Homeಅಂಕಣಗಳುಕನ್ನಡ ಸಾಹಿತ್ಯ ಪರಿಷತ್ ರಗಳೆ…

ಕನ್ನಡ ಸಾಹಿತ್ಯ ಪರಿಷತ್ ರಗಳೆ…

- Advertisement -
- Advertisement -

ಒಂದುಕಾಲಕ್ಕೆ ಕನ್ನಡಿಗರೆಲ್ಲರ ಆತ್ಮಾಭಿಮಾನದ ಪ್ರತೀಕದಂತಿದ್ದ ಕನ್ನಡ ಸಾಹಿತ್ಯ ಪರಿಷತ್ತು ಇತ್ತೀಚಿನ ದಿನಗಳಲ್ಲಿ ಸಲ್ಲದ ಅವಾಂತರಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿದೆ. ಇತ್ತೀಚೆಗಷ್ಟೇ ಧಾರವಾಡ ಸಾಹಿತ್ಯ ಸಮ್ಮೇಳನದಲ್ಲಿ ಪೂರ್ಣಕುಂಭದ ಕುರಿತಂತೆ ಎದ್ದಿದ್ದ ವಿವಾದ ಮಾಸುವ ಮುನ್ನವೇ ಇದೀಗ ಅಜೀವ ಸದಸ್ಯರೊಬ್ಬರು ಸಾಮುದಾಯಿಕ ಪ್ರತಿರೋಧದ ಪ್ರತೀಕವಾಗಿ ನೀಡಿದ್ದ ರಾಜೀನಾಮೆಯನ್ನು ಕಸಾಪ ಅಧ್ಯಕ್ಷರು ಅಂಗೀಕರಿಸುವ ಮೂಲಕ ಸಾಹಿತ್ಯ ವಲಯದಲ್ಲಿ ಮತ್ತೆ ಸುದ್ದಿಗೆ ಬಂದಿದೆ. ನ್ಯಾಯಪಥ ಪತ್ರಿಕೆಯು ಈ ಕುರಿತ ಚರ್ಚೆಯನ್ನು ಇಲ್ಲಿ ಶುರು ಮಾಡುತ್ತಿದೆ. ರೂಪಾ ಹಾಸನ್ ಅವರು ತಮ್ಮ ಅಜೀವ ಸದಸ್ಯತ್ವಕ್ಕೆ ನೀಡಿದ ರಾಜೀನಾಮೆ ಪತ್ರ, ಕಸಾಪ ಅಧ್ಯಕ್ಷರ ಈ ಕ್ರಮ ಪ್ರಶ್ನಿಸಿ ಬೆಂಗಳೂರು ನಗರ ಜಿಲ್ಲಾ ಕಸಾಪ ಗೌರವ ಸಂಚಾಲಕ ಲಿಂಗೇಶ್ ಅವರು ಬರೆದ ಬಹಿರಂಗ ಪತ್ರ, ಕಥೆಗಾರ ಹನುಮಂತ ಹಾಲಗೇರಿಯವರ ಒಟ್ಟಾರೆ ಒಳನೋಟ ಹಾಗೂ ಈ ವಿವಾದದ ಬಗ್ಗೆ ಸ್ವತಃ ಮನುಬಳಿಗಾರರು ನೀಡಿದ ಪುಟ್ಟ ಪ್ರತಿಕ್ರಿಯೆಯನ್ನು ಈ ಸಂಚಿಕೆಯಲ್ಲಿ ನೀಡಲಾಗಿದೆ. ಈ ಚರ್ಚೆಗೆ ಪ್ರತಿಕ್ರಿಯಿಸ ಬಯಸುವವರು ತಮ್ಮ ಅಭಿಪ್ರಾಯವನ್ನು ಪತ್ರಿಕೆಯ ಇಮೇಲ್ ಐಡಿ [email protected] ಗೆ ಕಳುಹಿಸಬಹುದು. ಪ್ರತಿಷ್ಠೆಗಳ ಕಾದಾಟಕ್ಕಿಂತ ಒಂದು ಆರೋಗ್ಯಕರ ಚರ್ಚೆ ಮಾತ್ರ ಕನ್ನಡಿಗರ ಈ `ಆತ್ಮಾಭಿಮಾನ’ವನ್ನು ವಿವಾದಗಳ ಹುತ್ತದಿಂದ ಹೊರಗೆಳೆದು ತರಬಲ್ಲದು ಎಂಬುದಷ್ಟೇ ಪತ್ರಿಕೆಯ ಆಶಯ…

ಶ್ರೀ ಮನು ಬಳಿಗಾರ್

ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು,

ಬೆಂಗಳೂರು.

– ಇವರಿಗೆ

ಮಾನ್ಯರೇ,

ವಿಷಯ: ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವಕ್ಕೆ [ಸಂಖ್ಯೆ-44892]

ರಾಜೀನಾಮೆ ನೀಡುವ ಕುರಿತು.

ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರೆಲ್ಲರ ಪ್ರಾತಿನಿಧಿಕ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವಂತದ್ದು. ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜನಪದ ಇವುಗಳ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿ ಪರಿಷತ್ತಿನ ಉದ್ದೇಶವಾಗಿರತಕ್ಕುದೆಂದು ನಿಬಂಧನೆಯಲ್ಲಿ ಘೋಷಿಸಲಾಗಿದೆಯಷ್ಟೇ.

ಆದರೆ ಪರಿಷತ್ತು ತನ್ನ ಮೂಲ ಉದ್ದೇಶವನ್ನು ಮರೆತು ಲಕ್ಷ, ಕೋಟಿಗಟ್ಟಲೆ ಹಣ ವ್ಯಯಿಸುತ್ತಾ ಅಖಿಲ ಭಾರತ, ಜಿಲ್ಲಾ, ತಾಲ್ಲೂಕು, ಹೋಬಳಿ ಸಮ್ಮೇಳನಗಳನ್ನು, ಅದ್ಧೂರಿ ಕಾರ್ಯಕ್ರಮಗಳನ್ನು ವರ್ಷವಿಡೀ, ರಾಜ್ಯಾದ್ಯಂತಾ ಆಯೋಜನೆ ಮಾಡುವುದರಲ್ಲೇ ಕಳೆದು ಹೋಗುತ್ತಿದೆ. ಕನ್ನಡ ನಾಡು-ನುಡಿಗೆ ಒದಗಿರುವ ಅತ್ಯಂತ ಸಂಕಷ್ಟದ ಸನ್ನಿವೇಶದಲ್ಲೂ ಪರಿಷತ್ತಿನ ಅದ್ಧೂರಿತನ, ನಾಡು ನುಡಿಯ ಜ್ವಲಂತ ಸಮಸ್ಯೆಗಳಿಗೆ ಕೇವಲ ತುಟಿ ಮರುಕ ತೋರಿ ಗಟ್ಟಿ ನಿಲುವು ತೆಗೆದುಕೊಳ್ಳದೇ, ಕನ್ನಡಿಗರೆಲ್ಲರ ಪರವಾಗಿ ನಿರ್ಣಾಯಕ ಪಾತ್ರವಹಿಸದೇ, ರಚನಾತ್ಮಕ ಕೆಲಸಗಳಲ್ಲಿ ತೊಡಗಿಕೊಳ್ಳದೇ, ಆಂದೋಲನವನ್ನು ಕಟ್ಟದೇ… ಅದ್ಧೂರಿ, ವೈಭವದ ಸಮ್ಮೇಳನಗಳಲ್ಲಿ ಮುಳುಗಿರುವುದು ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆಯಂತಾಗಿರುವುದು ವಿಪರ್ಯಾಸವೇ ಸರಿ.

ಜೊತೆಗೆ ಸಾರ್ವಜನಿಕರಿಂದ ಹಣ ವಸೂಲಿ ಮಾಡಿ, ಸರ್ಕಾರದಿಂದ ಕೋಟಿಗಟ್ಟಲೆ ಅನುದಾನ ಪಡೆದು ಅದ್ಧೂರಿ ಸಮ್ಮೇಳನಗಳನ್ನು, ಕಾರ್ಯಕ್ರಮಗಳನ್ನು ಹಳ್ಳಿಯಿಂದ ದಿಲ್ಲಿಯವರೆಗೆ ಆಯೋಜಿಸುವ ಸಾಹಿತ್ಯ ಪರಿಷತ್ತು ಮತ್ತದರ ಘಟಕಗಳು ತಾನು ಮಾಡುತ್ತಿರುವ ದುಂದು ವೆಚ್ಚದ ಲೆಕ್ಕವನ್ನು ಪಾರದರ್ಶಕವಾಗಿ ಸಾರ್ವಜನಿಕರಿಗಾಗಲೀ, ಕನಿಷ್ಠ ತನ್ನ ಸದಸ್ಯರಿಗಾಗಲೀ ಬಿಡುಗಡೆ ಮಾಡದೇ, ತನ್ನೊಳಗೇ ಗುಟ್ಟಾಗಿಟ್ಟುಕೊಳ್ಳುವ ಪರಿ ಅವ್ಯವಹಾರದ ಗುಮಾನಿಯನ್ನು ಹೆಚ್ಚಿಸುವ ಜೊತೆಗೆ ಇದು ಎಲ್ಲ ರೀತಿಯಲ್ಲೂ  ಕನ್ನಡಿಗರೆಲ್ಲರ ಪ್ರಾತಿನಿಧಿಕ ಸಂಸ್ಥೆಯ ಅಪ್ರಜಾಪ್ರಭುತ್ವವಾದಿ ನಿಲುವಾಗಿದೆ.

ಎಲ್ಲಕ್ಕಿಂತಾ ಮುಖ್ಯವಾಗಿ ಕನ್ನಡ ಶಾಲೆಗಳನ್ನು ವ್ಯವಸ್ಥಿತವಾಗಿ ಕತ್ತು ಮಿಸುಕಿ ಸಾಯಿಸಲಾಗುತ್ತಿದೆ. ಕನಿಷ್ಠ ಪ್ರಾಥಮಿಕ ಶಿಕ್ಷಣದಲ್ಲಾದರೂ ಕನ್ನಡ ಮತ್ತು ಇತರೇ ಮಾತೃಭಾಷೆಗಳು ಶಿಕ್ಷಣ ಮಾಧ್ಯಮವಾಗದಿದ್ದರೇ ಕನ್ನಡವೋ ಇತರ ಮಾತೃಭಾಷೆಗಳೋ ಹೇಗೆ ಉಳಿದೀತು? ಇದನ್ನು ಆಗುಮಾಡುವುದು ತನ್ನ ಉಸಿರು  ಎಂದು ಕೊಳ್ಳಬೇಕಾದ ಕನ್ನಡ  ಸಾಹಿತ್ಯ ಪರಿಷತ್ತು, ಕೇವಲ ಕಾಟಾಚಾರಕ್ಕೆ ಸರ್ಕಾರಗಳಿಗೆ ಪತ್ರ ಬರೆದು, ಮತ್ಯಾವ  ರಚನಾತ್ಮಕ  ಪ್ರಯತ್ನವನ್ನೂ  ಮಾಡದೇ, ಕೇವಲ ಸಮ್ಮೇಳನಗಳನ್ನು ಮಾಡಿ ಅಲ್ಲಿ ಕನ್ನಡ ಭಾಷೆ/ಶಾಲೆಯ ಪರವಾಗಿ ಪುಂಖಾನುಪುಂಖವಾಗಿ ಭಾಷಣ ಮಾಡಿಸಿ, ನಿರ್ಣಯಗಳನ್ನು ತೆಗೆದುಕೊಳ್ಳುವುದಕ್ಕಷ್ಟೇ ಸಿಮಿತವಾಗಿರುವುದು ಕನ್ನಡ ನಾಡು, ನುಡಿಯ ಅಣಕದಂತೆ ತೋರುತ್ತಿದೆ.

ಇವೇ ಕಾರಣಗಳಿಗಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯಳಾಗಿ ಮುಂದುವರೆಯುವುದು ನನಗೆ ಅಸಹನೀಯವೆನಿಸುತ್ತಿರುವುದರಿಂದ ನನ್ನ ಈ ರಾಜಿನಾಮೆ ಪತ್ರವನ್ನು ತಮಗೆ ಕಳಿಸುತ್ತಿದ್ದೇನೆ. ದಯಮಾಡಿ ಈಗ್ಗೆ 15 ವರ್ಷಗಳ ಹಿಂದೆ ಪಡೆದಿದ್ದ ಪರಿಷತ್ತಿನ ನನ್ನ ಸದಸ್ಯತ್ವವನ್ನು[ಸದಸ್ಯತ್ವ ಸಂಖ್ಯೆ-44892] ರದ್ದುಪಡಿಸುವ ಜೊತೆಗೆ ಕಸಾಪ ಚುನಾವಣೆಯ ಅರ್ಹ ಮತದಾರರ ಪಟ್ಟಿಯಿಂದ ನನ್ನ ಹೆಸರನ್ನು ಕೈಬಿಡಬೇಕೆಂದು ನಿಮ್ಮಲ್ಲಿ ವಿನಂತಿಸುತ್ತೇನೆ.

ಈ  ಕುರಿತು ತಮ್ಮಿಂದ ಶೀಘ್ರ ಉತ್ತರದ ನಿರೀಕ್ಷೆಯಲ್ಲಿರುವೆ.

ವಂದನೆಗಳೊಂದಿಗೆ,

ತಮ್ಮ ವಿಶ್ವಾಸಿ

ರೂಪ ಹಾಸನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...