Homeಸಾಮಾಜಿಕಕಿಸಾನ್ ಮುಕ್ತಿ ಮಾರ್ಚ್ 'ದೆಹಲಿ ಚಲೋ'

ಕಿಸಾನ್ ಮುಕ್ತಿ ಮಾರ್ಚ್ ‘ದೆಹಲಿ ಚಲೋ’

- Advertisement -
- Advertisement -

ಕಾದಂಬಿನಿ |

ಕಳೆದ ಇಪ್ಪತ್ತು ವರ್ಷಗಳಲ್ಲಿ 3 ಲಕ್ಷ ರೈತರ ಆತ್ಮಹತ್ಯೆಗಳಾಗಿವೆ ಎನ್ನುವುದು ಭಾರತದ ರೈತರ ಸಂಕಟಗಳ ತೀವ್ರತೆಯನ್ನು ತೋರಿಸುತ್ತದೆ. ನರೇಂದ್ರಮೋದಿ ನೇತೃತ್ವದ ಬಿಜೆಪಿ ಪಕ್ಷವು ಅಧಿಕಾರದ ಗದ್ದುಗೆಯೇರಲು ರೈತರಿಗೆ ಅನೇಕ ಭರವಸೆಗಳನ್ನು ನೀಡಿತ್ತು. ಆದರೆ ಅಧಿಕಾರ ಹಿಡಿದ ಕೆಲ ಸಮಯದಲ್ಲಿ, ಕೊಟ್ಟ ಮಾತಿನಂತೆ 14 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸ್ವಾಮಿನಾಥನ್ ಆಯೋಗದ ವರದಿ ಜಾರಿಮಾಡಬೇಕು, ರೈತರಲ್ಲಿ ಸುರಕ್ಷಾಭಾವ ಮೂಡುವಂತೆ ತಮ್ಮ ಉತ್ಪಾದನಾ ವೆಚ್ಚದ ಕನಿಷ್ಟ 50% ಹೆಚ್ಚು ದರ ನಿಗದಿಪಡಿಸಬೇಕೆಂಬ ಆಗ್ರಹವನ್ನು ಮುಂದಿಟ್ಟುಕೊಂಡು ರೈತರು ಕೃಷಿಮಂತ್ರಿಗಳನ್ನು ಭೇಟಿಯಾದ ಸಂದರ್ಭದಲ್ಲಿ ಈ ಭರವಸೆಗಳನ್ನೆಲ್ಲ ‘ಚುನಾವಣಾ ಪ್ರಚಾರದ ಜುಮ್ಲಾ’ ಎನ್ನಲಾಯಿತು. ಅಂಕಿಅಂಶಗಳ ಪ್ರಕಾರ ಮೋದಿ ಸರಕಾರದ ಮೊದಲ ಮೂರು ವರ್ಷಗಳಲ್ಲಿಯೇ 36 ಸಾವಿರ ರೈತರ ಆತ್ಮಹತ್ಯೆಗಳಾಗಿವೆ, ಬಿಜೆಪಿ ಸರಕಾರವಿರುವ ಮಹಾರಾಷ್ಟ್ರದಲ್ಲಿಯೇ 12 ಸಾವಿರ ರೈತರ ಆತ್ಮಹತ್ಯೆಗಳಾಗಿವೆ. ಕೆಲ ರಾಜ್ಯಗಳಲ್ಲಿ ಆದ ಆತ್ಮಹತ್ಯೆಗಳು ಅಂಕಿಅಂಶದಲ್ಲಿ ಸೇರಿಯೇ ಇಲ್ಲ. 70% ಆತ್ಮಹತ್ಯೆಗಳು ಬಿಜೆಪಿ ಹಾಗೂ ಎಂಡಿಎ ಸರಕಾರವಿರುವಲ್ಲಿಯೇ ಆಗಿರುವುದು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅವರು ಕೊಟ್ಟ ಆಶ್ವಾಸನೆಗಳನ್ನೇ ಅಣಕಿಸುವಂತಿವೆ.

ಇದು ಸಾಲದೆಂಬಂತೆ ತೀರ ಇತ್ತೀಚೆಗೆ ಫಸಲ್ ಬಿಮಾ ಯೋಜನೆಯ ಹಗರಣ ಹಾಗೂ ಕೃಷಿ ಮಂತ್ರಾಲಯವೇ ನೋಟು ಅಮಾನ್ಯೀಕರಣವು ಕೃಷಿ ಕ್ಷೇತ್ರದ ಸೊಂಟ ಮುರಿದಿದೆ ಎನ್ನುವುದನ್ನು ಒಪ್ಪಿಕೊಂಡಿದೆ ಎನ್ನುವ ಸುದ್ದಿಗಳು ಜೋರಾಗಿ ಸದ್ದುಮಾಡಿದವು. ಒಟ್ಟಾರೆಯಾಗಿ ಕೊಟ್ಟ ಮಾತು ತಪ್ಪಿದ ಮೋದಿ ಸರಕಾರದ ನಡೆಯ ವಿರುದ್ಧ ಸಂಘರ್ಷಗಳು ನಡೆಯುತ್ತಲೇ ಇವೆ.

ಕಳೆದ ವರ್ಷ ರೈತರ 200 ಕಿಲೋಮೀಟರುಗಳ ಸುದೀರ್ಘ ನಾಸಿಕ್- ಮುಂಬಯಿ ಲಾಂಗ್ ಮಾರ್ಚ್ ನಡೆಯಿತು. ರಾಜಸ್ಥಾನ್, ಹಿಮಾಚಲ್ ಪ್ರದೇಶ, ಹರಿಯಾಣಾ ಹೀಗೆ ದೇಶದ ಅನೇಕ ರಾಜ್ಯಗಳಲ್ಲಿ ಕೇಂದ್ರ ಸರಕಾರದ ರೈತವಿರೋಧಿ ನೀತಿಯ ವಿರುದ್ಧ ರ್ಯಾಲಿಗಳು ನಡೆದವು. ಮಧ್ಯ ಪ್ರದೇಶದಲ್ಲಿ ಸರಕಾರವು ಆರು ರೈತರನ್ನು ಗುಂಡಿಟ್ಟು ಹತ್ಯೆ ಮಾಡಿದ ‘ಮಂಡ್ಸೋರ್ ಕಾಂಡ’ದ ನಂತರ ಸುಮಾರು 200 ಕ್ಕಿಂತ ಹೆಚ್ಚು ರೈತ ಸಂಘಟನೆಗಳು ಒಂದಾಗಿ ಅಖಿಲಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯನ್ನು ರಚಿಸಲಾಗಿತ್ತು. ಇದೇ ಸಮಿತಿಯು ಕಳೆದ ವರ್ಷದ ನಾಸಿಕ್- ಮುಂಬಯಿ ಕಿಸಾನ್ ಲಾಂಗ್ ಮಾರ್ಚ್ ಅನ್ನೇ ಪ್ರೇರಣೆಯಾಗಿಟ್ಟುಕೊಂಡು ಇದೇ ನವೆಂಬರ್ 29-30 ರಂದು ‘ಸಿಂಗೂರು- ರಾಜಭವನ್ ಕಿಸಾನ್ ಮುಕ್ತಿ ಮಾರ್ಚ್’ ಆಯೋಜಿಸಿದೆ.

ಸ್ವಾಮಿನಾಥನ್ ವರದಿಯ ಜಾರಿ ಹಾಗೂ ರೈತರ ಸಾಲ ಹಾಗೂ ಬೆಳೆಗಳ ಬೆಲೆ ನಿಗದಿಗಾಗಿ 21 ದಿನಗಳ ವಿಶೇಷ ಜಂಟಿ ಸಂಸತ್ ಅದಿವೇಶನದ ಆಗ್ರಹವನ್ನು ಮುಂದಿಟ್ಟುಕೊಂಡು ಆಯೋಜಿಸಿರುವ ಈ ಕಿಸಾನ್ ಮುಕ್ತಿಮಾರ್ಚ್ ಗೆ ವಿವಿಧ ರಾಜ್ಯಗಳಿಂದ ಅಂದಾಜು ಎರಡು ಲಕ್ಷ ರೈತರು ಹಾಗೂ ರೈತರಿಗಾಗಿ ಫೋಟೋಗ್ರಾಫರುಗಳು, ರೈತರಿಗಾಗಿ ವಕೀಲರು, ರೈತರಿಗಾಗಿ ವಿದ್ಯಾರ್ಥಿಗಳು, ರೈತರಿಗಾಗಿ ಟೆಕ್ಕಿಗಳು ಎಂಬ ಸರಣಿಯಲ್ಲಿ ರೈತರೊಂದಿಗೆ ಬೆಸೆದ ಗುಂಪುಗಳು, ಜನಸಾಮಾನ್ಯರು ಹೀಗೆ ಸುಮಾರು ‘ದೆಹಲಿ ಚಲೋ, ರಾಜಭವನ್ ಚಲೋ’ ಘೋಷಣೆಗಳೊಂದಿಗೆ ದೆಹಲಿಯ ನಾಲ್ಕು ದಿಕ್ಕುಗಳಿಂದ ರಾಮಲೀಲಾ ಮೈದಾನಕ್ಕೆ ಆಗಮಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅಖಿಲಭಾರತ ಕಿಸಾನ್ ಸಭಾದ ಜನರಲ್ ಸೆಕ್ರೆಟರಿ ಹನ್ನಾನ್ ಮೊಲ್ಲಾ ಅವರು ‘ಅಧಿಕಾರಕ್ಕೆ ಬರಬೇಕೆನ್ನುವ ರಾಜಕೀಯ ಪಕ್ಷಗಳು ರೈತರ ಸಂಕಟಗಳಿಗೆ ಜೊತೆಯಾಗುವ ವಿಚಾರದಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಲಿ’ ಎಂದಿದ್ದಾರೆ. ಈಗಾಗಲೇ ಈ ‘ಕಿಸಾನ್ ಮುಕ್ತಿ ಮಾರ್ಚ್’ ಯಶಸ್ವಿಯಾಗಿ ಆರಂಭಗೊಂಡಿದೆ. ಆದರೆ ರೈತರ ಸಂಕಟಗಳಿಗೆ ಮುಕ್ತಿ ಕೊಡುವ ವಿಚಾರಕ್ಕೆ ನರೇಂದ್ರ ಮೋದಿ ಸರಕಾರ ಹೇಗೆ ಸ್ಪಂದಿಸುತ್ತದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...