Homeರಾಜಕೀಯಕಾಫಿ ನಾಡಲ್ಲಿ ಸಡಿಲವಾಗುತ್ತಿದೆ ಬಿಜೆಪಿ ಬಿಗಿ

ಕಾಫಿ ನಾಡಲ್ಲಿ ಸಡಿಲವಾಗುತ್ತಿದೆ ಬಿಜೆಪಿ ಬಿಗಿ

- Advertisement -
- Advertisement -
  • ಟೀಮ್ ಗೌರಿ |
ಅಪ್ಪಚ್ಚು
ಚಂದ್ರಕಲಾ
ಜೀವಿಜಯ

ಕೊಡಗಿನ ಮಡಿಕೇರಿಯ ಹಾಲಿ ಶಾಸಕ ಅಪ್ಪಚ್ಚು ರಂಜನ್. ಈ ಬಾರಿಯೂ ಕಣದಲ್ಲಿದ್ದಾರೆ. ಕಾಂಗ್ರೆಸ್‍ನ ಚಂದ್ರಕಲಾರವರಿಗೆ ಕಡೆಯ ಕ್ಷಣದಲ್ಲಿ ಟಿಕೆಟ್ ಸಿಕ್ಕಿದ್ದು ಕಾಂಗ್ರೆಸ್ಸಿನಲ್ಲಿಯೇ ಅಸಮಾಧಾನಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಶಿವು ಮಾದಪ್ಪ ಮತ್ತು ಎಂಎಲ್‍ಸಿ ವೀಣಾ ಅಚ್ಚಯ್ಯ ಇಬ್ಬರೂ ಹಿರಿಯ ಕಾಂಗ್ರೆಸ್ ನಾಯಕರು ಭಾಗವಹಿಸುವ ವೇದಿಕೆಗಳಲ್ಲಿ ಕಾಣಿಸಿಕೊಳ್ಳುತ್ತಾರೆಯೇ ಹೊರತು ಮಿಕ್ಕ ಸಮಯದಲ್ಲಿ ನಾಪತ್ತೆಯಾಗಿರುತ್ತಾರೆ. ಕಳೆದ 15 ವರ್ಷಗಳಿಂದ ಕಾಂಗ್ರೆಸ್ ಇಲ್ಲಿ ಅಧಿಕಾರದಿಂದ ದೂರವಿದ್ದು ಈ ಬಾರಿ ಒಂದೊಳ್ಳೆಯ ಅವಕಾಶವಿದ್ದು ಕಾಂಗ್ರೆಸ್ ತಾನಾಗಿಯೇ ಕೈಚೆಲ್ಲಿಕೊಂಡಂತಾಗಿದೆ. ಜೆಡಿಎಸ್ ಅಭ್ಯರ್ಥಿ ಜೀವಿಜಯ ಅವರ ಬಗ್ಗೆ ಒಳ್ಳೆ ಅಭಿಪ್ರಾಯಗಳೇನೋ ಕೇಳಿಬರುತ್ತಿವೆಯಾದರೂ ಕಳೆದ ಬಾರಿ ಸೋತುಹೋದ ಇವರು ಮತ್ತೆ ಜನರ ಬಳಿ ಬರಲೇ ಇಲ್ಲವೆಂಬ ಆರೋಪವಿದೆ. ಸ್ವಂತ ಊರಿಗೆ 1 ಕಿಲೋಮೀಟರ್ ದೂರದಲ್ಲಿರುವ ಐಗೂರು ಮಸೀದಿಯ ಬಳಿ ಬಹಿರಂಗವಾಗಿ ಕುರಾನ್ ಸುಟ್ಟಾಗ ಸೌಜನ್ಯಕ್ಕೂ ಅಲ್ಪಸಂಖ್ಯಾತರನ್ನು ಸಂತೈಸದಿರುವುದು ಅವರ ಮೇಲೆ ಅಸಮಾಧಾನ ಮೂಡಿಸಿದೆ. ಜೊತೆಗೆ ಕಾಂಗ್ರೆಸ್ ಚಂದ್ರಕಲಾರವರು ಮತ್ತು ಜೆಡಿಎಸ್ ಜೀವಿಜಯ ಇಬ್ಬರೂ ಅರೆಭಾಷೆ ಗೌಡರಾಗಿರುವ ಕಾರಣ ಮತಗಳು ವಿಭಜನೆಯಾಗುವುದು ಖಚಿತವಾಗಿದೆ. ಈ ಕಾರಣಕ್ಕೆ ಬಿಜೆಪಿಯೇತರ ಶಾಸಕರು ಗೆಲ್ಲುವ ಎಲ್ಲ ಸಾಧ್ಯತೆಗಳೂ ಸಹ ಕ್ಷೀಣಿಸುವ ಸಾಧ್ಯತೆಗಳಿವೆ. ಹಾಲಿ ಶಾಸಕ ವಿರೋಧಿ ಅಲೆಯ ನಡುವೆಯೂ ಅಪ್ಪಚ್ಚು ರಂಜನ್ ಮತ್ತೆ ಆಯ್ಕೆಯಾದರೂ ಆಶ್ಚರ್ಯವಿಲ್ಲ.

ಬೋಪಯ್ಯ

ವಿರಾಜಪೇಟೆ ಕ್ಷೇತ್ರದಲ್ಲಿ ಕೊಡವರದೇ ಮೇಲುಗೈ. ಕಾಂಗ್ರೆಸ್‍ನಿಂದ ಕೊಡವ ಸಮಾಜದ ಅರುಣ್ ಮಾಚಯ್ಯ, ಜೆಡಿಎಸ್‍ನಿಂದ ಸಂಕೇತ ಪೂವಯ್ಯ ಮತ್ತು ಬಿಜೆಪಿ ಕೆ.ಜಿ.ಬೋಪಯ್ಯ ಇವರು ಕಣದಲ್ಲಿದ್ದಾರೆ. ಕೊಡವ ಸಮಾಜ ಇಲ್ಲಿಯವರೆಗೆ ಬಿಜೆಪಿ ಶಾಸಕರನ್ನು ಗೆಲ್ಲಿಸಿಕೊಂಡೇ ಬಂದಿದ್ದು ಅದು ತಮ್ಮ ಪಾರುಪತ್ಯಕ್ಕೆ ಧಕ್ಕೆ ತರಲಾರದು ಎಂದು ಬಲವಾಗಿ ನಂಬಿದೆ. ಆ ಕಾರಣಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಕೊಡವ ಅಭ್ಯರ್ಥಿಯನ್ನೇ ಕಣಕ್ಕಿಳಿಸಿದರೂ ಸತತವಾಗಿ ಸೋಲುತ್ತಿದ್ದಾರೆ. ಸ್ವತಃ ಬಿಜೆಪಿಯೇ ಹಿಂದುಮುಂದು ನೋಡಿ ಬೋಪಯ್ಯಗೆ ಟಿಕೆಟ್ ಕೊಟ್ಟರೂ ಕೊಡವರು ಮತ್ತು ಮಲಯಾಳಿ ಈಡಿಗರು ಒಕ್ಕಲಿಗ ಕೆ.ಜಿ.ಬೋಪಯ್ಯರನ್ನೇ ಗೆಲ್ಲಿಸಬೇಕೆಂದು ಬಗೆದಿರುವಂತಿದೆ. ಇಲ್ಲೀವರೆಗೂ ಈ ಎರಡೂ ಜನಾಂಗ ತಮ್ಮಲ್ಲಿರುವ ಅಧಿಕಾರವನ್ನು ಕಾಯ್ದಿರಿಸಿಕೊಳ್ಳಲು ಬಿಜೆಪಿಯನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಈ ಬಾರಿಯೂ ಅದೇ ದಾರಿ ಹಿಡಿಯುವ ಸಾಧ್ಯತೆಗಳೇ ಹೆಚ್ಚಿದೆಯಾದರು ಸದ್ಯದ ಮಟ್ಟಿಗೆ ಕಾಂಗ್ರೆಸ್‍ನ ಅರುಣ್ ಮಾಚಯ್ಯ ಕೂಡಾ ಗೆಲುವಿನ ಸಂಭಾವ್ಯತೆಯನ್ನು ಉಳಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

ದೇಶದಲ್ಲಿ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ಮೇಲೆ ಅತೀವ ಕೆಲಸದ ಹೊರೆಯನ್ನು ಹೇರಿ ಅವರ ಖಾಸಗಿ ಜೀವನವನ್ನು ಕಿತ್ತುಕೊಳ್ಳುವ ಮೂಲಕ ಮಾನಸಿಕ ಒತ್ತಡಕ್ಕೆ ತಳ್ಳುತ್ತಿರುವ ಪರಿಸ್ಥಿತಿ ಗಂಭೀರ ಹಂತಕ್ಕೆ ತಲುಪಿದೆ. ಅದಾಗ್ಯೂ ಕೆಲ ಕಾರ್ಪೋರೇಟ್‌...

ಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ವೇಳೆ ಯುದ್ಧ ವಿರೋಧಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ಚೆನ್ನೈನ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಲೋರಾ ಶಾಂತಕುಮಾರ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಎಸ್‌ಆರ್‌ಎಂನ ಆಂತರಿಕ ಸಮಿತಿಯ ವರದಿಯು ಲೋರಾ...

ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆ, ಎರಡು ವರ್ಷಗಳ ನಂತರ ಈ ಬಾರಿ ಯೇಸು ಕ್ರಿಸ್ತನ ಜನ್ಮಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ ಮರುಕಳಿಸಿದೆ. ಶನಿವಾರ (ಡಿಸೆಂಬರ್ 6) ಬೆಥ್ಲೆಹೆಮ್‌ನ ಮ್ಯಾಂಗರ್ ಸ್ಕ್ವೇರ್‌ನಲ್ಲಿರುವ ಚರ್ಚ್...

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ...

ಒಳಮೀಸಲಾತಿ : ಶೇ.17ರ ಪ್ರಮಾಣದಲ್ಲೇ ಮುಂದುವರಿಯಲು ಸರ್ಕಾರ ತೀರ್ಮಾನ?

ಒಳಮೀಸಲಾತಿಗೆ ಸಂಬಂಧಿಸಿದಂತೆ ಉಂಟಾಗಿರುವ ಕಗ್ಗಂಟನ್ನು ಎದುರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೇಕಡ 17ರ ಮೀಸಲಾತಿ ಪ್ರಮಾಣದಲ್ಲೇ ಮುಂದುವರಿಯಲು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಶನಿವಾರ ಸಂಜೆ (ಡಿಸೆಂಬರ್ 6) ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಗೋವಾ ನೈಟ್ ಕ್ಲಬ್‌ನಲ್ಲಿ ಸಿಲಿಂಡರ್ ಸ್ಫೋಟ; 25 ಮಂದಿ ಸಾವು

ಉತ್ತರ ಗೋವಾದ ನೈಟ್‌ ಕ್ಲಬ್‌ವೊಂದರಲ್ಲಿ ಶನಿವಾರ (ಡಿಸೆಂಬರ್ 6) ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಕ್ಲಬ್‌ನ ಅಡುಗೆ ಸಿಬ್ಬಂದಿಯಾಗಿದ್ದು,...

ಮೈಸೂರು| ಒಳಮೀಸಲಾತಿ ಹೋರಾಟ ಹತ್ತಿಕ್ಕಲು ನಿಷೇಧಾಜ್ಞೆ ಹೇರಿದ ಕಾಂಗ್ರೆಸ್ ಸರ್ಕಾರ

ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿಗೆ ಆಗ್ರಹಿಸಿ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ' ನಡೆಸುತ್ತಿದ್ದ ಹೋರಾಟಕ್ಕೆ ಜಿಲ್ಲಾ ಪೊಲೀಸರು ಅನುಮತಿ ನಿರಾಕರಿಸಿದ್ದು, ಸಿದ್ದರಾಮನಹುಂಡಿಯಿಂದ ಮೈಸೂರಿಗೆ ಇಂದು ಪಾದಯಾತ್ರೆ ಆರಂಭಿಸಿದ ಹೋರಾಟಗಾರರನ್ನು...

‘ನಕಲಿ ಬ್ಯಾಂಕ್ ಗ್ಯಾರಂಟಿ’ ಪ್ರಕರಣ : ರಿಲಯನ್ಸ್ ಪವರ್, ಇತರ ಸಂಸ್ಥೆಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

ರಿಲಯನ್ಸ್ ಪವರ್ ಕಂಪನಿಯು ಭಾರತೀಯ ಸೌರಶಕ್ತಿ ನಿಗಮಕ್ಕೆ (ಎಸ್‌ಇಸಿಐ) ಟೆಂಡರ್ ಪಡೆಯಲು ಸಲ್ಲಿಸಿದ 68 ಕೋಟಿ ರೂಪಾಯಿಗಳ ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಪವರ್ ಲಿಮಿಟೆಡ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್‌ನ...

ಉತ್ತರ ಪ್ರದೇಶ| ಬಾಬರಿ ಮಸೀದಿ ಮೇಲಿನ ದಾಳಿಗೆ 33 ವರ್ಷ; ಅಯೋಧ್ಯೆ-ವಾರಣಾಸಿಯಲ್ಲಿ ಬಿಗಿ ಭದ್ರತೆ

ಬಾಬರಿ ಮಸೀದಿ ಧ್ವಂಸವಾಗಿ 33ನೇ ವರ್ಷ ತುಂಬುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆ ಮತ್ತು ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಜಾಗರೂಕರಾಗಿದ್ದು, ಎಲ್ಲಾ ಮಾರ್ಗಗಳಲ್ಲಿ ವಾಹನಗಳ ಸಂಪೂರ್ಣ ತಪಾಸಣೆ ನಡೆಸುತ್ತಿವೆ. ಈ ಕುರಿತು...

ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ: ‘ಡಿಕೆ’ ಸಹೋದರರಿಗೆ ಇಡಿ-ದೆಹಲಿ ಪೊಲೀಸರಿಂದ ಸಮನ್ಸ್

ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳಿಗೆ ನೀಡಿದ ದೇಣಿಗೆಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೈಗೊಂಡಿರುವ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯವು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು...