Homeಅಂಕಣಗಳುಕಂಡದ್ದನ್ನು ಕಂಡಹಾಗೆ ಹೇಳಿದವರು....

ಕಂಡದ್ದನ್ನು ಕಂಡಹಾಗೆ ಹೇಳಿದವರು….

- Advertisement -
- Advertisement -

 ಗೌರಿ ಲಂಕೇಶ್
ಅಕ್ಟೋಬರ್ 26, 2005 (`ಕಂಡಹಾಗೆ’ ಸಂಪಾದಕೀಯದಿಂದ) |

ಅಮೆರಿಕಾ ಸರ್ಕಾರ ಕೊತಕೊತ ಕುದಿಯುತ್ತಿದೆ. ಯಾವ ದೇಶದ ಮೇಲೆ ಬೇಕಾದರು ದಾಳಿ ಮಾಡಿ ಮಾಡುವ ದೈವಾಜ್ಞೆ ತನಗಿದೆ ಎಂದು ಹೇಳುವ ಅದರ ಅಧ್ಯಕ್ಷ ಜಾರ್ಜ್ ಬುಷ್‍ಗೆ ಕಪಾಳಮೋಕ್ಷವಾಗಿದೆ.
ಸ್ವೀಡನ್ ದೇಶದಲ್ಲಿನ ನೊಬೆಲ್ ಸಮಿತಿ ಈ ವರ್ಷ ಮೊಹ್ಮದ್ ಎಲ್‍ಬರದೈಗೆ ಶಾಂತಿ ಪ್ರಶಸ್ತಿ ಪ್ರಕಟಿಸಿ ಬುಷ್‍ಗೆ ಸೆಡ್ಡು ಹೊಡೆದಿತ್ತಲ್ಲದೆ, ಈ ವಾರ ಹೆರಾಲ್ಡ್ ಪಿಂಟರ್ ಎಂಬ ಬ್ರಿಟಿಷ್ ನಾಟಕಕಾರನಿಗೆ ಪ್ರಶಸ್ತಿ ನೀಡಿ ಅಮೆರಿಕಕ್ಕೆ ಅವಮಾನಿಸಿದೆ. ನೊಬೆಲ್ ಪ್ರಶಸ್ತಿಗಳು ರಾಜಕೀಯ ಪ್ರೇರಿತಗೊಂಡು ಹಲವು ದಶಕಗಳೇ ಕಳೆದಿವೆ. ಹಾಗಾಗಿ ಅಮೆರಿಕಾಕ್ಕೆ ಎದುರಾಗಿ ಈ ಪ್ರಶಸ್ತಿಗಳನ್ನು ಘೋಷಿಸಿರುವುದು ರಾಜಕೀಯ ಕಾರಣಕ್ಕೂ ವಿಪರೀತ ಕುತೂಹಲ ಮೂಡಿಸಿವೆ.
2003ರಲ್ಲಿ ಇರಾಕ್‍ನಲ್ಲಿ weapons of mass destruction ಇದೆ ಎಂಬ ನೆಪವೊಡ್ಡಿ, ಸದ್ದಾಂ ಹುಸೇನ್‍ನಿಂದ ಜಗತ್ತನ್ನೇ ರಕ್ಷಿಸಬೇಕಿದೆ ಎಂದುಹೇಳಿ ಆ ದೇಶದ ಮೇಲೆ ಅಮೆರಿಕಾ ಹರಿಹಾಯ್ದುಹೋಗಲು ಸಜ್ಜಾಗುತ್ತಿದ್ದಾಗ, ಇಂಟರ್‍ನ್ಯಾಶನಲ್ ಅಟೋಮಿಕ್ ಎನರ್ಜಿ ಅಸೋಸಿಯೇಷನ್‍ನ ಮುಖ್ಯಸ್ಥರಾಗಿರುವ ಬರದೈರವರು `ಇರಾಕ್‍ನಲ್ಲಿ ಯಾವ weapons of mass destruction ಇಲ್ಲ’ ಎಂದೇಳಿ ಬುಷ್‍ಗೆ ಸವಾಲೊಡ್ಡಿದ್ದರು. ಆದರೂ ಬುಷ್ ಇರಾಕ್ ಮೇಲೆ ದಾಳಿಯಿಟ್ಟು ಬ್ರಿಟಿಷ್ ಸೈನ್ಯದ ಜೊತೆಗೂಡಿ ಸಾವಿರಾರು ಇರಾಕಿಗಳನ್ನು ಕೊಂದುಹಾಕಿ, ಆ ದೇಶದ ಆತ್ಮವನ್ನೇ ಸರ್ವನಾಶ ಮಾಡಿದ ತರುವಾಯ ಬುಷ್ ಮತ್ತು ಬ್ರಿಟನ್ನಿನ ಬ್ಲೇರ್ ಹೇಳಿದ್ದು ಅಪ್ಪಟ ಸುಳ್ಳು, ಬರದೈ ಹೇಳಿದ್ದೇ ಸತ್ಯ ಎಂದು ಇಡೀ ಜಗತ್ತಿಗೇ ಗೊತ್ತಾಗಿತ್ತು. ತನ್ನ ಕಪಟತನವನ್ನು ಬಹಿರಂಗಪಡಿಸಿದ ಬರದೈಗೆ ಶಾಂತಿ ಪ್ರಶಸ್ತಿ ಸಿಕ್ಕರೆ ಬುಷ್ ಸರ್ಕಾರಕ್ಕೆ ಅವಮಾನವಾಗದೇ ಮತ್ತಿನ್ನೇನು?
ಇನ್ನು ತನ್ನ ಬರಹಗಳಲ್ಲಿ ಪ್ರಸ್ತುತ ಸಾಮಾಜಿಕ ಮತ್ತು ರಾಜಕೀಯ ಅನ್ಯಾಯವನ್ನು ವಿಶ್ಲೇಷಿಸುವ ನಾಟಕಕಾರ ಹೆರಾಲ್ಡ್ ಪಿಂಟರ್ ಅದೆಂತಹ ಅಗ್ರಸ್ಥಾನದಲ್ಲಿದ್ದಾರೆಂದರೆ ಶೇಕ್ಸ್‍ಪಿರಿಯನ್, ಶೆಕಾವಿಯನ್ ಎಂಬ ಪದಗಳು ಗುಣವಾಚಕಗಳಾಗಿವೆಯೋ ಹಾಗೆ ಪಿಂಟರೆಸ್ಕ್ ಎಂಬ ಪದವೂ ಇಂಗ್ಲಿಷ್ ಭಾಷೆಯ ಅಂಗವಾಗಿ ಹೋಗಿದೆ. ಇವರು ಕಳೆದ ಮೂರು ವರ್ಷದಿಂದ ಬುಷ್‍ರನ್ನು ತರಾಟೆಗೆ ತೆಗೆದುಕೊಂಡಿದ್ದಲ್ಲದೆ ಬುಷ್ ಹೇಳಿದ್ದಕ್ಕೆಲ್ಲ ತಲೆದೂಗುವ ತನ್ನ ದೇಶದ ಪ್ರಧಾನಿ ಬ್ಲೇರ್‍ಗೂ ಕ್ಯಾಕರಿಸಿ ಉಗಿದಿದ್ದಾರೆ. ಅಮೆರಿಕಾದಲ್ಲಿ ಅಧಿಕಾರ ಹಿಡಿದಿರುವವರನ್ನು ಕ್ರಿಮಿನಲ್‍ಗಳ ಗ್ಯಾಂಗ್ ಎಂದೂ, ಬ್ಲೇರ್ ಅನ್ನು ಅಮೆರಿಕಾ ಸರ್ಕಾರದ ಬಾಡಿಗೆಗೆ ಹಿಡಿದಿರುವ ಕ್ರಿಶ್ಚಿಯನ್ ಗೂಂಡಾ ಎಂದೂ ಲೇವಡಿ ಮಾಡಿದ್ದರು. ಅಮೆರಿಕಾ ಮತ್ತು ಬ್ರಿಟನ್ ಸರ್ಕಾರಗಳಿಗೆ ಕಡಿವಾಣ ಹಾಕದಿದ್ದರೆ ಇಡೀ ಜಗತ್ತನ್ನೇ ಮುಳುಗಿಸಿಬಿಡುತ್ತಾರೆ ಎಂಬುದು ಅವರ ಪ್ರಾಮಾಣಿಕ ಆತಂಕ.
ಇಲ್ಲಿ ಬುಷ್ ಮತ್ತು ಬ್ಲೇರ್ ಬಗ್ಗೆ ಪಿಂಟರ್‍ರವರು ನೀಡಿರುವ ಹೇಳಿಕೆಯ ಸ್ಯಾಂಪಲ್‍ಗಳಿವೆ ನೋಡಿ; “ಇರಾಕ್ ಮೇಲೆ ನಡೆದದ್ದು ಭಯೋತ್ಪಾದನೆ. ಆದ್ದರಿಂದ ಬುಷ್ ಮತ್ತು ಬ್ಲೇರ್ ಭಯೋತ್ಪಾದಕರು. ಅವರಿಬ್ಬರನ್ನು ಬಂಧಿಸಿ ಯುದ್ಧಕೋರರೆಂದು ವಿಚಾರಣೆಗೊಳಪಡಿಸಿ ಶಿಕ್ಷಿಸಬೇಕು…..”, “ಅಮೆರಿಕಾ ಈಗ ನಾಜಿಗಳ ಜರ್ಮನಿಯನ್ನು ಹೋಲುತ್ತಿದೆ”, “ಜಗತ್ತಿನ ಅತಿ ಅನಾಹುತಕಾರಿ ಅಸ್ತ್ರಗಳು ಅತಿ ಅನಾಹುತಕಾರಿ ನಾಯಕರ ಕೈಯಲ್ಲಿರದಂತೆ ನೋಡಿಕೊಳ್ಳುತ್ತೇನೆ ಎಂದಿದ್ದಾನೆ ಬುಷ್. ಆದ್ದರಿಂದ ಅತಿ ಅನಾಹುತಕಾರಿ ನಾಯಕ ಯಾರೆಂದು ತಿಳಿದುಕೊಳ್ಳಲು ಆತ ಒಮ್ಮೆ ಕನ್ನಡಿಯಲ್ಲಿ ತನ್ನ ಮುಖವನ್ನು ನೋಡಿಕೊಳ್ಳಲಿ”, “ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಮತ್ತು ಬಿಡುಗಡೆಯ ಬಗ್ಗೆ ಮಾತಾಡುವ ಬುಷ್ ಹಾಗೂ ಬ್ಲೇರ್ ನಿಜವಾಗಲೂ ಹೇಳುತ್ತಿರುವುದು ಸಾವು, ನಾಶ ಮತ್ತು ಅಭದ್ರತೆಯ ಬಗ್ಗೆ”…..
ಇವೆಲ್ಲ ಇಂದು ಅಮೆರಿಕಾ ಸರ್ಕಾರ ಕೊತಕೊತ ಕುದಿಯುವಂತೆ ಮಾಡಿರುವುದು ಅಚ್ಚರಿಯೇನಲ್ಲ. ಭಿನ್ನಮತ, ವಾಕ್ ಸ್ವಾತಂತ್ರ್ಯ, ಮಾನವಹಕ್ಕುಗಳು, ದಬ್ಬಾಳಿಕೆ ವಿರೋಧಗಳು ನಿಜಕ್ಕೂ, `ನೋಬಲ್’, ಅಲ್ಲವೇ!?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ ಹಿಂಸಾಚಾರ: ಸೋರಿಕೆಯಾದ ಸಂಪೂರ್ಣ ಆಡಿಯೋ ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಿಲ್ಲ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 2023ರ ಜನಾಂಗೀಯ ಹಿಂಸಾಚಾರದಲ್ಲಿ ಮಣಿಪುರದ ಮಾಜಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪಾತ್ರವನ್ನು ಸೂಚಿಸಿರುವ ಅರ್ಜಿಯಲ್ಲಿ ಲಭ್ಯವಿರುವ ಸಂಪೂರ್ಣ ಸೋರಿಕೆಯಾದ ಆಡಿಯೋ ತುಣುಕುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಲಿಲ್ಲ ಎಂದು...

ಎಸ್‌ಐಆರ್‌ ಭಯಕ್ಕೆ ಮತ್ತೊಂದು ಬಲಿ: ಬಂಗಾಳದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ, ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ಸಂಬಂಧಿಸಿದ ಭಯದಿಂದ ವೃದ್ಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತರನ್ನು ರಣಘಾಟ್‌ನ...

MGNREGA ಬದಲು VB-G Ram G : ರಾಜ್ಯಗಳ ಮೇಲೆ 40 ಶೇಕಡ ಆರ್ಥಿಕ ಹೊರೆ

ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ 2005ರಲ್ಲಿ ಜಾರಿಗೆ ತಂದ ಮಹತ್ವಕಾಂಕ್ಷೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಮತ್ತು ಅದರಡಿ ರೂಪಿಸಲಾದ ನರೇಗಾ ಯೋಜನೆಯ ಹೆಸರನ್ನು ಬದಲಿಸಲು ಕೇಂದ್ರ...

ಕೇರಳ: ಕೊಲ್ಲಂ ಕಾರ್ಪೊರೇಷನ್‌ನಲ್ಲಿ 25 ವರ್ಷಗಳ ಎಲ್‌ಡಿಎಫ್‌ ಆಳ್ವಿಕೆ ಕೊನೆಗೊಳಿಸಿದ ಯುಡಿಎಫ್

2025 ರ ಕೇರಳ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳು ರಾಜ್ಯದಲ್ಲಿ ಅತ್ಯಂತ ಅಚ್ಚರಿಯ ರಾಜಕೀಯ ಫಲಿತಾಂಶಳನ್ನು ನೀಡಿವೆ. ಅದರಲ್ಲಿ, ಕೊಲ್ಲಂ ಕಾರ್ಪೊರೇಷನ್‌ನಲ್ಲಿ ಎಡಪಂಥೀಯ ಪ್ರಜಾಸತ್ತಾತ್ಮಕ ರಂಗದ ನಿರಂತರ 25 ವರ್ಷಗಳ ನಿಯಂತ್ರಣವನ್ನು ಯುನೈಟೆಡ್...

‘ಇಂಡಿಯಾ ಬಣಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ’: ಕಾಂಗ್ರೆಸ್‌ನ ‘ವೋಟ್ ಚೋರಿ’ ಅಭಿಯಾನದ ಬಗ್ಗೆ ಒಮರ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕಾಂಗ್ರೆಸ್‌ನ "ಮತ ಚೋರಿ" ಅಭಿಯಾನದಿಂದ ದೂರ ಉಳಿದಿದ್ದಾರೆ, ಈ ವಿಷಯವು ಒಟ್ಟಾರೆಯಾಗಿ ವಿರೋಧ ಪಕ್ಷದ ಇಂಡಿಯಾ ಬಣದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸೋಮವಾರ...

ಇಂಡಿಗೋ ವಿಮಾನ ರದ್ದತಿಗೆ ಸಂಬಂಧಿಸಿದ ಪಿಐಎಲ್ ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್

ನೂರಾರು ಇಂಡಿಗೋ ವಿಮಾನಗಳ ರದ್ದತಿಗೆ ನ್ಯಾಯಾಂಗ ಹಸ್ತಕ್ಷೇಪ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸೋಮವಾರ ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಅರ್ಜಿದಾರರು ತಮ್ಮ ದೂರುಗಳೊಂದಿಗೆ ದೆಹಲಿ ಹೈಕೋರ್ಟ್ ಅನ್ನು...

ಹಣ ಅಕ್ರಮ ವರ್ಗಾವಣೆ ಪ್ರಕರಣ : ಪತ್ರಕರ್ತ ಮಹೇಶ್ ಲಾಂಗಾಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

ವಂಚನೆ ಆರೋಪದ ಮೇಲೆ ದಾಖಲಾಗಿರುವ ಎರಡು ಎಫ್‌ಐಆರ್‌ಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪತ್ರಕರ್ತ ಮಹೇಶ್ ಲಾಂಗಾ ಅವರಿಗೆ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ (ಡಿ.15) ಮಧ್ಯಂತರ ಜಾಮೀನು ನೀಡಿದೆ. ಜಿಎಸ್‌ಟಿ ವಂಚನೆ...

‘ಮಹಿಳೆಯರು ಗಂಡಂದಿರ ಜೊತೆ ಮಲಗಲು ಮಾತ್ರ’: ಸಿಪಿಎಂ ನಾಯಕನ ಅಸೂಕ್ಷ್ಮ ಹೇಳಿಕೆಗೆ ವ್ಯಾಪಕ ಆಕ್ರೋಶ

ಮಲಪ್ಪುರಂ ಜಿಲ್ಲೆಯಲ್ಲಿ ಸಿಪಿಎಂ ಪ್ರಾದೇಶಿಕ ನಾಯಕ ಸಯೀದ್ ಅಲಿ ಮಜೀದ್ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುವಾಗ ಸ್ತ್ರೀದ್ವೇಷದ ಹೇಳಿಕೆಗಳನ್ನು ನೀಡಿದ ನಂತರ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.  ಸಯೀದ್ ಅಲಿ ಮಜೀದ್, ತೆನ್ನೆಲಾ ಪಂಚಾಯತ್ ವಾರ್ಡ್ ಅನ್ನು...

ಅಖ್ಲಾಕ್ ಹತ್ಯೆ ಪ್ರಕರಣ ಹಿಂತೆಗೆದುಕೊಳ್ಳುವುದು ನ್ಯಾಯಾಂಗ ಪ್ರಕ್ರಿಯೆ ಹಳಿತಪ್ಪಿಸುವ ಪ್ರಯತ್ನ: ಬೃಂದಾ ಕಾರಟ್

ರಾಜ್ಯಪಾಲರ ಅನುಮತಿಯೊಂದಿಗೆ ಮೊಹಮ್ಮದ್ ಅಖ್ಲಾಕ್ ಅವರ ಕೊಲೆ ಮತ್ತು ಗುಂಪು ಹತ್ಯೆಗೆ ಸಂಬಂಧಿಸಿದ ಪ್ರಕರಣವನ್ನು ಹಿಂತೆಗೆದುಕೊಳ್ಳುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಖಂಡಿಸಿ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದಿ) ಹಿರಿಯ ನಾಯಕಿ ಬೃಂದಾ ಕಾರಟ್...

ಮತ್ತೆ ಮುನ್ನೆಲೆಗೆ ಬಂದ ‘Avalkoppam’: ದಿಲೀಪ್ ಖುಲಾಸೆ ಬಳಿಕ ಕೇರಳದಾದ್ಯಂತ ಪ್ರತಿಭಟನೆ

ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿರುವ ನ್ಯಾಯಾಲಯದ ತೀರ್ಪಿಗೆ ಕೇರಳದಾದ್ಯಂತ ದೊಡ್ಡ ಮಟ್ಟದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. 2017ರಲ್ಲಿ ನಟಿ ಮೇಲೆ ದೌರ್ಜನ್ಯ ನಡೆದಾಗ...