Homeಮುಖಪುಟಕಣ್ಮರೆಯಾದ ಅಸ್ಸಾಂ ಎನ್‌ಆರ್‌ಸಿ ಡೇಟಾ! : ತಾಂತ್ರಿಕ ತೊಂದರೆಯೆಂದ ಗೃಹ ಸಚಿವಾಲಯ

ಕಣ್ಮರೆಯಾದ ಅಸ್ಸಾಂ ಎನ್‌ಆರ್‌ಸಿ ಡೇಟಾ! : ತಾಂತ್ರಿಕ ತೊಂದರೆಯೆಂದ ಗೃಹ ಸಚಿವಾಲಯ

- Advertisement -
- Advertisement -

ಕಳೆದ ಆಗಸ್ಟ್‌ನಲ್ಲಿ ಪ್ರಕಟವಾದ ಅಸ್ಸಾಂನ ರಾಷ್ಟ್ರೀಯ ನಾಗರಿಕರ ನೋಂದಣಿಯ (ಎನ್‌ಆರ್‌ಸಿ) ಅಂತಿಮ ದತ್ತಾಂಶ ಪಟ್ಟಿಯು ವೆಬ್‌ಸೈಟ್‌ನಿಂದ ಕಣ್ಮರೆಯಾಗಿದ್ದು ಕಳವಳಕ್ಕೆ ಕಾರಣವಾಗಿದೆ.

ಸುಪ್ರೀಂ ಕೋರ್ಟ್ ಆದೇಶದಂತೆ ಡೇಟಾವನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿತ್ತು. ಆದರೆ ಈಗ ಅದು ಕ್ಲೌಡ್‌ನಿಂದ ನಾಪತ್ತೆಯಾಗಿದ್ದೆ. ಇದರ ಕುರಿತು ಕೇಂದ್ರ ಗೃಹ ಸಚಿವಾಲಯವು ಎನ್ಆರ್‌ಸಿ ಡೇಟಾ ಸುರಕ್ಷಿತವಾಗಿದೆ ಮತ್ತು “ಕ್ಲೌಡ್‌ನಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳಾದ ಕಾರಣ ಅದು ಕಾಣುತ್ತಿಲ್ಲ. ಈ ಸಮಸ್ಯೆಯನ್ನು ಶೀಘ್ರದಲ್ಲಿಯೇ ಪರಿಹರಿಸಲಾಗುತ್ತಿದೆ ಎಂದು ತಿಳಿಸಿದೆ.

ಆದರೆ ಐಟಿ ಸಂಸ್ಥೆ ವಿಪ್ರೊ ಜೊತೆಗಿನ ಒಪ್ಪಂದವನ್ನು ನವೀಕರಿಸದೇ ಇರುವುದು ದತ್ತಾಂಶ ಕಣ್ಮರೆಗೆ ಕಾರಣ ಎಂದು ಎನ್‌ಆರ್‌ಸಿ ಅಧಿಕಾರಿಗಳು ಹೇಳಿಕೊಂಡಿದ್ದಾರೆ.

ಅಂತಿಮ ಪಟ್ಟಿಯನ್ನು ಆಗಸ್ಟ್ 31, 2019 ರಂದು ಪ್ರಕಟಿಸಿದೆ. ಅಸ್ಸಾಂ ಎನ್‌ಆರ್‌ಸಿಯಲ್ಲಿ ಭಾರತೀಯ ನಾಗರಿಕರನ್ನು ಹೊರಗಿಡುವ ಮತ್ತು ಸೇರ್ಪಡೆಗೊಳಿಸುವ ಸಂಪೂರ್ಣ ವಿವರವನ್ನು ಅದರ ಅಧಿಕೃತ ವೆಬ್‌ಸೈಟ್ ‘www.nrcassam.nic.in’ ನಲ್ಲಿ ಅಪ್‌ಲೋಡ್ ಮಾಡಲಾಗಿದೆ.

“ಬೃಹತ್ ಪ್ರಮಾಣದ ದತ್ತಾಂಶಕ್ಕಾಗಿ ಕ್ಲೌಡ್‌ ಸೇವೆಯನ್ನು ವಿಪ್ರೋ ಒದಗಿಸಿದ್ದರು ಮತ್ತು ಅವರ ಒಪ್ಪಂದವು ಕಳೆದ ವರ್ಷ ಅಕ್ಟೋಬರ್ 19 ರವರೆಗೆ ಇತ್ತು. ಆದಾಗ್ಯೂ, ಇದನ್ನು ನವೀಕರಿಸಲಿಲ್ಲ. ಆದ್ದರಿಂದ, ಡಿಸೆಂಬರ್ 15 ರಿಂದ ಡೇಟಾ ಆಫ್‌ಲೈನ್‌‌ಗೆ ಹೋಗಿತು. ಇದನ್ನು ವಿಪ್ರೋ ಅಮಾನತುಗೊಳಿಸಿದ ನಂತರ ಡಿಸೆಂಬರ್ 24 ರಂದು ನಾನು ಅಧಿಕಾರ ವಹಿಸಿಕೊಂಡಿದ್ದೇನೆ “ಎಂದು ಎನ್ಆರ್ಸಿ ರಾಜ್ಯ ಸಂಯೋಜಕ ಹಿತೇಶ್ ದೇವ್ ಶರ್ಮಾ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಜನವರಿ 30 ರಂದು ನಡೆದ ಸಭೆಯಲ್ಲಿ ಅಗತ್ಯ ಸಮನ್ವಯತೆ ಮಾಡಲು ರಾಜ್ಯ ಸಮನ್ವಯ ಸಮಿತಿ ನಿರ್ಧರಿಸಿದೆ ಮತ್ತು ಫೆಬ್ರವರಿ ಮೊದಲ ವಾರದಲ್ಲಿ ವಿಪ್ರೊಗೆ ಪತ್ರ ಬರೆದಿದೆ ಎಂದು ಅವರು ಹೇಳಿದರು. “ಒಮ್ಮೆ ವಿಪ್ರೊ ಡೇಟಾವನ್ನು ಲೈವ್ ಮಾಡಿದ ನಂತರ, ಅದು ಸಾರ್ವಜನಿಕರಿಗೆ ಲಭ್ಯವಾಗಲಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ಜನರು ಅದನ್ನು ಪ್ರವೇಶಿಸಲು ಸಾಧ್ಯವಾಗುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಶರ್ಮಾ ಮಂಗಳವಾರ ಹೇಳಿದರು.

ಈ ಬೆಳವಣಿಗೆಯನ್ನು ಕಾಂಗ್ರೆಸ್‌ ತೀವ್ರವಾಗಿ ಟೀಕಿಸಿದ್ದು, ನಿಗೂಢ ಬೆಳವಣಿಗೆ ಎಂದು ಕರೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...