Homeಅಂಕಣಗಳುಕನ್ನಡ ಸಾಹಿತ್ಯ ಪರಿಷತ್ ರಗಳೆ…

ಕನ್ನಡ ಸಾಹಿತ್ಯ ಪರಿಷತ್ ರಗಳೆ…

- Advertisement -
- Advertisement -

ಒಂದುಕಾಲಕ್ಕೆ ಕನ್ನಡಿಗರೆಲ್ಲರ ಆತ್ಮಾಭಿಮಾನದ ಪ್ರತೀಕದಂತಿದ್ದ ಕನ್ನಡ ಸಾಹಿತ್ಯ ಪರಿಷತ್ತು ಇತ್ತೀಚಿನ ದಿನಗಳಲ್ಲಿ ಸಲ್ಲದ ಅವಾಂತರಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿದೆ. ಇತ್ತೀಚೆಗಷ್ಟೇ ಧಾರವಾಡ ಸಾಹಿತ್ಯ ಸಮ್ಮೇಳನದಲ್ಲಿ ಪೂರ್ಣಕುಂಭದ ಕುರಿತಂತೆ ಎದ್ದಿದ್ದ ವಿವಾದ ಮಾಸುವ ಮುನ್ನವೇ ಇದೀಗ ಅಜೀವ ಸದಸ್ಯರೊಬ್ಬರು ಸಾಮುದಾಯಿಕ ಪ್ರತಿರೋಧದ ಪ್ರತೀಕವಾಗಿ ನೀಡಿದ್ದ ರಾಜೀನಾಮೆಯನ್ನು ಕಸಾಪ ಅಧ್ಯಕ್ಷರು ಅಂಗೀಕರಿಸುವ ಮೂಲಕ ಸಾಹಿತ್ಯ ವಲಯದಲ್ಲಿ ಮತ್ತೆ ಸುದ್ದಿಗೆ ಬಂದಿದೆ. ನ್ಯಾಯಪಥ ಪತ್ರಿಕೆಯು ಈ ಕುರಿತ ಚರ್ಚೆಯನ್ನು ಇಲ್ಲಿ ಶುರು ಮಾಡುತ್ತಿದೆ. ರೂಪಾ ಹಾಸನ್ ಅವರು ತಮ್ಮ ಅಜೀವ ಸದಸ್ಯತ್ವಕ್ಕೆ ನೀಡಿದ ರಾಜೀನಾಮೆ ಪತ್ರ, ಕಸಾಪ ಅಧ್ಯಕ್ಷರ ಈ ಕ್ರಮ ಪ್ರಶ್ನಿಸಿ ಬೆಂಗಳೂರು ನಗರ ಜಿಲ್ಲಾ ಕಸಾಪ ಗೌರವ ಸಂಚಾಲಕ ಲಿಂಗೇಶ್ ಅವರು ಬರೆದ ಬಹಿರಂಗ ಪತ್ರ, ಕಥೆಗಾರ ಹನುಮಂತ ಹಾಲಗೇರಿಯವರ ಒಟ್ಟಾರೆ ಒಳನೋಟ ಹಾಗೂ ಈ ವಿವಾದದ ಬಗ್ಗೆ ಸ್ವತಃ ಮನುಬಳಿಗಾರರು ನೀಡಿದ ಪುಟ್ಟ ಪ್ರತಿಕ್ರಿಯೆಯನ್ನು ಈ ಸಂಚಿಕೆಯಲ್ಲಿ ನೀಡಲಾಗಿದೆ. ಈ ಚರ್ಚೆಗೆ ಪ್ರತಿಕ್ರಿಯಿಸ ಬಯಸುವವರು ತಮ್ಮ ಅಭಿಪ್ರಾಯವನ್ನು ಪತ್ರಿಕೆಯ ಇಮೇಲ್ ಐಡಿ [email protected] ಗೆ ಕಳುಹಿಸಬಹುದು. ಪ್ರತಿಷ್ಠೆಗಳ ಕಾದಾಟಕ್ಕಿಂತ ಒಂದು ಆರೋಗ್ಯಕರ ಚರ್ಚೆ ಮಾತ್ರ ಕನ್ನಡಿಗರ ಈ `ಆತ್ಮಾಭಿಮಾನ’ವನ್ನು ವಿವಾದಗಳ ಹುತ್ತದಿಂದ ಹೊರಗೆಳೆದು ತರಬಲ್ಲದು ಎಂಬುದಷ್ಟೇ ಪತ್ರಿಕೆಯ ಆಶಯ…

ಶ್ರೀ ಮನು ಬಳಿಗಾರ್

ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು,

ಬೆಂಗಳೂರು.

– ಇವರಿಗೆ

ಮಾನ್ಯರೇ,

ವಿಷಯ: ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವಕ್ಕೆ [ಸಂಖ್ಯೆ-44892]

ರಾಜೀನಾಮೆ ನೀಡುವ ಕುರಿತು.

ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರೆಲ್ಲರ ಪ್ರಾತಿನಿಧಿಕ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವಂತದ್ದು. ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜನಪದ ಇವುಗಳ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿ ಪರಿಷತ್ತಿನ ಉದ್ದೇಶವಾಗಿರತಕ್ಕುದೆಂದು ನಿಬಂಧನೆಯಲ್ಲಿ ಘೋಷಿಸಲಾಗಿದೆಯಷ್ಟೇ.

ಆದರೆ ಪರಿಷತ್ತು ತನ್ನ ಮೂಲ ಉದ್ದೇಶವನ್ನು ಮರೆತು ಲಕ್ಷ, ಕೋಟಿಗಟ್ಟಲೆ ಹಣ ವ್ಯಯಿಸುತ್ತಾ ಅಖಿಲ ಭಾರತ, ಜಿಲ್ಲಾ, ತಾಲ್ಲೂಕು, ಹೋಬಳಿ ಸಮ್ಮೇಳನಗಳನ್ನು, ಅದ್ಧೂರಿ ಕಾರ್ಯಕ್ರಮಗಳನ್ನು ವರ್ಷವಿಡೀ, ರಾಜ್ಯಾದ್ಯಂತಾ ಆಯೋಜನೆ ಮಾಡುವುದರಲ್ಲೇ ಕಳೆದು ಹೋಗುತ್ತಿದೆ. ಕನ್ನಡ ನಾಡು-ನುಡಿಗೆ ಒದಗಿರುವ ಅತ್ಯಂತ ಸಂಕಷ್ಟದ ಸನ್ನಿವೇಶದಲ್ಲೂ ಪರಿಷತ್ತಿನ ಅದ್ಧೂರಿತನ, ನಾಡು ನುಡಿಯ ಜ್ವಲಂತ ಸಮಸ್ಯೆಗಳಿಗೆ ಕೇವಲ ತುಟಿ ಮರುಕ ತೋರಿ ಗಟ್ಟಿ ನಿಲುವು ತೆಗೆದುಕೊಳ್ಳದೇ, ಕನ್ನಡಿಗರೆಲ್ಲರ ಪರವಾಗಿ ನಿರ್ಣಾಯಕ ಪಾತ್ರವಹಿಸದೇ, ರಚನಾತ್ಮಕ ಕೆಲಸಗಳಲ್ಲಿ ತೊಡಗಿಕೊಳ್ಳದೇ, ಆಂದೋಲನವನ್ನು ಕಟ್ಟದೇ… ಅದ್ಧೂರಿ, ವೈಭವದ ಸಮ್ಮೇಳನಗಳಲ್ಲಿ ಮುಳುಗಿರುವುದು ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆಯಂತಾಗಿರುವುದು ವಿಪರ್ಯಾಸವೇ ಸರಿ.

ಜೊತೆಗೆ ಸಾರ್ವಜನಿಕರಿಂದ ಹಣ ವಸೂಲಿ ಮಾಡಿ, ಸರ್ಕಾರದಿಂದ ಕೋಟಿಗಟ್ಟಲೆ ಅನುದಾನ ಪಡೆದು ಅದ್ಧೂರಿ ಸಮ್ಮೇಳನಗಳನ್ನು, ಕಾರ್ಯಕ್ರಮಗಳನ್ನು ಹಳ್ಳಿಯಿಂದ ದಿಲ್ಲಿಯವರೆಗೆ ಆಯೋಜಿಸುವ ಸಾಹಿತ್ಯ ಪರಿಷತ್ತು ಮತ್ತದರ ಘಟಕಗಳು ತಾನು ಮಾಡುತ್ತಿರುವ ದುಂದು ವೆಚ್ಚದ ಲೆಕ್ಕವನ್ನು ಪಾರದರ್ಶಕವಾಗಿ ಸಾರ್ವಜನಿಕರಿಗಾಗಲೀ, ಕನಿಷ್ಠ ತನ್ನ ಸದಸ್ಯರಿಗಾಗಲೀ ಬಿಡುಗಡೆ ಮಾಡದೇ, ತನ್ನೊಳಗೇ ಗುಟ್ಟಾಗಿಟ್ಟುಕೊಳ್ಳುವ ಪರಿ ಅವ್ಯವಹಾರದ ಗುಮಾನಿಯನ್ನು ಹೆಚ್ಚಿಸುವ ಜೊತೆಗೆ ಇದು ಎಲ್ಲ ರೀತಿಯಲ್ಲೂ  ಕನ್ನಡಿಗರೆಲ್ಲರ ಪ್ರಾತಿನಿಧಿಕ ಸಂಸ್ಥೆಯ ಅಪ್ರಜಾಪ್ರಭುತ್ವವಾದಿ ನಿಲುವಾಗಿದೆ.

ಎಲ್ಲಕ್ಕಿಂತಾ ಮುಖ್ಯವಾಗಿ ಕನ್ನಡ ಶಾಲೆಗಳನ್ನು ವ್ಯವಸ್ಥಿತವಾಗಿ ಕತ್ತು ಮಿಸುಕಿ ಸಾಯಿಸಲಾಗುತ್ತಿದೆ. ಕನಿಷ್ಠ ಪ್ರಾಥಮಿಕ ಶಿಕ್ಷಣದಲ್ಲಾದರೂ ಕನ್ನಡ ಮತ್ತು ಇತರೇ ಮಾತೃಭಾಷೆಗಳು ಶಿಕ್ಷಣ ಮಾಧ್ಯಮವಾಗದಿದ್ದರೇ ಕನ್ನಡವೋ ಇತರ ಮಾತೃಭಾಷೆಗಳೋ ಹೇಗೆ ಉಳಿದೀತು? ಇದನ್ನು ಆಗುಮಾಡುವುದು ತನ್ನ ಉಸಿರು  ಎಂದು ಕೊಳ್ಳಬೇಕಾದ ಕನ್ನಡ  ಸಾಹಿತ್ಯ ಪರಿಷತ್ತು, ಕೇವಲ ಕಾಟಾಚಾರಕ್ಕೆ ಸರ್ಕಾರಗಳಿಗೆ ಪತ್ರ ಬರೆದು, ಮತ್ಯಾವ  ರಚನಾತ್ಮಕ  ಪ್ರಯತ್ನವನ್ನೂ  ಮಾಡದೇ, ಕೇವಲ ಸಮ್ಮೇಳನಗಳನ್ನು ಮಾಡಿ ಅಲ್ಲಿ ಕನ್ನಡ ಭಾಷೆ/ಶಾಲೆಯ ಪರವಾಗಿ ಪುಂಖಾನುಪುಂಖವಾಗಿ ಭಾಷಣ ಮಾಡಿಸಿ, ನಿರ್ಣಯಗಳನ್ನು ತೆಗೆದುಕೊಳ್ಳುವುದಕ್ಕಷ್ಟೇ ಸಿಮಿತವಾಗಿರುವುದು ಕನ್ನಡ ನಾಡು, ನುಡಿಯ ಅಣಕದಂತೆ ತೋರುತ್ತಿದೆ.

ಇವೇ ಕಾರಣಗಳಿಗಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯಳಾಗಿ ಮುಂದುವರೆಯುವುದು ನನಗೆ ಅಸಹನೀಯವೆನಿಸುತ್ತಿರುವುದರಿಂದ ನನ್ನ ಈ ರಾಜಿನಾಮೆ ಪತ್ರವನ್ನು ತಮಗೆ ಕಳಿಸುತ್ತಿದ್ದೇನೆ. ದಯಮಾಡಿ ಈಗ್ಗೆ 15 ವರ್ಷಗಳ ಹಿಂದೆ ಪಡೆದಿದ್ದ ಪರಿಷತ್ತಿನ ನನ್ನ ಸದಸ್ಯತ್ವವನ್ನು[ಸದಸ್ಯತ್ವ ಸಂಖ್ಯೆ-44892] ರದ್ದುಪಡಿಸುವ ಜೊತೆಗೆ ಕಸಾಪ ಚುನಾವಣೆಯ ಅರ್ಹ ಮತದಾರರ ಪಟ್ಟಿಯಿಂದ ನನ್ನ ಹೆಸರನ್ನು ಕೈಬಿಡಬೇಕೆಂದು ನಿಮ್ಮಲ್ಲಿ ವಿನಂತಿಸುತ್ತೇನೆ.

ಈ  ಕುರಿತು ತಮ್ಮಿಂದ ಶೀಘ್ರ ಉತ್ತರದ ನಿರೀಕ್ಷೆಯಲ್ಲಿರುವೆ.

ವಂದನೆಗಳೊಂದಿಗೆ,

ತಮ್ಮ ವಿಶ್ವಾಸಿ

ರೂಪ ಹಾಸನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...