Homeಸಾಹಿತ್ಯ-ಸಂಸ್ಕೃತಿಕವನಕವನ | ಹೋಗಿ, ಬರಬೇಡಿ

ಕವನ | ಹೋಗಿ, ಬರಬೇಡಿ

- Advertisement -
- Advertisement -

ವಿಕಾಸ್ ಆರ್ ಮೌರ್ಯ | 

ಅತಿಥಿ ದೇವೋಭವ
ನಿಮ್ಮ ದೇವಭಾಷೆಯಲ್ಲಿ
ನೀವು ಬರೆದಿಟ್ಟುಕೊಂಡಿರಿ
ನಮಗೆ ಕೊಟ್ಟಿಗೆಯಲ್ಲಿ
ತಂಗಳವೋ, ಹಳಸಿದ್ದೋ ನೀಡಿದಿರಿ
ನಾವು ಕಣ್ಣಿಗೊತ್ತಿ ತಿಂದಿದ್ದೆವು

ನೀವು ಮನೆಯೊಳಗೆ ಉಣಿಸಿದ
ಇತಿಹಾಸವೇ ಇಲ್ಲ
ಈಗೇನೋ ನಮ್ಮನೆ ಆತಿಥ್ಯ ಬಯಸಿದ್ದೀರಿ
ನಾವು ಬರೆದವರಲ್ಲ, ಬದುಕಿದವರು
ಹಸಿವೆಂದು ಬಂದವರಿಗೆ
ಹಳಸಿದ್ದನ್ನು ನೀಡೆವು
ತಂಗಳಾದರೂ ಸರಿಯೇ
ಬಿಸಿ ಮಾಡಿ ಬಡಿಸುವೆವು

ಇಗೋ ಬಾಳೆಎಲೆ
ಅಪ್ಪ ಹರಿವಾಗ, ಕುಡುಗೋಲು
ರೋಹಿತನನ್ನು ನೆನೆಸಿತಂತೆ
ಈ ನೀರು
ದೊಡ್ಡವ್ವ ಬಾವೀಲಿ ಸೇದುವಾಗ
ಚೆಲ್ಲಿ ಅರ್ಧವಾಗಿ ಆಸೀಫಾ ಅಂತಂತೆ
ಈ ಚೊಂಬೂ ಅಷ್ಟೆ
ತೊಳೆವಾಗ ಊನಾ ಎಂದು ಕಿರುಚಿತಂತೆ

ಇಂದೇಕೋ ಹಿಟ್ಟಿನೆಸರು
ಕೊತಕೊತವೆನ್ನದೆ ಕಥುವಾ ಕಥುವಾ ಎಂದಿತು
ಅನ್ನದ ಗಂಜಿ ಉಕ್ಕಿ
ಉನ್ನಾವೋ ಎಂದಿತು
ಒಲೆ ಹೊಗೆ ಉಗುಳಿ
ಜೀವಾನಿಲವಿಲ್ಲದೆ ಕರುಳು ಹಿಂಡಿದಂತಾಯಿತು
ಸಾರು ಕುದಿಯುವಾಗ ಎದ್ದ ಗುಳ್ಳೆಗಳು
ಗೋಲಿಬಾರ್ ಗುಂಡುಗಳಂತೆ ಕಂಡವು

ಇಗೋ ಸೊಪ್ಪಿನ ಪಲ್ಯ, ಹಿತ್ತಲಿನದು
ನೀರ ಮನೆಯ ಬೆವರ ಹೀರಿ ಬೆಳೆದಿದೆ
ಈ ಉಪ್ಪಿನ ಕಾಯಿ, ಮನೆಯದ್ದು
ಎಳ್ಳಿಕಾಯಿ ಸ್ವಲ್ಪ ಕಹಿಯಿದೆ
ಅಲ್ಲಲ್ಲಿ ಮೆತ್ತಿದ ಮೆಣಸು
ಹಪ್ಪಳದೊಂದಿಗೆ ಕಾರ ಸೇರಿಸಿದೆ
ರಸದಲ್ಲಿನ ಮೆಣಸಿನಕಾಯಿ
ಕುದ್ದು ಕುದ್ದು ಕೆಂಪಾಗಿದೆ
ಮಸಾಲೆ ಘಮವ ಘಮಿಸಿ
ಬೆಚ್ಚಿ ಬೀಳಬೇಡಿ
ನಿಮ್ಮ ಆಹಾರ ನಿಮಗೆ ನೀಡಿಹೆವು
ನಮ್ಮದು, ಶುಂಠಿ ಬೆಳ್ಳುಳ್ಳಿಯೊಂದಿಗೆ ಬೇಯುತ್ತಿದೆ
ಹಲ್ಲಿಗೂ ರುಚಿಯೆನಿಸುವ ದನದ ಬಾಡು
ಇಂದೇಕೋ ಹೆಚ್ಚು ಘಮಿಸುತ್ತಿದೆ
ನಿಮ್ಮ ಪೂರ್ವಜರ ಆತ್ಮಗಳು ಇಲ್ಲೇ ಎಲ್ಲೋ
ಗಿರಕಿ ಹೊಡೆಯುತ್ತಿರಬೇಕು

ಸಿಹಿ ಮಾಡಿಲ್ಲವೆಂದು ಬೇಸರವಾಗಬೇಡಿ
ಹೋಳಿಗೆ ಮಾಡಲು ತಂದಿದ್ದ ಮೈದಾವನ್ನ
ಅಜ್ಜಿ ತಿಕದಡಿ ಹಾಕಿಕೊಂಡು ಕುಂತಿದ್ದಾಳೆ
ಸಂಬಂಧಿಗಳಿಗೆ ಸಿಹಿಯುಣಿಸುವುದು ಅವಳ ವಾಡಿಕೆ
ಕ್ಷಮಿಸಿ, ಎಲೆ ಅಡಿಕೆ ಕೊಡಲಾರೆವು
ನಿಮಗೆ ಸುಣ್ಣ ಸವರಿ ಅಭ್ಯಾಸವಿಲ್ಲವಲ್ಲ
ಹೋಗಿ.. ಬರಬೇಡಿ
ಕನ್ನ ಹಾಕದಂತೆ ಕಾವಲಿರಬೇಕಿದೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...