Homeಕರ್ನಾಟಕಕಾಂಗ್ರೆಸ್‍ಗೆ ಎಚ್ಚರ, ಪಕ್ಷ ಕಟ್ಟುವ ಫಜೀತಿ, ಸರ್ಕಾರದ ಉಳಿವಿಗಷ್ಟೇ ಮೈತ್ರಿ

ಕಾಂಗ್ರೆಸ್‍ಗೆ ಎಚ್ಚರ, ಪಕ್ಷ ಕಟ್ಟುವ ಫಜೀತಿ, ಸರ್ಕಾರದ ಉಳಿವಿಗಷ್ಟೇ ಮೈತ್ರಿ

- Advertisement -
| ಮಲ್ಲನಗೌಡರ್ |
ಮೇಲಿನ ತಲೆಬರಹದಷ್ಟೇ ಸಂಕೀರ್ಣವಾಗಿದೆ ರಾಜ್ಯದ ಸದ್ಯದ ರಾಜಕಾರಣ. ರಾಜ್ಯ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ನಡುವಿನ ಸ್ನೇಹ, ಮುನಿಸು, ಅಧಿಕಾರ ಪಾಲು, ಆಂತರಿಕ ಭಿನ್ನಮತ ಮತ್ತು ಪಕ್ಷಗಳ ಬಲವರ್ಧನೆ, ನಾಯಕರ ವೈಯಕ್ತಿಕ ಆಕಾಂಕ್ಷೆಗಳು- ಇವೆಲ್ಲವೂ ಸದ್ಯ ಮೇಲುನೋಟಕ್ಕೆ ಭಿನ್ನ ಆಯಾಮಗಳಂತೆ ಕಂಡು ಬಂದರೂ, ಇವೆಲ್ಲವೂ ಹಾಸು ಹೊಕ್ಕಾಗಿ ಒಂದರೊಳಗೊಂದು ಹೆಣೆದುಕೊಂಡಿವೆ. ಸದಾ ಅಧಿಕಾರ ಹಿಡಿಯುವ ಕಾರ್ಯಾಚರಣೆಯನ್ನು ಜೀವಂತವೇ ಇಟ್ಟಿರುವ ಬಿಜೆಪಿಗೆ, 25 ಸೀಟುಗಳ ದಿಗ್ವಿಜಯದ ನಂತರ ಹೈಕಮಾಂಡಿನಿಂದ ಬೆಂಬಲವೂ ಸಿಕ್ಕಂತಿದೆ. ಇಡೀ ರಾಜ್ಯದ ಬಹುಭಾಗದಲ್ಲಿ ನೀರಿನ ಕೊರತೆಯಿದೆ, ಮಳೆಯ ವಿಳಂಬದಿಂದಾಗಿ ಜೂನ್ ಮೂರನೇ ವಾರದಲ್ಲೂ ಬಿತ್ತನೆಯಾಗಿಲ್ಲ. ರಾಜಧಾನಿಯಲ್ಲಿ ಮಾತ್ರ ‘ಕುರ್ಚಿಗಾಗಿ ಕಾಳು ಹಾಕುವ’, ಕಾಲೆಳೆಯುವ ರಾಜಕಾರಣ ಎಗ್ಗಿಲ್ಲದೇ ಸಾಗಿದೆ.
ಸದ್ಯಕ್ಕೆ ಮುಖ್ಯ ಬೆಳವಣಿಗೆ ಎನಿಸಿದ್ದು ಎಐಸಿಸಿಯು ರಾಜ್ಯ ಕಾಂಗ್ರೆಸ್ ಪದಾಧಿಕಾರಿಗಳನ್ನು ವಿಸರ್ಜನೆ ಮಾಡಿರುವುದು. ಇದರ ಜೊತೆಗೇ ಮೈತ್ರಿ ಸರ್ಕಾರವನ್ನು ಮುಂದುವರೆಸಿಕೊಂಡು ಹೋಗಲು ಸೂಚಿಸಿರುವುದು. ಕಾಂಗ್ರೆಸ್ ಹೈಕಮಾಂಡಿನ ಈ ನಡೆಯಿಂದ ರಾಜ್ಯ ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ಪ್ರಾಬಲ್ಯ ಇನ್ನಷ್ಟು ಹೆಚ್ಚಿದೆ, ಹೆಚ್ಚಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಸಿದ್ದರಾಮಯ್ಯರ ಮಾತಿಗೆ ತಲೆದೂಗಿರುವ ಹೈಮಾಂಡ್ ಪಕ್ಷ ಕಟ್ಟುವ ಗಟ್ಟಿ ತೀರ್ಮಾನಕ್ಕೆ ಬಂದಿದೆ. ಅಧ್ಯಕ್ಷ ಮತ್ತು ಕಾರ್ಯಾಧ್ಯಕ್ಷರನ್ನು ಬಿಟ್ಟು ಎಲ್ಲ ಹಂತದ ಪದಾಧಿಕಾರಿಗಳಿಗೆ ಗೇಟ್ ತೋರಿಸಲಾಗಿದೆ. ದಶಕಗಳಿಂದ ಪಕ್ಷ ಸಂಘಟನೆ ಮಾಡದೇ ಬರೀ ಅಧಿಕಾರದ ಲಾಭ ಪಡೆಯುತ್ತಲೇ ಬಂದಿದ್ದ ಬಹುಪಾಲು ವಿಸರ್ಜಿತ ಪದಾಧಿಕಾರಿಗಳ ಜಾಗಕ್ಕೆ ನಿಷ್ಟಾವಂತ ಕಾರ್ಯಕರ್ತರನ್ನು ನೇಮಿಸುವ ಕೆಲಸ ನಿರಾಂತಕದ ವಿಷಯ ಅಲ್ಲವೇ ಅಲ್ಲ. ಇತ್ತ ಸಿದ್ದರಾಮಯ್ಯ ಪಕ್ಷ ಸಂಘಟನೆ ಜೊತೆಗೆ ತಮ್ಮ ಶಾಸಕರು ಬಿಜೆಪಿ ಆಮಿಷಕ್ಕೆ ಬೀಳದಂತೆ ತಡೆಯುವ, ಮೂಲ ಕಾಂಗ್ರೆಸ್ ನಾಯಕರ ಭಿನ್ನಮತವನ್ನು ತಡೆಯುವ ಜವಾಬ್ದಾರಿಗಳನ್ನು ತಾವೇ ಹೊತ್ತುಕೊಂಡು ಬಂದಿದ್ದಾರೆ.
ಮೈತ್ರಿಯಿಂದ ಕಾಂಗ್ರೆಸ್‍ಗೆ ನಷ್ಟ
ಇದನ್ನು ಹೈಕಮಾಂಡ್‍ಗೆ ಮನವರಿಕೆ ಮಾಡಿಕೊಳ್ಳುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ಲೋಕಸಭೆಯಲ್ಲಿ ಮೈತ್ರಿ ಕಾರಣದಿಂದಾಗಿಯೇ ಕಾಂಗ್ರೆಸ್‍ಗೆ ದೊಡ್ಡ ಹಿನ್ನಡೆ ಆಗಿದ್ದು ಮತ್ತು ಅದರ ಲಾಭ ಬಿಜೆಪಿಗೆ ಹೋಗಿದ್ದು ಸತ್ಯ. ಹೀಗಾಗಿ ಮೈತ್ರಿ ಸರ್ಕಾರವನ್ನು ಕಾಪಾಡಿಕೊಂಡೇ, ಪಕ್ಷ ಸಂಘಟನೆ ಮಾಡುವತ್ತ ಕಾಂಗ್ರೆಸ್ ಹೆಜ್ಜೆ ಇಟ್ಟಿದೆ. ಆದರೆ, ಬಿಜೆಪಿಯ ಆಪರೇಷನ್ ಕಮಲ ಮುಂದುವರೆದೇ ಇರುವ ಹೊತ್ತಿನಲ್ಲಿ ಕಾಂಗ್ರೆಸ್ ತನ್ನ ಭಿನ್ನಮತೀಯ ಶಾಸಕರನ್ನು ಉಳಿಸಿಕೊಳ್ಳುವ ಕಸರತ್ತನ್ನೂ ಮಾಡಬೇಕಿದೆ. ಸದ್ಯಕ್ಕೆ ದೇವೇಗೌಡ ಮತ್ತು ಕುಮಾರಸ್ವಾಮಿಯವರಿಗೆ ಸರ್ಕಾರ ಬೀಳದೇ ಇದ್ದರೆ ಸಾಕು ಎಂಬ ಗುರಿಯಷ್ಟೇ ಇರುವಂತಿದೆ.
ಬಿಜೆಪಿ ಹೈಕಮ್ಯಾಂಡ್‍ನಿಂದ ಯಡ್ಡಿಗೆ ಗ್ರೀನ್ ಸಿಗ್ನಲ್?
ಲೋಕಸಭಾ ಚುನಾವಣೆಯ ಗೆಲುವು ಸಿಕ್ಕ ತಕ್ಷಣ ಭಾರೀ ಬದಲಾವಣೆ ಆಗಲಿದೆ ಎಂಬ ನಿರೀಕ್ಷೆ ಎಲ್ಲರಲ್ಲೂ ಇತ್ತು. ಅದನ್ನು ಬಿಜೆಪಿ ನಾಯಕರು ಪದೇ ಪದೇ ಹೇಳಿಯೂ ಇದ್ದರು. ಆದರೆ, ಫಲಿತಾಂಶದ ನಂತರ ಅಂಥದ್ದೇನಕ್ಕೂ ಕೈ ಹಾಕಬೇಡಿ ಎಂದು ಹೈಕಮ್ಯಾಂಡ್ ಸೂಚಿಸಿದೆ ಎಂಬ ಮಾತನ್ನು ಸ್ವತಃ ಯಡಿಯೂರಪ್ಪ ಹೇಳಿದರು. ಕಾಂಗ್ರೆಸ್‍ನೊಳಗಿನಿಂದಲೇ ಸರ್ಕಾರ ಬೀಳಿಸುವ ಕೆಲಸ ನಡೆಯುವ ಸಾಧ್ಯತೆ ಇರುವಾಗ, ನಾವೇಕೆ ಕೆಟ್ಟ ಹೆಸರು ತಂದುಕೊಳ್ಳಬೇಕು ಎಂಬುದು ಬಿಜೆಪಿಯ ಇರಾದೆಯಾಗಿತ್ತು. ಆಪರೇಷನ್ ಮಾಡುವುದಕ್ಕಿಂತ ಚುನಾವಣೆಗೇ ಹೋದರೆ ಗೆಲುವು ಬಿಜೆಪಿಯದ್ದೇ ಎನ್ನುವ ಅನಿಸಿಕೆಯೂ ಆ ವಲಯಗಳಲ್ಲಿತ್ತು. ಹಾಗಾಗಿ ಕೆಡವುವುದಕ್ಕಿಂತ, ತಾನೇ ಬಿದ್ದು ಹೋಗಲಿ ಎಂದು ಕಾಯುವುದೇ ಸರಿ ಎಂಬುದು ಬಿಜೆಪಿಯ ನಾಯಕರ ತೀರ್ಮಾನವಾಗಿತ್ತು.
ಆದರೆ, ಅದಾಗಲಿಲ್ಲ. ಯಡಿಯೂರಪ್ಪನವರಿಗೂ ಸುಮ್ಮನೇ ಕೂರಲಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ, ‘ಆಪರೇಷನ್‍ಗೆ ಮುಂದಾಗಿ’ ಎಂಬ ಗ್ರೀನ್ ಸಿಗ್ನಲ್ ಬಂದಿದೆ ಎಂಬ ಸುದ್ದಿಗೆ ವಿಶೇಷ ಮಹತ್ವ ಬಂದಿದೆ. ಮಧ್ಯಂತರ ಚುನಾವಣೆ ಸದ್ಯಕ್ಕಂತೂ ಯಾರಿಗೂ ಬೇಡವಾಗಿದೆ. ಹಾಗಾಗಿ ಆಪರೇಷನ್ ನಡೆಯುವುದೇ ಲೇಸು ಎಂಬ ಪರಿಸ್ಥಿತಿ ಸದ್ಯಕ್ಕಿದೆ.
ಗ್ರಾಮ ವಾಸ್ತವ್ಯ ಜನಪ್ರಿಯತೆ ಮರಳಿ ಪಡೆಯುವುದಕ್ಕೋ, ಜನಪರ ಕೆಲಸ ಮಾಡುವುದಕ್ಕೋ?
ಕುಮಾರಸ್ವಾಮಿಯವರ ಮನೆ ಬಾಗಿಲಿಗೆ ಬರುವ ಜನರನ್ನು ಭೇಟಿ ಮಾಡುತ್ತಿದ್ದಾರಾದರೂ, ಅಧಿಕೃತ ಜನತಾದರ್ಶನವನ್ನು ನಡೆಸುತ್ತಿಲ್ಲ. ಗ್ರಾಮ ವಾಸ್ತವ್ಯವೂ ಇರುವುದಿಲ್ಲ ಎಂದು ಹೇಳಿದ್ದರು. ಆದರೀಗ, ಜನಪ್ರಿಯ ಕಾರ್ಯಕ್ರಮಗಳ ಮೊರೆ ಹೋಗುವುದು ಅನಿವಾರ್ಯವಾಗಿದೆ. ಬರದ ಬಿಸಿ ನಿವಾರಣೆಗೆ ಸರ್ಕಾರ ಪರಿಣಾಮಕಾರಿ ಕೆಲಸ ಮಾಡುವ ತುರ್ತಂತೂ ಈಗಿದೆ. ಆ ಮೂಲಕ ಜನರ ಹತ್ತಿರಕ್ಕೆ ಹೋಗುವ ಅವಕಾಶವೂ ಇದೆ. ಆದರೆ, ಅದನ್ನು ಮಾಡುತ್ತಾರಾ ಅಥವಾ ಪ್ರಚಾರವಷ್ಟೇ ನಡೆಯುತ್ತದಾ ಎಂಬುದನ್ನು ಕಾದು ನೋಡಬೇಕು.
ಸಿದ್ದರಾಮಯ್ಯನವರ ಡಬಲ್ ಕಷ್ಟ
ಮುಖ್ಯಮಂತ್ರಿಯಾಗಿ ಇಳಿದಿರುವ ಸಿದ್ದರಾಮಯ್ಯನವರಿಗೆ ಎರಡರಲ್ಲೊಂದು ಆಗಲೇಬೇಕು. ಒಂದೋ ಅಧಿಕಾರದಲ್ಲಿರಬೇಕು, ಇಲ್ಲವೇ ಜನನಾಯಕನಾಗಿ ಪ್ರತಿಷ್ಠಾಪನೆಯಾಗಬೇಕು. ಕುಮಾರಸ್ವಾಮಿಯವರನ್ನು ಇಳಿಸಿದರೂ, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರನ್ನು ಜೆಡಿಎಸ್‍ನವರು ಒಪ್ಪುವುದು ಸಾಧ್ಯವೇ ಇಲ್ಲ. ಇನ್ನು ಜನನಾಯಕನಾಗಬೇಕೆಂದರೆ ರಾಜ್ಯ ಪ್ರವಾಸ ಕೈಗೊಂಡು ಪಕ್ಷವನ್ನೂ ಸಂಘಟಿಸಲು ಬೆವರು ಹರಿಸಬೇಕು. ಆದರೆ, ರಾಜ್ಯದೆಲ್ಲೆಡೆ ಹೋದಾಗ, ದೂರದ ದೆಹಲಿ ಸರ್ಕಾರವನ್ನು ಟೀಕಿಸುವುದರಿಂದ ಪ್ರಯೋಜನವಿಲ್ಲ. ರಾಜ್ಯ ಸರ್ಕಾರವನ್ನು ಬಯ್ಯುವುದಿರಲಿ, ಹೊಗಳುತ್ತಾ, ಸಮರ್ಥಿಸುತ್ತಾ ಇರಬೇಕಾಗುತ್ತದೆ. ಹೀಗಾಗಿ ಏನು ಮಾಡುವುದೋ ಗೊತ್ತಾಗದೇ, ರಾಜ್ಯ ಸರ್ಕಾರವನ್ನು ಅಭದ್ರತೆಯಲ್ಲಿಡುತ್ತಲೇ, ತಮ್ಮ ಪ್ರಸ್ತುತತೆ ಉಳಿಸಿಕೊಳ್ಳುವ ಕಸರತ್ತಷ್ಟೇ ಮಾಡುತ್ತಿದ್ದಾರೆ. ಅದರಾಚೆಗೆ, ರಾಜ್ಯದ ಜನರ ಹಿತಾಸಕ್ತಿಯಿಂದ ವರ್ತಿಸುವ ಕಷ್ಟಕರವಾದ ಕೆಲಸ ಅವರಿಂದಾಗುತ್ತಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...