Homeಮುಖಪುಟಕಥುವಾ ಅತ್ಯಾಚಾರ: 3 ಆರೋಪಿಗಳಿಗೆ ಜೀವಾವಧಿ, ಉಳಿದ ಮೂವರಿಗೆ 5 ವರ್ಷ ಸಜೆ

ಕಥುವಾ ಅತ್ಯಾಚಾರ: 3 ಆರೋಪಿಗಳಿಗೆ ಜೀವಾವಧಿ, ಉಳಿದ ಮೂವರಿಗೆ 5 ವರ್ಷ ಸಜೆ

- Advertisement -
- Advertisement -

ಅತ್ಯಚಾರದಲ್ಲಿ ಭಾಗಿಯಾದ 3 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ಸಾಕ್ಷ್ಯನಾಶ ಮಾಡಿದ ಉಳಿದ ಮೂವರಿಗೆ 5 ವರ್ಷ ಜೈಲು ಸಜೆಯ ಶಿಕ್ಷೆಯನ್ನು ಕೋರ್ಟ್ ಘೋಷಿಸಿದೆ. ದೀಪಕ್ ಖಜುರಿಯಾ, ಆನಂದ್ ದತ್ತಾ, ಸಾಂಜಿ ರಾಮ್ ಗೆ ಜೀವಾವಧಿ ಘೋಷಿಸಿದ್ದು, ತಿಲಕ್ ರಾಜ್, ಆನಂದ್ ದತ್ತಾ, ಸುರೇಂದರ್ ವರ್ಮಾ ಎಂಬ ಪೊಲೀಸರಿಗೆ 5 ವರ್ಷಗಳ ಜೈಲು ಸಜೆಯನ್ನು ವಿಧಿಸಲಾಗಿದೆ.

ಇಂದು ಬೆಳಿಗ್ಗೆ ಆರೋಪಿಗಳನ್ನು ಘೋಷಿಸಿದ್ದು ಸಂಜೆ 4.45ರ ವೇಳೆಗೆ ಶಿಕ್ಷೆಯ ಪ್ರಮಾಣವನ್ನು ಘೋಷಿಸಲಾಯಿತು.

ಕಥುವಾ ಪ್ರದೇಶ ಹಾಗೂ ಸುತ್ತಮುತ್ತ ಇರುವ ಅಲೆಮಾರಿಗಳನ್ನು ಭಯಪಡಿಸುವ ಸಲುವಾಗಿ ಹಾಗೂ ಅವರನ್ನು ಅಲ್ಲಿಂದ ಓಡಿಸುವ ಸಲುವಾಗಿಯೂ ಸಹ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕೊಲೆಯನ್ನು ಮಾಡಲಾಗಿದೆ ಎಂದು ಘೋರ ಸತ್ಯವು ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಕಳೆದ ವರ್ಷ ಜನವರಿ ತಿಂಗಳಿನಲ್ಲಿ ಎಂಟು ವರ್ಷ ಬಾಲಕಿಯರ ಸಾಮೂಹಿಕ ಬರ್ಬರ ಅತ್ಯಾಚಾರ, ಚಿತ್ರಹಿಂಸೆ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನ ಆರೋಪಿಗಳನ್ನು ದೋಷಿಗಳೆಂದು ಪಠಾಣ್ ಕೋರ್ಟ್ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಅತ್ಯಾಚಾರ ಆರೋಪಿಗಾಳದ ದೀಪಕ್ ಖಜುರಿಯಾ, ಆನಂದ್ ದತ್ತಾ, ಸಾಂಜಿ ರಾಮ್, ತಿಲಕ್ ರಾಜ್, ಸುರೇಂದ್ರ, ಪ್ರವೇಶ್ ದೋಷಿಗಳೆಂದು ಪಠಾಣ್ ನ್ಯಾಯಾಲಯ ತೀರ್ಪು ನೀಡಿದೆ. ಈ ಪ್ರಕರಣದಲ್ಲಿ ಆರೋಪ ಎದುರಿಸುತ್ತಿದ್ದ ವಿಶಾಲ್ ನನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ.

ಜನವರಿ 10, 2018ರಲ್ಲಿ ನಡೆದ ಅತ್ಯಾಚಾರ ಪ್ರಕರಣ ವಿಚಾರಣ ನಡೆಸಿದ ಪೊಲೀಸರು 2018 ರ ಎಪ್ರಿಲ್ ತಿಂಗಳಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. 8 ವರ್ಷದ ಬಾಲಕಿಗೆ ಮಾದಕ ಸೇವನೆ ಮಾಡಿಸಿ ದೇವಾಲಯವೊಂದರಲ್ಲಿ ಸತತ ನಾಲ್ಕು ದಿನಗಳ ಕಾಲ ಅತ್ಯಾಚಾರ ಮಾಡಿ ಕಲ್ಲಿನಿಂದ ಚಚ್ಚಿ ಕೊಲೆ ಮಾಡಲಾಗಿತ್ತು.

ಆ ಸಂದರ್ಭದಲ್ಲಿ ಕಾಶ್ಮೀರದಲ್ಲಿ ಆಡಳಿತದಲ್ಲಿದ್ದ ಬಿಜೆಪಿ-ಪೀಪಲ್ಸ್ ಡೆಮೊಕ್ರಾಟಿಕ್ ಪಾರ್ಟಿ (ಪಿಡಿಪಿ) ಮೈತ್ರಿಕೂಟದ ನಡುವೆ ಬಿಜೆಪಿ ನಾಯಕರು ಚೌಧುರಿ ಲಾಲ್ ಸಿಂಗ್ ಮತ್ತು ಪ್ರಕಾಶ್ ಗಂಗಾ ಈ ಇಬ್ಬರು ಆರೋಪಿಗಳ ರಕ್ಷಣೆಗೆ ನಿಂತಿದ್ದರು ಎಂಬುದು ವಿವಾದ ಸಹ ಆಯಿತು ಬಿಜೆಪಿ ಶಾಸಕ ರಾಜೀವ್ ಜಸ್ ರೊಟಿಯಾ ಎಂಬುವವರು ಆರೋಪಿಗಳ ಪರವಾಗಿ ಬಹಿರಂಗ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಇದನ್ನು ಬಹುತೇಕರು ಖಂಡಿಸಿದ್ದರು.

ಅಷ್ಟು ಮಾತ್ರವಲ್ಲದೇ ಸಂತ್ರಸ್ತೆಯ ಪರವಾಗಿ ವಕೀಲಿಕೆ ನಡೆಸಿದ್ದ ದೀಪಿಕಾ ಸಿಂಗ್ ರಾವತ್ ರವರ ಮೇಲೆ ವಕೀಲರ ಸಂಘದ ಅಧ್ಯಕ್ಷರಾದ ಬಿ.ಎಸ್ ಸಲಾತಿಯ ಎಂಬುವವರು ನ್ಯಾಯಾಲಕ್ಕೆ ಹಾಜರಾಗದಂತೆ ಬಹಿರಂಗವಾಗಿ ಬೆದರಿಕೆ ಹಾಕಿದ್ದ ಘಟನೆಯೂ ಸಹ ನಡೆದಿತ್ತು. ಅವರು ಕೇಸಿನಿಂದ ಹಿಂದೆ ಸರಿಯಬೇಕೆಂದು ಹಲವಾರು ಜೀವಬೆದರಿಕೆಯ ಕರೆಗಳು ಸಹ ದೀಪಿಕಾ ಸಿಂಗ್ ರವರಿಗೆ ಬಂದಿದ್ದವು. ತೀವ್ರ ಒತ್ತಡದ ಕಾರಣದಿಂದಾಗಿ ಕೊನೆಗೆ ಅವರು ಕೇಸಿನಿಂದ ಹಿಂದೆ ಸರಿಯಬೇಕಾಗಿತ್ತು.

ದೀಪಿಕಾ ಸಿಂಗ್ ರಾಜಾವತ್

ನಂತರ ಸಂತ್ರಸ್ತೆಯ ಪರವಾಗಿ ಮುಬಿನ್ ಫಾರೂಖಿ ಎಂಬುವವರು ವಕೀಲಿಕೆ ನಡೆಸಿದ್ದರು. ಇಂದು ಈ ಕೇಸಿನಲ್ಲಿ ತಿಲಕ್ ರಾಜ್, ಆನಂದ್ ದತ್ತಾ, ಸುರೇಂದರ್ ವರ್ಮಾ ಎಂಬ ಮೂವರು ಪೋಲಿಸರ ಮೇಲೆ ಸಾಕ್ಷ್ಯನಾಶದ ಆರೋಪ ಸಾಬೀತಾಗಿದೆ ಎಂದು ವಕೀಲರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...