Homeಮುಖಪುಟಕಾಂಗ್ರೆಸ್ ವಿರುದ್ಧದ ಮೊಕದ್ದಮೆ ವಾಪಸ್ ಪಡೆದ ಅನಿಲ್ ಅಂಬಾನಿ. ಕುತೂಹಲ ಹುಟ್ಟಿಸಿರುವ ನಡೆ

ಕಾಂಗ್ರೆಸ್ ವಿರುದ್ಧದ ಮೊಕದ್ದಮೆ ವಾಪಸ್ ಪಡೆದ ಅನಿಲ್ ಅಂಬಾನಿ. ಕುತೂಹಲ ಹುಟ್ಟಿಸಿರುವ ನಡೆ

ಇದು ಮೋದಿಯವರು ಸರ್ಕಾರ ರಚಿಸುವಷ್ಟು ಬಹುಮತ ಪಡೆಯಲಾರರು ಎಂಬ ಸೂಚನೆಯೇ?

- Advertisement -
- Advertisement -

||ನಾನುಗೌರಿ ಡೆಸ್ಕ್||

ಕಳೆದ ಒಂದು ವರ್ಷದಿಂದ ರಾಫೇಲ್ ಹಗರಣದಲ್ಲಿ ಅನಿಲ್ ಅಂಬಾನಿಯ ಮೇಲೆ ಸತತ ವಾಗ್ದಾಳಿ ನಡೆಸುತ್ತಿದ್ದ ಕಾಂಗ್ರೆಸ್ ಪಕ್ಷದ ವಿರುದ್ಧ ಉದ್ಯಮಿ ಅನಿಲ್ ಅಂಬಾನಿ ಹೂಡಿದ್ದ ಮಾನನಷ್ಟ ಮೊಕದ್ದಮೆಯನ್ನು ವಾಪಸ್ ಪಡೆದಿದ್ದಾರೆ. ಹೊಸ ಸರ್ಕಾ ರ ಯಾರು ಮಾಡಬಹುದೆಂಬ ಜನರ ನಿರ್ಧಾರ ಅರಿಯಲು 2 ದಿನ ಇರುವಾಗ ಈ ನಡೆಯು ಬಹಳ ಆಶ್ಚರ್ಯ ಹುಟ್ಟಿಸಿದೆ.

ಇದನ್ನೂ ಓದಿ: ರಾಫೇಲ್ ಹಗರಣ ಏನು? ಗಾಬರಿಗೊಳಿಸುವ ಸಂಗತಿಗಳು
ಕಾಂಗ್ರೆಸ್ ಪಕ್ಷವಲ್ಲದೇ, ಆ ಪಕ್ಷದ ಪತ್ರಿಕೆ ನ್ಯಾಷನಲ್ ಹೆರಾಲ್ಡ್ ಮೇಲೆ ಹೂಡಲಾದ ಮೊಕದ್ದಮೆಯನ್ನೂ ಅನಿಲ್ ಅಂಬಾನಿ ವಾಪಸ್ ಪಡೆಯುತ್ತಿದ್ದಾರೆಂದು ಅವರ ವಕೀಲರು ಕೋರ್ಟಿಗೆ ತಿಳಿಸಿದ್ದಾರೆ. ಅಹಮದಾಬಾದ್‍ನ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಪಿ.ಜೆ.ತಮಕುವಾಲಾರ ಮುಂದೆ ಇದ್ದ ಈ ಮೊಕದ್ದಮೆಯ ವಿಚಾರದಲ್ಲಿ ಇಂತಹ ಬೆಳವಣಿಗೆ ನಡೆದಿದೆ.


ಎಚ್‍ಎಎಲ್ ಸಂಸ್ಥೆಯ ಜೊತೆ ಫ್ರಾನ್ಸ್‍ನ ಡಸಾಲ್ಟ್ ಕಂಪೆನಿಗೆ ಆಗಿದ್ದ ಒಪ್ಪಂದವನ್ನು, ಪ್ರಧಾನಿ ನರೇಂದ್ರ ಮೋದಿ ಏಕಪಕ್ಷೀಯವಾಗಿ ಬದಲಿಸಿ, ಅನಿಲ್ ಅಂಬಾನಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಸರ್ಕಾರದ ಬೊಕ್ಕಸಕ್ಕೂ ಸಾವಿರಾರು ಕೋಟಿ ರೂ ನಷ್ಟ ಮಾಡಿದ್ದಾರೆ ಎಂಬುದು ಆರೋಪವಾಗಿತ್ತು.

ಇದನ್ನೂ ಓದಿ: ರಕ್ಷಣಾ ಇಲಾಖೆಯ ಅತಿ ದೊಡ್ಡ ಹಗರಣ

ಸ್ವತಃ ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿ ಇದನ್ನು ಪದೇ ಪದೇ ಹೇಳುತ್ತಾ ಬಂದಿದ್ದರು. ಹಲವು ಪತ್ರಿಕಾಗೋಷ್ಠಿಗಳ ಮೂಲಕ, ಸಂಸತ್ತಿನಲ್ಲಿ ಚರ್ಚೆಯ ಮೂಲಕ ಮತ್ತು ಚುನಾವಣಾ ಭಾಷಣಗಳಲ್ಲಿ ರಾಹುಲ್ ಇದನ್ನು ಬಲವಾಗಿ ಒತ್ತಿ ಹೇಳುತ್ತಿದ್ದರು.


ಪ್ರತಿಯೊಂದು ಸಾರಿಯೂ ಮೋದಿ ಮತ್ತು ಅನಿಲ್ ಅಂಬಾನಿ ಹೆಸರುಗಳನ್ನು ರಾಹುಲ್‍ಗಾಂಧಿ ಜೊತೆ ಜೊತೆಗೇ ಪ್ರಸ್ತಾಪಿಸಿ ಆರೋಪ ಮಾಡುತ್ತಿದ್ದರು. ಹಾಗಾಗಿ ಅಂಬಾನಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈಗ ಮತ್ತೆ ನರೇಂದ್ರ ಮೋದಿಯವರೇ ಪ್ರಧಾನಿ ಎಂದು ಬಹುತೇಕ ಮತಗಟ್ಟೆ ಸಮೀಕ್ಷೆಗಳು ಹೇಳಿದ್ದರೂ, ಯುಪಿಎ ಮತ್ತು ತೃತೀಯ ರಂಗವೇ ಅಧಿಕಾರಕ್ಕೆ ಬರುತ್ತದೆ ಎಂದು ಹಲವರು ಹೇಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ಸರ್ಕಾರವು ಮೋದಿಯವರದ್ದಾಗದೇ ಹೋಗಬಹುದು ಎಂಬ ಮುನ್ಸೂಚನೆ ಸಿಕ್ಕಿರುವುದರಿಂದಲೇ ಅಂಬಾನಿ ಹೀಗೆ ಮಾಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋವಾ ನೈಟ್ ಕ್ಲಬ್ ಮಾಲೀಕರ ಮಧ್ಯಂತರ ಜಾಮೀನು ನಿರಾಕರಿಸಿದ ದೆಹಲಿ ನ್ಯಾಯಾಲಯ: ಥೈಲ್ಯಾಂಡ್‌ನಿಂದಲೂ ಗಡಿಪಾರು ಪ್ರಕ್ರಿಯೆ ಆರಂಭ 

ನವದೆಹಲಿ: ಕಳೆದ ವಾರ ಕನಿಷ್ಠ 25 ಜನರ ಸಾವಿಗೆ ಕಾರಣವಾಗಿದ್ದ, ಗೋವಾದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಮತ್ತು ಗೌರವ್ ಲುಥ್ರಾಸ್ ಅವರ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು...

ಮಾದಕ ದ್ರವ್ಯ ಬಳಕೆ-ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ: ಪರಮೇಶ್ವರ್

ಮಾದಕ ದ್ರವ್ಯ ಬಳಕೆಯ ದುಷ್ಪರಿಣಾಮ, ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ, ಪೊಲೀಸ್ ಠಾಣೆಗಳಲ್ಲಿ ನಿಯಮಿತವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗಿರುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ಗುರುವಾರ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ...

ದುಡ್ಡು ಕೊಟ್ಟವರಿಗೆ ರಾಜಾತಿಥ್ಯ, ಪೌರತ್ವಕ್ಕೆ ರಹದಾರಿ : ಏನಿದು ‘ಟ್ರಂಪ್ ಗೋಲ್ಡ್ ಕಾರ್ಡ್’

ಟ್ರಂಪ್ ಆಡಳಿತವು ಬುಧವಾರ (ಡಿಸೆಂಬರ್ 10) ಔಪಚಾರಿಕವಾಗಿ 'ಟ್ರಂಪ್ ಗೋಲ್ಡ್ ಕಾರ್ಡ್'ಗಾಗಿ ಅರ್ಜಿಗಳನ್ನು ಸ್ವೀಕರಿಸಲು ಪ್ರಾರಂಭಿಸಿದೆ. ಇದನ್ನು ಅಮೆರಿಕ ಸರ್ಕಾರ ಕನಿಷ್ಠ 1 ಮಿಲಿಯನ್ ಡಾಲರ್ ಪಾವತಿಸುವ ಜನರಿಗೆ ನೀಡಲು ಯೋಜಿಸಿದೆ. 'ಟ್ರಂಪ್ ಗೋಲ್ಡ್...

ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಜೈಲು ಶಿಕ್ಷೆ ಅಮಾನತು ಮನವಿ ನಿರಾಕರಿಸಿದ ಸುಪ್ರೀಂ ಕೋರ್ಟ್

1996 ರ ಮಾದಕ ದ್ರವ್ಯ ವಶ ಪ್ರಕರಣದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರ 20 ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದರಿಂದ ಗುರುವಾರ ಅವರ ಬಿಡುಗಡೆಗಾಗಿನ ಪ್ರಯತ್ನ...

ಅರುಣಾಚಲ ಪ್ರದೇಶ: ಟ್ರಕ್ ಕಂದಕಕ್ಕೆ ಉರುಳಿ ಅಸ್ಸಾಂ ಮೂಲದ 21 ಕಾರ್ಮಿಕರು ಸಾವನ್ನಪ್ಪಿರುವ ಶಂಕೆ, 18 ಮೃತದೇಹಗಳು ಪತ್ತೆ

ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯಲ್ಲಿ ಅಸ್ಸಾಂನಿಂದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಆಳವಾದ ಕಂದಕಕ್ಕೆ ಉರುಳಿದ್ದು, 21 ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಇಲ್ಲಿಯವರೆಗೆ 18 ಶವಗಳನ್ನು ಹೊರತೆಗೆಯಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.  ಡಿಸೆಂಬರ್ 8ನೇ...

ಜಾರ್ಖಂಡ್‌ನ 27 ಮಕ್ಕಳು ನೇಪಾಳಕ್ಕೆ ಕಳ್ಳಸಾಗಣೆ; ತನಿಖೆ ಆರಂಭಿಸಿದ ಪೊಲೀಸರು

ಉತ್ತಮ ಶಿಕ್ಷಣ ಒದಗಿಸುವ ನೆಪದಲ್ಲಿ 27 ಮಕ್ಕಳನ್ನು ನೇಪಾಳಕ್ಕೆ ಕಳ್ಳಸಾಗಣೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಪೊಲೀಸರು ಗುರುವಾರ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಕ್ಕಳನ್ನು...

ಉಮರ್ ಖಾಲಿದ್‌ಗೆ 14 ದಿನಗಳ ಮಧ್ಯಂತರ ಜಾಮೀನು; ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ಅವಕಾಶ

ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರಿಗೆ ಡಿಸೆಂಬರ್ 27 ರಂದು ನಿಗದಿಯಾಗಿದ್ದ ತಮ್ಮ ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ಡಿಸೆಂಬರ್ 16 ರಿಂದ 29 ರವರೆಗೆ 14 ದಿನಗಳ ಕಾಲ ಮಧ್ಯಂತರ ಜಾಮೀನು ನೀಡಲಾಯಿತು....

ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ; ಕೋಮುವಾದವನ್ನಲ್ಲ: ಮಮತಾ ಬ್ಯಾನರ್ಜಿ

ನಾನು ಕೋಮುವಾದದಲ್ಲಿ ನಂಬಿಕೆ ಇಡುವುದಿಲ್ಲ. ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ. ಚುನಾವಣೆ ಸಮೀಪಿಸಿದಾಗಲೆಲ್ಲಾ, ಬಿಜೆಪಿ ಹಣವನ್ನು ಬಳಸಿ ಇತರ ರಾಜ್ಯಗಳಿಂದ ಜನರನ್ನು ಕರೆತಂದು ಸಾರ್ವಜನಿಕರನ್ನು ವಿಭಜಿಸಲು ಪ್ರಯತ್ನಿಸುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ...

ಅತ್ಯಾಚಾರ ಪ್ರಕರಣದ ವಿಚಾರಣೆ ವರ್ಗಾವಣೆ ಕೋರಿ ಪ್ರಜ್ವಲ್ ರೇವಣ್ಣ ಮನವಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ಬೆಂಗಳೂರಿನ 81ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರು ವಿಚಾರಣೆ ನಡೆಸುತ್ತಿರುವ ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳನ್ನು ಬೇರೆ ಸೆಷನ್ಸ್‌ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್‌...

ಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಲಕ್ಷ ಕಂಠ ಗೀತಾ ಪಾರಾಯಣ (ಸುಮಾರು 5 ಲಕ್ಷ ಜನರಿಂದ ಭಗವದ್ಗೀತೆ ಪಾರಾಯಣ) ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಬಡ ಮುಸ್ಲಿಂ ವ್ಯಾಪಾರಿಗೆ ಥಳಿಸಿದ ಘಟನೆ ಭಾನುವಾರ (ಡಿಸೆಂಬರ್ 7) ಕೋಲ್ಕತ್ತಾದ ಬ್ರಿಗೇಡ್...