Homeಅಂಕಣಗಳುಕನ್ನಡ ಸಾಹಿತ್ಯ ಪರಿಷತ್ ರಗಳೆ…

ಕನ್ನಡ ಸಾಹಿತ್ಯ ಪರಿಷತ್ ರಗಳೆ…

- Advertisement -
- Advertisement -

ಒಂದುಕಾಲಕ್ಕೆ ಕನ್ನಡಿಗರೆಲ್ಲರ ಆತ್ಮಾಭಿಮಾನದ ಪ್ರತೀಕದಂತಿದ್ದ ಕನ್ನಡ ಸಾಹಿತ್ಯ ಪರಿಷತ್ತು ಇತ್ತೀಚಿನ ದಿನಗಳಲ್ಲಿ ಸಲ್ಲದ ಅವಾಂತರಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿದೆ. ಇತ್ತೀಚೆಗಷ್ಟೇ ಧಾರವಾಡ ಸಾಹಿತ್ಯ ಸಮ್ಮೇಳನದಲ್ಲಿ ಪೂರ್ಣಕುಂಭದ ಕುರಿತಂತೆ ಎದ್ದಿದ್ದ ವಿವಾದ ಮಾಸುವ ಮುನ್ನವೇ ಇದೀಗ ಅಜೀವ ಸದಸ್ಯರೊಬ್ಬರು ಸಾಮುದಾಯಿಕ ಪ್ರತಿರೋಧದ ಪ್ರತೀಕವಾಗಿ ನೀಡಿದ್ದ ರಾಜೀನಾಮೆಯನ್ನು ಕಸಾಪ ಅಧ್ಯಕ್ಷರು ಅಂಗೀಕರಿಸುವ ಮೂಲಕ ಸಾಹಿತ್ಯ ವಲಯದಲ್ಲಿ ಮತ್ತೆ ಸುದ್ದಿಗೆ ಬಂದಿದೆ. ನ್ಯಾಯಪಥ ಪತ್ರಿಕೆಯು ಈ ಕುರಿತ ಚರ್ಚೆಯನ್ನು ಇಲ್ಲಿ ಶುರು ಮಾಡುತ್ತಿದೆ. ರೂಪಾ ಹಾಸನ್ ಅವರು ತಮ್ಮ ಅಜೀವ ಸದಸ್ಯತ್ವಕ್ಕೆ ನೀಡಿದ ರಾಜೀನಾಮೆ ಪತ್ರ, ಕಸಾಪ ಅಧ್ಯಕ್ಷರ ಈ ಕ್ರಮ ಪ್ರಶ್ನಿಸಿ ಬೆಂಗಳೂರು ನಗರ ಜಿಲ್ಲಾ ಕಸಾಪ ಗೌರವ ಸಂಚಾಲಕ ಲಿಂಗೇಶ್ ಅವರು ಬರೆದ ಬಹಿರಂಗ ಪತ್ರ, ಕಥೆಗಾರ ಹನುಮಂತ ಹಾಲಗೇರಿಯವರ ಒಟ್ಟಾರೆ ಒಳನೋಟ ಹಾಗೂ ಈ ವಿವಾದದ ಬಗ್ಗೆ ಸ್ವತಃ ಮನುಬಳಿಗಾರರು ನೀಡಿದ ಪುಟ್ಟ ಪ್ರತಿಕ್ರಿಯೆಯನ್ನು ಈ ಸಂಚಿಕೆಯಲ್ಲಿ ನೀಡಲಾಗಿದೆ. ಈ ಚರ್ಚೆಗೆ ಪ್ರತಿಕ್ರಿಯಿಸ ಬಯಸುವವರು ತಮ್ಮ ಅಭಿಪ್ರಾಯವನ್ನು ಪತ್ರಿಕೆಯ ಇಮೇಲ್ ಐಡಿ [email protected] ಗೆ ಕಳುಹಿಸಬಹುದು. ಪ್ರತಿಷ್ಠೆಗಳ ಕಾದಾಟಕ್ಕಿಂತ ಒಂದು ಆರೋಗ್ಯಕರ ಚರ್ಚೆ ಮಾತ್ರ ಕನ್ನಡಿಗರ ಈ `ಆತ್ಮಾಭಿಮಾನ’ವನ್ನು ವಿವಾದಗಳ ಹುತ್ತದಿಂದ ಹೊರಗೆಳೆದು ತರಬಲ್ಲದು ಎಂಬುದಷ್ಟೇ ಪತ್ರಿಕೆಯ ಆಶಯ…

ಶ್ರೀ ಮನು ಬಳಿಗಾರ್

ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು,

ಬೆಂಗಳೂರು.

– ಇವರಿಗೆ

ಮಾನ್ಯರೇ,

ವಿಷಯ: ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವಕ್ಕೆ [ಸಂಖ್ಯೆ-44892]

ರಾಜೀನಾಮೆ ನೀಡುವ ಕುರಿತು.

ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರೆಲ್ಲರ ಪ್ರಾತಿನಿಧಿಕ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವಂತದ್ದು. ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜನಪದ ಇವುಗಳ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿ ಪರಿಷತ್ತಿನ ಉದ್ದೇಶವಾಗಿರತಕ್ಕುದೆಂದು ನಿಬಂಧನೆಯಲ್ಲಿ ಘೋಷಿಸಲಾಗಿದೆಯಷ್ಟೇ.

ಆದರೆ ಪರಿಷತ್ತು ತನ್ನ ಮೂಲ ಉದ್ದೇಶವನ್ನು ಮರೆತು ಲಕ್ಷ, ಕೋಟಿಗಟ್ಟಲೆ ಹಣ ವ್ಯಯಿಸುತ್ತಾ ಅಖಿಲ ಭಾರತ, ಜಿಲ್ಲಾ, ತಾಲ್ಲೂಕು, ಹೋಬಳಿ ಸಮ್ಮೇಳನಗಳನ್ನು, ಅದ್ಧೂರಿ ಕಾರ್ಯಕ್ರಮಗಳನ್ನು ವರ್ಷವಿಡೀ, ರಾಜ್ಯಾದ್ಯಂತಾ ಆಯೋಜನೆ ಮಾಡುವುದರಲ್ಲೇ ಕಳೆದು ಹೋಗುತ್ತಿದೆ. ಕನ್ನಡ ನಾಡು-ನುಡಿಗೆ ಒದಗಿರುವ ಅತ್ಯಂತ ಸಂಕಷ್ಟದ ಸನ್ನಿವೇಶದಲ್ಲೂ ಪರಿಷತ್ತಿನ ಅದ್ಧೂರಿತನ, ನಾಡು ನುಡಿಯ ಜ್ವಲಂತ ಸಮಸ್ಯೆಗಳಿಗೆ ಕೇವಲ ತುಟಿ ಮರುಕ ತೋರಿ ಗಟ್ಟಿ ನಿಲುವು ತೆಗೆದುಕೊಳ್ಳದೇ, ಕನ್ನಡಿಗರೆಲ್ಲರ ಪರವಾಗಿ ನಿರ್ಣಾಯಕ ಪಾತ್ರವಹಿಸದೇ, ರಚನಾತ್ಮಕ ಕೆಲಸಗಳಲ್ಲಿ ತೊಡಗಿಕೊಳ್ಳದೇ, ಆಂದೋಲನವನ್ನು ಕಟ್ಟದೇ… ಅದ್ಧೂರಿ, ವೈಭವದ ಸಮ್ಮೇಳನಗಳಲ್ಲಿ ಮುಳುಗಿರುವುದು ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆಯಂತಾಗಿರುವುದು ವಿಪರ್ಯಾಸವೇ ಸರಿ.

ಜೊತೆಗೆ ಸಾರ್ವಜನಿಕರಿಂದ ಹಣ ವಸೂಲಿ ಮಾಡಿ, ಸರ್ಕಾರದಿಂದ ಕೋಟಿಗಟ್ಟಲೆ ಅನುದಾನ ಪಡೆದು ಅದ್ಧೂರಿ ಸಮ್ಮೇಳನಗಳನ್ನು, ಕಾರ್ಯಕ್ರಮಗಳನ್ನು ಹಳ್ಳಿಯಿಂದ ದಿಲ್ಲಿಯವರೆಗೆ ಆಯೋಜಿಸುವ ಸಾಹಿತ್ಯ ಪರಿಷತ್ತು ಮತ್ತದರ ಘಟಕಗಳು ತಾನು ಮಾಡುತ್ತಿರುವ ದುಂದು ವೆಚ್ಚದ ಲೆಕ್ಕವನ್ನು ಪಾರದರ್ಶಕವಾಗಿ ಸಾರ್ವಜನಿಕರಿಗಾಗಲೀ, ಕನಿಷ್ಠ ತನ್ನ ಸದಸ್ಯರಿಗಾಗಲೀ ಬಿಡುಗಡೆ ಮಾಡದೇ, ತನ್ನೊಳಗೇ ಗುಟ್ಟಾಗಿಟ್ಟುಕೊಳ್ಳುವ ಪರಿ ಅವ್ಯವಹಾರದ ಗುಮಾನಿಯನ್ನು ಹೆಚ್ಚಿಸುವ ಜೊತೆಗೆ ಇದು ಎಲ್ಲ ರೀತಿಯಲ್ಲೂ  ಕನ್ನಡಿಗರೆಲ್ಲರ ಪ್ರಾತಿನಿಧಿಕ ಸಂಸ್ಥೆಯ ಅಪ್ರಜಾಪ್ರಭುತ್ವವಾದಿ ನಿಲುವಾಗಿದೆ.

ಎಲ್ಲಕ್ಕಿಂತಾ ಮುಖ್ಯವಾಗಿ ಕನ್ನಡ ಶಾಲೆಗಳನ್ನು ವ್ಯವಸ್ಥಿತವಾಗಿ ಕತ್ತು ಮಿಸುಕಿ ಸಾಯಿಸಲಾಗುತ್ತಿದೆ. ಕನಿಷ್ಠ ಪ್ರಾಥಮಿಕ ಶಿಕ್ಷಣದಲ್ಲಾದರೂ ಕನ್ನಡ ಮತ್ತು ಇತರೇ ಮಾತೃಭಾಷೆಗಳು ಶಿಕ್ಷಣ ಮಾಧ್ಯಮವಾಗದಿದ್ದರೇ ಕನ್ನಡವೋ ಇತರ ಮಾತೃಭಾಷೆಗಳೋ ಹೇಗೆ ಉಳಿದೀತು? ಇದನ್ನು ಆಗುಮಾಡುವುದು ತನ್ನ ಉಸಿರು  ಎಂದು ಕೊಳ್ಳಬೇಕಾದ ಕನ್ನಡ  ಸಾಹಿತ್ಯ ಪರಿಷತ್ತು, ಕೇವಲ ಕಾಟಾಚಾರಕ್ಕೆ ಸರ್ಕಾರಗಳಿಗೆ ಪತ್ರ ಬರೆದು, ಮತ್ಯಾವ  ರಚನಾತ್ಮಕ  ಪ್ರಯತ್ನವನ್ನೂ  ಮಾಡದೇ, ಕೇವಲ ಸಮ್ಮೇಳನಗಳನ್ನು ಮಾಡಿ ಅಲ್ಲಿ ಕನ್ನಡ ಭಾಷೆ/ಶಾಲೆಯ ಪರವಾಗಿ ಪುಂಖಾನುಪುಂಖವಾಗಿ ಭಾಷಣ ಮಾಡಿಸಿ, ನಿರ್ಣಯಗಳನ್ನು ತೆಗೆದುಕೊಳ್ಳುವುದಕ್ಕಷ್ಟೇ ಸಿಮಿತವಾಗಿರುವುದು ಕನ್ನಡ ನಾಡು, ನುಡಿಯ ಅಣಕದಂತೆ ತೋರುತ್ತಿದೆ.

ಇವೇ ಕಾರಣಗಳಿಗಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯಳಾಗಿ ಮುಂದುವರೆಯುವುದು ನನಗೆ ಅಸಹನೀಯವೆನಿಸುತ್ತಿರುವುದರಿಂದ ನನ್ನ ಈ ರಾಜಿನಾಮೆ ಪತ್ರವನ್ನು ತಮಗೆ ಕಳಿಸುತ್ತಿದ್ದೇನೆ. ದಯಮಾಡಿ ಈಗ್ಗೆ 15 ವರ್ಷಗಳ ಹಿಂದೆ ಪಡೆದಿದ್ದ ಪರಿಷತ್ತಿನ ನನ್ನ ಸದಸ್ಯತ್ವವನ್ನು[ಸದಸ್ಯತ್ವ ಸಂಖ್ಯೆ-44892] ರದ್ದುಪಡಿಸುವ ಜೊತೆಗೆ ಕಸಾಪ ಚುನಾವಣೆಯ ಅರ್ಹ ಮತದಾರರ ಪಟ್ಟಿಯಿಂದ ನನ್ನ ಹೆಸರನ್ನು ಕೈಬಿಡಬೇಕೆಂದು ನಿಮ್ಮಲ್ಲಿ ವಿನಂತಿಸುತ್ತೇನೆ.

ಈ  ಕುರಿತು ತಮ್ಮಿಂದ ಶೀಘ್ರ ಉತ್ತರದ ನಿರೀಕ್ಷೆಯಲ್ಲಿರುವೆ.

ವಂದನೆಗಳೊಂದಿಗೆ,

ತಮ್ಮ ವಿಶ್ವಾಸಿ

ರೂಪ ಹಾಸನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...