಳುವ ಮಿಶ್ರ ಸರ್ಕಾರದ ರಚನೆಯ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಲೋಕಸಭಾ ಚುನಾವಣೆಗಳು ಕೂಗಳತೆಯ ದೂರದಲ್ಲಿವೆ.  ಕಳೆದ 4 ವರ್ಷಗಳಲ್ಲಿ ಬಿಜೆಪಿ ಪಕ್ಷ ಕೇಂದ್ರ ಸರ್ಕಾರದ ಮೂಲಕ ನೀಡಿರುವ ಆಳ್ವಿಕೆ ಮತ್ತು 2009 – 2013ರ ಅವಧಿಯ ಅದರ ಕರ್ನಾಟಕ ಆಳ್ವಿಕೆ ಭಾರತದ ಇತಿಹಾಸದಲ್ಲೇ ಅತ್ಯಂತ ಜನವಿರೋಧಿ ಆಳ್ವಿಕೆಗಳಾಗಿವೆ. ನಾಡಿನ ಸಂಪತ್ತನ್ನು ಬಾಚಲು ಗಣಿದಣಿಗಳಿಗೆ ನೆರವಾಗುವ, ಜನ ಸಾಮಾನ್ಯರ ದುಡಿಮೆಯ ಫಲವನ್ನು ದೋಚಲು ಕಾರ್ಪೋರೇಟ್ ಶಕ್ತಿಗಳಿಗೆ ರತ್ನಗಂಬಳಿ ಹಾಕಿಕೊಟ್ಟಿದೆ. ಇದಕ್ಕೆ ಅನೇಕ ಉದಾಹರಣೆಗಳನ್ನು ನೀಡಬಹುದು. ಆರ್ಥಿಕ ನೀತಿಗಳಲ್ಲಿ ಒಂದಷ್ಟು ಸಾಮ್ಯತೆಗಳಿದ್ದರೂ ಕಾಂಗ್ರೆಸ್ ಜನಸಾಮಾನ್ಯರ ವಿಚಾರದಲ್ಲಿ ಒಂದಷ್ಟು ಮೃದು ಧೋರಣೆಯನ್ನು ಅಳವಡಿಸಿದೆ ಹಾಗೂ ಒಂದಿಷ್ಟು ಸಮಾಜ ಕಲ್ಯಾಣದ ಯೋಜನೆಗಳನ್ನು ಜಾರಿಗೆ ತಂದಿದೆ. ವಾಸ್ತವ ಹೀಗಿದ್ದರೂ ಕಾಂಗ್ರೆಸ್ ಪಕ್ಷವನ್ನು ಭ್ರಷ್ಟ, ಜಾತಿವಾದಿ, ಸ್ವಜನ ಪಕ್ಷಪಾತಿ ಪಕ್ಷ ಎಂಬಂತೆ ಬಿಂಬಿಸಲು ಮಾಧ್ಯಮಗಳು ಪೈಪೋಟಿ ನಡೆಸಿವೆ. ಅದೇ ಸಂದರ್ಭದಲ್ಲಿ ಬಿಜೆಪಿ ಅಭಿವೃದ್ಧಿಪರ, ದೇಶಪರ, ಹಿಂದುಪರ ಪಕ್ಷದಂತೆಯೂ ಸುಳ್ಳನ್ನು ಸತ್ಯವೆಂಬಂತೆ ನಂಬಿಸುವ ಸಂಘ ಪರಿವಾರದ ಪ್ರಚಾರಕ್ಕೆ ಮಾಧ್ಯಮಗಳೂ ದೊಡ್ಡ ದನಿಯ ಪ್ರಚಾರ ಕೊಟ್ಟಿವೆ. ವಾಸ್ತವಾಂಶಗಳನ್ನು ಜನರಿಗೆ ತಲುಪಿಸುವುದರಲ್ಲಿ ಕಾಂಗ್ರೆಸ್‍ನ ವೈಫಲ್ಯ ಕೂಡ ಎದ್ದು ಕಾಣುತ್ತಿದೆ.
ಹೊಸ ಸರ್ಕಾರ ರಚಿಸುವುದರಲ್ಲಿ ನಾಟಕೀಯ ರಾಜಕೀಯ ಬೆಳವಣಿಗೆಗಳು ನಡೆದಿವೆ. ಬಿಜೆಪಿ ಎಲ್ಲ ಸಂವಿಧಾನಿಕ ಸಂಸ್ಥೆಗಳನ್ನು, ಹುದ್ದೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಅಂತೂ ಯಾವುದೋ ಒಂದು ಸರ್ಕಾರ ಬರಲಿದೆ. ಯಾವುದೇ ಸರ್ಕಾರ ಬಂದರೂ ರಾಜ್ಯದ ಜನತೆಯ ಹಿತಾಸಕ್ತಿಯ ದೃಷ್ಟಿಯಿಂದ ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳಬೇಕಾದ ಪ್ರಮುಖ ಅಂಶಗಳು ಯಾವುವು ಎಂಬುದು ನಮ್ಮ ಮುಂದಿರುವ ಪ್ರಶ್ನೆ.
1. ಕೃಷಿ ಬಿಕ್ಕಟ್ಟಿಗೆ ಪರಿಹಾರವನ್ನು ಹುಡುಕುವ ಪ್ರಾಮಾಣಿಕ ಪ್ರಯತ್ನವಾಗಬೇಕು. ಕೃಷಿ ಬಿಕ್ಕಟ್ಟು ಪರಿಹಾರವಾಗಬೇಕಾದರೆ ಕೃಷಿ ವೆಚ್ಚ ಕಡಿಮೆಯಾಗಬೇಕು, ಕೃಷಿ ಆದಾಯ ನಿಶ್ಚಿತಗೊಳ್ಳಬೇಕು. ಕೃಷಿ ವೆಚ್ಚ ತಗ್ಗಿಸಬೇಕಾದರೆ ಸಹಕಾರಿ ಹಾಗೂ ಸಹಜ ಕೃಷಿಯನ್ನು ಉತ್ತೇಜಿಸಲು ವಿಶೇಷ ಪ್ಯಾಕೇಜನ್ನು ಜಾರಿಗೆ ತರಬೇಕು. ಅಲ್ಲದೆ ಬೀಜ, ಗೊಬ್ಬರ, ರಾಸಾಯನಿಕ ಇತ್ಯಾದಿ ಒಳಸುರಿಗಳ ಮೇಲಿನ, ಕೃಷಿ ಯಂತ್ರೋಪಕರಣಗಳ ಮೇಲಿನ ಹಾಗೂ ಕೃಷಿ ಮಾರುಕಟ್ಟೆ ಮೇಲಿನ ಕಾರ್ಪೋರೇಟ್ – ದಲ್ಲಾಳಿ ಹಿಡಿತ ತಪ್ಪಿ ಬೆಲೆಗಳು ನಿಯಂತ್ರಣಕ್ಕೆ ಬರಬೇಕು. ಜೊತೆಗೆ ಇದುವರೆತನಕ ಸರ್ಕಾರಗಳು ಅಳವಡಿಸಿದ ರೈತ ವಿರೋಧಿ – ಕಾರ್ಪೋರೇಟ್ ಪರ ನೀತಿಗಳಿಂದಾಗಿ ರೈತರಿಗೆ ಆಗಿರುವ ನಷ್ಟವನ್ನು ಸಂಪೂರ್ಣ ಸಾಲ ಮನ್ನಾದ ರೂಪದಲ್ಲಾದರೂ ತುಂಬಿಕೊಡಬೇಕು.
2. ಓದಿದರೂ ಉದ್ಯೋಗವಿಲ್ಲದ ಕಡೆ ಸಾಗುತ್ತಿರುವ ಅಂಧಕಾರಿ ಭವಿಷ್ಯದಲ್ಲಿ ದೀಪ ಬೆಳಗುವಂತೆ ಮಾಡಬೇಕು. ಉದ್ಯೋಗ ಸೃಷ್ಟಿ ಸರ್ಕಾರದ ಎರಡನೇ ಪರಮೋಚ್ಛ ಕರ್ತವ್ಯವಾಗಬೇಕು. “ಉದ್ಯೋಗಕ್ಕಾಗಿ ಯುವಜನರು” ಮುಂದಿಟ್ಟ ಯುವ ಪ್ರಣಾಳಿಕೆ ಸೂಚಿಸುವ ರೀತಿಯಲ್ಲಿ “ಉದ್ಯೋಗ ಆಯೋಗ”ವೊಂದನ್ನು ರಚಿಸಬೇಕು. ಅದರ ಶಿಫಾರಸುಗಳನ್ನು ವಿಧಾನ ಸಭೆಯಲ್ಲಿ ಪರಿಗಣನೆಗೆ ತೆಗೆದುಕೊಳ್ಳಲೇಬೇಕಾದ ಅಧಿಕಾರ ಇರಬೇಕು. ಹಾಲಿ ಚಾಲ್ತಿಯಲ್ಲಿರುವ ಉದ್ಯೋಗ ಕಡಿತದ ಮಾದರಿಯ ಬದಲು ಉದ್ಯೋಗ ಸೃಷ್ಟಿಯ ಮಾದರಿ ಅಭಿವೃದ್ಧಿಗೊಳ್ಳುವಂತೆ ಮಾಡಬೇಕು.
3. ಕೆಲಸ ಸಿಕ್ಕರೆ ಸಾಲದು, ನೆಮ್ಮದಿಯ ಬದುಕಿಗೆ ಉದ್ಯೋಗ ಭದ್ರತೆ ಖಾತ್ರಿಯಾಗಬೇಕು, ದುಡಿಮೆಗೆ ತಕ್ಕ ಪ್ರತಿಫಲ ಲಭ್ಯವಾಗಬೇಕು. ಅದಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಂಟ್ರಾಕ್ಟ್ ಪದ್ದತಿ ಶಾಶ್ವತೀಕರಣವನ್ನು ರದ್ದುಗೊಳಿಸಲು ರಾಜ್ಯ ಸರ್ಕಾರವೂ ಹೋರಾಡಬೇಕು. ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಕಂಟ್ರಾಕ್ಟ್ ಪದ್ದತಿಯನ್ನು ತೆಗೆದುಹಾಕಬೇಕು. ಉಚ್ಛ ನ್ಯಾಯಾಲಯವೇ ಅನೇಕ ಬಾರಿ ಎಚ್ಚರಿಸಿರುವ ಕನಿಷ್ಟ ವೇತನವನ್ನು ಹಾಗೂ ಸಮಾನ ಕೆಲಸಕ್ಕೆ ಸಮಾನ ವೇತನವನ್ನು ಜಾರಿಗೆ ತರಬೇಕು.
4. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಬೆಳೆಯುತ್ತಿರುವ ಖಾಸಗೀ ಹಿಡಿತ ಹಾಗೂ ಸುಲಿಗೆಯನ್ನು ನಿಯಂತ್ರಿಸಲು ಕ್ರಮಕೈಗೊಳ್ಳಬೇಕು ಮತ್ತು ಉಚಿತ ಹಾಗೂ ಉಚ್ಛ ಸರ್ಕಾರಿ ಶಿಕ್ಷಣ ಮತ್ತು ಚಿಕಿತ್ಸೆ ಲಭ್ಯವಾಗುವಂತೆ ಮಾಡಬೇಕು.
5. ಬಡವರ ಬಹುತೇಕ ದುಡಿಮೆಯನ್ನೆಲ್ಲಾ ಬಾಟಲಿ ದಣಿಗಳ ಪಾಲಾಗಿಸುತ್ತಿರುವ ಹಾಗೂ ಯುವಜನರನ್ನು ದುಷ್ಟಚಟದ ದಾಸರನ್ನಾಗಿಸುತ್ತಿರುವ ಮಧ್ಯಪಾನವನ್ನು ನಿಶೇಧಿಸುವ ನಿಟ್ಟಿನಲ್ಲಿ ಸರ್ಕಾರ ಹೆಜ್ಜೆ ಇಕ್ಕಬೇಕು. ಕನಿಷ್ಟ ಮೊದಲ ಹಂತವಾಗಿ ಮಧ್ಯವ್ಯಸನ ತಗ್ಗಿಸುವ ಟಾರ್ಗೆಟ್ ಹಾಕಿ ಫಲಿತಾಂಶ ತೋರಬೇಕು. ಇಡೀ ದೇಶದಲ್ಲಿ ಏಕ ಕಾಲದಲ್ಲಿ ಮಧ್ಯಪಾನ ನಿಷೇಧಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು.
6. ಧಾರ್ಮಿಕ ಸಹಬಾಳ್ವೆಯನ್ನು ಉತ್ತೇಜಿಸಬೇಕು. ಧಾರ್ಮಿಕ ದ್ವೇಷ, ಸಾಂಸ್ಕøತಿಕ ಅಸಹನೆ, ಆಹಾರ ಪದ್ದತಿಗಳ ಹೇರಿಕೆಯಂತಹ ಕ್ರಮಗಳನ್ನು ಪ್ರಚೋದಿಸುವ ಸಂಘ ಸಂಸ್ಥೆಗಳನ್ನು ನಿಷೇಧಿಸಬೇಕು.
7. ಮೀಸಲಾತಿಯಂತಹ ಸಂಕೀರ್ಣ ಸಮಸ್ಯೆಗಳಿಗೆ ಸಮಗ್ರ ಉತ್ತರ ಕಂಡುಕೊಳ್ಳಲು ಕಾಲಮಿತಿಯೊಳಗೆ ಪರಿಹಾರ ಸೂಚಿಸುವ ಸಾಮಾಜಿಕ ಮನ್ನಣೆ ಹೊಂದಿರುವ ಸಮಿತಿಯನ್ನು ರಚಿಸಬೇಕು. ಅದರ ಶಿಫಾರಸುಗಳನ್ನು ದಿಟ್ಟವಾಗಿ ಜಾರಿ ಮಾಡುವ ಮೂಲಕ ಸಾಮಾಜಿಕ ನ್ಯಾಯವನ್ನು ಖಾತ್ರಿಗೊಳಸಿಬೇಕು ಮತ್ತು ಸಾಮಾಜಿಕ ಕಲಹಕ್ಕೆ ಕೊನೆ ಹಾಡಬೇಕು.
8. ಅಲ್ಪಸಂಖ್ಯಾತರ ಸ್ಥಿತಿಗತಿಯಲ್ಲಿ ಬದಲಾವಣೆ ತರಲು ಈಗಾಗಲೇ ಸಾಚಾರ್ ಕಮಿಟಿಯ ಸೂಕ್ಷ್ಮಮತಿ ಶಿಫಾರಸುಗಳು ಇರುವುದರಿಂದ ಅವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು.
9. ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ವಿಶೇಷ ಅಭಿಯಾನ ಆರಂಭಿಸಬೇಕು. ಅವರ ಸ್ವಾವಲಂಬಿ ಶಕ್ತಿ ವೃದ್ಧಿಸುವಂತೆ ಮಾಡಲು ಹಾಗೂ ಅವರ ಸ್ಥಾನ ಮತ್ತು ಹಕ್ಕಿನ ಬಗ್ಗೆ ಪ್ರಜ್ಞೆ ಸಾಮಾಜಿಕ ಪ್ರಜ್ಞೆ ಹೆಚ್ಚಾಗುವಂತೆ ಮಾಡಲು ಸಾಮಾಜಿಕ ಅಭಿಯಾನ ಆರಂಭಿಸಬೇಕು. ಸಾಮಾಜಿಕ ಸಂಘ ಸಂಸ್ಥೆಗಳನ್ನು ಅದರಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು.
10. ನಿರ್ಲಕ್ಷಿತರಲ್ಲಿ ನಿರ್ಲಕ್ಷಿತರಾಗಿ ಬದುಕುತ್ತಿರುವ ತೃತೀಯ ಲಿಂಗೀಯರು, ವಿಕಲಚೇತನರು, ವೇಶ್ಯೆಯರು, ವೃದ್ಧರು ಹಾಗೂ ನಿರಾಶ್ರಿತರ ಬಗ್ಗೆ ಅಂತಃಕರಣವುಳ್ಳ ಪುನರ್ವಸತಿ ಕ್ರಮಗಳನ್ನು ಆಚರಣೆಗೆ ತರಬೇಕು.
ಇದೆಲ್ಲವನ್ನು ಮಾಡಲೇಬೇಕು. ಸರ್ಕಾರಗಳು ಈ ನಿಟ್ಟಿನಲ್ಲಿ ಕೆಲವು ಹೆಜ್ಜೆಗಳನ್ನಾದರೂ ಇಡುವಂತೆ ಮಾಡುವ ನಿಟ್ಟಿನಲ್ಲಿ ನಮ್ಮ ಹೋರಾಟಗಳು  ನಡೆಯಬೇಕಿದೆ.   ಜನಪರ ಆಳ್ವಿಕೆ ನೀಡುವುದು ಜಾತ್ಯತೀತ ಪಕ್ಷಗಳ ಉಳಿವು ಮತ್ತು ಬೆಳವಣಿಗೆಗೆ ಹೇಗೆ ಪೂರ್ವ ಶರತ್ತೋ ಹಾಗೆಯೇ ನಿಜವಾದ ಜನಪರ ಶಕ್ತಿಗಳು ಪರ್ಯಾಯ ಪಕ್ಷಗಳನ್ನು ಕಟ್ಟಿದರೆ ಸಾಲದು, ಪರ್ಯಾಯ ಜನ ಚಳವಳಿಯನ್ನು ಕಟ್ಟಿಬೆಳೆಸಬೇಕು. ವಿಶಾಲ ತಳಹದಿಯ ಪ್ರಬಲ ಜನಾಂದೋಲನಗಳನ್ನು ರೂಪಿಸಬೇಕಾದ ಕರ್ತವ್ಯ ನಮ್ಮ ಮುಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೆನಡಾದಲ್ಲಿ ನೆಲಮಂಗಲ ಮೂಲದ 37ವರ್ಷದ ಟೆಕ್ಕಿಯನ್ನು ಗುಂಡಿಟ್ಟು ಹತ್ಯೆ ಮಾಡಿದ ಅಪರಿಚಿತ ಗುಂಪು 

ಬೆಂಗಳೂರು: ಕೆನಡಾದ ಟೊರೊಂಟೊದಲ್ಲಿರುವ ಜನನಿಬಿಡ ಶಾಪಿಂಗ್ ಸೆಂಟರ್‌ನ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಬೆಂಗಳೂರು ಮೂಲದ 37 ವರ್ಷದ ಟೆಕ್ಕಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನೆಲಮಂಗಲ ಬಳಿಯ ತ್ಯಾಮಗೊಂಡ್ಲು ನಿವಾಸಿ...

ತೆಲಂಗಾಣ| ಪುರಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಆತ್ಮಹತ್ಯೆಗೆ ಶರಣು; ಕುಟುಂಬದಿಂದ ಬೆದರಿಕೆ ಆರೋಪ

ಪುರಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಯಿಂದ ಸಾವನ್ನಪ್ಪಿರುವ ಘಟನೆ ತೆಲಂಗಾಣದಿಂದ ವರದಿಯಾಗಿದೆ. ಸೋಮವಾರ ತಡರಾತ್ರಿ ನಾರಾಯಣಪೇಟೆ ಜಿಲ್ಲೆಯ ಮಕ್ತಲ್ ಪುರಸಭೆಯಲ್ಲಿ ಈ ಘಟನೆ ನಡೆದಿದೆ. ಮಕ್ತಲ್ ಪುರಸಭೆಯ...

ದ್ವೇಷ ಭಾಷಣ : ಅಸ್ಸಾಂ ಸಿಎಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಮ್ಯುನಿಸ್ಟ್ ಪಕ್ಷಗಳು

ಮುಸ್ಲಿಮರ ವಿರುದ್ಧ ಪದೇ ಪದೇ ದ್ವೇಷ ಕಾರುತ್ತಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಕಮ್ಯುನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕಿಸ್ಟ್ -ಸಿಪಿಐ (ಎಂ)) ಮತ್ತು ಕಮ್ಯುನಿಷ್ಟ್...

ಬಿಹಾರ: ಬಹುಜನ ಸಮುದಾಯಗಳಲ್ಲಿ ಉನ್ನತ ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೋಧ್ ಗಯಾದಲ್ಲಿ ಬಹುಜನ ವಿದ್ವಾಂಸರ ಸಮ್ಮೇಳನ

ಭಾರತದ ಪ್ರಮುಖ ವಿಶ್ವವಿದ್ಯಾಲಯಗಳ ವಿದ್ವಾಂಸರು, ಶಿಕ್ಷಣ ತಜ್ಞರು ಮತ್ತು ಸಾಮಾಜಿಕ ಕಾರ್ಯಕರ್ತರು ಬೋಧ್ ಗಯಾದಲ್ಲಿ ಒಟ್ಟುಗೂಡಿ ಬಹುಜನ ಸಮುದಾಯಕ್ಕೆ ಸಮಾನತೆ ಮತ್ತು ಸಾಮಾಜಿಕ ಪರಿವರ್ತನೆಯನ್ನು ಮುನ್ನಡೆಸುವಲ್ಲಿ ಉನ್ನತ ಶಿಕ್ಷಣದ ಪಾತ್ರದ ಕುರಿತು ಚರ್ಚಿಸಿದರು. ಫೆಬ್ರವರಿ...

ಭಾರತೀಯ ಬಿಷಪ್‌ಗಳ ಸಂಸ್ಥೆಯ ಮುಖ್ಯಸ್ಥರಾಗಿ ದಲಿತ ಕಾರ್ಡಿನಲ್ ಪೂಲಾ ಆಯ್ಕೆ

ಭಾರತೀಯ ಬಿಷಪ್‌ಗಳ ಸಂಸ್ಥೆಯ ಮುಖ್ಯಸ್ಥರಾಗಿ ದಲಿತ ಕಾರ್ಡಿನಲ್ ಪೂಲಾ ಅವರು ಆಯ್ಕೆಯಾಗಿದ್ದಾರೆ. ಭಾರತದ ಕ್ಯಾಥೋಲಿಕ್‌ಗಳಲ್ಲಿ ಸುಮಾರು ಮೂರನೇ ಎರಡರಷ್ಟು ಜನಸಂಖ್ಯೆ ದಲಿತರೇ ಇದ್ದಾರೆ ಎಂದು ನಂಬಲಾಗಿದ್ದರೂ, ಅವರು ಧಾರ್ಮಿಕ ಆಚರಣೆ ಮತ್ತು ಬಿಷಪ್‌...

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ. ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್...

ಮುಸ್ಲಿಮರಿಗೆ ಗುಂಡಿಕ್ಕುವಂತೆ ವಿಡಿಯೋ ಹಂಚಿಕೆ: ಅಸ್ಸಾಂ ಸಿಎಂ ವಿರುದ್ಧ ಓವೈಸಿ ದೂರು: ದ್ವೇಷ ಭಾಷಣ ಆದೇಶ ಉಲ್ಲೇಖ 

ಅಸ್ಸಾಂ ಬಿಜೆಪಿ ಘಟಕದ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ಮತ್ತು ಈಗ ಅಳಿಸಲಾದ ವೀಡಿಯೊದಲ್ಲಿ, ಮುಸ್ಲಿಮರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಆರೋಪಿಸಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ...

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ...

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....