HomeUncategorizedಗದಗ್ ನಲ್ಲಿ ನಡೆದ ಕಲಾಶಿಬಿರದಲ್ಲಿ ಯುದ್ಧ ಮತ್ತು ಸ್ವಾತಂತ್ರ್ಯ: ಹಿಟ್ಲರ್‍ಗೆ ಪಿಕಾಸೋ ಮುಖಾಮುಖಿ

ಗದಗ್ ನಲ್ಲಿ ನಡೆದ ಕಲಾಶಿಬಿರದಲ್ಲಿ ಯುದ್ಧ ಮತ್ತು ಸ್ವಾತಂತ್ರ್ಯ: ಹಿಟ್ಲರ್‍ಗೆ ಪಿಕಾಸೋ ಮುಖಾಮುಖಿ

- Advertisement -
- Advertisement -

| ಮಲ್ಲನಗೌಡರ್ |
ಇಲ್ಲಿ ಫ್ಯಾಸಿಸಂ ಮತ್ತು ಯುದ್ಧಗಳಿಗೆ ಮಾನವೀಯತೆ ಮತ್ತು ಅಂತ:ಕರಣ ಮುಖಾಮುಖಿಯಾಗುತ್ತಿದೆ,,,, ದೇಶದ ಜನರ ಸಂಕಟವನ್ನು ಕೆಲವೇ ಗೆರೆಗಳ ಮೂಲಕ ಮನದಾಳಕ್ಕೆ ತಟ್ಟಿಸಿ ಎಚ್ಚರಿಸುವ ಯತ್ನ ನಡೆದಿದೆ.

ಗದಗಿನಲ್ಲಿ ಇವತ್ತು ಫ್ಯಾಸಿಸ್ಟ್ ಹಿಟ್ಲರ್‍ಗೆ ಜೀವಪರ ನಿಲುವಿನ ಕಲಾವಿದ ಪಿಕಾಸೋ ಮುಖಾಮುಖಿಯಾಗಿ ಗೆದ್ದಿದ್ದಾರೆ. ಮೇ 4, 5 ರಂದು ಗದಗಿನಲ್ಲಿ ನಡೆಯುತ್ತಿರುವ 6ನೇ ಮೇ ಸಾಹಿತ್ಯ ಸಮ್ಮೇಳನಕ್ಕೆ ಪೂರ್ವಭಾವಿಯಾಗಿ, ಪೂರಕವಾಗಿ ಇಂದು ಚಿತ್ರಕಲಾ ಶಿಬಿರದ ಚಾಲನೆಯಾಗಿದೆ.

ಹೋರಾಟಕ್ಕೆ ಕತ್ತಿ, ಚೂರಿ, ಬಂದೂಕೂ ಬೇಕಿಲ್ಲ, ಸಂವಿಧಾನವೇ ನಮ್ಮ ಹೋರಾಟದ ಅಸ್ಸ್ತ್ರ ಎಂದು ಶಿಬಿರಕ್ಕೆ ಚಾಲನೆ ನೀಡಿದ ಖ್ಯಾತ ಕಲಾವಿದ ರಾ. ಸೂರಿ ಹೇಳಿದರು. ಅವರು ಹೇಳಿದ್ದಕ್ಕಿಂತ ಹೆಚ್ಚಿನದನ್ನು ಅವರು ಬಿಡಿಸಿದ ಚಿತ್ರ ಹೇಳುತ್ತಿತ್ತು! ಕಲೆಯ ಶಕ್ತಿಯೇ ಅದಲ್ಲವೇ?

ಹಿಟ್ಲರ್ ಬಂದೂಕು ಗಿ/s ಪಿಕಾಸೋ ಚಿತ್ರ!
ಮೇ ಸಾಹಿತ್ಯ ಸಮ್ಮೇಳನಕ್ಕೆ ಪೂರಕವಾಗಿಯೇ ನಡೆದಿರುವ ಈ ಕಲಾ ಶಿಬಿರದಲ್ಲಿ ಹಿಟ್ಲರ್ ಬಂದಿದ್ದು ಆತನಿಗೆ ಎದುರಾಗಿ ಕಲಾವಿದ ಪಿಕಾಸೋ ನಿಂತಿದ್ದು ಆಶ್ಚರ್ಯವೇನೂ ಅಲ್ಲ. ಈ ಸಲದ ಸಮ್ಮೇಳನದ ಥೀಮೇ ಭ್ರಮಾತ್ಮಕ ಭಾರತ ಗಿ/s ವಾಸ್ತವ ಭಾರತ… ಅಂದರೆ ಅಭಿವೃದ್ಧಿ ಭಾರತ: ಕವಲು ದಾರಿಗಳ ಮುಖಾಮುಖಿ…

ಶಿಬಿರಕ್ಕೆ ಚಾಲನೆ ನೀಡಿದ ರಾ. ಸೂರಿ ಸಂವಿಧಾನದ ಮಹತ್ವದ ಕುರಿತು ಬಿಡಿಸಿದ ಚಿತ್ರ ಸಾಕಷ್ಟು ಸಂಚಲನೆ ಉಂಟು ಮಾಡಿತು. ನಂತರ ಮಾತಾಡಿದ ಪ್ರೇಮಾ ಹಂದಿಗೋಳರು ಮೂಲಭೂತ ಸೌಕರ್ಯ ಮತ್ತು ಸ್ವಾತಂತ್ರ್ಯ ಇದ್ದಾಗಲಷ್ಟೇ ಕಲಾವಿದ ಶಕ್ತಿಶಾಲಿ ಮೆಸೇಜ್ ಕೊಡಬಲ್ಲ ಎಂದರು.

ಶೀಬಿರದ ನಿದೇರ್ಶಕ ಭರಮಗೌಡರು ಹಿಟ್ಲರ್ ಮತ್ತು ಶ್ರೇಷ್ಠ ಕಲಾವಿದ ಪಿಕಾಸೋನನ್ನು ಚರ್ಚೆಗೆ ಎಳೆ ತಂದರು. ಯುದ್ಧದ ಭೀಕರತೆಯನ್ನು, ಸಾವುನೋವನ್ನು ನೋಡಲಾಗದೇ ತತ್ತರಿಸಿದ ಪಿಕಾಸೋ ಮನೆ ಬಾಗಿಲು ಹಾಕಿಕೊಂಡು ಯುದ್ಧದ ಕ್ರೌರ್ಯವನ್ನು ಖಂಡಿಸುವ ಮತ್ತು ಜಗತ್ತಿಗೆ ಅಗತ್ಯವಾದ ಮಾನವೀಯತೆಯನ್ನು ಬೆಂಬಲಿಸುವ ಶ್ರೇಷ್ಠ ಚಿತ್ರಗಳನ್ನು ಬರೆದ ಎಂದರು.

ಶಿಬಿರದ ಇನ್ನೊಬ್ಬ ನಿರ್ದೇಶಕ ವಿಜಯ ಕಿರೇಸೂರು ಈ ವಿಷಯವನ್ನು ಇನ್ನಷ್ಟು ವಿಸ್ತರಿಸಿದರು. ಹಿಟ್ಲರ್ ಒಬ್ಬ ಒಳ್ಳೆ ಕಲಾವಿದ… ಕಲಾವಿದನೂ ಮೃಗನಾಗಬಲ್ಲ ಎಂಬುದಕ್ಕೆ ಅವನೇ ಸಾಕ್ಷಿ ಎಂದರು. ‘ ಚಿತ್ರ ಪ್ರದರ್ಶನದಲ್ಲಿ ಪಿಕಾಸೋ ಬಿಡಿಸಿದ ಯುದ್ಧದ ಕ್ರೌರ್ಯ ಕುರಿತ ಚಿತ್ರಗಳನ್ನು ನೋಡುವಾಗ, ಇದನ್ನು ಯಾರು ರಚಿಸಿದ್ದು ಎನ್ನುತ್ತಾನೆ ಹಿಟ್ಲರ್. ಆಗ ಪಕ್ಕದಲ್ಲೇ ಇದ್ದ ಪಿಕಾಸೋ ‘ನೀವೇ’ ಎನ್ನುವ ಮೂಲಕ ಮಾರ್ಮಿಕ ಉತ್ತರ ನೀಡಿದರು ಎಂಬುದನ್ನು ಕಿರೇಸೂರು ವಿವರಿಸಿದರು.

ಮೇ ಸಾಹಿತ್ಯ ಸಮ್ಮೇಳನ ಹೀಗೆ ಯುದ್ಧ ವಿರೋಧಿಯಾಗಿ, ಸೌಹಾರ್ದದ ಬೆಂಬಲಿಗನಾಗಿ ಈಗಷ್ಟೇ ಶುರುವಾಗಿದೆ. ಮೇ 4, 5 ರಂದು ಈ ಚಿತ್ರಗಳ ಮಾತಿನ ಬದಲು ವ್ಯಕ್ತಿಗಳ ಮಾತನ್ನು ಕೇಳಲು ಗದಗದಲ್ಲಿ ಸೇರೋಣ. ಬನ್ನಿ….
ಬನ್ನಿ ಗದಗಿಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...