Homeಸಾಮಾಜಿಕಕಿಸಾನ್ ಮುಕ್ತಿ ಮಾರ್ಚ್ 'ದೆಹಲಿ ಚಲೋ'

ಕಿಸಾನ್ ಮುಕ್ತಿ ಮಾರ್ಚ್ ‘ದೆಹಲಿ ಚಲೋ’

- Advertisement -
- Advertisement -

ಕಾದಂಬಿನಿ |

ಕಳೆದ ಇಪ್ಪತ್ತು ವರ್ಷಗಳಲ್ಲಿ 3 ಲಕ್ಷ ರೈತರ ಆತ್ಮಹತ್ಯೆಗಳಾಗಿವೆ ಎನ್ನುವುದು ಭಾರತದ ರೈತರ ಸಂಕಟಗಳ ತೀವ್ರತೆಯನ್ನು ತೋರಿಸುತ್ತದೆ. ನರೇಂದ್ರಮೋದಿ ನೇತೃತ್ವದ ಬಿಜೆಪಿ ಪಕ್ಷವು ಅಧಿಕಾರದ ಗದ್ದುಗೆಯೇರಲು ರೈತರಿಗೆ ಅನೇಕ ಭರವಸೆಗಳನ್ನು ನೀಡಿತ್ತು. ಆದರೆ ಅಧಿಕಾರ ಹಿಡಿದ ಕೆಲ ಸಮಯದಲ್ಲಿ, ಕೊಟ್ಟ ಮಾತಿನಂತೆ 14 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸ್ವಾಮಿನಾಥನ್ ಆಯೋಗದ ವರದಿ ಜಾರಿಮಾಡಬೇಕು, ರೈತರಲ್ಲಿ ಸುರಕ್ಷಾಭಾವ ಮೂಡುವಂತೆ ತಮ್ಮ ಉತ್ಪಾದನಾ ವೆಚ್ಚದ ಕನಿಷ್ಟ 50% ಹೆಚ್ಚು ದರ ನಿಗದಿಪಡಿಸಬೇಕೆಂಬ ಆಗ್ರಹವನ್ನು ಮುಂದಿಟ್ಟುಕೊಂಡು ರೈತರು ಕೃಷಿಮಂತ್ರಿಗಳನ್ನು ಭೇಟಿಯಾದ ಸಂದರ್ಭದಲ್ಲಿ ಈ ಭರವಸೆಗಳನ್ನೆಲ್ಲ ‘ಚುನಾವಣಾ ಪ್ರಚಾರದ ಜುಮ್ಲಾ’ ಎನ್ನಲಾಯಿತು. ಅಂಕಿಅಂಶಗಳ ಪ್ರಕಾರ ಮೋದಿ ಸರಕಾರದ ಮೊದಲ ಮೂರು ವರ್ಷಗಳಲ್ಲಿಯೇ 36 ಸಾವಿರ ರೈತರ ಆತ್ಮಹತ್ಯೆಗಳಾಗಿವೆ, ಬಿಜೆಪಿ ಸರಕಾರವಿರುವ ಮಹಾರಾಷ್ಟ್ರದಲ್ಲಿಯೇ 12 ಸಾವಿರ ರೈತರ ಆತ್ಮಹತ್ಯೆಗಳಾಗಿವೆ. ಕೆಲ ರಾಜ್ಯಗಳಲ್ಲಿ ಆದ ಆತ್ಮಹತ್ಯೆಗಳು ಅಂಕಿಅಂಶದಲ್ಲಿ ಸೇರಿಯೇ ಇಲ್ಲ. 70% ಆತ್ಮಹತ್ಯೆಗಳು ಬಿಜೆಪಿ ಹಾಗೂ ಎಂಡಿಎ ಸರಕಾರವಿರುವಲ್ಲಿಯೇ ಆಗಿರುವುದು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅವರು ಕೊಟ್ಟ ಆಶ್ವಾಸನೆಗಳನ್ನೇ ಅಣಕಿಸುವಂತಿವೆ.

ಇದು ಸಾಲದೆಂಬಂತೆ ತೀರ ಇತ್ತೀಚೆಗೆ ಫಸಲ್ ಬಿಮಾ ಯೋಜನೆಯ ಹಗರಣ ಹಾಗೂ ಕೃಷಿ ಮಂತ್ರಾಲಯವೇ ನೋಟು ಅಮಾನ್ಯೀಕರಣವು ಕೃಷಿ ಕ್ಷೇತ್ರದ ಸೊಂಟ ಮುರಿದಿದೆ ಎನ್ನುವುದನ್ನು ಒಪ್ಪಿಕೊಂಡಿದೆ ಎನ್ನುವ ಸುದ್ದಿಗಳು ಜೋರಾಗಿ ಸದ್ದುಮಾಡಿದವು. ಒಟ್ಟಾರೆಯಾಗಿ ಕೊಟ್ಟ ಮಾತು ತಪ್ಪಿದ ಮೋದಿ ಸರಕಾರದ ನಡೆಯ ವಿರುದ್ಧ ಸಂಘರ್ಷಗಳು ನಡೆಯುತ್ತಲೇ ಇವೆ.

ಕಳೆದ ವರ್ಷ ರೈತರ 200 ಕಿಲೋಮೀಟರುಗಳ ಸುದೀರ್ಘ ನಾಸಿಕ್- ಮುಂಬಯಿ ಲಾಂಗ್ ಮಾರ್ಚ್ ನಡೆಯಿತು. ರಾಜಸ್ಥಾನ್, ಹಿಮಾಚಲ್ ಪ್ರದೇಶ, ಹರಿಯಾಣಾ ಹೀಗೆ ದೇಶದ ಅನೇಕ ರಾಜ್ಯಗಳಲ್ಲಿ ಕೇಂದ್ರ ಸರಕಾರದ ರೈತವಿರೋಧಿ ನೀತಿಯ ವಿರುದ್ಧ ರ್ಯಾಲಿಗಳು ನಡೆದವು. ಮಧ್ಯ ಪ್ರದೇಶದಲ್ಲಿ ಸರಕಾರವು ಆರು ರೈತರನ್ನು ಗುಂಡಿಟ್ಟು ಹತ್ಯೆ ಮಾಡಿದ ‘ಮಂಡ್ಸೋರ್ ಕಾಂಡ’ದ ನಂತರ ಸುಮಾರು 200 ಕ್ಕಿಂತ ಹೆಚ್ಚು ರೈತ ಸಂಘಟನೆಗಳು ಒಂದಾಗಿ ಅಖಿಲಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯನ್ನು ರಚಿಸಲಾಗಿತ್ತು. ಇದೇ ಸಮಿತಿಯು ಕಳೆದ ವರ್ಷದ ನಾಸಿಕ್- ಮುಂಬಯಿ ಕಿಸಾನ್ ಲಾಂಗ್ ಮಾರ್ಚ್ ಅನ್ನೇ ಪ್ರೇರಣೆಯಾಗಿಟ್ಟುಕೊಂಡು ಇದೇ ನವೆಂಬರ್ 29-30 ರಂದು ‘ಸಿಂಗೂರು- ರಾಜಭವನ್ ಕಿಸಾನ್ ಮುಕ್ತಿ ಮಾರ್ಚ್’ ಆಯೋಜಿಸಿದೆ.

ಸ್ವಾಮಿನಾಥನ್ ವರದಿಯ ಜಾರಿ ಹಾಗೂ ರೈತರ ಸಾಲ ಹಾಗೂ ಬೆಳೆಗಳ ಬೆಲೆ ನಿಗದಿಗಾಗಿ 21 ದಿನಗಳ ವಿಶೇಷ ಜಂಟಿ ಸಂಸತ್ ಅದಿವೇಶನದ ಆಗ್ರಹವನ್ನು ಮುಂದಿಟ್ಟುಕೊಂಡು ಆಯೋಜಿಸಿರುವ ಈ ಕಿಸಾನ್ ಮುಕ್ತಿಮಾರ್ಚ್ ಗೆ ವಿವಿಧ ರಾಜ್ಯಗಳಿಂದ ಅಂದಾಜು ಎರಡು ಲಕ್ಷ ರೈತರು ಹಾಗೂ ರೈತರಿಗಾಗಿ ಫೋಟೋಗ್ರಾಫರುಗಳು, ರೈತರಿಗಾಗಿ ವಕೀಲರು, ರೈತರಿಗಾಗಿ ವಿದ್ಯಾರ್ಥಿಗಳು, ರೈತರಿಗಾಗಿ ಟೆಕ್ಕಿಗಳು ಎಂಬ ಸರಣಿಯಲ್ಲಿ ರೈತರೊಂದಿಗೆ ಬೆಸೆದ ಗುಂಪುಗಳು, ಜನಸಾಮಾನ್ಯರು ಹೀಗೆ ಸುಮಾರು ‘ದೆಹಲಿ ಚಲೋ, ರಾಜಭವನ್ ಚಲೋ’ ಘೋಷಣೆಗಳೊಂದಿಗೆ ದೆಹಲಿಯ ನಾಲ್ಕು ದಿಕ್ಕುಗಳಿಂದ ರಾಮಲೀಲಾ ಮೈದಾನಕ್ಕೆ ಆಗಮಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅಖಿಲಭಾರತ ಕಿಸಾನ್ ಸಭಾದ ಜನರಲ್ ಸೆಕ್ರೆಟರಿ ಹನ್ನಾನ್ ಮೊಲ್ಲಾ ಅವರು ‘ಅಧಿಕಾರಕ್ಕೆ ಬರಬೇಕೆನ್ನುವ ರಾಜಕೀಯ ಪಕ್ಷಗಳು ರೈತರ ಸಂಕಟಗಳಿಗೆ ಜೊತೆಯಾಗುವ ವಿಚಾರದಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಲಿ’ ಎಂದಿದ್ದಾರೆ. ಈಗಾಗಲೇ ಈ ‘ಕಿಸಾನ್ ಮುಕ್ತಿ ಮಾರ್ಚ್’ ಯಶಸ್ವಿಯಾಗಿ ಆರಂಭಗೊಂಡಿದೆ. ಆದರೆ ರೈತರ ಸಂಕಟಗಳಿಗೆ ಮುಕ್ತಿ ಕೊಡುವ ವಿಚಾರಕ್ಕೆ ನರೇಂದ್ರ ಮೋದಿ ಸರಕಾರ ಹೇಗೆ ಸ್ಪಂದಿಸುತ್ತದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...

ಬೆಂಗಳೂರಿನಲ್ಲಿ ಮುಂದುವರೆದ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ: ಯುಬಿ ಸಿಟಿಯ ಹೋಟೆಲ್‌ಗಳಲ್ಲಿ ಕೊಳೆತ ಮಾಂಸ ಪತ್ತೆ!

'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧಿ ಆಡಳಿತ ಇಲಾಖೆ'ಯ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ ಮುಂದುವರೆದಿದ್ದು, ಬೆಂಗಳೂರಿನ ಯುಬಿ ಸಿಟಿಯ ಐದು ಪ್ರಮುಖ ಹೋಟೆಲ್‌ಗಳ ಅಡುಗೆ ಮನೆಗಳ ಮೇಲೆ ಅಧಿಕಾರಿಗಳು ಇಂದು (ಆ.10)...

ಮತಗಳ್ಳತನದ ವಿರುದ್ಧ ‘ಕ್ವಿಟ್ ವೋಟ್ ಚೋರಿ’ ಆಂದೋಲನಕ್ಕೆ ಕರೆ ನೀಡಿದ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದಲ್ಲಿ ನಡೆಯುತ್ತಿರುವ 'ಮತ ಕಳ್ಳತನ'ವನ್ನು ತಡೆಗಟ್ಟಲು ಕ್ವಿಟ್ ಇಂಡಿಯಾ ಚಳವಳಿಯ ಮಾದರಿಯಲ್ಲೇ ದೇಶಾದ್ಯಂತ 'ಕ್ವಿಟ್ ವೋಟ್ ಚೋರಿ' (ಮತ ಬಿಟ್ಟು ತೊಲಗಿ) ಆಂದೋಲನವನ್ನು ಪ್ರಾರಂಭಿಸುವ ಅಗತ್ಯವಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ....

SIR ಅವಾಂತರ : ಎನ್ಯುಮರೇಷನ್ ಫಾರಂ ಸರಿಯಾಗಿ ತುಂಬಿಕೊಟ್ಟರೂ ಕರಡು ಪಟ್ಟಿಯಲ್ಲಿ ಹೆಸರಿಲ್ಲ; ಆತಂಕಗೊಂಡು ಮತಗಟ್ಟೆಗಳತ್ತ ಧಾವಿಸಿದ ಜನರು-ವರದಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಭಾಗವಾಗಿ ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದ ಕಾರಣ ಆತಂಕಗೊಂಡ ಜಾರ್ಖಂಡ್‌ನ ರಾಂಚಿ ನಗರದ ಜನರು ಭಾನುವಾರ (ಆ.9) ಮತಗಟ್ಟೆಗಳಿಗೆ...