Homeಮುಖಪುಟಕಂಗನಾ, ಪದ್ಮಶ್ರೀ ಮತ್ತು ತುಕ್ಡೇಗ್ಯಾಂಗ್

ಕಂಗನಾ, ಪದ್ಮಶ್ರೀ ಮತ್ತು ತುಕ್ಡೇಗ್ಯಾಂಗ್

- Advertisement -
- Advertisement -

ಮೊನ್ನೆಯಷ್ಟೇ ಕೇಂದ್ರ ಸರ್ಕಾರ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಪ್ರತಿಷ್ಠಿತ ಗೌರವದ ಪ್ರಶಸ್ತಿಗಳನ್ನು ನೀಡಿ ಹಲವರನ್ನು ಗೌರವಿಸಿದೆ. ಅದರಲ್ಲಿ ಇಡೀ ದೇಶದ ಗಮನ ಸೆಳೆದದ್ದು ಸಿನಿಮಾ ಕ್ಷೇತ್ರದಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿರುವುದು. ಅಂದಹಾಗೆ ಕಂಗನಾ ಇತ್ತೀಚೆಗಷ್ಟೇ ಸಿನಿಮಾ ಇಂಡಸ್ಟ್ರಿಗೆ ಬಂದವರು. ಅಂತಹ ಗಮನಾರ್ಹವಾದ, ವಿಭಿನ್ನವಾದ ಸಿನಿಮಾಗಳನ್ನೇನೂ ಆಕೆ ಮಾಡಿಲ್ಲ. ನಟಿಸಿರುವುದು ಸುಮಾರು 34 ಸಿನಿಮಾಗಳಷ್ಟೇ. ಹಾಗೆ ನೋಡಿದರೆ ನೂರಾರು ಸಿನಿಮಾಗಳನ್ನು ಮಾಡಿ, ಸಿನಿಮಾರಂಗಕ್ಕೆ ಮೆರಗು ತಂದುಕೊಟ್ಟು, ತಮ್ಮದೇ ಆದ ಛಾಪು ಮೂಡಿಸಿರುವ ಹಲವಾರು ಸ್ಟಾರ್‍ಗಳು ಇನ್ನೂ ನಮ್ಮ ಮಧ್ಯದಲ್ಲೇ ಇದ್ದಾರೆ. ಕೆಲವರು ನಮ್ಮನ್ನೆಲ್ಲಾ ಅಗಲಿದ್ದಾರೆ. ಅವರಾರಿಗೂ ಸಿಗದ ಪದ್ಮಶ್ರೀ ಪ್ರಶಸ್ತಿ ಕಂಗನಾಗೆ ಮಾತ್ರ ಏಕೆ ಎಂಬುದು ಸಿನಿ ಅಭಿಮಾನಿಗಳಿಂದ ಹಿಡಿದು ಹಲವರ ಪ್ರಶ್ನೆ. ಇಂತಹ ಪ್ರಶ್ನೆಗಳಿಗೆ ಉತ್ತರವೂ ನಮ್ಮೆದುರಿಗೇ ಇದೆ. ಇತ್ತೀಚೆಗೆ ಜೆಎನ್‍ಯು ವಿದ್ಯಾರ್ಥಿಗಳ ಮೇಲೆ ಸಂಘಿ ಭಯೋತ್ಪಾದಕರು ನಡೆಸಿದ ಹಲ್ಲೆಯನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ದೀಪಿಕಾ ಭಾಗವಹಿಸಿದ್ದರು. ಕಪ್ಪುಡುಗೆ ಧರಿಸಿ ಏನು ಮಾತನಾಡದೆ ಪ್ರತಿಭಟನೆಯಲ್ಲಿ ಭಾಗವಹಿಸಿ ಬಂದಿದ್ದ ದೀಪಿಕಾ ಮೌನವಾಗಿಯೇ ದೇಶಕ್ಕೆ ಸಂದೇಶ ರವಾನಿಸಿದ್ದರು. ಇದೇ ವಿಚಾರವಾಗಿ ಸಂದರ್ಶನವೊಂದರಲ್ಲಿ ಕಂಗನಾಗೆ ದೀಪಿಕಾ ನಡೆಯ ಬಗ್ಗೆ ಕೇಳಿದ್ದ ಪ್ರಶ್ನೆಗೆ ದೀಪಿಕಾ ಬಗ್ಗೆ ನಾನೇನು ಹೇಳುವುದಿಲ್ಲ. ಆದರೆ ತುಕಡೆ ಗ್ಯಾಂಗ್ ಜೊತೆ ನಾನು ಹೋಗಿನಿಲ್ಲುವುದಿಲ್ಲ, ಅವರನ್ನು ನಾನು ವಿರೋಧಿಸುತ್ತೇನೆ ಎಂದು ಕಂಗನಾ ಹೇಳಿದ್ದರು. ಈ ಹೇಳಿಕೆಯೊಂದೇ ಸಾಕಾಗಿತ್ತು ಆಕೆ ಕೇಂದ್ರದ ಕೃಪಾಕಟಾಕ್ಷಕ್ಕೆ ಪಾತ್ರರಾಗಲು. ಅಂದಹಾಗೆ ಕಂಗನಾಗೆ ಆ ಮುಂಚೆ ಮತ್ತೊಂದು ಮಾಹಿತಿ ಗೊತ್ತಿರಲಿಲ್ಲ. ಕೇಂದ್ರ ಗೃಹಸಚಿವಾಲಯ ದೇಶದಲ್ಲಿ ಯಾವುದೇ ತುಕಡೇ ಗ್ಯಾಂಗ್‍ಗಳು ಇಲ್ಲವೆಂದು ಹೇಳುತ್ತದೆಂದು. ಏನೇ ಇರಲಿ ತುಕಡೇ ಗ್ಯಾಂಗ್ ಎಂಬ ಒಂದು ಪದದ ಉಚ್ಚಾರ ಕಂಗನಾರ ಜೀವಮಾನದ ಗಮನಾರ್ಹ ಸಾಧನೆಯಾಗಿ ಪರಿಣಮಿಸಿ ಪದ್ಮಶ್ರೀ ಒಲಿಯುವಂತೆ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...