Homeಚಳವಳಿಓ ಸರ್ಕಾರವೇ, ಇತ್ತ ಗಮನ ಕೊಡು

ಓ ಸರ್ಕಾರವೇ, ಇತ್ತ ಗಮನ ಕೊಡು

- Advertisement -
ನೂರ್ ಶ್ರೀಧರ್  |
ಫಲಿತಾಂಶ ಹೊರಬಿದ್ದಿದೆ. ಮತಾಂಧ ಶಕ್ತಿಗಳು ಮೊದಲ ಸ್ಥಾನದಲ್ಲಿ ಬಂದು ನಿಂತಿವೆ. ‘ಜಾತ್ಯತೀತ’ ಎಂದು ಕರೆದುಕೊಳ್ಳುವ ಮಿಶ್ರ ಸರ್ಕಾರದ ರಚನೆಯ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಲೋಕಸಭಾ ಚುನಾವಣೆಗಳು ಕೂಗಳತೆಯ ದೂರದಲ್ಲಿವೆ.  ಕಳೆದ 4 ವರ್ಷಗಳಲ್ಲಿ ಬಿಜೆಪಿ ಪಕ್ಷ ಕೇಂದ್ರ ಸರ್ಕಾರದ ಮೂಲಕ ನೀಡಿರುವ ಆಳ್ವಿಕೆ ಮತ್ತು 2009 – 2013ರ ಅವಧಿಯ ಅದರ ಕರ್ನಾಟಕ ಆಳ್ವಿಕೆ ಭಾರತದ ಇತಿಹಾಸದಲ್ಲೇ ಅತ್ಯಂತ ಜನವಿರೋಧಿ ಆಳ್ವಿಕೆಗಳಾಗಿವೆ. ನಾಡಿನ ಸಂಪತ್ತನ್ನು ಬಾಚಲು ಗಣಿದಣಿಗಳಿಗೆ ನೆರವಾಗುವ, ಜನ ಸಾಮಾನ್ಯರ ದುಡಿಮೆಯ ಫಲವನ್ನು ದೋಚಲು ಕಾರ್ಪೋರೇಟ್ ಶಕ್ತಿಗಳಿಗೆ ರತ್ನಗಂಬಳಿ ಹಾಕಿಕೊಟ್ಟಿದೆ. ಇದಕ್ಕೆ ಅನೇಕ ಉದಾಹರಣೆಗಳನ್ನು ನೀಡಬಹುದು. ಆರ್ಥಿಕ ನೀತಿಗಳಲ್ಲಿ ಒಂದಷ್ಟು ಸಾಮ್ಯತೆಗಳಿದ್ದರೂ ಕಾಂಗ್ರೆಸ್ ಜನಸಾಮಾನ್ಯರ ವಿಚಾರದಲ್ಲಿ ಒಂದಷ್ಟು ಮೃದು ಧೋರಣೆಯನ್ನು ಅಳವಡಿಸಿದೆ ಹಾಗೂ ಒಂದಿಷ್ಟು ಸಮಾಜ ಕಲ್ಯಾಣದ ಯೋಜನೆಗಳನ್ನು ಜಾರಿಗೆ ತಂದಿದೆ. ವಾಸ್ತವ ಹೀಗಿದ್ದರೂ ಕಾಂಗ್ರೆಸ್ ಪಕ್ಷವನ್ನು ಭ್ರಷ್ಟ, ಜಾತಿವಾದಿ, ಸ್ವಜನ ಪಕ್ಷಪಾತಿ ಪಕ್ಷ ಎಂಬಂತೆ ಬಿಂಬಿಸಲು ಮಾಧ್ಯಮಗಳು ಪೈಪೋಟಿ ನಡೆಸಿವೆ. ಅದೇ ಸಂದರ್ಭದಲ್ಲಿ ಬಿಜೆಪಿ ಅಭಿವೃದ್ಧಿಪರ, ದೇಶಪರ, ಹಿಂದುಪರ ಪಕ್ಷದಂತೆಯೂ ಸುಳ್ಳನ್ನು ಸತ್ಯವೆಂಬಂತೆ ನಂಬಿಸುವ ಸಂಘ ಪರಿವಾರದ ಪ್ರಚಾರಕ್ಕೆ ಮಾಧ್ಯಮಗಳೂ ದೊಡ್ಡ ದನಿಯ ಪ್ರಚಾರ ಕೊಟ್ಟಿವೆ. ವಾಸ್ತವಾಂಶಗಳನ್ನು ಜನರಿಗೆ ತಲುಪಿಸುವುದರಲ್ಲಿ ಕಾಂಗ್ರೆಸ್‍ನ ವೈಫಲ್ಯ ಕೂಡ ಎದ್ದು ಕಾಣುತ್ತಿದೆ.
ಹೊಸ ಸರ್ಕಾರ ರಚಿಸುವುದರಲ್ಲಿ ನಾಟಕೀಯ ರಾಜಕೀಯ ಬೆಳವಣಿಗೆಗಳು ನಡೆದಿವೆ. ಬಿಜೆಪಿ ಎಲ್ಲ ಸಂವಿಧಾನಿಕ ಸಂಸ್ಥೆಗಳನ್ನು, ಹುದ್ದೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಅಂತೂ ಯಾವುದೋ ಒಂದು ಸರ್ಕಾರ ಬರಲಿದೆ. ಯಾವುದೇ ಸರ್ಕಾರ ಬಂದರೂ ರಾಜ್ಯದ ಜನತೆಯ ಹಿತಾಸಕ್ತಿಯ ದೃಷ್ಟಿಯಿಂದ ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳಬೇಕಾದ ಪ್ರಮುಖ ಅಂಶಗಳು ಯಾವುವು ಎಂಬುದು ನಮ್ಮ ಮುಂದಿರುವ ಪ್ರಶ್ನೆ.
1. ಕೃಷಿ ಬಿಕ್ಕಟ್ಟಿಗೆ ಪರಿಹಾರವನ್ನು ಹುಡುಕುವ ಪ್ರಾಮಾಣಿಕ ಪ್ರಯತ್ನವಾಗಬೇಕು. ಕೃಷಿ ಬಿಕ್ಕಟ್ಟು ಪರಿಹಾರವಾಗಬೇಕಾದರೆ ಕೃಷಿ ವೆಚ್ಚ ಕಡಿಮೆಯಾಗಬೇಕು, ಕೃಷಿ ಆದಾಯ ನಿಶ್ಚಿತಗೊಳ್ಳಬೇಕು. ಕೃಷಿ ವೆಚ್ಚ ತಗ್ಗಿಸಬೇಕಾದರೆ ಸಹಕಾರಿ ಹಾಗೂ ಸಹಜ ಕೃಷಿಯನ್ನು ಉತ್ತೇಜಿಸಲು ವಿಶೇಷ ಪ್ಯಾಕೇಜನ್ನು ಜಾರಿಗೆ ತರಬೇಕು. ಅಲ್ಲದೆ ಬೀಜ, ಗೊಬ್ಬರ, ರಾಸಾಯನಿಕ ಇತ್ಯಾದಿ ಒಳಸುರಿಗಳ ಮೇಲಿನ, ಕೃಷಿ ಯಂತ್ರೋಪಕರಣಗಳ ಮೇಲಿನ ಹಾಗೂ ಕೃಷಿ ಮಾರುಕಟ್ಟೆ ಮೇಲಿನ ಕಾರ್ಪೋರೇಟ್ – ದಲ್ಲಾಳಿ ಹಿಡಿತ ತಪ್ಪಿ ಬೆಲೆಗಳು ನಿಯಂತ್ರಣಕ್ಕೆ ಬರಬೇಕು. ಜೊತೆಗೆ ಇದುವರೆತನಕ ಸರ್ಕಾರಗಳು ಅಳವಡಿಸಿದ ರೈತ ವಿರೋಧಿ – ಕಾರ್ಪೋರೇಟ್ ಪರ ನೀತಿಗಳಿಂದಾಗಿ ರೈತರಿಗೆ ಆಗಿರುವ ನಷ್ಟವನ್ನು ಸಂಪೂರ್ಣ ಸಾಲ ಮನ್ನಾದ ರೂಪದಲ್ಲಾದರೂ ತುಂಬಿಕೊಡಬೇಕು.
2. ಓದಿದರೂ ಉದ್ಯೋಗವಿಲ್ಲದ ಕಡೆ ಸಾಗುತ್ತಿರುವ ಅಂಧಕಾರಿ ಭವಿಷ್ಯದಲ್ಲಿ ದೀಪ ಬೆಳಗುವಂತೆ ಮಾಡಬೇಕು. ಉದ್ಯೋಗ ಸೃಷ್ಟಿ ಸರ್ಕಾರದ ಎರಡನೇ ಪರಮೋಚ್ಛ ಕರ್ತವ್ಯವಾಗಬೇಕು. “ಉದ್ಯೋಗಕ್ಕಾಗಿ ಯುವಜನರು” ಮುಂದಿಟ್ಟ ಯುವ ಪ್ರಣಾಳಿಕೆ ಸೂಚಿಸುವ ರೀತಿಯಲ್ಲಿ “ಉದ್ಯೋಗ ಆಯೋಗ”ವೊಂದನ್ನು ರಚಿಸಬೇಕು. ಅದರ ಶಿಫಾರಸುಗಳನ್ನು ವಿಧಾನ ಸಭೆಯಲ್ಲಿ ಪರಿಗಣನೆಗೆ ತೆಗೆದುಕೊಳ್ಳಲೇಬೇಕಾದ ಅಧಿಕಾರ ಇರಬೇಕು. ಹಾಲಿ ಚಾಲ್ತಿಯಲ್ಲಿರುವ ಉದ್ಯೋಗ ಕಡಿತದ ಮಾದರಿಯ ಬದಲು ಉದ್ಯೋಗ ಸೃಷ್ಟಿಯ ಮಾದರಿ ಅಭಿವೃದ್ಧಿಗೊಳ್ಳುವಂತೆ ಮಾಡಬೇಕು.
3. ಕೆಲಸ ಸಿಕ್ಕರೆ ಸಾಲದು, ನೆಮ್ಮದಿಯ ಬದುಕಿಗೆ ಉದ್ಯೋಗ ಭದ್ರತೆ ಖಾತ್ರಿಯಾಗಬೇಕು, ದುಡಿಮೆಗೆ ತಕ್ಕ ಪ್ರತಿಫಲ ಲಭ್ಯವಾಗಬೇಕು. ಅದಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಂಟ್ರಾಕ್ಟ್ ಪದ್ದತಿ ಶಾಶ್ವತೀಕರಣವನ್ನು ರದ್ದುಗೊಳಿಸಲು ರಾಜ್ಯ ಸರ್ಕಾರವೂ ಹೋರಾಡಬೇಕು. ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಕಂಟ್ರಾಕ್ಟ್ ಪದ್ದತಿಯನ್ನು ತೆಗೆದುಹಾಕಬೇಕು. ಉಚ್ಛ ನ್ಯಾಯಾಲಯವೇ ಅನೇಕ ಬಾರಿ ಎಚ್ಚರಿಸಿರುವ ಕನಿಷ್ಟ ವೇತನವನ್ನು ಹಾಗೂ ಸಮಾನ ಕೆಲಸಕ್ಕೆ ಸಮಾನ ವೇತನವನ್ನು ಜಾರಿಗೆ ತರಬೇಕು.
4. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಬೆಳೆಯುತ್ತಿರುವ ಖಾಸಗೀ ಹಿಡಿತ ಹಾಗೂ ಸುಲಿಗೆಯನ್ನು ನಿಯಂತ್ರಿಸಲು ಕ್ರಮಕೈಗೊಳ್ಳಬೇಕು ಮತ್ತು ಉಚಿತ ಹಾಗೂ ಉಚ್ಛ ಸರ್ಕಾರಿ ಶಿಕ್ಷಣ ಮತ್ತು ಚಿಕಿತ್ಸೆ ಲಭ್ಯವಾಗುವಂತೆ ಮಾಡಬೇಕು.
5. ಬಡವರ ಬಹುತೇಕ ದುಡಿಮೆಯನ್ನೆಲ್ಲಾ ಬಾಟಲಿ ದಣಿಗಳ ಪಾಲಾಗಿಸುತ್ತಿರುವ ಹಾಗೂ ಯುವಜನರನ್ನು ದುಷ್ಟಚಟದ ದಾಸರನ್ನಾಗಿಸುತ್ತಿರುವ ಮಧ್ಯಪಾನವನ್ನು ನಿಶೇಧಿಸುವ ನಿಟ್ಟಿನಲ್ಲಿ ಸರ್ಕಾರ ಹೆಜ್ಜೆ ಇಕ್ಕಬೇಕು. ಕನಿಷ್ಟ ಮೊದಲ ಹಂತವಾಗಿ ಮಧ್ಯವ್ಯಸನ ತಗ್ಗಿಸುವ ಟಾರ್ಗೆಟ್ ಹಾಕಿ ಫಲಿತಾಂಶ ತೋರಬೇಕು. ಇಡೀ ದೇಶದಲ್ಲಿ ಏಕ ಕಾಲದಲ್ಲಿ ಮಧ್ಯಪಾನ ನಿಷೇಧಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು.
6. ಧಾರ್ಮಿಕ ಸಹಬಾಳ್ವೆಯನ್ನು ಉತ್ತೇಜಿಸಬೇಕು. ಧಾರ್ಮಿಕ ದ್ವೇಷ, ಸಾಂಸ್ಕøತಿಕ ಅಸಹನೆ, ಆಹಾರ ಪದ್ದತಿಗಳ ಹೇರಿಕೆಯಂತಹ ಕ್ರಮಗಳನ್ನು ಪ್ರಚೋದಿಸುವ ಸಂಘ ಸಂಸ್ಥೆಗಳನ್ನು ನಿಷೇಧಿಸಬೇಕು.
7. ಮೀಸಲಾತಿಯಂತಹ ಸಂಕೀರ್ಣ ಸಮಸ್ಯೆಗಳಿಗೆ ಸಮಗ್ರ ಉತ್ತರ ಕಂಡುಕೊಳ್ಳಲು ಕಾಲಮಿತಿಯೊಳಗೆ ಪರಿಹಾರ ಸೂಚಿಸುವ ಸಾಮಾಜಿಕ ಮನ್ನಣೆ ಹೊಂದಿರುವ ಸಮಿತಿಯನ್ನು ರಚಿಸಬೇಕು. ಅದರ ಶಿಫಾರಸುಗಳನ್ನು ದಿಟ್ಟವಾಗಿ ಜಾರಿ ಮಾಡುವ ಮೂಲಕ ಸಾಮಾಜಿಕ ನ್ಯಾಯವನ್ನು ಖಾತ್ರಿಗೊಳಸಿಬೇಕು ಮತ್ತು ಸಾಮಾಜಿಕ ಕಲಹಕ್ಕೆ ಕೊನೆ ಹಾಡಬೇಕು.
8. ಅಲ್ಪಸಂಖ್ಯಾತರ ಸ್ಥಿತಿಗತಿಯಲ್ಲಿ ಬದಲಾವಣೆ ತರಲು ಈಗಾಗಲೇ ಸಾಚಾರ್ ಕಮಿಟಿಯ ಸೂಕ್ಷ್ಮಮತಿ ಶಿಫಾರಸುಗಳು ಇರುವುದರಿಂದ ಅವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು.
9. ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ವಿಶೇಷ ಅಭಿಯಾನ ಆರಂಭಿಸಬೇಕು. ಅವರ ಸ್ವಾವಲಂಬಿ ಶಕ್ತಿ ವೃದ್ಧಿಸುವಂತೆ ಮಾಡಲು ಹಾಗೂ ಅವರ ಸ್ಥಾನ ಮತ್ತು ಹಕ್ಕಿನ ಬಗ್ಗೆ ಪ್ರಜ್ಞೆ ಸಾಮಾಜಿಕ ಪ್ರಜ್ಞೆ ಹೆಚ್ಚಾಗುವಂತೆ ಮಾಡಲು ಸಾಮಾಜಿಕ ಅಭಿಯಾನ ಆರಂಭಿಸಬೇಕು. ಸಾಮಾಜಿಕ ಸಂಘ ಸಂಸ್ಥೆಗಳನ್ನು ಅದರಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು.
10. ನಿರ್ಲಕ್ಷಿತರಲ್ಲಿ ನಿರ್ಲಕ್ಷಿತರಾಗಿ ಬದುಕುತ್ತಿರುವ ತೃತೀಯ ಲಿಂಗೀಯರು, ವಿಕಲಚೇತನರು, ವೇಶ್ಯೆಯರು, ವೃದ್ಧರು ಹಾಗೂ ನಿರಾಶ್ರಿತರ ಬಗ್ಗೆ ಅಂತಃಕರಣವುಳ್ಳ ಪುನರ್ವಸತಿ ಕ್ರಮಗಳನ್ನು ಆಚರಣೆಗೆ ತರಬೇಕು.
ಇದೆಲ್ಲವನ್ನು ಮಾಡಲೇಬೇಕು. ಸರ್ಕಾರಗಳು ಈ ನಿಟ್ಟಿನಲ್ಲಿ ಕೆಲವು ಹೆಜ್ಜೆಗಳನ್ನಾದರೂ ಇಡುವಂತೆ ಮಾಡುವ ನಿಟ್ಟಿನಲ್ಲಿ ನಮ್ಮ ಹೋರಾಟಗಳು  ನಡೆಯಬೇಕಿದೆ.   ಜನಪರ ಆಳ್ವಿಕೆ ನೀಡುವುದು ಜಾತ್ಯತೀತ ಪಕ್ಷಗಳ ಉಳಿವು ಮತ್ತು ಬೆಳವಣಿಗೆಗೆ ಹೇಗೆ ಪೂರ್ವ ಶರತ್ತೋ ಹಾಗೆಯೇ ನಿಜವಾದ ಜನಪರ ಶಕ್ತಿಗಳು ಪರ್ಯಾಯ ಪಕ್ಷಗಳನ್ನು ಕಟ್ಟಿದರೆ ಸಾಲದು, ಪರ್ಯಾಯ ಜನ ಚಳವಳಿಯನ್ನು ಕಟ್ಟಿಬೆಳೆಸಬೇಕು. ವಿಶಾಲ ತಳಹದಿಯ ಪ್ರಬಲ ಜನಾಂದೋಲನಗಳನ್ನು ರೂಪಿಸಬೇಕಾದ ಕರ್ತವ್ಯ ನಮ್ಮ ಮುಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋವಿಡ್-19 ಲಸಿಕೆ ಮತ್ತು ಯುವ ವಯಸ್ಕರ ಹಠಾತ್ ಸಾವುಗಳ ನಡುವೆ ಯಾವುದೇ ವೈಜ್ಞಾನಿಕ ಸಂಬಂಧ ಕಂಡುಬಂದಿಲ್ಲ: ಏಮ್ಸ್ ಅಧ್ಯಯನ

ನವದೆಹಲಿ: ದೆಹಲಿಯ ಏಮ್ಸ್‌ನಲ್ಲಿ ನಡೆಸಿದ ಒಂದು ವರ್ಷದ ಸಮಗ್ರ, ಶವಪರೀಕ್ಷೆ ಆಧಾರಿತ ವೀಕ್ಷಣಾ ಅಧ್ಯಯನವು, ಯುವ ವಯಸ್ಕರಲ್ಲಿ ಕೋವಿಡ್-19 ಲಸಿಕೆಯನ್ನು ಹಠಾತ್ ಸಾವುಗಳೊಂದಿಗೆ ಸಂಪರ್ಕಿಸುವ ಯಾವುದೇ ಪುರಾವೆಗಳು ಕಂಡುಬಂದಿಲ್ಲ, ಇದು ಕೋವಿಡ್ ಲಸಿಕೆಗಳ...

ಬಿಜೆಪಿ ಜನ ನಾಟಕೀಯರು, ದೇಶದ್ರೋಹಿಗಳು; ಅವರನ್ನು ಅಧಿಕಾರದಿಂದ ಕಿತ್ತೊಗೆಯಬೇಕು: ಮಲ್ಲಿಕಾರ್ಜುನ ಖರ್ಗೆ

"ಬಿಜೆಪಿಯವರು 'ಗದ್ದಾರ್‌ಗಳು' (ದೇಶದ್ರೋಹಿಗಳು) ಮತ್ತು 'ಡ್ರಮೆಬಾಜ್' (ನಾಟಕೀಯದಲ್ಲಿ ತೊಡಗಿಸಿಕೊಳ್ಳುವವರು). ಅವರನ್ನು ಅಧಿಕಾರದಿಂದ ತೆಗೆದುಹಾಕಬೇಕು" ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ಕೊಟ್ಟಿದ್ದಾರೆ.  ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ವೋಟ್ ಚೋರಿ ಕುರಿತ...

ಆಸ್ಟ್ರೇಲಿಯಾ | ಸಿಡ್ನಿಯ ಬೋಂಡಿ ಬೀಚ್‌ನಲ್ಲಿ ಗುಂಡಿನ ದಾಳಿ : 12 ಜನರು ಸಾವು

ಭಾನುವಾರ (ಡಿ.14) ಆಸ್ಟ್ರೇಲಿಯಾದ ಸಿಡ್ನಿ ನಗರದ ಪ್ರಸಿದ್ಧ ಬೋಂಡಿ ಬೀಚ್‌ನಲ್ಲಿ ಆಯೋಜಿಸಿದ್ದ ಯಹೂದಿ ಸಮುದಾಯದ 'ಹನುಕ್ಕಾ' ಕಾರ್ಯಕ್ರಮದಲ್ಲಿ ಇಬ್ಬರು ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ ಪರಿಣಾಮ 12 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ....

ಕೋಲ್ಕತ್ತಾದಲ್ಲಿ ನಡೆದ ಅವ್ಯವಸ್ಥೆ: ‘ಮೆಸ್ಸಿ ಭಾರತ ಪ್ರವಾಸ 2025’ರ ಪ್ರಮುಖ ಆಯೋಜಕರಿಗೆ 14 ದಿನಗಳ ಕಸ್ಟಡಿ

ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೊಡ್ಡ ಪ್ರಮಾಣದ ಅವ್ಯವಸ್ಥೆ ಉಂಟಾದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಪೊಲೀಸರು ಲಿಯೋನೆಲ್ ಮೆಸ್ಸಿ ಅವರ ಇಂಡಿಯಾ ಟೂರ್ 2025 ರ ಪ್ರಮುಖ ಆಯೋಜಕರನ್ನು ವಶಕ್ಕೆ ಪಡೆದಿದ್ದಾರೆ.  ಈ ಘಟನೆಯು ಪ್ರತಿಭಟನೆಗಳಿಗೆ...

ಹೆಡ್ಗೆವಾರ್ ಸ್ಮಾರಕ ಭೇಟಿ ತಪ್ಪಿಸಿಕೊಂಡ ಅಜಿತ್ ಪವಾರ್ : ನಮ್ಮದು ಅಂಬೇಡ್ಕರ್, ಫುಲೆ ಸಿದ್ಧಾಂತ ಎಂದ ಎನ್‌ಸಿಪಿ ವಕ್ತಾರ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಭಾನುವಾರ (ಡಿ.14) ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಸಂಸ್ಥಾಪಕ ಕೆ.ಬಿ. ಹೆಡ್ಗೆವಾರ್ ಸ್ಮಾರಕ ಭೇಟಿ ಕಾರ್ಯಕ್ರಮದಿಂದ ತಪ್ಪಿಸಿಕೊಂಡಿದ್ದು, ಅವರ ಪಕ್ಷ ಎನ್‌ಸಿಪಿ ರಾಜ್ಯದ ಅಭಿವೃದ್ಧಿಗಾಗಿ ಮಹಾಯುತಿ ಮೈತ್ರಿಕೂಟಕ್ಕೆ ಸೇರಿರುವುದಾಗಿ ಒತ್ತಿ...

ದೆಹಲಿಗೆ ಬರುವ ನಮ್ಮ ವಾಹನಗಳನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ : ಡಿಕೆಶಿ

ದೆಹಲಿ ಬರುತ್ತಿರುವ ನಮ್ಮವರ ವಾಹನಗಳನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ ಎಂಬ ಮಾಹಿತಿ ಬಂದಿದೆ. ಈ ಬಿಜೆಪಿಯವರಿಗೆ ಯಾಕಿಷ್ಟು ಆತಂಕ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಶ್ನಿಸಿದರು. ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯ ರಾಮ್‌ಲೀಲಾ...

ಹೊಸೂರು ವಿಮಾನ ನಿಲ್ದಾಣ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ 12 ಹಳ್ಳಿಗಳಿಂದ 2,900 ಎಕರೆ ಸ್ವಾಧೀನ ಸಾಧ್ಯತೆ

ಚೆನ್ನೈ: ಬೆಂಗಳೂರಿಗೆ ಬಹಳ ಹತ್ತಿರದಲ್ಲಿರುವ ವೇಗವಾಗಿ ಬೆಳೆಯುತ್ತಿರುವ ಕೈಗಾರಿಕಾ ನಗರ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ 12 ಹಳ್ಳಿಗಳಲ್ಲಿ ಸರ್ಕಾರಿ ಸ್ವಾಮ್ಯದ 800 ಎಕರೆ ಸೇರಿದಂತೆ ಸುಮಾರು 3,000...

ಸೋನಮ್ ವಾಂಗ್‌ಚುಕ್ ಸಂಸ್ಥೆ ಅನುಕರಣೀಯ ಕೆಲಸ ಮಾಡುತ್ತಿದೆ, ಯುಜಿಸಿ ಮಾನ್ಯತೆ ನೀಡಬೇಕು ಎಂದ ಸಂಸದೀಯ ಸಮಿತಿ

ಲಡಾಖ್‌ನ ಶಿಕ್ಷಣ ತಜ್ಞ ಹಾಗೂ ಹೋರಾಟಗಾರ ಸೋನಮ್ ವಾಂಗ್‌ಚುಕ್ ಸ್ಥಾಪಿಸಿರುವ ಹಿಮಾಲಯನ್ ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್ (ಹೆಚ್‌ಐಎಎಲ್‌) 'ಅನುಕರಣೀಯ' ಕೆಲಸ ಮಾಡುತ್ತಿದೆ. ಹಾಗಾಗಿ, ಆ ಸಂಸ್ಥೆಗೆ ವಿಶ್ವವಿದ್ಯಾಲಯ ಅನುದಾನ ಆಯೋಗದಿಂದ (ಯುಜಿಸಿ) ಮಾನ್ಯತೆ...

ಮುಸ್ಲಿಂ ಎಂದು ಪರಿಶೀಲಿಸಿ ಗುಂಪುಹಲ್ಲೆ: ತೀವ್ರ ದಾಳಿಗೆ ಒಳಗಾಗಿದ್ದ 50 ವರ್ಷದ ಬಟ್ಟೆ ವ್ಯಾಪಾರಿ  ಸಾವು

ನವಾಡಾ ಜಿಲ್ಲೆಯ ರೋಹ್ ಪೊಲೀಸ್ ಠಾಣೆ ಪ್ರದೇಶದಲ್ಲಿ ನಡೆದ ಗುಂಪು ಹಲ್ಲೆಯಲ್ಲಿ ಕ್ರೂರವಾಗಿ ಹಲ್ಲೆಗೊಳಗಾಗಿದ್ದ 50 ವರ್ಷದ ಬಟ್ಟೆ ವ್ಯಾಪಾರಿ ಮೊಹಮ್ಮದ್ ಅಥರ್ ಹುಸೇನ್ ಶುಕ್ರವಾರ ತಡರಾತ್ರಿ ಬಿಹಾರ್ಷರೀಫ್ ಸದರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಡಿಸೆಂಬರ್...

ಅಮೆರಿಕಾದ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಗುಂಡಿನ ದಾಳಿ: 2 ಸಾವು, 8 ಜನರಿಗೆ ತೀವ್ರ ಗಾಯಗಳಾಗಿವೆ

ಅಮೆರಿಕಾದ ರೊಡ್ ಐಲ್ಯಂಡ್ ರಾಜ್ಯದ ಪ್ರೊವಿಡೆನ್ಸ್ ನಗರದಲ್ಲಿರುವ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಪರೀಕ್ಷೆ ಸಮಯದಲ್ಲಿ ಎಂಜಿನಿಯರಿಂಗ್ ಕಟ್ಟಡದಲ್ಲಿ ಗುಂಡಿನ ದಾಳಿ ನಡೆದಿದೆ, ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 8 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.  ಡಿಸೆಂಬರ್ 13ರ,...