Homeರಾಜಕೀಯಕಪ್ಪು ಹಣಕ್ಕೆ ಯಾವ ಗಡಿ?

ಕಪ್ಪು ಹಣಕ್ಕೆ ಯಾವ ಗಡಿ?

- Advertisement -
- Advertisement -

ವಿದೇಶಗಳಲ್ಲಿ ಭಾರತೀಯರು ಬಚ್ಚಿಟ್ಟಿರುವ ಕಪ್ಪುಹಣದ ಬಗ್ಗೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಪದೇಪದೇ ಸುದ್ದಿಯಾಗುತ್ತಿದೆ. ಈಗಿನ ಪ್ರಧಾನಿ ನರೇಂದ್ರ ಮೋದಿ ಅಂಡ್ ಕಂಪನಿ ತಾವು ಅಧಿಕಾರಕ್ಕೆ ಬಂದರೆ ವಿದೇಶಗಳಲ್ಲಿರುವ ಕಪ್ಪುಹಣವನ್ನು ವಾಪಸ್ ಭಾರತಕ್ಕೆ ತರುವುದಾಗಿ ಬೊಗಳೆ ಬಿಟ್ಟಿದ್ದೇ ಬಿಟ್ಟಿದ್ದು.

ಆ ಬೊಗಳೆ ಮಾತುಗಳನ್ನು ಪಕ್ಕಕ್ಕಿಟ್ಟು ವಾಸ್ತವಾಂಶಗಳನ್ನು ಪರಿಶಿಲಿಸೋಣ.

ಆರ್ಥಿಕ ಸಹಕಾರ ಮತ್ತು ಅಬಿವೃದ್ಧಿಗಾಗಿ ಸಂಘಟನೆ (ಒಇಸಿಡಿ)ಯಲ್ಲಿ ಭಾರತವನ್ನೂ ಒಳಗೊಂಡು 34 ಸದಸ್ಯ ರಾಷ್ಟ್ರಗಳಿವೆ. ಒಇಸಿಡಿ ಸಂಸ್ಥೆಯಲ್ಲಿ ಒಪ್ಪಿತ ನಿಯಮಾವಳಿ ಪ್ರಕಾರ, ಈ ದೇಶಗಳ ನಡುವಿನ ಆರ್ಥಿಕ ವಹಿವಾಟು ಹಾಗೂ ತೆರಿಗೆ ಪಾವತಿಗೆ ಸಂಬಂಧಿಸಿದ ಮಾಹಿತಿಗಳನ್ನು ಕಾಲಕಾಲಕ್ಕೆ ವಿನಿಮಯ ಮಾಡಿಕೊಳ್ಳಲಾಗುತ್ತಿದೆ.

2013-14ನೇ ಸಾಲಿನ ವ್ಯವಹಾರಗಳಿಗೆ ಸಂಬಂಧಿಸಿದ ಮಾಹಿತಿ ಇತ್ತೀಚೆಗೆ ಭಾರತ ಸರ್ಕಾರದ ಆರ್ಥಿಕ ಸಚಿವಾಲಯ ತಲುಪಿದೆ. ಆ ಮಾಹಿತಿ ಪ್ರಕಾರ ಕಳೆದ ಆರ್ಥಿಕ ವರ್ಷವೊಂದರಲ್ಲಿ 24,085 ತೆರಿಗೆ ವಂಚನೆ ಪ್ರಕರಣಗಳು ವಿವಿಧ ವಿದೇಶಿ ನೆಲಗಳಲ್ಲಿ ಪತ್ತೆಯಾಗಿವೆ.

10,372 ಪ್ರಕರಣಗಳು ನ್ಯೂಜಿಲ್ಯಾಂಡ್ ಒಂದರಲ್ಲೇ ಪತ್ತೆಯಾಗಿದೆ. ಉಳಿದಂತೆ ಸ್ಪೈನ್ – 4169, ಇಂಗ್ಲೆಂಡ್ – 3164, ಸ್ವೀಡನ್ – 2404, ಡೆನ್ಮಾರ್ಕ್ – 2145, ಫಿನ್‍ಲ್ಯಾಂಡ್ – 685, ಪೋರ್ಚುಗಲ್ – 625, ಜಪಾನ್ – 440 … ಪಟ್ಟಿ ಹೀಗೆ ಮುಂದುವರೆಯುತ್ತದೆ.

ಈಗ ನಮ್ಮ ಮುಂದೆ ಇರುವ ಪ್ರಶ್ನೆಯಿಷ್ಟೆ. ಬೂಸೀ ಬಸ್ಯಾ ಮೋದಿ ಈ ಮಾಹಿತಿಯನ್ನು ಆಧರಿಸಿ ಸೂಕ್ತ ತನಿಖೆ ನಡೆಸಿ ಬಡ ಭಾರತೀಯರ ಬೆವರಿನ ಫಲವನ್ನು ಬೊಕ್ಕಸ ಸೇರಿಸುವ ಕೆಲಸ ಮಾಡುತ್ತಾರೋ? ಅಥವಾ ಮಾಮೂಲಿಯಂತೆ ಕಳ್ಳರ ಕೂಟದ ಬಹುಪರಾಕಿನೊಂದಿಗೆ ಭ್ರಷ್ಟಾಚಾರದ ವಿರುದ್ಧ ತಮ್ಮ ಹೋರಾಟವ್ನು ಟಿವಿ, ಪೇಪರ್‍ಗಳಲ್ಲಿ ಮುಂದುವರೆಸುತ್ತಾರೋ?

 

ವಿದೇಶಿ ಮುಸುಕಿನಲ್ಲಿ ಕಳ್ಳ ಹಣ

2010ರ ಏಪ್ರಿಲ್‍ನಿಂದ 2013ರ ಮಾರ್ಚ್‍ವರೆಗಿನ ಮೂರು ವರ್ಷಗಳಲ್ಲಿ 8,78,962 ಕೋಟಿ ವಿದೇಶಿ ಬಂಡವಾಳ ಹೂಡಿಕೆಯಾಗಿದೆಯೆಂದರೆ ಹೊರದೇಶಗಳಿಂದ ಎಷ್ಟೊಂದು ಭಾರೀ ಪ್ರಮಾಣದ ಬಂಡವಾಳ ಹರಿದು ಬರುತ್ತಿದೆ ಊಹಿಸಿಕೊಳ್ಳಿ.

ದೇಶದ ಅಭಿವೃದ್ಧಿಗಾಗಿ ವಿದೇಶಿ ಬಂಡವಾಳವನ್ನು ಆಕರ್ಷಿಸಬೇಕು ಎಂಬುದು ಈಗ ಚಲಾವಣೆಯಲ್ಲಿರುವ ಒಂದು ಪ್ರಮುಖ ಆರ್ಥಿಕ ನೀತಿ. ಆದ್ದರಿಂದ ಇಂಥಾ ಹಣವನ್ನು ಆಕರ್ಷಿಸುವುದೇ ತಮ್ಮ ಸಾಧನೆಯೆಂಬಂತೆ ಸರ್ಕಾರಗಳು ಕೊಚ್ಚಿಕೊಳ್ಳುತ್ತಿವೆ.

ಆದರೆ ವಾಸ್ತವ ಸ್ಥಿತಿ ಬೇರೆಯೇ ಇದ್ದು ವಿದೇಶಿ ಬಂಡವಾಳದ ಹೆಸರಿನಲ್ಲಿ ಘನಘೋರ ದಂಧೆಯೇ ನಡೆಯುತ್ತಿದೆ.

ಇತ್ತೀಚೆಗೆ ರಿಜರ್ವ್ ಬ್ಯಾಂಕ್ ಬಿಡುಗಡೆ ಮಾಡಿರುವ ಅಂಕಿ-ಅಂಶಗಳ ಪ್ರಕಾರ ಈ ಅವಧಿಯಲ್ಲಿ ಅಮೆರಿಕದಿಂದ ಬಂದ ಬಂಡವಾಳ 50,615 ಕೋಟಿಗಳು, ಅಂದರೆ ಒಟ್ಟು ವಿದೇಶಿ ಬಂಡವಾಳದ ಶೇಕಡ 6ರಷ್ಟು ಮಾತ್ರ. ಮಾರಿಷಸ್ ಎಂಬ ಪುಟ್ಟ ದ್ವೀಪ ರಾಷ್ಟ್ರದಿಂದ ಬಂದ ಹೂಡಿಕೆ ಬರೋಬ್ಬರಿ 3,33,979 ಕೋಟಿಗಳು! ಇದು ಈ ಅವಧಿಯ ಒಟ್ಟು ವಿದೇಶಿ ಬಂಡವಾಳದ ಶೇಕಡ 38ರಷ್ಟು. 2001ರಿಂದ 2011ರ ನಡುವಿನ ಒಂದು ದಶಕವನ್ನು ಗಣನೆಗೆ ತೆಗೆದುಕೊಂಡರೆ ಈ ಪ್ರಮಾಣ ಶೇ 41.8 ರಷ್ಟು!

ಹಾಲಿ ಮಾರಿಷಸ್, ಸಿಪ್ರಸ್, ಹಾಂಗ್‍ಕಾಂಗ್, ಸಿಂಗಾಪುರ, ಯುನೈಟೆಡ್ ಅರಬ್ ಎಮಿರೇಟ್ಸ್ ಮುಂತಾದ  ಹತ್ತಾರು ದೇಶಗಳೊಂದಿಗೆ ಪರಸ್ಪರ ಬಂಡವಾಳ ಹೂಡಿಕೆಯನ್ನು ಉತ್ತೇಜಿಸಲು ನಾನಾ ತೆರಿಗೆ ರಿಯಾಯಿತಿ ಒಪ್ಪಂದಗಳು ಜಾರಿಯಲ್ಲಿವೆ. ಹೀಗಾಗಿ ಮಾರಿಷಸ್‍ನಿಂದ ಒಳಬರುವ ಬಂಡವಾಳಕ್ಕೆ ಭಾರತದಲ್ಲಿ ಹೆಚ್ಚುವರಿ ತೆರಿಗೆ ಕಟ್ಟಬೇಕಿಲ್ಲ.  ಭಾರತದ ರಾಜಕಾರಣಿಗಳು, ಭ್ರಷ್ಟ ಅಧಿಕಾರಿಗಳು ಹಾಗೂ ಅಕ್ರಮ ದಂಧೆಗಳಲ್ಲಿ ತೊಡಗಿರುವ ಉದ್ಯಮಿಗಳು ತಮ್ಮ ಕಪ್ಪುಹಣವನ್ನು ಮರುಹೂಡಿಕೆ ಮಾಡಲು ಇಂಥಾ ವಾಮ ಮಾರ್ಗವನ್ನು ಸಂಶೋಧಿಸಿದ್ದಾರೆ. ತೆರಿಗೆ ತಪ್ಪಿಸುವ ಉದ್ದೇಶದಿಂದ ಕೆಲ ವಿದೇಶಿ ಕಂಪನಿಗಳೂ ಕೂಡ ಮಾರಿಷಸ್ ಎಂಬ ಕಳ್ಳದಾರಿಯ ಮೂಲಕ ಭಾರತ ಪ್ರವೇಶಿಸುತ್ತಿದ್ದಾರೆ.

ಮಾರಿಷಸ್‍ನಂಥಾ ದೇಶಗಳಲ್ಲಿ ಒಂದು ಬೇನಾಮಿ ಕಂಪನಿ ನೋಂದಾಯಿಸುವುದು, ತಮ್ಮ ಬಳಿಯಿರುವ ಕಳ್ಳಹಣವನ್ನು ಆ ಕಂಪನಿಯಲ್ಲಿ ತೊಡಗಿಸುವುದು, ಅಲ್ಲಿಂದ ಆ ಹಣ ಮತ್ತೆ ಭಾರತಕ್ಕೆ ವಿದೇಶಿ ಬಂಡವಾಳವೆಂಬ ಹಣೆಪಟ್ಟಿಯೊಂದಿಗೆ ರಾಜಾರೋಷವಾಗಿ ವಾಪಸ್ ತಂದು ರಾಜಮರ್ಯಾದೆಯೊಂದಿಗೆ  ಭಾರತದ ಷೇರು ಮಾರುಕಟ್ಟೆಯಲ್ಲೋ ಅಥವಾ ಪಾಲುದಾರಿಕೆ ವ್ಯವಹಾರಗಳಲ್ಲೋ ಹೂಡಿಕೆ ಮಾಡಿ ಮತ್ತೆ ಸೂಪರ್ ಲಾಭ ಪಡೆಯುವುದು. ಈ ಗೋಲ್‍ಮಾಲ್ ವ್ಯವಹಾರವನ್ನು ‘ರೌಂಡ್ ಟ್ರಿಪ್ಪಿಂಗ್’ ಎಂದು ಕರೆಯಲಾಗುತ್ತದೆ.

ರಿಜರ್ವ್ ಬ್ಯಾಂಕ್ ಇತ್ತೀಚೆಗೆ ನಡೆಸಿದ ಒಂದು ಅಧ್ಯಯನದ ಪ್ರಕಾರ ಕಪ್ಪು ಹಣದ ಪ್ರಮಾಣ ದೇಶದ ಜಿಡಿಪಿಯ ಅರ್ಧದಷ್ಟಾಗಿದೆಯಂತೆ. ಹೀಗೆ ಕಪ್ಪುಹಣ ತೀರಾ ಹೆಚ್ಚಾಗಲು ಪ್ರಮುಖ ಕಾರಣ ಲೆಕ್ಕಕ್ಕೆ ಸಿಗದ ದಂಧೆಗಳು ವಿಪರೀತವಾಗಿರುವುದು. ಗಣಿಗಾರಿಕೆ, ರಿಯಲ್ ಎಸ್ಟೇಟ್, ಖಾಸಗಿ ಶಿಕ್ಷಣ ಸಂಸ್ಥೆಗಳ ಕ್ಯಾಪಿಟೇಷನ್, ಮೂಲ ಸೌಕರ್ಯ ಅಭಿವೃದ್ಧಿಯ ಹೆಸರಿನಲ್ಲಿ ನಡೆಯುತ್ತಿರುವ ಭಾರೀ ಕಾಮಗಾರಿಗಳ ಅವ್ಯವಹಾರ, ಸಾರ್ವಜನಿಕ ಆಸ್ತಿ-ಪಾಸ್ತಿಗಳನ್ನು ಕಬಳಿಸುವ ದಂಧೆ ಮುಂತಾದೆಡೆಗಳಲ್ಲಿ ಭಾರೀ ಪ್ರಮಾಣದ ಕಪ್ಪುಹಣ ಶೇಖರಣೆಯಾಗುತ್ತಿರುವುದು ಸೂರ್ಯ ಸತ್ಯ. ಆದರೆ ಬೆಕ್ಕಿಗೆ ಗಂಟೆ ಕಟ್ಟುವವರ್ಯಾರೂ ಸದ್ಯಕ್ಕೆ ಕಾಣುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...