Homeಅಂಕಣಗಳುಕುಮಾರಣ್ಣ ಇಳದ್ರೆ ಯಾರಿಗೂ ಬೇಜಾರಾಗಲ್ಲ ಸಾ?

ಕುಮಾರಣ್ಣ ಇಳದ್ರೆ ಯಾರಿಗೂ ಬೇಜಾರಾಗಲ್ಲ ಸಾ?

- Advertisement -
- Advertisement -

| ಯಾಹೂ |

ಹಠಾತ್ತನೆ ಮನೆ ಕುಸಿಯತೊಡಗಿ ಜೆಡಿಎಸ್ ಕುಟೀರದ ಗೋಡೆ ಬಿರುಕು ಕಾಣಿಸಿಕೊಂಡ ಕೂಡಲೇ ಅನಾಹುತದ ನಿಖರತೆಯನ್ನು ಗುರುತಿಸಿದ ಎಡೂರಪ್ಪ, ನಾನು ಸನ್ಯಾಸಿಯಲ್ಲ ಎಂದು ಘೋಷಿಸಿಬಿಟ್ಟಿದ್ದಾರಲ್ಲಾ. ಅರೆ ಸಮ್ಮಿಶ್ರ ಸಂಸಾರ ಬಿಗಡಾಯಿಸಿಕೊಂಡು ಅಲ್ಲಿಂದ ಹೊರಬಿದ್ದವರೊಂದಿಗೆ ಕೂಡಿಕೆ ಮಾಡಿಕೊಂಡು ಸಂಸಾರ ಹೂಡುವ ಬಗ್ಗೆ, ಎಡೂರಪ್ಪನನ್ನು ತಡೆದವರಾರು. ಎಡೂರಪ್ಪನ ಬಾಯಲ್ಲಿ ಇಂತಹ ಮಾತು ಸುಮ್ಮಸುಮ್ಮನೆ ಬರಲಾರದು. ಯಾರೊ ಚಡ್ಡಿಗಳ ಪೈಕಿ ಎಡೂರಪ್ಪನಿಗೆ ವಯಸ್ಸಾಯ್ತು ಎಂದಿರಬಹುದು ಅಥವಾ ಅವರ ಸರದಿ ಮುಗಿಯಿತಲ್ಲಾ ಎಂದಿರಬಹುದು. ಈ ಎಲ್ಲಾ ವಾಸನೆ ಗ್ರಹಿಸಿದ ಎಡೂರಪ್ಪ, ನಾನು ಸನ್ಯಾಸಿಯಲ್ಲ ಸಂಸಾರಿ ಎಂದಿರುವುದು. ಅದಿರಲಿ, ಎಡೂರಪ್ಪ ಆಧುನಿಕ ಜಗತ್ತಿನ ಸನ್ಯಾಸಿಗಳನ್ನ ನೋಡಿಲ್ಲ ಅನ್ನಿಸುತ್ತದೆ. ಅವರೆಲ್ಲಾ ಗುಪ್ತ ಸಮಾಲೋಚನಾ ಪ್ರಿಯರಾಗಿ ಬಹಳ ವರ್ಷಗಳಾದವು. ಉಡುಪಿ ಮಠಗಳನ್ನೆ ಆದರ್ಶವಾಗಿ ಗ್ರಹಿಸಿ ಬದುಕನ್ನು ಇಡಿಯಾಗಿ ಮುಕ್ಕುವ ಕಲೆಯನ್ನು ಕರಗತ ಮಾಡಿಕೊಂಡು ಶತಮಾನವೇ ಸರಿಯಿತು. ತೀರ ಇತ್ತೀಚಿನ ತಾಜಾ ಉದಾಹರಣೆಯೆಂದರೆ ನಮ್ಮ ಸಿರಿಗೆರೆಯ ಶಿವಾಚಾರ್ಯ ಮಹಾಸ್ವಾಮಿಗಳವರು ಪೀಠದ ಸಂವಿಧಾನದ ರೀತಿ ಅರವತ್ತು ವರ್ಷಕ್ಕೆ ಪೀಠಬಿಟ್ಟು, ಹಿಂದೆ ಬಂದ ಮರಿಯನ್ನ ಸ್ಥಾಪಿಸಿ ಪಕ್ಕಕ್ಕೆ ನಿಲ್ಲಬೇಕಿತ್ತು. ಆದರೇನು ಭೂಪ ಇನ್ನ ಅಲ್ಲಾಡಿಲ್ಲ. ಇಂತಿರುವಾಗ ಎಡೂರಪ್ಪ ತಮ್ಮ ರಾಜಕಾರಣದ ಉದಾಹರಣೆಗೆ ನಾನು ಸನ್ಯಾಸಿಯಲ್ಲ ಎಂದಿದ್ದಾರಲ್ಲಾ, ಥೂತ್ತೇರಿ..

ಕರ್ನಾಟಕದ ಇವತ್ತಿನ ಸ್ಥಿತಿಯ ಬಗ್ಗೆ ಯಾರಿಗೆ ಫೋನು ಮಾಡಲಿ, ಕುಮಾರಣ್ಣ ಕನಲಿ ಕೆಂಡವಾಗಿದ್ದಾರೆ, ಸಿದ್ದು ಆತಂಕ ತೋರಿಕೆಯಂತೆ ಕಾಣುತ್ತಿದೆ. ಬಿಜೆಪಿಗಳು ಶುದ್ಧ ಕಿಡಿಗೇಡಿಗಳಂತೆ ಕಾಣುತ್ತಿದ್ದಾರೆ. ವಿಶ್ವನಾಥ್ ಈ ಶತಮಾನದ ಮೀರ್‍ಸಾದಿಕನಂತೆ ಗೋಚರಿಸಿದರೆ, ಕೆ.ಆರ್.ಪೇಟೆ ನಾರಾಯಣಗೌಡ ನಿಜಕ್ಕೂ ನೊಂದಂತೆ ಕಾಣುತ್ತಿದ್ದಾನೆ. ಇವೆಲ್ಲಾ ಸಂಗತಿಗಳನ್ನ ಚರ್ಚಿಸಲು ಸೂಕ್ತ ವ್ಯಕ್ತಿಗಾಗಿ ತಪಾಸಣೆ ಮಾಡುತ್ತಿದ್ದಾಗ ವಾಟಿಸ್ಸೆ ಹೆಸರು ಹೊಳೆಯಬೇಕೆ? ಕೂಡಲೇ ಫೋನ್ ಮಾಡಲಾಗಿ ರಿಂಗಾಯ್ತು…

ರಿಂಗ್‍ಟೋನ್ “ಹೋಗದಿರೀ ಸೋದರರೇ.. ಹೋಗದಿರೀ ಬಂಧುಗಳೇ.. ಮನೆಯನು ತೊರೆದು ಹೋಗುವಿರಾ?” ಹಲೊ ಗುಡಾಪ್ಟರ್ ನೂನ್ ಸರ್”
“ವಾಟಿಸ್ಸೆ ಎಲ್ಲಿದ್ದೀ”
“ಎಲ್ಯಾರ ಇದ್ರೂ ನಿಮ್ಮೆದುರಿಗೆ ನಿಂತಂಗಲವ ಸಾ, ಅದ್ಕೆ ಹಂಡ್ರೆಂಡ್ ರುಪೀಸ್ ಕರೆನ್ಸಿ ಹಾಕ್ಸಿ”
“ಹಾಕುಸ್ತಿನಿ ಕರ್ನಾಟಕದ ರಾಜಕಾರಣ ಏನನ್ನಸ್ತಾ ಅದೆ”
“ಏನಾಗಬೇಕೊ ಅದಾಯ್ತ ಅದೆ ಸಾ”
“ಎಮ್ಮೆಲ್ಲೆಗಳ ರಾಜೀನಾಮೆ ಬಗ್ಗೆ ಏನೇಳ್ತಿ”
“ಅವೊಂತರಾ ಬ್ರಾಂಬ್ರು ಕೇರಿಯ ನಾಯಿದ್ದಂಗೆ ಸಾ”
“ಅಂದ್ರೆ”
“ಈ ಬ್ರಾಂಬ್ರು ಕೇರಿ ನಾಯಿಗಳು ಅಕಸ್ಮಾತ್ ಶೂದ್ರ ಕೇರಿಗೋಯ್ತವೆ. ಅಲ್ಲಿ ಚರಂಡೀಲಿ ಕುರಿ, ಆಡಿನ ಮೂಳೆ, ಕೋಳಿ ಮೂಳೆ ರುಚಿ ನೋಡಿದೂ ಅಂದ್ರೇ ತಿರಗಿ ಬ್ರಾಂಬ್ರು ಕೇರಿಗೋಗದಿಲ್ಲ”
“ಅಂಗಂತಿಯಾ”
“ಹೂ ಮತ್ತೆ. ಆ ಬಿಜೆಪಿಗಳು ಕೊಡೋ ದುಡ್ಡಿಗೆ, ಅಧಿಕಾರಕ್ಕೆ, ಮನಸು ಕೊಟ್ಟವೆ ಅನ್ನಸ್ತದೆ ಅದ್ಕೆ ಹೋದೊ ಬುಡಿ ಅತ್ತಗೆ”
“ಹೋಗಿಲ್ಲ ಇನ್ನ ಇಲ್ಲೆ ಇದ್ದಿವಿ ಅಂತಾರಲ್ಲಾ”
“ಇನ್ನ ಇಲ್ಲೇ ಇದ್ದಿವಿ ಅಂದ್ರೆ ಅವುರಿಗೇನಾಗ್ಯದೆ ಕೇಳಬೇಕು ಸಾ.”
“ಯಾರು ಕೇಳಬೇಕು.”
“ಇನ್ಯಾರು ಮುಖ್ಯಮಂತ್ರಿನೇ ಕೇಳಬೇಕು. ಇವುನು ಗ್ರಾಮ ವಾಸ್ತವ್ಯಕ್ಕೋದ್ರೆ ಹಿಂಗೆ ಆಗದು”
“ಈಗೇನಾಗಬವುದು”
“ಅಲ್ಲ ಸಾ, ಬೆಂಗಳೂರಲ್ಲಿರೊ ನೀವು ಹೇಳಬೇಕು.”
“ಜನಗಳಭಿಪ್ರಾಯ ಹೇಳು.”
“ಜನಗಳು ವಿಶ್ವನಾಥನ್ನ ಉಗೀತಾ ಅವುರೆ ಸಾ”
“ಯಾಕೆ?”
“ಯಾಕೆ ಅಂದ್ರೆ ಸಿದ್ದರಾಮಯ್ಯ ಇವುನೇಗ್ತಿ ನೋಡಿ ಕುರಿ ಕ್ವಟಗೆ ಒಳಿಕೆ ನೂಕಿದ್ದ. ದ್ಯಾವೇಗೌಡ ಹೋಗಿ ಕರದು ತಲೆ ಸವುರಿದ. ಆಗ ತನ್ನ ತಲೇನೆ ಸವುರಿಕೊಂಡಂಗಾಯ್ತು. ಕೂಡ್ಳೆ ಪಾರ್ಟಿ ಪ್ರೆಸಿಡೆಂಟ್ ಮಾಡಿ ಎಮ್ಮೆಲ್ಲೆ ಮಾಡಿದ್ರೆ, ಇವುನು ಕೈ ಕೊಡದ ಅಂತ ಅವುರೆ”
“ನಿನಗೇನನ್ಸುತ್ತೆ”
“ಮಂತ್ರಿ ಮಾಡಿದ್ರೆ ಖಾತೆ ಚನ್ನಾಗಿ ನಿಭಾಯಿಸೋನು, ಅಂಗೆ ನೋಡಿದ್ರೆ ಸಾ.ರಾ. ಮಯೇಶ, ಪುಟ್ಟರಾಜ, ತಮ್ಮಣ್ಣ ಇಂತ ಸ್ಕ್ರಾಪ್ ಮಾಲಿಗಿಂತ ವಿಶ್ವನಾಥ್ ಯೋಗ್ಯ, ಈಗ ಮಾತ್ರ ಅಯೋಗ್ಯ”
“ಕೆ.ಆರ್.ಪೇಟೆ ನಾರಾಯಣಗೌಡನ ಬಗ್ಗೆ ಏನೇಳ್ತಿ’.’
“ಅವುನು ಬಾಂಬೆಯಿಂದ ತಪ್ಪಿಸಿಕೊಂಡು ಬಂದ ಮಾರವಾಡಿ ಹುಡುಗನಂಗೆ ಕಾಣ್ತನೆ ಸಾರ್. ಜೆಡಿಎಸ್‍ಗೆ ಬೇಕಾದಷ್ಟು ಮಾಡ್ಯವುನೆ, ಚುಂಚನಗಿರಿ ಮಠಕ್ಕೆ ಬೊಂಬಾಯಿಲೆ ಜಾಗ ಕೊಡಿಸ್ಯಾವುನೆ, ಅಂಥೊನ್ನ ದ್ಯಾವೇಗೌಡನ ಮನೆವ್ರು ಚಪ್ರಾಸಿಯಂಗೆ ನ್ಯಡಿಸಿಕೊಬಾರದಿತ್ತು.”
“ಒಟ್ಟಾರೆ ಈ ರಾಜೀನಾಮೆ ಪ್ರಕರಣ ಏನನ್ನಸುತ್ತೆ”
“ನನಿಗೇನನ್ನಸ್ತದೆ ಅಂದ್ರೆ, ಒಂದು ಅವಿಭಕ್ತ ಕುಟುಂಬದಲ್ಲಿ ಅತೃಪ್ತ ಜನ ಏನೇನೊ ನಾಟಗ ಮಾಡ್ತರೆ. ಹೊಟ್ಟೆನೊವ್ವು ಅಂತರೆ, ಬೇಧಿ ಅಂತರೆ, ಹಲ್ಲುನೋವು ಅಂತರೆ, ಸುಮ್ಮನೆ ಮೂಲೇಲಿ ಮನಿಕತ್ತರೆ, ಅದು ಅವುರ ಪ್ರತಿಭಟನೆ ಸಾ. ಈಗ್ಲು ನ್ಯಡದಿರದು ಈ ಕುಮಾರಸ್ವಾಮಿ ಬ್ಯಾಡ ಅನ್ನೊ ಪ್ರತಿಭಟನೆ ಅಷ್ಟೆ ಸಾ”
“ಅಂಗಾರೆ ಕುಮಾರಣ್ಣ ಬ್ಯಾಡವಾ”
“ಇವುನು ಹೋಯ್ತನೆ ಅಂದ್ರೆ ಯಾರಿಗೂ ಫೀಲಾಗಲ್ಲ ಸಾರ್, ಯಾಕಂದ್ರೆ ಇವುರಿಂದ್ಲೆ ಹಾರವರು ಲಕ್ಕಪತಿಗಳಾದ್ರು, ಅದೇನು ಯಜ್ಞ – ಅದೇನು ಯಾಗ, ಅದೇನು ಹೋಮ, ಅದಿರ್ಲಿ ಯಾರಾರ ತಲೆಯಿದ್ದೋರು, ನಾಮಪತ್ರ ತಗಂಡೋಗಿ ಶೃಂಗೇರೀಲಿ ಪೂಜೆ ಮಾಡಿಸಿಗಂಡು ಬತ್ತರ ಸಾ”
“ಇಲ್ಲ ಬುಡು ಇತಿಹಾಸದಲ್ಲಿ ಯಾರು ಅಂಗೆ ಮಾಡಿಲ್ಲ”
“ದ್ಯಾವೇಗೌಡ್ರು ಫ್ಯಾಮಿಲಿ ಪವರಿಂದ ಇಳದ್ರೆ ಬ್ರಾಂಬ್ರಿಗೆ ಲಾಸಾಗಬಹುದು. ನನಿಗಂತು ಯಾವ ನಷ್ಟನೂ ಇಲ್ಲ ಸಾ”

“ಥೂತ್ತೇರಿ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...