Homeರಾಜಕೀಯಕರಾವಳಿ ಪೊಲಿಟಿಕ್ಸ್: ಬಿಜೆಪಿಯಲ್ಲಿ ಬಂಟರ ದರ್ಬಾರ್, ಬಿಲ್ಲವರು ಬರ್ಬಾದ್!!

ಕರಾವಳಿ ಪೊಲಿಟಿಕ್ಸ್: ಬಿಜೆಪಿಯಲ್ಲಿ ಬಂಟರ ದರ್ಬಾರ್, ಬಿಲ್ಲವರು ಬರ್ಬಾದ್!!

- Advertisement -
- Advertisement -
ನಹುಷ |
ಅವಿಭಜಿತ ದಕ್ಷಿಣ ಕನ್ನಡದ ಬಿಜೆಪಿ ಬಲಾಢ್ಯ ಬಂಟರ ಮತ್ತು  ಬೂಟಾಟಿಕೆಯ  ಬ್ರಾಹ್ಮಣರ ಪ್ರೈವೇಟ್  ಲಿಮಿಟೆಡ್ ಎಂಬುದನ್ನು  ಮುಗಿದ ಅಸೆಂಬ್ಲಿ ಚುನಾವಣೆ  ನಿಸ್ಸಂಶಯವಾಗಿ  ಸಾಬೀತುಮಾಡಿದೆ!  ಬಹುಸಂಖ್ಯಾತ ಬಿಲ್ಲವರು  ಮತ್ತು ಮೊಗವೀರ, ಕೊಟ್ಟಾರಿ,  ಕುಲಾಲ, ದೇವಾಡಿಗ,  ಕೋಟೆ ಕ್ಷತ್ರಿಯ, ಗಾಣಿಗ,  ಗಟ್ಟಿ,  ನಲಿಕೆ,  ಮರಾಠಿ….. ಮುಂತಾದ ಸಣ್ಣ-ಪುಟ್ಟ ಜಾತಿಯ  ಮುಗ್ಧ ಶೂದ್ರರನ್ನು ಹಿಂದೂತ್ವದ ರಕ್ತಪಿಪಾಸು ಘನಘೋರ ಯುದ್ಧಕ್ಕೆ ಕಾಲಾಳುಗಳಂತೆ ಬಳಸಿ ಬಲಿಹಾಕುವ ಸಂಘ ಪರಿವಾರದ ಹಿಂದೂತ್ವದ  ಸೂತ್ರಧಾರರು ಅಧಿಕಾರ,  ಸುಖ, ಸೌಭಾಗ್ಯಗಳನ್ನು  ಜನಿವಾರಿಗಳಿಗೆ, ಪಾಳೆಗಾರಿ ಬಂಟರ ತುಂಟರಿಗಷ್ಟೇ  ಸೀಮಿತ ಮಾಡಿಕೊಂಡಿದ್ದಾರೆ.
ಕರಾವಳಿಯಲ್ಲಿ ಸರಿಸುಮಾರು ಶೇ.24ರಷ್ಟು ಮುಸ್ಲಿಮರಿದ್ದಾರೆ. ಅವರಷ್ಟೇ ಬಿಲ್ಲವರಿದ್ದಾರೆ. ಈ  ಬಿಲ್ಲವರ ಜತೆ ಇತರ  ಹಿಂದುಳಿದ  ಜನಾಂಗದ ಸಣ್ಣಸಣ್ಣ ಜಾತಿಗಳನ್ನು  ಸೇರಿಸಿದರೆ ಶೇಕಡಾ ಹತ್ತರಷ್ಟಿರುವ  ಬಂಟರು  ಮತ್ತು ಅದಕ್ಕಿಂತ ಕಡಿಮೆ ಇರುವ  ಬ್ರಾಹ್ಮಣರು ಯಾವ ಲೆಕ್ಕಕ್ಕೂ  ಇಲ್ಲ. ಆದರೆ ತೋಳ್ಬಲದ  ಬಂಟರು ಮತ್ತು ತಾಂತ್ರಿಕ ವಿಪ್ರರು ಹಿಂದುಳಿದ  ವರ್ಗದವರನ್ನ  “ಮಂಗ”  ಮಾಡಿ ಬಿಜೆಪಿಯಲ್ಲಿ ಬೆಣ್ಣೆಯನ್ನು ತಿನ್ನುತ್ತಿದ್ದಾರೆ.  ಕರಾವಳಿಗೆ ಹಿಂದೂತ್ವದ ಅಮಲೇರಿರುವುದು ಕರಾರುವಾಕ್ಕಾಗಿ  ಗ್ರಹಿಸಿದ್ದ ಸಂಸದ  ನಳಿನ್ ಕುಮಾರ್ ಕುಟೀಲು  ಎಂಬ  ಬೆಂಕಿ ನವಾಬ  ಮತ್ತು  ವಿಶ್ವ ಬಂಟರ   ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಲಾಡಿ ಸೇರಿಕೊಂಡು  ಸ್ವ-ಜಾತಿಯ ಹೆಚ್ಚು ಕ್ಯಾಂಡಿಡೇಟ್‍ಗಳನ್ನು ಬಿಜೆಪಿಯಿಂದ  ಅಖಾಡಕ್ಕೆ  ಇಳಿಸುವಂತೆ  ಷಡ್ಯಂತ್ರ ಹೆಣೆದಿದ್ದರು.  ಒಂದು  ಹಂತದಲ್ಲಿ ನಳಿನ್, “ಗುರು” ಕಲ್ಲಡ್ಕ ಭಟ್ಟರಿಗೇ ರೋಪು ಹಾಕಿ  ಜಾತಿಬಂಧುಗಳಿಗೆ ಟಿಕೆಟ್ ಕೊಡಿಸಲು ಹಾರಾಡಿದ್ದರು.  ಬೆಚ್ಚಿಬಿದ್ದ ಕಲ್ಲಡ್ಕ ಕಟೀಲ್‍ಗೆ ಶರಣಾಗಿ ಹೋಗಿದ್ದರು.
ಕಲ್ಲಡ್ಕ ಭಟ್

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ  12  ಸಾಮಾನ್ಯ ಕ್ಷೇತ್ರಗಳ ಪೈಕಿ ಆರರಲ್ಲಿ ಬಂಟರ ಬಹಾದ್ದೂರರಿಗೆ ಟಿಕೆಟ್ ಕೊಡಿಸಲು  ನಳಿನ್-ಮಾಲಾಡಿ ರೈ  ಯಶಸ್ವಿಯಾದರು. ಬೈಂದೂರಲ್ಲಿ  ಸುಕುಮಾರ  ಶಟ್ಟಿ,  ಕುಂದಾಪುರದಲ್ಲಿ ಹಾಲಾಡಿ  ಶ್ರೀನಿವಾಸ್  ಶೆಟ್ಟಿ,  ಸುರತ್ಕಲ್‍ನಲ್ಲಿ ಡಾ|| ಭರತ್  ಶೆಟ್ಟಿ, ಉಳ್ಳಾಲದಲ್ಲಿ  ಸಂತೋಷ  ಶೆಟ್ಟಿ,   ಬಂಟ್ವಾಳದಲ್ಲಿ ರಾಜೇಶ್ ನಾಯ್ಕ್, ಬೆಳ್ತಂಗಡಿಯಲ್ಲಿ ಹರೀಶ್ ಪೂಂಜಾ ಎಂಬ  ಲಾಟ್‍ಪೂಟ್  ಬಂಟರಿಗೆ  ಬಿಜೆಪಿ ಹೈಕಮಾಂಡ್ ಕಲ್ಲಡ್ಕ ಭಟ್ಟರಿಗೆ ಟಿಕೆಟ್ ಕೊಡಬೇಕಾಗಿ ಬಂತು! 23  ಹಿಂದೂಗಳನ್ನು  ಸಾಬರು ಕಾಂಗ್ರೆಸ್‍ನ  ಸಿದ್ದು  ಸರಕಾರದ  ಸಹಕಾರದಲ್ಲಿ ಕೊಂದು ಹಾಕಿದರೆಂಬ ನಳಿನ್, ಅನಂತ್‍ಕುಮಾರ್ ಹೆಗಡೆ, ಶೋಭಾ, ಕಲ್ಲಡ್ಕ ಮತ್ತವರ ಬಾಸ್‍ಗಳಾದ ಆದಿತ್ಯನಾಥ,  ಅಮಿತ್ ಶಾಗಳ  ಬೊಬ್ಬೆಗೆ ಕರಾವಳಿಯ  ಬಿಲ್ಲವ  ಮತ್ತಿತರ ಹಿಂದುಳಿದ ವರ್ಗದ ಜನರು ಬ್ರೈನ್‍ವಾಶ್ ಆಗಿದ್ದು ಆರರಲ್ಲಿ ಐದು ಬಂಟರು  ಸಾರಾಸಗಟಾಗಿ  ಶಾಸಕರಾಗಲು  ನೆರವಾಯ್ತು.  ಇದನ್ನು ಮೊದಲೇ ಅಂದಾಜಿಸಿದ್ದ  ನಳಿನ್ ಮತ್ತು ಮಾಲಾಡಿಗುತ್ತು ರೈ,  ಈಗ  ಕರಾವಳಿ ಬಿಜೆಪಿಯಲ್ಲಿ ಬಂಟರ ಸಾಮ್ರಾಜ್ಯ  ಸ್ಥಾಪಿಸಿ ಅಟ್ಟಹಾಸಗೈಯ್ಯುತ್ತಿದ್ದಾರೆ.

ಟಿಕೆಟ್  ಹಂಚಿಕೆಯಾದಾಗ  ಬಿಜೆಪಿಯ ಬಿಲ್ಲವ  ಮುಂದಾಳುಗಳು  ಬೇಸರ ಮಾಡಿಕೊಂಡಿದ್ದರು.  ಇದು ಬಿಜೆಪಿಗೆ ಉಲ್ಟಾ  ಹೊಡೆದು ಕಾಂಗ್ರೆಸ್‍ಗೆ  ಅನುಕೂಲ  ಮಾಡಿಕೊಡುತ್ತದೆಂದು  ರಾಜಕೀಯ  ಪಂಡಿತರು ತರ್ಕ  ಮಾಡಿದ್ದರು.  ದುರಂತವೆಂದರೆ  ಜನವಾರಿಗಳ  ಮತ್ತು  ಬಂಟರ  ನಳಿನ್‍ನ  ಹಿಂದೂತ್ವದ  ಹೋರಾಟದಲ್ಲಿ ಹೆಚ್ಚು  ಹಾನಿಗೊಳಗಾಗಿದ್ದಲ್ಲದೇ  ಜೀವಬಲಿ ಕೊಡಬೇಕಾಗಿ ಬಂದಿದ್ದ  ಬಿಲ್ಲವರಿಗೆ ತಮಗಾದ ಅನ್ಯಾಯ, ಮೋಸ, ವಂಚನೆ ಅರ್ಥವೇ ಆಗಲಿಲ್ಲ. ಹೆಚ್ಚಿನ ಬಿಲ್ಲವರು ಸಂಘ  ಸರದಾರರ  ಹುಸಿ  ಹಿಂದೂತ್ವದ ಮಾತುಗಾರಿಕೆಗೆ ಮರುಳಾಗಿ ಪರಂಪರಾಗತ ಬಂಟರ ಭೂಪರಿಗೆ ಕಣ್ಮುಚ್ಚಿ ಓಟು ಒತ್ತಿದ್ದಾರೆ.  ಕಾರ್ಕಳದಲ್ಲಿ  ಗೆದ್ದ  ಬಾಬಾಬುಡನ್‍ಗಿರಿ-ದತ್ತಪೀಠ  ಭಾನ್ಗಡಿಯ ಬೈಪ್ರಾಡಕ್ಟು ಸುನೀಲ್ ಕುಮಾರ್ ಎಂಬ ಅರೆಬಿಲ್ಲವ-ಅರೆಬ್ರಾಹ್ಮಣ ಒಬ್ಬನೇ ಬಿಜಿಪಿಯ ಘೋಷಿತ  ಬಿಲ್ಲವ ಶಾಸಕ ಇಡೀ ಅವಿಭಜಿತ ದಕ್ಷಿಣ ಕನ್ನಡಕ್ಕೆ!! ಬಿಜಿಪಿ ಟಿಕೇಟ್ ದಯಪಾಲಿಸಿದ್ದ ಏಕೈಕ ಬಿಲ್ಲವ ಸುನೀಲ್‍ಕುಮಾರ.
ಪುತ್ತೂರಿನಲ್ಲಿ  ಬಿಜಿಪಿ ಅಭ್ಯರ್ಥಿಯಾಗಿದ್ದ  ಸಂಜೀವ್ ಮಡಂದೂರ್ ಎಂಬಾತ ಕೇಂದ್ರದ  ನಾಮಕಾವಸ್ಥೆ ಮಂತ್ರಿ ಸದಾನಂದಗೌಡರ ಹತ್ತಿರತ್ತಿರದ ಸಂಬಂಧಿ ಬಂಟ-ಗೌಡ ಕೋಟಾದ ಕ್ಯಾಂಡಿಡೇಟ್. ಹೀಗಾಗಿ ಬರೋಬ್ಬರಿ ಏಳು ಮಂದಿಗೆ ಬಂಟರ  ಲಾಬಿಯಿಂದಾಗಿ ಟಿಕೆಟ್ ಸಿಕ್ಕಿತ್ತು. ಮಡಂದೂರುಗೆ ಸದಾನಂದಗೌಡರಿಗಿಂತ ಸಂಸದ ನಳೀನ್ ಎಂದರೆ ಹೆಚ್ಚು ನಿಷ್ಠೆ. ಬಂಟ-ಗೌಡ ಕೋಟಾದಲ್ಲಿ ಕಮಲ ಹಿಡಿದುಕೊಂಡು ಅಖಾಡಕ್ಕೆ ಇಳಿದವರಲ್ಲಿ ಉಳ್ಳಾಲದ ಸಂತೋಷ ಶೆಟ್ಟಿ ಒಬ್ಬನ ಬಿಟ್ಟರೆ ಉಳಿದವರೆಲ್ಲರೂ   ಕೇಸರಿ ಶಾಸಕರಾಗಿದ್ದಾರೆ. ಬಂಟರ ಕ್ಯಾಂಡಿಡೇಟುಗಳನ್ನು ಗೆಲ್ಲಿಸಿಕೊಳ್ಳಲು ಸಂಸದ ನಳಿನ್  ಮತ್ತು ವಿಶ್ವ ಬಂಟರ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ  ವiಲಾಡಿ ತುಂಬ  ವ್ಯವಸ್ಥಿತ-ರಹಸ್ಯ ಕಾರ್ಯಾಚರಣೆಗೆ  ಇಳಿದಿದ್ದರು. ಹಿಂದುಳಿದ ವರ್ಗದ ಬಿಲ್ಲವರು  ಮತ್ತು ಇತರೆ ಅಮಾಯಕ ಜಾತಿ ಜನಗಳಿಗೆ  ಟೋಪಿ ಏರಿಸಿ ಸ್ವಜಾತಿ ಹುರಿಯಾಳುಗಳ  ಎಂಎಲ್‍ಎ ಮಾಡಿಕೊಳ್ಳಲು ಬಂಟರಿಗೆ ಜಾತಿ ದುರಭಿಮಾನದ ಬೂಸ್ಟ್ ಕುಡಿಸಿ ಪ್ರಚೋದಿಸಿದರು.
ಬಿಜಿಪಿ ಟಿಕೆಟ್ ಘೋಷಣೆ ಮಾಡುತ್ತಿದ್ದಂತೆಯೇ ಬಂಟರ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ  ಒಂದು ವಾಟ್ಸಪ್ ಪ್ರಕಟಣೆ ರವಾನಿಸಿದ್ದರು. ಸ್ವಜಾತಿ ಬಂಟರ   ವಲಯದಲ್ಲಿ ಹರಿದಾಡಿದ ಆ ಸಂದೇಶ “ಬಂಟತ್ವ” ಕೆರಳಿಸುವ ಒಕ್ಕಣೆಯಿಂದ ಕೂಡಿದೆ. ತಾನು ಮತ್ತು ಸಂಸದ ನಳಿನ್ ಸರದಾರ ಸೇರಿಕೊಂಡು ಬರೋಬ್ಬರಿ ಆರು ಬಂಟರು ಬಿಜೆಪಿ  ಟಿಕೆಟ್ ಪಡೆಯುವಂತೆ ಮಾಡಿದ್ದೇವೆ. ಈಗ ಇವರೆಲ್ಲರನ್ನ ಗೆಲ್ಲಿಸಿಕೊಳ್ಳುವ ಸವಾಲು  ಬಂಟರ ಮೇಲಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ಬಂಟರ ಮತ್ತು ಬ್ರಾಹ್ಮಣರ ನಾಡಾಗಿದ್ದು ಅದನ್ನ ಉಳಿಸಿಕೊಳ್ಳಲು ಆರೂ ಬಂಟರ ಆಯ್ಕೆಗೆ ಬಂಟರು  ಭಿನ್ನಾಭಿಪ್ರಾಯ ಮರೆತು ಬಿಜೆಪಿಗೆ ಮತ ಹಾಕುವ ಮತ್ತು ಹಾಕಿಸುವ ಕೆಲಸ  ಮಾಡಬೇಕಾಗಿದೆ. ಈ ತಂತ್ರಗಾರಿಕೆ ಹಿಂದುಳಿದ ವರ್ಗದವರಿಗೆ ತಿಳಿಯದಂತೆ ಗೌಪ್ಯವಾಗಿ ಕಾರ್ಯಾಚರಣೆ ಮಾಡಬೇಕೆಂದು ಮಲಾಡಿಗುತ್ತಾ ರೈ ಸಂದೇಶ ಕಳಿಸಿದ್ದರು.
ಬಿಜೆಪಿಯ ಆರೂ ಬಂಟ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಸ್ವಜಾತಿ ಬಾಂಧವರಿಗೆ  ಬಂಟರ ಸಂಘದ ಅಧ್ಯಕ್ಷ  ಮಲಾಡಿಗುತ್ತಾ ರೈ  ಪ್ರಚೋದಿಸಿರುವುದರ ಹಿಂದಿನ    ಮರ್ಮ ಕತೂಹಲಕಾರಿಯಾಗಿದೆ. ಸದರಿ ಆರು ಬಂಟರು ಗೆದ್ದರಷ್ಟೇ ಮುಂಬರುವ ಲೋಕಸಭಾ ಎಲೆಕ್ಷನ್‍ನಲ್ಲಿ ಉಡುಪಿ-ಚಿಕ್ಕಮಗಳೂರು ಮತ್ತು ಮಂಗಳೂರು ಪಾರ್ಲಿಮೆಂಟ್ ಕ್ಷೇತ್ರದಲ್ಲಿ  ಬಂಟರ ಜಯಪ್ರಕಾಶ್ ಹೆಗಡೆ ಹಾಗೂ ನಳಿನ್ ಕುಮಾರ್ ಕಟೀಲ್‍ಗೆ ಟಿಕೆಟ್ ಸುಲಭವಾಗಿ ದಕ್ಕುತ್ತದೆ ಎಂಬುದು ಮಲಾಡಿಗುತ್ತ ರೈ ಲೆಕ್ಕಾಚಾರ. ಆಗ ಮಾತ್ರ  ಬಂಟರ ಹಿತಾಸಕ್ತಿಯ ರಕ್ಷಣೆ ಸಾಧ್ಯವೆಂಬ ಭಾವನೆ ಬಂಟರಲ್ಲಿ ಬಿತ್ತಲು ರೈ ಮಸಲತ್ತು ಮಾಡಿದ್ದಾನೆ. ಇದರ ಹಿಂದೆ ನಳಿನ್‍ನ ಕುಟಿಲತೆ ಅಡಗಿದೆ ಎಂಬುದು ಕಟ್ಟರ್ ಚೆಡ್ಡಿಗಳೇ ಈಗ ಪಿಸುಗುಡುತ್ತಿದ್ದಾರೆ. ನಳಿನ್‍ನ ಕಂಡರೆ  ಮೂಗುಮುರಿಯುವ ಕಲ್ಲಡ್ಕ ಕಮಾಂಡ್ ಕೂಡ ಈಗ ಬಂಟರ ಅಧ್ಯಕ್ಷನ “ವಾಟ್ಸ್‍ಆಪ್ ಆಂದೋಲನ”ದ ರೂವಾರಿ ನಳಿನ್  ಎಂದೇ ಕಂಡವರ ಮುಂದೆ ಬಡಬಡಿಸುತ್ತಿದೆ.
ಸೊರಕೆ

ಬಿಜೆಪಿ ಬಿಡಾರದಲ್ಲಿ ಹರಿದಾಡುತ್ತಿರುವ ಮತ್ತೊಂದು ಚರ್ಚೆಯ ಪ್ರಕಾರ ಇದು  ನಳಿನನ್ನು ಹಣಿಯಲು ಬ್ರಾಹ್ಮಣೋತ್ತಮರ್ಯಾರೋ ಮಾಡಿದ ಕಿತಾಪತಿ. ಬಿಲ್ಲವರು ತಿರುಗಿಬಿದ್ದು ಬಂಟ ಕ್ಯಾಂಡಿಡೇಟ್‍ಗಳನ್ನೆಲ್ಲಾ ಸೋಲಿಸಿದರೆ ನಳಿನ್ ಬಿಜೆಪಿಯಲ್ಲಿ ಕಿಮ್ಮತ್ತು ಕಳೆದುಕೊಳ್ಳುತ್ತಾರೆ. ಆಗ ಮತ್ತೆ ಕಲ್ಲಡ್ಕ ಭಟ್ಟರದೇ ಏಕಮೇವಾದ್ವಿತೀಯ ದರ್ಬಾರು  ಸ್ಥಾಪಿತವಾಗುತ್ತದೆಂದು ಬಂಟರ ಸಂಘದ ಅಧ್ಯಕ್ಷನ ಹೆಸರಿನಲ್ಲಿ ಇಂಥದೊಂದು  ಸಂದೇಶ ರವಾನಿಸಲಾಗಿದೆಯಂತೆ. “ದಕ್ಷಿಣ ಕನ್ನಡ  ಮತ್ತು ಉಡುಪಿಯು  ಬಂಟರ-ಬ್ರಾಹ್ಮಣರ ನಾಡು” ಎಂಬ ವಾಕ್ಯ ಮಲಾಡಿಗುತ್ತು ರೈನ ಸಂದೇಶದಲ್ಲಿರುವುದು ಬ್ರಾಹ್ಮಣರ ಭೂಪನ ಕುಚೋದ್ಯದ ಅನುಮಾನ ಹುಟ್ಟುಹಾಕಿದೆ.

ಇದೆಲ್ಲಾ ಬಿಜೆಪಿಯ ಒಳಸುಳಿ ರಾಜಕಾರಣ ಏನೇಇರಲಿ, ಸಂಘಪರಿವಾರದ  ಬ್ರಾಹ್ಮಣರ-ಬಲಾಢ್ಯ ಬಂಟರ ಷಡ್ಯಂತ್ರಕ್ಕೆ ಬಲಿಬೀಳುತ್ತಿರುವ ಬಿಲ್ಲವರಿಗೆ ಬುದ್ಧಿ ಬರುವುದು ಎಂದು? ಹುಸಿ ಹಿಂದೂತ್ವಕ್ಕೆ ಮರುಳಾಗಿ ಬಿಲ್ಲವರು ತಮ್ಮವರ ಆಹುತಿ ಕೊಡುತ್ತಾ  ಬಿಜೆಪಿಗೆ ಬೆಂಬಲಿಸುತ್ತಾ ಹೋದರೆ ಮೇಲುವರ್ಗದ ಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ನಡೆಯುತ್ತಲೇ ಇರುತ್ತದೆ. ಇದು ಬಿಲ್ಲವರ ಸ್ವಾಮಿಗೆ, ಜನಾರ್ದನ  ಪೂಜಾರಿ,  ವಿನಯ್ ಕುಮಾರ್ ಸೊರಕೆ,  ಶ್ರೀನಿವಾಸ್  ಪೂಜಾರಿ,  ರುಕ್ಮಯ್ಯ ಪೂಜಾರಿಯಂತ ಬಿಲ್ಲವರ   ಭೂಪರಿಗೆ, ಬಿಲ್ಲವರ ಸಂಘದ ಸರದಾರರಿಗೆಲ್ಲಾ ಅರ್ಥವಾಗೋದು ಯಾವಾಗ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...