Homeಚಳವಳಿಓ ಸರ್ಕಾರವೇ, ಇತ್ತ ಗಮನ ಕೊಡು

ಓ ಸರ್ಕಾರವೇ, ಇತ್ತ ಗಮನ ಕೊಡು

- Advertisement -
ನೂರ್ ಶ್ರೀಧರ್  |
ಫಲಿತಾಂಶ ಹೊರಬಿದ್ದಿದೆ. ಮತಾಂಧ ಶಕ್ತಿಗಳು ಮೊದಲ ಸ್ಥಾನದಲ್ಲಿ ಬಂದು ನಿಂತಿವೆ. ‘ಜಾತ್ಯತೀತ’ ಎಂದು ಕರೆದುಕೊಳ್ಳುವ ಮಿಶ್ರ ಸರ್ಕಾರದ ರಚನೆಯ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಲೋಕಸಭಾ ಚುನಾವಣೆಗಳು ಕೂಗಳತೆಯ ದೂರದಲ್ಲಿವೆ.  ಕಳೆದ 4 ವರ್ಷಗಳಲ್ಲಿ ಬಿಜೆಪಿ ಪಕ್ಷ ಕೇಂದ್ರ ಸರ್ಕಾರದ ಮೂಲಕ ನೀಡಿರುವ ಆಳ್ವಿಕೆ ಮತ್ತು 2009 – 2013ರ ಅವಧಿಯ ಅದರ ಕರ್ನಾಟಕ ಆಳ್ವಿಕೆ ಭಾರತದ ಇತಿಹಾಸದಲ್ಲೇ ಅತ್ಯಂತ ಜನವಿರೋಧಿ ಆಳ್ವಿಕೆಗಳಾಗಿವೆ. ನಾಡಿನ ಸಂಪತ್ತನ್ನು ಬಾಚಲು ಗಣಿದಣಿಗಳಿಗೆ ನೆರವಾಗುವ, ಜನ ಸಾಮಾನ್ಯರ ದುಡಿಮೆಯ ಫಲವನ್ನು ದೋಚಲು ಕಾರ್ಪೋರೇಟ್ ಶಕ್ತಿಗಳಿಗೆ ರತ್ನಗಂಬಳಿ ಹಾಕಿಕೊಟ್ಟಿದೆ. ಇದಕ್ಕೆ ಅನೇಕ ಉದಾಹರಣೆಗಳನ್ನು ನೀಡಬಹುದು. ಆರ್ಥಿಕ ನೀತಿಗಳಲ್ಲಿ ಒಂದಷ್ಟು ಸಾಮ್ಯತೆಗಳಿದ್ದರೂ ಕಾಂಗ್ರೆಸ್ ಜನಸಾಮಾನ್ಯರ ವಿಚಾರದಲ್ಲಿ ಒಂದಷ್ಟು ಮೃದು ಧೋರಣೆಯನ್ನು ಅಳವಡಿಸಿದೆ ಹಾಗೂ ಒಂದಿಷ್ಟು ಸಮಾಜ ಕಲ್ಯಾಣದ ಯೋಜನೆಗಳನ್ನು ಜಾರಿಗೆ ತಂದಿದೆ. ವಾಸ್ತವ ಹೀಗಿದ್ದರೂ ಕಾಂಗ್ರೆಸ್ ಪಕ್ಷವನ್ನು ಭ್ರಷ್ಟ, ಜಾತಿವಾದಿ, ಸ್ವಜನ ಪಕ್ಷಪಾತಿ ಪಕ್ಷ ಎಂಬಂತೆ ಬಿಂಬಿಸಲು ಮಾಧ್ಯಮಗಳು ಪೈಪೋಟಿ ನಡೆಸಿವೆ. ಅದೇ ಸಂದರ್ಭದಲ್ಲಿ ಬಿಜೆಪಿ ಅಭಿವೃದ್ಧಿಪರ, ದೇಶಪರ, ಹಿಂದುಪರ ಪಕ್ಷದಂತೆಯೂ ಸುಳ್ಳನ್ನು ಸತ್ಯವೆಂಬಂತೆ ನಂಬಿಸುವ ಸಂಘ ಪರಿವಾರದ ಪ್ರಚಾರಕ್ಕೆ ಮಾಧ್ಯಮಗಳೂ ದೊಡ್ಡ ದನಿಯ ಪ್ರಚಾರ ಕೊಟ್ಟಿವೆ. ವಾಸ್ತವಾಂಶಗಳನ್ನು ಜನರಿಗೆ ತಲುಪಿಸುವುದರಲ್ಲಿ ಕಾಂಗ್ರೆಸ್‍ನ ವೈಫಲ್ಯ ಕೂಡ ಎದ್ದು ಕಾಣುತ್ತಿದೆ.
ಹೊಸ ಸರ್ಕಾರ ರಚಿಸುವುದರಲ್ಲಿ ನಾಟಕೀಯ ರಾಜಕೀಯ ಬೆಳವಣಿಗೆಗಳು ನಡೆದಿವೆ. ಬಿಜೆಪಿ ಎಲ್ಲ ಸಂವಿಧಾನಿಕ ಸಂಸ್ಥೆಗಳನ್ನು, ಹುದ್ದೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಅಂತೂ ಯಾವುದೋ ಒಂದು ಸರ್ಕಾರ ಬರಲಿದೆ. ಯಾವುದೇ ಸರ್ಕಾರ ಬಂದರೂ ರಾಜ್ಯದ ಜನತೆಯ ಹಿತಾಸಕ್ತಿಯ ದೃಷ್ಟಿಯಿಂದ ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳಬೇಕಾದ ಪ್ರಮುಖ ಅಂಶಗಳು ಯಾವುವು ಎಂಬುದು ನಮ್ಮ ಮುಂದಿರುವ ಪ್ರಶ್ನೆ.
1. ಕೃಷಿ ಬಿಕ್ಕಟ್ಟಿಗೆ ಪರಿಹಾರವನ್ನು ಹುಡುಕುವ ಪ್ರಾಮಾಣಿಕ ಪ್ರಯತ್ನವಾಗಬೇಕು. ಕೃಷಿ ಬಿಕ್ಕಟ್ಟು ಪರಿಹಾರವಾಗಬೇಕಾದರೆ ಕೃಷಿ ವೆಚ್ಚ ಕಡಿಮೆಯಾಗಬೇಕು, ಕೃಷಿ ಆದಾಯ ನಿಶ್ಚಿತಗೊಳ್ಳಬೇಕು. ಕೃಷಿ ವೆಚ್ಚ ತಗ್ಗಿಸಬೇಕಾದರೆ ಸಹಕಾರಿ ಹಾಗೂ ಸಹಜ ಕೃಷಿಯನ್ನು ಉತ್ತೇಜಿಸಲು ವಿಶೇಷ ಪ್ಯಾಕೇಜನ್ನು ಜಾರಿಗೆ ತರಬೇಕು. ಅಲ್ಲದೆ ಬೀಜ, ಗೊಬ್ಬರ, ರಾಸಾಯನಿಕ ಇತ್ಯಾದಿ ಒಳಸುರಿಗಳ ಮೇಲಿನ, ಕೃಷಿ ಯಂತ್ರೋಪಕರಣಗಳ ಮೇಲಿನ ಹಾಗೂ ಕೃಷಿ ಮಾರುಕಟ್ಟೆ ಮೇಲಿನ ಕಾರ್ಪೋರೇಟ್ – ದಲ್ಲಾಳಿ ಹಿಡಿತ ತಪ್ಪಿ ಬೆಲೆಗಳು ನಿಯಂತ್ರಣಕ್ಕೆ ಬರಬೇಕು. ಜೊತೆಗೆ ಇದುವರೆತನಕ ಸರ್ಕಾರಗಳು ಅಳವಡಿಸಿದ ರೈತ ವಿರೋಧಿ – ಕಾರ್ಪೋರೇಟ್ ಪರ ನೀತಿಗಳಿಂದಾಗಿ ರೈತರಿಗೆ ಆಗಿರುವ ನಷ್ಟವನ್ನು ಸಂಪೂರ್ಣ ಸಾಲ ಮನ್ನಾದ ರೂಪದಲ್ಲಾದರೂ ತುಂಬಿಕೊಡಬೇಕು.
2. ಓದಿದರೂ ಉದ್ಯೋಗವಿಲ್ಲದ ಕಡೆ ಸಾಗುತ್ತಿರುವ ಅಂಧಕಾರಿ ಭವಿಷ್ಯದಲ್ಲಿ ದೀಪ ಬೆಳಗುವಂತೆ ಮಾಡಬೇಕು. ಉದ್ಯೋಗ ಸೃಷ್ಟಿ ಸರ್ಕಾರದ ಎರಡನೇ ಪರಮೋಚ್ಛ ಕರ್ತವ್ಯವಾಗಬೇಕು. “ಉದ್ಯೋಗಕ್ಕಾಗಿ ಯುವಜನರು” ಮುಂದಿಟ್ಟ ಯುವ ಪ್ರಣಾಳಿಕೆ ಸೂಚಿಸುವ ರೀತಿಯಲ್ಲಿ “ಉದ್ಯೋಗ ಆಯೋಗ”ವೊಂದನ್ನು ರಚಿಸಬೇಕು. ಅದರ ಶಿಫಾರಸುಗಳನ್ನು ವಿಧಾನ ಸಭೆಯಲ್ಲಿ ಪರಿಗಣನೆಗೆ ತೆಗೆದುಕೊಳ್ಳಲೇಬೇಕಾದ ಅಧಿಕಾರ ಇರಬೇಕು. ಹಾಲಿ ಚಾಲ್ತಿಯಲ್ಲಿರುವ ಉದ್ಯೋಗ ಕಡಿತದ ಮಾದರಿಯ ಬದಲು ಉದ್ಯೋಗ ಸೃಷ್ಟಿಯ ಮಾದರಿ ಅಭಿವೃದ್ಧಿಗೊಳ್ಳುವಂತೆ ಮಾಡಬೇಕು.
3. ಕೆಲಸ ಸಿಕ್ಕರೆ ಸಾಲದು, ನೆಮ್ಮದಿಯ ಬದುಕಿಗೆ ಉದ್ಯೋಗ ಭದ್ರತೆ ಖಾತ್ರಿಯಾಗಬೇಕು, ದುಡಿಮೆಗೆ ತಕ್ಕ ಪ್ರತಿಫಲ ಲಭ್ಯವಾಗಬೇಕು. ಅದಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಂಟ್ರಾಕ್ಟ್ ಪದ್ದತಿ ಶಾಶ್ವತೀಕರಣವನ್ನು ರದ್ದುಗೊಳಿಸಲು ರಾಜ್ಯ ಸರ್ಕಾರವೂ ಹೋರಾಡಬೇಕು. ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಕಂಟ್ರಾಕ್ಟ್ ಪದ್ದತಿಯನ್ನು ತೆಗೆದುಹಾಕಬೇಕು. ಉಚ್ಛ ನ್ಯಾಯಾಲಯವೇ ಅನೇಕ ಬಾರಿ ಎಚ್ಚರಿಸಿರುವ ಕನಿಷ್ಟ ವೇತನವನ್ನು ಹಾಗೂ ಸಮಾನ ಕೆಲಸಕ್ಕೆ ಸಮಾನ ವೇತನವನ್ನು ಜಾರಿಗೆ ತರಬೇಕು.
4. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಬೆಳೆಯುತ್ತಿರುವ ಖಾಸಗೀ ಹಿಡಿತ ಹಾಗೂ ಸುಲಿಗೆಯನ್ನು ನಿಯಂತ್ರಿಸಲು ಕ್ರಮಕೈಗೊಳ್ಳಬೇಕು ಮತ್ತು ಉಚಿತ ಹಾಗೂ ಉಚ್ಛ ಸರ್ಕಾರಿ ಶಿಕ್ಷಣ ಮತ್ತು ಚಿಕಿತ್ಸೆ ಲಭ್ಯವಾಗುವಂತೆ ಮಾಡಬೇಕು.
5. ಬಡವರ ಬಹುತೇಕ ದುಡಿಮೆಯನ್ನೆಲ್ಲಾ ಬಾಟಲಿ ದಣಿಗಳ ಪಾಲಾಗಿಸುತ್ತಿರುವ ಹಾಗೂ ಯುವಜನರನ್ನು ದುಷ್ಟಚಟದ ದಾಸರನ್ನಾಗಿಸುತ್ತಿರುವ ಮಧ್ಯಪಾನವನ್ನು ನಿಶೇಧಿಸುವ ನಿಟ್ಟಿನಲ್ಲಿ ಸರ್ಕಾರ ಹೆಜ್ಜೆ ಇಕ್ಕಬೇಕು. ಕನಿಷ್ಟ ಮೊದಲ ಹಂತವಾಗಿ ಮಧ್ಯವ್ಯಸನ ತಗ್ಗಿಸುವ ಟಾರ್ಗೆಟ್ ಹಾಕಿ ಫಲಿತಾಂಶ ತೋರಬೇಕು. ಇಡೀ ದೇಶದಲ್ಲಿ ಏಕ ಕಾಲದಲ್ಲಿ ಮಧ್ಯಪಾನ ನಿಷೇಧಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು.
6. ಧಾರ್ಮಿಕ ಸಹಬಾಳ್ವೆಯನ್ನು ಉತ್ತೇಜಿಸಬೇಕು. ಧಾರ್ಮಿಕ ದ್ವೇಷ, ಸಾಂಸ್ಕøತಿಕ ಅಸಹನೆ, ಆಹಾರ ಪದ್ದತಿಗಳ ಹೇರಿಕೆಯಂತಹ ಕ್ರಮಗಳನ್ನು ಪ್ರಚೋದಿಸುವ ಸಂಘ ಸಂಸ್ಥೆಗಳನ್ನು ನಿಷೇಧಿಸಬೇಕು.
7. ಮೀಸಲಾತಿಯಂತಹ ಸಂಕೀರ್ಣ ಸಮಸ್ಯೆಗಳಿಗೆ ಸಮಗ್ರ ಉತ್ತರ ಕಂಡುಕೊಳ್ಳಲು ಕಾಲಮಿತಿಯೊಳಗೆ ಪರಿಹಾರ ಸೂಚಿಸುವ ಸಾಮಾಜಿಕ ಮನ್ನಣೆ ಹೊಂದಿರುವ ಸಮಿತಿಯನ್ನು ರಚಿಸಬೇಕು. ಅದರ ಶಿಫಾರಸುಗಳನ್ನು ದಿಟ್ಟವಾಗಿ ಜಾರಿ ಮಾಡುವ ಮೂಲಕ ಸಾಮಾಜಿಕ ನ್ಯಾಯವನ್ನು ಖಾತ್ರಿಗೊಳಸಿಬೇಕು ಮತ್ತು ಸಾಮಾಜಿಕ ಕಲಹಕ್ಕೆ ಕೊನೆ ಹಾಡಬೇಕು.
8. ಅಲ್ಪಸಂಖ್ಯಾತರ ಸ್ಥಿತಿಗತಿಯಲ್ಲಿ ಬದಲಾವಣೆ ತರಲು ಈಗಾಗಲೇ ಸಾಚಾರ್ ಕಮಿಟಿಯ ಸೂಕ್ಷ್ಮಮತಿ ಶಿಫಾರಸುಗಳು ಇರುವುದರಿಂದ ಅವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು.
9. ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ವಿಶೇಷ ಅಭಿಯಾನ ಆರಂಭಿಸಬೇಕು. ಅವರ ಸ್ವಾವಲಂಬಿ ಶಕ್ತಿ ವೃದ್ಧಿಸುವಂತೆ ಮಾಡಲು ಹಾಗೂ ಅವರ ಸ್ಥಾನ ಮತ್ತು ಹಕ್ಕಿನ ಬಗ್ಗೆ ಪ್ರಜ್ಞೆ ಸಾಮಾಜಿಕ ಪ್ರಜ್ಞೆ ಹೆಚ್ಚಾಗುವಂತೆ ಮಾಡಲು ಸಾಮಾಜಿಕ ಅಭಿಯಾನ ಆರಂಭಿಸಬೇಕು. ಸಾಮಾಜಿಕ ಸಂಘ ಸಂಸ್ಥೆಗಳನ್ನು ಅದರಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು.
10. ನಿರ್ಲಕ್ಷಿತರಲ್ಲಿ ನಿರ್ಲಕ್ಷಿತರಾಗಿ ಬದುಕುತ್ತಿರುವ ತೃತೀಯ ಲಿಂಗೀಯರು, ವಿಕಲಚೇತನರು, ವೇಶ್ಯೆಯರು, ವೃದ್ಧರು ಹಾಗೂ ನಿರಾಶ್ರಿತರ ಬಗ್ಗೆ ಅಂತಃಕರಣವುಳ್ಳ ಪುನರ್ವಸತಿ ಕ್ರಮಗಳನ್ನು ಆಚರಣೆಗೆ ತರಬೇಕು.
ಇದೆಲ್ಲವನ್ನು ಮಾಡಲೇಬೇಕು. ಸರ್ಕಾರಗಳು ಈ ನಿಟ್ಟಿನಲ್ಲಿ ಕೆಲವು ಹೆಜ್ಜೆಗಳನ್ನಾದರೂ ಇಡುವಂತೆ ಮಾಡುವ ನಿಟ್ಟಿನಲ್ಲಿ ನಮ್ಮ ಹೋರಾಟಗಳು  ನಡೆಯಬೇಕಿದೆ.   ಜನಪರ ಆಳ್ವಿಕೆ ನೀಡುವುದು ಜಾತ್ಯತೀತ ಪಕ್ಷಗಳ ಉಳಿವು ಮತ್ತು ಬೆಳವಣಿಗೆಗೆ ಹೇಗೆ ಪೂರ್ವ ಶರತ್ತೋ ಹಾಗೆಯೇ ನಿಜವಾದ ಜನಪರ ಶಕ್ತಿಗಳು ಪರ್ಯಾಯ ಪಕ್ಷಗಳನ್ನು ಕಟ್ಟಿದರೆ ಸಾಲದು, ಪರ್ಯಾಯ ಜನ ಚಳವಳಿಯನ್ನು ಕಟ್ಟಿಬೆಳೆಸಬೇಕು. ವಿಶಾಲ ತಳಹದಿಯ ಪ್ರಬಲ ಜನಾಂದೋಲನಗಳನ್ನು ರೂಪಿಸಬೇಕಾದ ಕರ್ತವ್ಯ ನಮ್ಮ ಮುಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...