Homeರಾಜಕೀಯಕರಾವಳಿ ಪೊಲಿಟಿಕ್ಸ್: ಬಿಜೆಪಿಯಲ್ಲಿ ಬಂಟರ ದರ್ಬಾರ್, ಬಿಲ್ಲವರು ಬರ್ಬಾದ್!!

ಕರಾವಳಿ ಪೊಲಿಟಿಕ್ಸ್: ಬಿಜೆಪಿಯಲ್ಲಿ ಬಂಟರ ದರ್ಬಾರ್, ಬಿಲ್ಲವರು ಬರ್ಬಾದ್!!

- Advertisement -
- Advertisement -
ನಹುಷ |
ಅವಿಭಜಿತ ದಕ್ಷಿಣ ಕನ್ನಡದ ಬಿಜೆಪಿ ಬಲಾಢ್ಯ ಬಂಟರ ಮತ್ತು  ಬೂಟಾಟಿಕೆಯ  ಬ್ರಾಹ್ಮಣರ ಪ್ರೈವೇಟ್  ಲಿಮಿಟೆಡ್ ಎಂಬುದನ್ನು  ಮುಗಿದ ಅಸೆಂಬ್ಲಿ ಚುನಾವಣೆ  ನಿಸ್ಸಂಶಯವಾಗಿ  ಸಾಬೀತುಮಾಡಿದೆ!  ಬಹುಸಂಖ್ಯಾತ ಬಿಲ್ಲವರು  ಮತ್ತು ಮೊಗವೀರ, ಕೊಟ್ಟಾರಿ,  ಕುಲಾಲ, ದೇವಾಡಿಗ,  ಕೋಟೆ ಕ್ಷತ್ರಿಯ, ಗಾಣಿಗ,  ಗಟ್ಟಿ,  ನಲಿಕೆ,  ಮರಾಠಿ….. ಮುಂತಾದ ಸಣ್ಣ-ಪುಟ್ಟ ಜಾತಿಯ  ಮುಗ್ಧ ಶೂದ್ರರನ್ನು ಹಿಂದೂತ್ವದ ರಕ್ತಪಿಪಾಸು ಘನಘೋರ ಯುದ್ಧಕ್ಕೆ ಕಾಲಾಳುಗಳಂತೆ ಬಳಸಿ ಬಲಿಹಾಕುವ ಸಂಘ ಪರಿವಾರದ ಹಿಂದೂತ್ವದ  ಸೂತ್ರಧಾರರು ಅಧಿಕಾರ,  ಸುಖ, ಸೌಭಾಗ್ಯಗಳನ್ನು  ಜನಿವಾರಿಗಳಿಗೆ, ಪಾಳೆಗಾರಿ ಬಂಟರ ತುಂಟರಿಗಷ್ಟೇ  ಸೀಮಿತ ಮಾಡಿಕೊಂಡಿದ್ದಾರೆ.
ಕರಾವಳಿಯಲ್ಲಿ ಸರಿಸುಮಾರು ಶೇ.24ರಷ್ಟು ಮುಸ್ಲಿಮರಿದ್ದಾರೆ. ಅವರಷ್ಟೇ ಬಿಲ್ಲವರಿದ್ದಾರೆ. ಈ  ಬಿಲ್ಲವರ ಜತೆ ಇತರ  ಹಿಂದುಳಿದ  ಜನಾಂಗದ ಸಣ್ಣಸಣ್ಣ ಜಾತಿಗಳನ್ನು  ಸೇರಿಸಿದರೆ ಶೇಕಡಾ ಹತ್ತರಷ್ಟಿರುವ  ಬಂಟರು  ಮತ್ತು ಅದಕ್ಕಿಂತ ಕಡಿಮೆ ಇರುವ  ಬ್ರಾಹ್ಮಣರು ಯಾವ ಲೆಕ್ಕಕ್ಕೂ  ಇಲ್ಲ. ಆದರೆ ತೋಳ್ಬಲದ  ಬಂಟರು ಮತ್ತು ತಾಂತ್ರಿಕ ವಿಪ್ರರು ಹಿಂದುಳಿದ  ವರ್ಗದವರನ್ನ  “ಮಂಗ”  ಮಾಡಿ ಬಿಜೆಪಿಯಲ್ಲಿ ಬೆಣ್ಣೆಯನ್ನು ತಿನ್ನುತ್ತಿದ್ದಾರೆ.  ಕರಾವಳಿಗೆ ಹಿಂದೂತ್ವದ ಅಮಲೇರಿರುವುದು ಕರಾರುವಾಕ್ಕಾಗಿ  ಗ್ರಹಿಸಿದ್ದ ಸಂಸದ  ನಳಿನ್ ಕುಮಾರ್ ಕುಟೀಲು  ಎಂಬ  ಬೆಂಕಿ ನವಾಬ  ಮತ್ತು  ವಿಶ್ವ ಬಂಟರ   ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಲಾಡಿ ಸೇರಿಕೊಂಡು  ಸ್ವ-ಜಾತಿಯ ಹೆಚ್ಚು ಕ್ಯಾಂಡಿಡೇಟ್‍ಗಳನ್ನು ಬಿಜೆಪಿಯಿಂದ  ಅಖಾಡಕ್ಕೆ  ಇಳಿಸುವಂತೆ  ಷಡ್ಯಂತ್ರ ಹೆಣೆದಿದ್ದರು.  ಒಂದು  ಹಂತದಲ್ಲಿ ನಳಿನ್, “ಗುರು” ಕಲ್ಲಡ್ಕ ಭಟ್ಟರಿಗೇ ರೋಪು ಹಾಕಿ  ಜಾತಿಬಂಧುಗಳಿಗೆ ಟಿಕೆಟ್ ಕೊಡಿಸಲು ಹಾರಾಡಿದ್ದರು.  ಬೆಚ್ಚಿಬಿದ್ದ ಕಲ್ಲಡ್ಕ ಕಟೀಲ್‍ಗೆ ಶರಣಾಗಿ ಹೋಗಿದ್ದರು.
ಕಲ್ಲಡ್ಕ ಭಟ್

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ  12  ಸಾಮಾನ್ಯ ಕ್ಷೇತ್ರಗಳ ಪೈಕಿ ಆರರಲ್ಲಿ ಬಂಟರ ಬಹಾದ್ದೂರರಿಗೆ ಟಿಕೆಟ್ ಕೊಡಿಸಲು  ನಳಿನ್-ಮಾಲಾಡಿ ರೈ  ಯಶಸ್ವಿಯಾದರು. ಬೈಂದೂರಲ್ಲಿ  ಸುಕುಮಾರ  ಶಟ್ಟಿ,  ಕುಂದಾಪುರದಲ್ಲಿ ಹಾಲಾಡಿ  ಶ್ರೀನಿವಾಸ್  ಶೆಟ್ಟಿ,  ಸುರತ್ಕಲ್‍ನಲ್ಲಿ ಡಾ|| ಭರತ್  ಶೆಟ್ಟಿ, ಉಳ್ಳಾಲದಲ್ಲಿ  ಸಂತೋಷ  ಶೆಟ್ಟಿ,   ಬಂಟ್ವಾಳದಲ್ಲಿ ರಾಜೇಶ್ ನಾಯ್ಕ್, ಬೆಳ್ತಂಗಡಿಯಲ್ಲಿ ಹರೀಶ್ ಪೂಂಜಾ ಎಂಬ  ಲಾಟ್‍ಪೂಟ್  ಬಂಟರಿಗೆ  ಬಿಜೆಪಿ ಹೈಕಮಾಂಡ್ ಕಲ್ಲಡ್ಕ ಭಟ್ಟರಿಗೆ ಟಿಕೆಟ್ ಕೊಡಬೇಕಾಗಿ ಬಂತು! 23  ಹಿಂದೂಗಳನ್ನು  ಸಾಬರು ಕಾಂಗ್ರೆಸ್‍ನ  ಸಿದ್ದು  ಸರಕಾರದ  ಸಹಕಾರದಲ್ಲಿ ಕೊಂದು ಹಾಕಿದರೆಂಬ ನಳಿನ್, ಅನಂತ್‍ಕುಮಾರ್ ಹೆಗಡೆ, ಶೋಭಾ, ಕಲ್ಲಡ್ಕ ಮತ್ತವರ ಬಾಸ್‍ಗಳಾದ ಆದಿತ್ಯನಾಥ,  ಅಮಿತ್ ಶಾಗಳ  ಬೊಬ್ಬೆಗೆ ಕರಾವಳಿಯ  ಬಿಲ್ಲವ  ಮತ್ತಿತರ ಹಿಂದುಳಿದ ವರ್ಗದ ಜನರು ಬ್ರೈನ್‍ವಾಶ್ ಆಗಿದ್ದು ಆರರಲ್ಲಿ ಐದು ಬಂಟರು  ಸಾರಾಸಗಟಾಗಿ  ಶಾಸಕರಾಗಲು  ನೆರವಾಯ್ತು.  ಇದನ್ನು ಮೊದಲೇ ಅಂದಾಜಿಸಿದ್ದ  ನಳಿನ್ ಮತ್ತು ಮಾಲಾಡಿಗುತ್ತು ರೈ,  ಈಗ  ಕರಾವಳಿ ಬಿಜೆಪಿಯಲ್ಲಿ ಬಂಟರ ಸಾಮ್ರಾಜ್ಯ  ಸ್ಥಾಪಿಸಿ ಅಟ್ಟಹಾಸಗೈಯ್ಯುತ್ತಿದ್ದಾರೆ.

ಟಿಕೆಟ್  ಹಂಚಿಕೆಯಾದಾಗ  ಬಿಜೆಪಿಯ ಬಿಲ್ಲವ  ಮುಂದಾಳುಗಳು  ಬೇಸರ ಮಾಡಿಕೊಂಡಿದ್ದರು.  ಇದು ಬಿಜೆಪಿಗೆ ಉಲ್ಟಾ  ಹೊಡೆದು ಕಾಂಗ್ರೆಸ್‍ಗೆ  ಅನುಕೂಲ  ಮಾಡಿಕೊಡುತ್ತದೆಂದು  ರಾಜಕೀಯ  ಪಂಡಿತರು ತರ್ಕ  ಮಾಡಿದ್ದರು.  ದುರಂತವೆಂದರೆ  ಜನವಾರಿಗಳ  ಮತ್ತು  ಬಂಟರ  ನಳಿನ್‍ನ  ಹಿಂದೂತ್ವದ  ಹೋರಾಟದಲ್ಲಿ ಹೆಚ್ಚು  ಹಾನಿಗೊಳಗಾಗಿದ್ದಲ್ಲದೇ  ಜೀವಬಲಿ ಕೊಡಬೇಕಾಗಿ ಬಂದಿದ್ದ  ಬಿಲ್ಲವರಿಗೆ ತಮಗಾದ ಅನ್ಯಾಯ, ಮೋಸ, ವಂಚನೆ ಅರ್ಥವೇ ಆಗಲಿಲ್ಲ. ಹೆಚ್ಚಿನ ಬಿಲ್ಲವರು ಸಂಘ  ಸರದಾರರ  ಹುಸಿ  ಹಿಂದೂತ್ವದ ಮಾತುಗಾರಿಕೆಗೆ ಮರುಳಾಗಿ ಪರಂಪರಾಗತ ಬಂಟರ ಭೂಪರಿಗೆ ಕಣ್ಮುಚ್ಚಿ ಓಟು ಒತ್ತಿದ್ದಾರೆ.  ಕಾರ್ಕಳದಲ್ಲಿ  ಗೆದ್ದ  ಬಾಬಾಬುಡನ್‍ಗಿರಿ-ದತ್ತಪೀಠ  ಭಾನ್ಗಡಿಯ ಬೈಪ್ರಾಡಕ್ಟು ಸುನೀಲ್ ಕುಮಾರ್ ಎಂಬ ಅರೆಬಿಲ್ಲವ-ಅರೆಬ್ರಾಹ್ಮಣ ಒಬ್ಬನೇ ಬಿಜಿಪಿಯ ಘೋಷಿತ  ಬಿಲ್ಲವ ಶಾಸಕ ಇಡೀ ಅವಿಭಜಿತ ದಕ್ಷಿಣ ಕನ್ನಡಕ್ಕೆ!! ಬಿಜಿಪಿ ಟಿಕೇಟ್ ದಯಪಾಲಿಸಿದ್ದ ಏಕೈಕ ಬಿಲ್ಲವ ಸುನೀಲ್‍ಕುಮಾರ.
ಪುತ್ತೂರಿನಲ್ಲಿ  ಬಿಜಿಪಿ ಅಭ್ಯರ್ಥಿಯಾಗಿದ್ದ  ಸಂಜೀವ್ ಮಡಂದೂರ್ ಎಂಬಾತ ಕೇಂದ್ರದ  ನಾಮಕಾವಸ್ಥೆ ಮಂತ್ರಿ ಸದಾನಂದಗೌಡರ ಹತ್ತಿರತ್ತಿರದ ಸಂಬಂಧಿ ಬಂಟ-ಗೌಡ ಕೋಟಾದ ಕ್ಯಾಂಡಿಡೇಟ್. ಹೀಗಾಗಿ ಬರೋಬ್ಬರಿ ಏಳು ಮಂದಿಗೆ ಬಂಟರ  ಲಾಬಿಯಿಂದಾಗಿ ಟಿಕೆಟ್ ಸಿಕ್ಕಿತ್ತು. ಮಡಂದೂರುಗೆ ಸದಾನಂದಗೌಡರಿಗಿಂತ ಸಂಸದ ನಳೀನ್ ಎಂದರೆ ಹೆಚ್ಚು ನಿಷ್ಠೆ. ಬಂಟ-ಗೌಡ ಕೋಟಾದಲ್ಲಿ ಕಮಲ ಹಿಡಿದುಕೊಂಡು ಅಖಾಡಕ್ಕೆ ಇಳಿದವರಲ್ಲಿ ಉಳ್ಳಾಲದ ಸಂತೋಷ ಶೆಟ್ಟಿ ಒಬ್ಬನ ಬಿಟ್ಟರೆ ಉಳಿದವರೆಲ್ಲರೂ   ಕೇಸರಿ ಶಾಸಕರಾಗಿದ್ದಾರೆ. ಬಂಟರ ಕ್ಯಾಂಡಿಡೇಟುಗಳನ್ನು ಗೆಲ್ಲಿಸಿಕೊಳ್ಳಲು ಸಂಸದ ನಳಿನ್  ಮತ್ತು ವಿಶ್ವ ಬಂಟರ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ  ವiಲಾಡಿ ತುಂಬ  ವ್ಯವಸ್ಥಿತ-ರಹಸ್ಯ ಕಾರ್ಯಾಚರಣೆಗೆ  ಇಳಿದಿದ್ದರು. ಹಿಂದುಳಿದ ವರ್ಗದ ಬಿಲ್ಲವರು  ಮತ್ತು ಇತರೆ ಅಮಾಯಕ ಜಾತಿ ಜನಗಳಿಗೆ  ಟೋಪಿ ಏರಿಸಿ ಸ್ವಜಾತಿ ಹುರಿಯಾಳುಗಳ  ಎಂಎಲ್‍ಎ ಮಾಡಿಕೊಳ್ಳಲು ಬಂಟರಿಗೆ ಜಾತಿ ದುರಭಿಮಾನದ ಬೂಸ್ಟ್ ಕುಡಿಸಿ ಪ್ರಚೋದಿಸಿದರು.
ಬಿಜಿಪಿ ಟಿಕೆಟ್ ಘೋಷಣೆ ಮಾಡುತ್ತಿದ್ದಂತೆಯೇ ಬಂಟರ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ  ಒಂದು ವಾಟ್ಸಪ್ ಪ್ರಕಟಣೆ ರವಾನಿಸಿದ್ದರು. ಸ್ವಜಾತಿ ಬಂಟರ   ವಲಯದಲ್ಲಿ ಹರಿದಾಡಿದ ಆ ಸಂದೇಶ “ಬಂಟತ್ವ” ಕೆರಳಿಸುವ ಒಕ್ಕಣೆಯಿಂದ ಕೂಡಿದೆ. ತಾನು ಮತ್ತು ಸಂಸದ ನಳಿನ್ ಸರದಾರ ಸೇರಿಕೊಂಡು ಬರೋಬ್ಬರಿ ಆರು ಬಂಟರು ಬಿಜೆಪಿ  ಟಿಕೆಟ್ ಪಡೆಯುವಂತೆ ಮಾಡಿದ್ದೇವೆ. ಈಗ ಇವರೆಲ್ಲರನ್ನ ಗೆಲ್ಲಿಸಿಕೊಳ್ಳುವ ಸವಾಲು  ಬಂಟರ ಮೇಲಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ಬಂಟರ ಮತ್ತು ಬ್ರಾಹ್ಮಣರ ನಾಡಾಗಿದ್ದು ಅದನ್ನ ಉಳಿಸಿಕೊಳ್ಳಲು ಆರೂ ಬಂಟರ ಆಯ್ಕೆಗೆ ಬಂಟರು  ಭಿನ್ನಾಭಿಪ್ರಾಯ ಮರೆತು ಬಿಜೆಪಿಗೆ ಮತ ಹಾಕುವ ಮತ್ತು ಹಾಕಿಸುವ ಕೆಲಸ  ಮಾಡಬೇಕಾಗಿದೆ. ಈ ತಂತ್ರಗಾರಿಕೆ ಹಿಂದುಳಿದ ವರ್ಗದವರಿಗೆ ತಿಳಿಯದಂತೆ ಗೌಪ್ಯವಾಗಿ ಕಾರ್ಯಾಚರಣೆ ಮಾಡಬೇಕೆಂದು ಮಲಾಡಿಗುತ್ತಾ ರೈ ಸಂದೇಶ ಕಳಿಸಿದ್ದರು.
ಬಿಜೆಪಿಯ ಆರೂ ಬಂಟ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಸ್ವಜಾತಿ ಬಾಂಧವರಿಗೆ  ಬಂಟರ ಸಂಘದ ಅಧ್ಯಕ್ಷ  ಮಲಾಡಿಗುತ್ತಾ ರೈ  ಪ್ರಚೋದಿಸಿರುವುದರ ಹಿಂದಿನ    ಮರ್ಮ ಕತೂಹಲಕಾರಿಯಾಗಿದೆ. ಸದರಿ ಆರು ಬಂಟರು ಗೆದ್ದರಷ್ಟೇ ಮುಂಬರುವ ಲೋಕಸಭಾ ಎಲೆಕ್ಷನ್‍ನಲ್ಲಿ ಉಡುಪಿ-ಚಿಕ್ಕಮಗಳೂರು ಮತ್ತು ಮಂಗಳೂರು ಪಾರ್ಲಿಮೆಂಟ್ ಕ್ಷೇತ್ರದಲ್ಲಿ  ಬಂಟರ ಜಯಪ್ರಕಾಶ್ ಹೆಗಡೆ ಹಾಗೂ ನಳಿನ್ ಕುಮಾರ್ ಕಟೀಲ್‍ಗೆ ಟಿಕೆಟ್ ಸುಲಭವಾಗಿ ದಕ್ಕುತ್ತದೆ ಎಂಬುದು ಮಲಾಡಿಗುತ್ತ ರೈ ಲೆಕ್ಕಾಚಾರ. ಆಗ ಮಾತ್ರ  ಬಂಟರ ಹಿತಾಸಕ್ತಿಯ ರಕ್ಷಣೆ ಸಾಧ್ಯವೆಂಬ ಭಾವನೆ ಬಂಟರಲ್ಲಿ ಬಿತ್ತಲು ರೈ ಮಸಲತ್ತು ಮಾಡಿದ್ದಾನೆ. ಇದರ ಹಿಂದೆ ನಳಿನ್‍ನ ಕುಟಿಲತೆ ಅಡಗಿದೆ ಎಂಬುದು ಕಟ್ಟರ್ ಚೆಡ್ಡಿಗಳೇ ಈಗ ಪಿಸುಗುಡುತ್ತಿದ್ದಾರೆ. ನಳಿನ್‍ನ ಕಂಡರೆ  ಮೂಗುಮುರಿಯುವ ಕಲ್ಲಡ್ಕ ಕಮಾಂಡ್ ಕೂಡ ಈಗ ಬಂಟರ ಅಧ್ಯಕ್ಷನ “ವಾಟ್ಸ್‍ಆಪ್ ಆಂದೋಲನ”ದ ರೂವಾರಿ ನಳಿನ್  ಎಂದೇ ಕಂಡವರ ಮುಂದೆ ಬಡಬಡಿಸುತ್ತಿದೆ.
ಸೊರಕೆ

ಬಿಜೆಪಿ ಬಿಡಾರದಲ್ಲಿ ಹರಿದಾಡುತ್ತಿರುವ ಮತ್ತೊಂದು ಚರ್ಚೆಯ ಪ್ರಕಾರ ಇದು  ನಳಿನನ್ನು ಹಣಿಯಲು ಬ್ರಾಹ್ಮಣೋತ್ತಮರ್ಯಾರೋ ಮಾಡಿದ ಕಿತಾಪತಿ. ಬಿಲ್ಲವರು ತಿರುಗಿಬಿದ್ದು ಬಂಟ ಕ್ಯಾಂಡಿಡೇಟ್‍ಗಳನ್ನೆಲ್ಲಾ ಸೋಲಿಸಿದರೆ ನಳಿನ್ ಬಿಜೆಪಿಯಲ್ಲಿ ಕಿಮ್ಮತ್ತು ಕಳೆದುಕೊಳ್ಳುತ್ತಾರೆ. ಆಗ ಮತ್ತೆ ಕಲ್ಲಡ್ಕ ಭಟ್ಟರದೇ ಏಕಮೇವಾದ್ವಿತೀಯ ದರ್ಬಾರು  ಸ್ಥಾಪಿತವಾಗುತ್ತದೆಂದು ಬಂಟರ ಸಂಘದ ಅಧ್ಯಕ್ಷನ ಹೆಸರಿನಲ್ಲಿ ಇಂಥದೊಂದು  ಸಂದೇಶ ರವಾನಿಸಲಾಗಿದೆಯಂತೆ. “ದಕ್ಷಿಣ ಕನ್ನಡ  ಮತ್ತು ಉಡುಪಿಯು  ಬಂಟರ-ಬ್ರಾಹ್ಮಣರ ನಾಡು” ಎಂಬ ವಾಕ್ಯ ಮಲಾಡಿಗುತ್ತು ರೈನ ಸಂದೇಶದಲ್ಲಿರುವುದು ಬ್ರಾಹ್ಮಣರ ಭೂಪನ ಕುಚೋದ್ಯದ ಅನುಮಾನ ಹುಟ್ಟುಹಾಕಿದೆ.

ಇದೆಲ್ಲಾ ಬಿಜೆಪಿಯ ಒಳಸುಳಿ ರಾಜಕಾರಣ ಏನೇಇರಲಿ, ಸಂಘಪರಿವಾರದ  ಬ್ರಾಹ್ಮಣರ-ಬಲಾಢ್ಯ ಬಂಟರ ಷಡ್ಯಂತ್ರಕ್ಕೆ ಬಲಿಬೀಳುತ್ತಿರುವ ಬಿಲ್ಲವರಿಗೆ ಬುದ್ಧಿ ಬರುವುದು ಎಂದು? ಹುಸಿ ಹಿಂದೂತ್ವಕ್ಕೆ ಮರುಳಾಗಿ ಬಿಲ್ಲವರು ತಮ್ಮವರ ಆಹುತಿ ಕೊಡುತ್ತಾ  ಬಿಜೆಪಿಗೆ ಬೆಂಬಲಿಸುತ್ತಾ ಹೋದರೆ ಮೇಲುವರ್ಗದ ಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ನಡೆಯುತ್ತಲೇ ಇರುತ್ತದೆ. ಇದು ಬಿಲ್ಲವರ ಸ್ವಾಮಿಗೆ, ಜನಾರ್ದನ  ಪೂಜಾರಿ,  ವಿನಯ್ ಕುಮಾರ್ ಸೊರಕೆ,  ಶ್ರೀನಿವಾಸ್  ಪೂಜಾರಿ,  ರುಕ್ಮಯ್ಯ ಪೂಜಾರಿಯಂತ ಬಿಲ್ಲವರ   ಭೂಪರಿಗೆ, ಬಿಲ್ಲವರ ಸಂಘದ ಸರದಾರರಿಗೆಲ್ಲಾ ಅರ್ಥವಾಗೋದು ಯಾವಾಗ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...