Homeಅಂಕಣಗಳುಕನ್ನಡ ಸಾಹಿತ್ಯ ಪರಿಷತ್ ನಲ್ಲೊಬ್ಬ ಚೌಕಿದಾರ

ಕನ್ನಡ ಸಾಹಿತ್ಯ ಪರಿಷತ್ ನಲ್ಲೊಬ್ಬ ಚೌಕಿದಾರ

- Advertisement -
- Advertisement -

| ಹನುಮಂತ ಹಾಲಿಗೇರಿ |

ಕೊಳ್ಳೆಹೊಡೆಯುವವರ ಕೈಗೆ ದೇಶವನ್ನು ಕೊಟ್ಟುಬಿಟ್ಟು ನಾನು ದೇಶ ಕಾಯುವ ಚೌಕಿದಾರ ಅಂತ ಹೇಳ್ಕೊಂಡವನ ಟ್ರೋಲ್‍ಗಳನ್ನು ನಾವು ಕಳೆದ ಒಂದು ವಾರದಿಂದ ಗಮನಿಸುತ್ತಿದ್ದೇವೆ. ಅಂಥವನೇ ಇನ್ನೊಬ್ಬ ಚೌಕಿದಾರರಾದ ಮನು ಬಳಿಗಾರ್ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷಗಿರಿ ಖುರ್ಚಿಯಲ್ಲಿ ಕುಳಿತಿದ್ದಾರೆ. ಬಳಿಗಾರರು ಅಧ್ಯಕ್ಷರಾದ ಮೇಲೆ ಅವರ ಸರ್ವಾಧಿಕಾರದ ಸ್ವಯಂಕೃತ ತಪ್ಪುಗಳು ಒಂದೆರಡಲ್ಲ. ಈಗ ಸೂಕ್ಷ್ಮ ಸಂವೇದನೆಯ ಕವಯತ್ರಿ ರೂಪಾ ಹಾಸನ ಅವರು ಪರಿಷತ್ತಿನ ಅಜೀವ ಸದಸ್ಯತ್ವಕ್ಕೆ ನೀಡಿರುವ ರಾಜಿನಾಮೆ ಪಡೆದುಕೊಂಡು ಮತ್ತೊಮ್ಮೆ ಕನ್ನಡ ಸಾಂಸ್ಕೃತಿಕ ಜೀವಿಗಳಿಂದ ಗೇಲಿಗೊಳಗಾಗಿದ್ದಾರೆ.

ರೂಪಾ ಅವರು ರಾಜಿನಾಮೆ ನೀಡಿದರೆ ನಾನೇನು ಮಾಡಲಿ ಎಂದು ಅವರ ಆಪ್ತರ ಹತ್ತಿರ ಸಮರ್ಥಿಸಿಕೊಳ್ಳುತ್ತಿದ್ದಾರಂತೆ. `ಅವರೇನೋ ರಾಜಿನಾಮೆ ನೀಡಿದರು. ನೀವು ಕನ್ನಡ ಸಾಹಿತ್ಯ ಪರಿಷತ್ತಿಗೆ ಅಧ್ಯಕ್ಷ, ಯಾವುದನ್ನು ಸ್ವೀಕರಿಸಬೇಕು. ಯಾವುದನ್ನು ಸ್ವೀಕರಿಸಿಬಾರದು ಎಂಬ ಕಾಮನ್ ಸೆನ್ಸ್ ನಿನಗೆ ಇರಬೇಕಲ್ಲವೇ?’ ಎಂದು ಬಳಿಗಾರರ ಆಪ್ತರೇ ಹಿಂದೆಮುಂದೆ ಆಡಿಕೊಳ್ಳುತ್ತಿದ್ದಾರೆ.

ಅಷ್ಟಕ್ಕೂ ರೂಪಾ ಅವರೇನು ತಮ್ಮ ಸ್ವಾರ್ಥ ಸಾಧನೆಗಾಗಿ ರಾಜೀನಾಮೆ ನೀಡಿದವರಲ್ಲ. ಅವರ ರಾಜೀನಾಮೆಯ ಹಿಂದೆ ಕನ್ನಡ ಶಾಲೆಗಳ ಏಳ್ಗೆಯ ಕುರಿತು ಸರ್ಕಾರ ಮತ್ತು ಸಾಹಿತ್ಯ ಪರಿಷತ್ತುಗಳ ನಿರ್ಲಕ್ಷ್ಯದ ವಿರುದ್ಧದ ಪ್ರತಿರೋಧದ ದನಿ ಇತ್ತು. ಮನೆಯ ಯಜಮಾನ ದಾರಿ ತಪ್ಪಿದಾಗ ಅವನ ತಪ್ಪನ್ನು ಸರಿಪಡಿಸಿ ಸರಿ ದಾರಿಗೆ ತರುವ ಉದ್ದೇಶದಿಂದ ಕನ್ನಡ ಮನೆಯ ಹಿರಿಮಗಳಾಗಿ ರೂಪಾ ಅವರು ಈ ಪತ್ರವನ್ನು ಬರೆದಿದ್ದರೇನೋ, ರಾಜಿನಾಮೆಯನ್ನು ನೀಡಲೇಬೇಕೆಂಬ ಹಟವೇನು ಅವರಲ್ಲಿ ಇದ್ದಂತಿರಲಿಲ್ಲ. ಆದರೆ, ಬಳಿಗಾರರು ರೂಪಾ ಅವರ ಎತ್ತಿರುವ ಮುಖ್ಯ ಪ್ರಶ್ನೆಗಳಾವುದರ ಬಗ್ಗೆಯೂ ಕಿಂಚಿತ್ ಗಮನ ನೀಡದೇ ಆಯ್ತು ಬೀಡಮ್ಮ ಎನ್ನುವ ದುರಹಂಕಾರಿಯಂತೆ ರಾಜೀನಾಮೆ ಪತ್ರಕ್ಕೆ ಅಂಗೀಕಾರದ ಮುದ್ರೆ ಒತ್ತಿ ತಮ್ಮ ಉದ್ದಟತನ ಮೆರೆದಿದ್ದಾರೆ.

ರೂಪಾ ಹಾಸನ ಅವರು ಕಸಾಪದ ದುಂದುವೆಚ್ಚವನ್ನು ಮತ್ತು ಕನ್ನಡಪರ ನಿಷ್ಕಾಳಜಿಯನ್ನು ಪ್ರಶ್ನಿಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಚಂಪಾ ಅವರು ಅಧ್ಯಕ್ಷರಾಗಿದ್ದಾಗಲೂ ಹೀಗೆಯೇ ಅಜೀವ ಸದಸ್ಯತ್ವಕ್ಕೆ ರಾಜೀನಾಮೆ ಪತ್ರವನ್ನು ಕಳಿಸಿದ್ದರು. ಆದರೆ, ಒಬ್ಬ ಹಿರಿಯ ಜೀವಪರ ಕಾಳಜಿಯ ಸಾಹಿತಿಯೂ ಆಗಿರುವ ಚಂಪಾ ಅವರು ರೂಪಾ ಅವರನ್ನು ಕರೆಸಿಕೊಂಡು “ನಿನ್ನ ಅಜೀವ ಸದಸ್ಯತ್ವದ ರಾಜೀನಾಮೆಯನ್ನು ಸ್ವೀಕರಿಸಲು ನಾನೇನು ಅಜೀವ ಅಧ್ಯಕ್ಷನೇ. ಇನ್ನೆರಡು ವರ್ಷ ಅಷ್ಟೆ ನನ್ನ ಆಟ. ನಾನೆ ಅಜೀವ ಅಧ್ಯಕ್ಷನಲ್ಲವೆಂದ ಮೇಲೆ ನಾನ್ಹೇಗೆ ನಿನ್ನ ರಾಜೀನಾಮೆ ತೆಗೆದುಕೊಳ್ಳಲಿಕ್ಕಾಗುತ್ತೆ, ಆಗೂದಿಲ್ಲ. ಆದ್ರೆ ನೀನು ಎತ್ತಿರುವ ಪ್ರಶ್ನೆಗಳೆಲ್ಲವೂ ಮೌಲಿಕವಾದವು. ಕನ್ನಡ ಶಾಲೆಗಳ ಮುಚ್ಚುತ್ತಿರುವುದನ್ನು ನಾನು ವಿರೋಧಿಸುತ್ತೇನೆ. ಸರಕಾರದೊಂದಿಗೆ ಈ ಬಗ್ಗೆ ಮಾತನಾಡುತ್ತೇನೆ” ಎಂದು ಸಮಾಧಾನ ಮಾಡಿ ಕಳಿಸಿದ್ದರಂತೆ. ಆದರೆ, ಬಳಿಗಾರರು ಮಾತ್ರ ರೂಪಾ ಅವರ ಯಾವ ಪ್ರಶ್ನೆಗಳಿಗೂ ತಲೆ ಕೆಡಿಸಿಕೊಳ್ಳದೆ ರಾಜೀನಾಮೆಯನ್ನು ಸ್ವೀಕರಿಸುವ ಮೂಲಕ ಕಸಾಪದ ಅಜೀವ ಅಧ್ಯಕ್ಷರಾದವರಂತೆ ವರ್ತಿಸಿದ್ದಾರೆ. ಅವರ ಅಧಿಕಾರ ದಾಹದ ಬಗ್ಗೆ ಗೊತ್ತಿರದ್ದೇನಿಲ್ಲ. ಮೂರು ವರ್ಷದ ಅವಧಿಯನ್ನು ಬೈಲಾ ತಿದ್ದುಪಡಿ ಮಾಡಿಸಿಕೊಂಡು ಐದು ವರ್ಷಕ್ಕೆ ಏರಿಸಿಕೊಂಡಿರುವ ಅವರು ಅಜೀವ ಅಧ್ಯಕ್ಷಗಿರಿಗೂ ಏನಾದ್ರೂ ಹುನ್ನಾರ ಮಾಡಿದ್ರೂ ಮಾಡುವವರೇ ಎಂದು ಅವರ ಪಟಾಲಮ್ಮಿನ ಬಳಗದವರೇ ಮಾತಾಡಿಕೊಳ್ಳುತ್ತಿದ್ದಾರೆ.

ಮನು ಬಳಿಗಾರರ ಸರ್ವಾಧಿಕಾರಿ ಉದ್ದಟತನಗಳು ಒಂದೆರಡಲ್ಲ ಮತ್ತು ಇದೇ ಮೊದಲಲ್ಲ. ಈ ಹಿಂದೆ ಹಿರಿಯರಾದ ಎಂ.ಎಂ.ಕಲ್ಬುರ್ಗಿಯವರು ಹತ್ಯೆಯಾದಾಗ, ಆ ಹತ್ಯೆಯನ್ನು ವಿರೋಧಿಸಿ ಯುವ ಬರಹಗಾರರು ಕಸಾಪದ ಅರಳು ಪ್ರಶಸ್ತಿಯನ್ನು ವಾಪಸ್ ಮಾಡಿ ಪ್ರತಿಭಟನೆ ಮಾಡಿದ್ದರು. ಆಗ ಇದೇ ಬಳಿಗಾರರು “ಈ ಹುಡುಗರು ಪ್ರಚಾರಕ್ಕಾಗಿ ಇಂಥ ಅಗ್ಗದ ಗಿಮಿಕ್ ಮಾಡುತ್ತಿದ್ದಾರೆ” ಎಂದು ಲೂಜುಲೂಜಾಗಿ ಮಾತನಾಡುವ ಮೂಲಕ ತಮ್ಮ ಮರ್ಯಾದೆ ಕಳೆದುಕೊಂಡಿದ್ದರು. ತಮ್ಮ ಅಧಿಕಾರದ ಅವಧಿ ಮುಗಿಯಲು ಬಂದಾಗ ಕಸಾಪದ ಬೈಲಾವನ್ನೇ ಬದಲಾಯಿಸಿ ಮೂರು ವರ್ಷದ ಅವಧಿಯನ್ನು ಐದು ವರ್ಷಕ್ಕೆ ಏರಿಸಿಕೊಂಡರು. ಬೈಲಾ ಬದಲಾಯಿಸಿ ಐದು ವರ್ಷ ಮಾಡಿದ್ದು ಕಾನೂನು ಪ್ರಕಾರ ತಪ್ಪೇನೂ ಅಲ್ಲ, ಆದರೆ, ನಿಮಗೆ ಆತ್ಮಸಾಕ್ಷಿ ಅನ್ನೋದಿದ್ರೆ ಈಗ ಖುರ್ಚಿಯಿಂದ ಕೆಳಗಿಳಿಯಿರಿ. ಮುಂದಿನ ಅಧಿಕಾರಾವಧಿಯ ಅಧ್ಯಕ್ಷರು ಬೇಕಾದರೆ ಐದು ವರ್ಷ ಖುರ್ಚಿಯಲ್ಲಿರಲಿ ಎಂಬ ಪ್ರಜ್ಞಾವಂತರ ಕೂಗಿಗೆ ಬಳಿಗಾರರು ಕಿವಿಗೊಡುತ್ತಲೇ ಇಲ್ಲ.

ಇನ್ನು ಇತ್ತೀಚೆಗೆ ಧಾರವಾಡದಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಅಧ್ವಾನಗಳಂತೂ ಒಂದೆರಡಲ್ಲ. ಆರಂಭದಲ್ಲೇ ಸುಮಂಗಲಿಯರಿಂದ ಪೂರ್ಣಕುಂಭ ಮೆರವಣಿಗೆ ಎಂಬ ಕಂದಾಚಾರದ ವಿರುದ್ಧ ರಾಜ್ಯಾದ್ಯಂತ ಪ್ರತಿರೋಧ ಬುಗಿಲೆದ್ದರೂ ತಮ್ಮ ನವರಂದ್ರಗಳನ್ನೆಲ್ಲ ಮುಚ್ಚಿಕೊಂಡಿದ್ದ ಈ ಬಳಿಗಾರ ಸಾಹೇಬರು ಕೊನೆ ಕ್ಷಣದಲ್ಲಿ  ತಾವು ಅಂದುಕೊಂಡು ಸುಮಂಗಲಿಯರ ಕುಂಭ ಮೆರವಣಿಗೆಯನ್ನು ನಡೆಸಿ ತಮ್ಮ ಹಟವನ್ನೇ ಸಾಧಿಸಿದರು.

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಶೀಗ್ಲಿಯವರಾದ ಈ ಬಳಿಗಾರರ ಮೂಲತಃ ಗೌಡ್ಕಿ ಮನೆತನದಿಂದ ಬಂದವರು. ಆ ಜಮೀನ್ದಾರಿಕೆಯ ಪಳಿಯುಳಿಕೆಯೂ ಅವರ ನಡೆನುಡಿಗಳಲ್ಲಿ ಈಗಲೂ ಜೀವಂತವಾಗಿವೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಉನ್ನತ ಅಧಿಕಾರದ ಹುದ್ದೆಗಳನ್ನು ಕೂಡ ಅದೇ ಗೌಡ್ಕಿ ಗತ್ತಿನಲ್ಲಿಯೇ ನಿಭಾಯಿಸಿದ್ದರು. ಕುಂತರೂ, ನಿಂತರೂ ಭಲೆ, ಭಲೆ ಎನ್ನುವ, ಬಹುಫರಾಕ್ ಹೇಳುವ ಬಾಲಬಡುಕರಿಗೆ ಮಾತ್ರ ಬಹುತೇಕ ಅನುದಾನ ಮತ್ತು ಅವಕಾಶಗಳನ್ನು ನೀಡಿದವರು. ಮುಂದೆ ಈ ಬಾಲಬಡುಕರೇ ಇವರನ್ನು ಕಸಾಪ ಚುನಾವಣೆಯಲ್ಲಿ ಗೆಲ್ಲಿಸುವಲ್ಲಿ ನೆರವಾದರು. ಕೆಲವು ಪ್ರಜ್ಞಾವಂತ ಹಿರಿಯರು ಕೂಡ ಬಳಿಗಾರರನ್ನು ಚುನಾವಣೆಯ ಸಂದರ್ಭದಲ್ಲಿ ಬೆಂಬಲಿಸಿದ್ದು ವಿಷಾದನೀಯ. ಯಾಕಾದ್ರೂ ಈ ಪುಣ್ಯಾತ್ಮನನ್ನು ಗೆಲ್ಲಿಸಿದೆವೋ ಎಂದು ಈಗ ಅವರೆಲ್ಲ ಮುಖ ಕಿವುಚಿತ್ತಿದ್ದಾರಂತೆ.

ಒಟ್ನಲ್ಲಿ ಈ ಮನುಷ್ಯ ಮನು`ಸ್ಮತಿ’ ಬಳಿಗಾರ್ ಕಸಾಪವವನ್ನು ವಸಾಹತು ಮಾಡಿಕೊಂಡಿದ್ದು ಮತ್ತೊಮ್ಮೆ ಸಾಬೀತಾಗಿದೆ. ಒಂಚೂರು ಸಾಹಿತ್ಯಿಕ ಸಂವೇದನೆ ಇದ್ದಿದ್ದರೆ, ಒಂದಿಷ್ಟು ಕನ್ನಡ ಪುಸ್ತಕಗಳನ್ನು ಓದಿಕೊಂಡಿದ್ದರೆ, ಬಹುಶಃ ಬಳಿಗಾರರು ಹೀಗೆ ಮಾಡುತ್ತಿರಲಿಲ್ಲವೇನೋ. ಈಗಲೂ ಕಾಲ ಮಿಂಚಿಲ್ಲ. ಸಾಂಸ್ಕೃತಿಕ ವಲಯದ ಪ್ರಜ್ಞಾವಂತರೆಲ್ಲರೂ ಒಟ್ಟಾಗಿ ನೀನು ನಿನ್ನ ದುರಾಡಳಿತವನ್ನು ಬಿಡದಿದ್ದರೆ ನಾವೆಲ್ಲರೂ ಸೇರಿ ಅಜೀವ ಸದಸ್ಯತ್ವಕ್ಕೆ ರಾಜಿನಾಮೆಯನ್ನು ನೀಡಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ನೀಡಿ ತಿದ್ದಬೇಕಿದೆ. ಇಲ್ಲದಿದ್ದರೆ ರೂಪಾ ಅವರ ರಾಜೀನಾಮೆ ಅರ್ಥ ಕಳೆದುಕೊಳ್ಳುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...