Homeಅಂಕಣಗಳುಕನ್ನಡ ಸಾಹಿತ್ಯ ಪರಿಷತ್ ರಗಳೆ…

ಕನ್ನಡ ಸಾಹಿತ್ಯ ಪರಿಷತ್ ರಗಳೆ…

- Advertisement -
- Advertisement -

ಒಂದುಕಾಲಕ್ಕೆ ಕನ್ನಡಿಗರೆಲ್ಲರ ಆತ್ಮಾಭಿಮಾನದ ಪ್ರತೀಕದಂತಿದ್ದ ಕನ್ನಡ ಸಾಹಿತ್ಯ ಪರಿಷತ್ತು ಇತ್ತೀಚಿನ ದಿನಗಳಲ್ಲಿ ಸಲ್ಲದ ಅವಾಂತರಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿದೆ. ಇತ್ತೀಚೆಗಷ್ಟೇ ಧಾರವಾಡ ಸಾಹಿತ್ಯ ಸಮ್ಮೇಳನದಲ್ಲಿ ಪೂರ್ಣಕುಂಭದ ಕುರಿತಂತೆ ಎದ್ದಿದ್ದ ವಿವಾದ ಮಾಸುವ ಮುನ್ನವೇ ಇದೀಗ ಅಜೀವ ಸದಸ್ಯರೊಬ್ಬರು ಸಾಮುದಾಯಿಕ ಪ್ರತಿರೋಧದ ಪ್ರತೀಕವಾಗಿ ನೀಡಿದ್ದ ರಾಜೀನಾಮೆಯನ್ನು ಕಸಾಪ ಅಧ್ಯಕ್ಷರು ಅಂಗೀಕರಿಸುವ ಮೂಲಕ ಸಾಹಿತ್ಯ ವಲಯದಲ್ಲಿ ಮತ್ತೆ ಸುದ್ದಿಗೆ ಬಂದಿದೆ. ನ್ಯಾಯಪಥ ಪತ್ರಿಕೆಯು ಈ ಕುರಿತ ಚರ್ಚೆಯನ್ನು ಇಲ್ಲಿ ಶುರು ಮಾಡುತ್ತಿದೆ. ರೂಪಾ ಹಾಸನ್ ಅವರು ತಮ್ಮ ಅಜೀವ ಸದಸ್ಯತ್ವಕ್ಕೆ ನೀಡಿದ ರಾಜೀನಾಮೆ ಪತ್ರ, ಕಸಾಪ ಅಧ್ಯಕ್ಷರ ಈ ಕ್ರಮ ಪ್ರಶ್ನಿಸಿ ಬೆಂಗಳೂರು ನಗರ ಜಿಲ್ಲಾ ಕಸಾಪ ಗೌರವ ಸಂಚಾಲಕ ಲಿಂಗೇಶ್ ಅವರು ಬರೆದ ಬಹಿರಂಗ ಪತ್ರ, ಕಥೆಗಾರ ಹನುಮಂತ ಹಾಲಗೇರಿಯವರ ಒಟ್ಟಾರೆ ಒಳನೋಟ ಹಾಗೂ ಈ ವಿವಾದದ ಬಗ್ಗೆ ಸ್ವತಃ ಮನುಬಳಿಗಾರರು ನೀಡಿದ ಪುಟ್ಟ ಪ್ರತಿಕ್ರಿಯೆಯನ್ನು ಈ ಸಂಚಿಕೆಯಲ್ಲಿ ನೀಡಲಾಗಿದೆ. ಈ ಚರ್ಚೆಗೆ ಪ್ರತಿಕ್ರಿಯಿಸ ಬಯಸುವವರು ತಮ್ಮ ಅಭಿಪ್ರಾಯವನ್ನು ಪತ್ರಿಕೆಯ ಇಮೇಲ್ ಐಡಿ [email protected] ಗೆ ಕಳುಹಿಸಬಹುದು. ಪ್ರತಿಷ್ಠೆಗಳ ಕಾದಾಟಕ್ಕಿಂತ ಒಂದು ಆರೋಗ್ಯಕರ ಚರ್ಚೆ ಮಾತ್ರ ಕನ್ನಡಿಗರ ಈ `ಆತ್ಮಾಭಿಮಾನ’ವನ್ನು ವಿವಾದಗಳ ಹುತ್ತದಿಂದ ಹೊರಗೆಳೆದು ತರಬಲ್ಲದು ಎಂಬುದಷ್ಟೇ ಪತ್ರಿಕೆಯ ಆಶಯ…

ಶ್ರೀ ಮನು ಬಳಿಗಾರ್

ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು,

ಬೆಂಗಳೂರು.

– ಇವರಿಗೆ

ಮಾನ್ಯರೇ,

ವಿಷಯ: ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವಕ್ಕೆ [ಸಂಖ್ಯೆ-44892]

ರಾಜೀನಾಮೆ ನೀಡುವ ಕುರಿತು.

ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರೆಲ್ಲರ ಪ್ರಾತಿನಿಧಿಕ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವಂತದ್ದು. ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜನಪದ ಇವುಗಳ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿ ಪರಿಷತ್ತಿನ ಉದ್ದೇಶವಾಗಿರತಕ್ಕುದೆಂದು ನಿಬಂಧನೆಯಲ್ಲಿ ಘೋಷಿಸಲಾಗಿದೆಯಷ್ಟೇ.

ಆದರೆ ಪರಿಷತ್ತು ತನ್ನ ಮೂಲ ಉದ್ದೇಶವನ್ನು ಮರೆತು ಲಕ್ಷ, ಕೋಟಿಗಟ್ಟಲೆ ಹಣ ವ್ಯಯಿಸುತ್ತಾ ಅಖಿಲ ಭಾರತ, ಜಿಲ್ಲಾ, ತಾಲ್ಲೂಕು, ಹೋಬಳಿ ಸಮ್ಮೇಳನಗಳನ್ನು, ಅದ್ಧೂರಿ ಕಾರ್ಯಕ್ರಮಗಳನ್ನು ವರ್ಷವಿಡೀ, ರಾಜ್ಯಾದ್ಯಂತಾ ಆಯೋಜನೆ ಮಾಡುವುದರಲ್ಲೇ ಕಳೆದು ಹೋಗುತ್ತಿದೆ. ಕನ್ನಡ ನಾಡು-ನುಡಿಗೆ ಒದಗಿರುವ ಅತ್ಯಂತ ಸಂಕಷ್ಟದ ಸನ್ನಿವೇಶದಲ್ಲೂ ಪರಿಷತ್ತಿನ ಅದ್ಧೂರಿತನ, ನಾಡು ನುಡಿಯ ಜ್ವಲಂತ ಸಮಸ್ಯೆಗಳಿಗೆ ಕೇವಲ ತುಟಿ ಮರುಕ ತೋರಿ ಗಟ್ಟಿ ನಿಲುವು ತೆಗೆದುಕೊಳ್ಳದೇ, ಕನ್ನಡಿಗರೆಲ್ಲರ ಪರವಾಗಿ ನಿರ್ಣಾಯಕ ಪಾತ್ರವಹಿಸದೇ, ರಚನಾತ್ಮಕ ಕೆಲಸಗಳಲ್ಲಿ ತೊಡಗಿಕೊಳ್ಳದೇ, ಆಂದೋಲನವನ್ನು ಕಟ್ಟದೇ… ಅದ್ಧೂರಿ, ವೈಭವದ ಸಮ್ಮೇಳನಗಳಲ್ಲಿ ಮುಳುಗಿರುವುದು ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆಯಂತಾಗಿರುವುದು ವಿಪರ್ಯಾಸವೇ ಸರಿ.

ಜೊತೆಗೆ ಸಾರ್ವಜನಿಕರಿಂದ ಹಣ ವಸೂಲಿ ಮಾಡಿ, ಸರ್ಕಾರದಿಂದ ಕೋಟಿಗಟ್ಟಲೆ ಅನುದಾನ ಪಡೆದು ಅದ್ಧೂರಿ ಸಮ್ಮೇಳನಗಳನ್ನು, ಕಾರ್ಯಕ್ರಮಗಳನ್ನು ಹಳ್ಳಿಯಿಂದ ದಿಲ್ಲಿಯವರೆಗೆ ಆಯೋಜಿಸುವ ಸಾಹಿತ್ಯ ಪರಿಷತ್ತು ಮತ್ತದರ ಘಟಕಗಳು ತಾನು ಮಾಡುತ್ತಿರುವ ದುಂದು ವೆಚ್ಚದ ಲೆಕ್ಕವನ್ನು ಪಾರದರ್ಶಕವಾಗಿ ಸಾರ್ವಜನಿಕರಿಗಾಗಲೀ, ಕನಿಷ್ಠ ತನ್ನ ಸದಸ್ಯರಿಗಾಗಲೀ ಬಿಡುಗಡೆ ಮಾಡದೇ, ತನ್ನೊಳಗೇ ಗುಟ್ಟಾಗಿಟ್ಟುಕೊಳ್ಳುವ ಪರಿ ಅವ್ಯವಹಾರದ ಗುಮಾನಿಯನ್ನು ಹೆಚ್ಚಿಸುವ ಜೊತೆಗೆ ಇದು ಎಲ್ಲ ರೀತಿಯಲ್ಲೂ  ಕನ್ನಡಿಗರೆಲ್ಲರ ಪ್ರಾತಿನಿಧಿಕ ಸಂಸ್ಥೆಯ ಅಪ್ರಜಾಪ್ರಭುತ್ವವಾದಿ ನಿಲುವಾಗಿದೆ.

ಎಲ್ಲಕ್ಕಿಂತಾ ಮುಖ್ಯವಾಗಿ ಕನ್ನಡ ಶಾಲೆಗಳನ್ನು ವ್ಯವಸ್ಥಿತವಾಗಿ ಕತ್ತು ಮಿಸುಕಿ ಸಾಯಿಸಲಾಗುತ್ತಿದೆ. ಕನಿಷ್ಠ ಪ್ರಾಥಮಿಕ ಶಿಕ್ಷಣದಲ್ಲಾದರೂ ಕನ್ನಡ ಮತ್ತು ಇತರೇ ಮಾತೃಭಾಷೆಗಳು ಶಿಕ್ಷಣ ಮಾಧ್ಯಮವಾಗದಿದ್ದರೇ ಕನ್ನಡವೋ ಇತರ ಮಾತೃಭಾಷೆಗಳೋ ಹೇಗೆ ಉಳಿದೀತು? ಇದನ್ನು ಆಗುಮಾಡುವುದು ತನ್ನ ಉಸಿರು  ಎಂದು ಕೊಳ್ಳಬೇಕಾದ ಕನ್ನಡ  ಸಾಹಿತ್ಯ ಪರಿಷತ್ತು, ಕೇವಲ ಕಾಟಾಚಾರಕ್ಕೆ ಸರ್ಕಾರಗಳಿಗೆ ಪತ್ರ ಬರೆದು, ಮತ್ಯಾವ  ರಚನಾತ್ಮಕ  ಪ್ರಯತ್ನವನ್ನೂ  ಮಾಡದೇ, ಕೇವಲ ಸಮ್ಮೇಳನಗಳನ್ನು ಮಾಡಿ ಅಲ್ಲಿ ಕನ್ನಡ ಭಾಷೆ/ಶಾಲೆಯ ಪರವಾಗಿ ಪುಂಖಾನುಪುಂಖವಾಗಿ ಭಾಷಣ ಮಾಡಿಸಿ, ನಿರ್ಣಯಗಳನ್ನು ತೆಗೆದುಕೊಳ್ಳುವುದಕ್ಕಷ್ಟೇ ಸಿಮಿತವಾಗಿರುವುದು ಕನ್ನಡ ನಾಡು, ನುಡಿಯ ಅಣಕದಂತೆ ತೋರುತ್ತಿದೆ.

ಇವೇ ಕಾರಣಗಳಿಗಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯಳಾಗಿ ಮುಂದುವರೆಯುವುದು ನನಗೆ ಅಸಹನೀಯವೆನಿಸುತ್ತಿರುವುದರಿಂದ ನನ್ನ ಈ ರಾಜಿನಾಮೆ ಪತ್ರವನ್ನು ತಮಗೆ ಕಳಿಸುತ್ತಿದ್ದೇನೆ. ದಯಮಾಡಿ ಈಗ್ಗೆ 15 ವರ್ಷಗಳ ಹಿಂದೆ ಪಡೆದಿದ್ದ ಪರಿಷತ್ತಿನ ನನ್ನ ಸದಸ್ಯತ್ವವನ್ನು[ಸದಸ್ಯತ್ವ ಸಂಖ್ಯೆ-44892] ರದ್ದುಪಡಿಸುವ ಜೊತೆಗೆ ಕಸಾಪ ಚುನಾವಣೆಯ ಅರ್ಹ ಮತದಾರರ ಪಟ್ಟಿಯಿಂದ ನನ್ನ ಹೆಸರನ್ನು ಕೈಬಿಡಬೇಕೆಂದು ನಿಮ್ಮಲ್ಲಿ ವಿನಂತಿಸುತ್ತೇನೆ.

ಈ  ಕುರಿತು ತಮ್ಮಿಂದ ಶೀಘ್ರ ಉತ್ತರದ ನಿರೀಕ್ಷೆಯಲ್ಲಿರುವೆ.

ವಂದನೆಗಳೊಂದಿಗೆ,

ತಮ್ಮ ವಿಶ್ವಾಸಿ

ರೂಪ ಹಾಸನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...