HomeUncategorizedಗದಗ್ ನಲ್ಲಿ ನಡೆದ ಕಲಾಶಿಬಿರದಲ್ಲಿ ಯುದ್ಧ ಮತ್ತು ಸ್ವಾತಂತ್ರ್ಯ: ಹಿಟ್ಲರ್‍ಗೆ ಪಿಕಾಸೋ ಮುಖಾಮುಖಿ

ಗದಗ್ ನಲ್ಲಿ ನಡೆದ ಕಲಾಶಿಬಿರದಲ್ಲಿ ಯುದ್ಧ ಮತ್ತು ಸ್ವಾತಂತ್ರ್ಯ: ಹಿಟ್ಲರ್‍ಗೆ ಪಿಕಾಸೋ ಮುಖಾಮುಖಿ

- Advertisement -
- Advertisement -

| ಮಲ್ಲನಗೌಡರ್ |
ಇಲ್ಲಿ ಫ್ಯಾಸಿಸಂ ಮತ್ತು ಯುದ್ಧಗಳಿಗೆ ಮಾನವೀಯತೆ ಮತ್ತು ಅಂತ:ಕರಣ ಮುಖಾಮುಖಿಯಾಗುತ್ತಿದೆ,,,, ದೇಶದ ಜನರ ಸಂಕಟವನ್ನು ಕೆಲವೇ ಗೆರೆಗಳ ಮೂಲಕ ಮನದಾಳಕ್ಕೆ ತಟ್ಟಿಸಿ ಎಚ್ಚರಿಸುವ ಯತ್ನ ನಡೆದಿದೆ.

ಗದಗಿನಲ್ಲಿ ಇವತ್ತು ಫ್ಯಾಸಿಸ್ಟ್ ಹಿಟ್ಲರ್‍ಗೆ ಜೀವಪರ ನಿಲುವಿನ ಕಲಾವಿದ ಪಿಕಾಸೋ ಮುಖಾಮುಖಿಯಾಗಿ ಗೆದ್ದಿದ್ದಾರೆ. ಮೇ 4, 5 ರಂದು ಗದಗಿನಲ್ಲಿ ನಡೆಯುತ್ತಿರುವ 6ನೇ ಮೇ ಸಾಹಿತ್ಯ ಸಮ್ಮೇಳನಕ್ಕೆ ಪೂರ್ವಭಾವಿಯಾಗಿ, ಪೂರಕವಾಗಿ ಇಂದು ಚಿತ್ರಕಲಾ ಶಿಬಿರದ ಚಾಲನೆಯಾಗಿದೆ.

ಹೋರಾಟಕ್ಕೆ ಕತ್ತಿ, ಚೂರಿ, ಬಂದೂಕೂ ಬೇಕಿಲ್ಲ, ಸಂವಿಧಾನವೇ ನಮ್ಮ ಹೋರಾಟದ ಅಸ್ಸ್ತ್ರ ಎಂದು ಶಿಬಿರಕ್ಕೆ ಚಾಲನೆ ನೀಡಿದ ಖ್ಯಾತ ಕಲಾವಿದ ರಾ. ಸೂರಿ ಹೇಳಿದರು. ಅವರು ಹೇಳಿದ್ದಕ್ಕಿಂತ ಹೆಚ್ಚಿನದನ್ನು ಅವರು ಬಿಡಿಸಿದ ಚಿತ್ರ ಹೇಳುತ್ತಿತ್ತು! ಕಲೆಯ ಶಕ್ತಿಯೇ ಅದಲ್ಲವೇ?

ಹಿಟ್ಲರ್ ಬಂದೂಕು ಗಿ/s ಪಿಕಾಸೋ ಚಿತ್ರ!
ಮೇ ಸಾಹಿತ್ಯ ಸಮ್ಮೇಳನಕ್ಕೆ ಪೂರಕವಾಗಿಯೇ ನಡೆದಿರುವ ಈ ಕಲಾ ಶಿಬಿರದಲ್ಲಿ ಹಿಟ್ಲರ್ ಬಂದಿದ್ದು ಆತನಿಗೆ ಎದುರಾಗಿ ಕಲಾವಿದ ಪಿಕಾಸೋ ನಿಂತಿದ್ದು ಆಶ್ಚರ್ಯವೇನೂ ಅಲ್ಲ. ಈ ಸಲದ ಸಮ್ಮೇಳನದ ಥೀಮೇ ಭ್ರಮಾತ್ಮಕ ಭಾರತ ಗಿ/s ವಾಸ್ತವ ಭಾರತ… ಅಂದರೆ ಅಭಿವೃದ್ಧಿ ಭಾರತ: ಕವಲು ದಾರಿಗಳ ಮುಖಾಮುಖಿ…

ಶಿಬಿರಕ್ಕೆ ಚಾಲನೆ ನೀಡಿದ ರಾ. ಸೂರಿ ಸಂವಿಧಾನದ ಮಹತ್ವದ ಕುರಿತು ಬಿಡಿಸಿದ ಚಿತ್ರ ಸಾಕಷ್ಟು ಸಂಚಲನೆ ಉಂಟು ಮಾಡಿತು. ನಂತರ ಮಾತಾಡಿದ ಪ್ರೇಮಾ ಹಂದಿಗೋಳರು ಮೂಲಭೂತ ಸೌಕರ್ಯ ಮತ್ತು ಸ್ವಾತಂತ್ರ್ಯ ಇದ್ದಾಗಲಷ್ಟೇ ಕಲಾವಿದ ಶಕ್ತಿಶಾಲಿ ಮೆಸೇಜ್ ಕೊಡಬಲ್ಲ ಎಂದರು.

ಶೀಬಿರದ ನಿದೇರ್ಶಕ ಭರಮಗೌಡರು ಹಿಟ್ಲರ್ ಮತ್ತು ಶ್ರೇಷ್ಠ ಕಲಾವಿದ ಪಿಕಾಸೋನನ್ನು ಚರ್ಚೆಗೆ ಎಳೆ ತಂದರು. ಯುದ್ಧದ ಭೀಕರತೆಯನ್ನು, ಸಾವುನೋವನ್ನು ನೋಡಲಾಗದೇ ತತ್ತರಿಸಿದ ಪಿಕಾಸೋ ಮನೆ ಬಾಗಿಲು ಹಾಕಿಕೊಂಡು ಯುದ್ಧದ ಕ್ರೌರ್ಯವನ್ನು ಖಂಡಿಸುವ ಮತ್ತು ಜಗತ್ತಿಗೆ ಅಗತ್ಯವಾದ ಮಾನವೀಯತೆಯನ್ನು ಬೆಂಬಲಿಸುವ ಶ್ರೇಷ್ಠ ಚಿತ್ರಗಳನ್ನು ಬರೆದ ಎಂದರು.

ಶಿಬಿರದ ಇನ್ನೊಬ್ಬ ನಿರ್ದೇಶಕ ವಿಜಯ ಕಿರೇಸೂರು ಈ ವಿಷಯವನ್ನು ಇನ್ನಷ್ಟು ವಿಸ್ತರಿಸಿದರು. ಹಿಟ್ಲರ್ ಒಬ್ಬ ಒಳ್ಳೆ ಕಲಾವಿದ… ಕಲಾವಿದನೂ ಮೃಗನಾಗಬಲ್ಲ ಎಂಬುದಕ್ಕೆ ಅವನೇ ಸಾಕ್ಷಿ ಎಂದರು. ‘ ಚಿತ್ರ ಪ್ರದರ್ಶನದಲ್ಲಿ ಪಿಕಾಸೋ ಬಿಡಿಸಿದ ಯುದ್ಧದ ಕ್ರೌರ್ಯ ಕುರಿತ ಚಿತ್ರಗಳನ್ನು ನೋಡುವಾಗ, ಇದನ್ನು ಯಾರು ರಚಿಸಿದ್ದು ಎನ್ನುತ್ತಾನೆ ಹಿಟ್ಲರ್. ಆಗ ಪಕ್ಕದಲ್ಲೇ ಇದ್ದ ಪಿಕಾಸೋ ‘ನೀವೇ’ ಎನ್ನುವ ಮೂಲಕ ಮಾರ್ಮಿಕ ಉತ್ತರ ನೀಡಿದರು ಎಂಬುದನ್ನು ಕಿರೇಸೂರು ವಿವರಿಸಿದರು.

ಮೇ ಸಾಹಿತ್ಯ ಸಮ್ಮೇಳನ ಹೀಗೆ ಯುದ್ಧ ವಿರೋಧಿಯಾಗಿ, ಸೌಹಾರ್ದದ ಬೆಂಬಲಿಗನಾಗಿ ಈಗಷ್ಟೇ ಶುರುವಾಗಿದೆ. ಮೇ 4, 5 ರಂದು ಈ ಚಿತ್ರಗಳ ಮಾತಿನ ಬದಲು ವ್ಯಕ್ತಿಗಳ ಮಾತನ್ನು ಕೇಳಲು ಗದಗದಲ್ಲಿ ಸೇರೋಣ. ಬನ್ನಿ….
ಬನ್ನಿ ಗದಗಿಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....