Homeಅಂಕಣಗಳುಗಾಂಧೀಜಿ 'ತತ್ವರಹಿತ ರಾಜಕೀಯ' ಪಾತಕವೆಂದರು, ಆದರೆ....

ಗಾಂಧೀಜಿ ‘ತತ್ವರಹಿತ ರಾಜಕೀಯ’ ಪಾತಕವೆಂದರು, ಆದರೆ….

ಮುಖ್ಯಮಂತ್ರಿ ಕುಮಾರಸ್ವಾಮಿಯವರು ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಇತ್ತೀಚೆಗೆ ಭೇಟಿ ಮಾಡಿದಾಗ, "ನಿಮ್ಮದೂ ಕುಟುಂಬ ರಾಜಕೀಯ, ನಮ್ಮದೂ ಕುಟುಂಬ ರಾಜಕೀಯ.

- Advertisement -
- Advertisement -

| ಎಚ್. ಎಸ್. ದೊರೆಸ್ವಾಮಿ |

ದೇವೇಗೌಡರು ಇನ್ನು ಮುಂದಾದರೂ ಕುಟುಂಬ ರಾಜಕೀಯಕ್ಕೆ ವಿದಾಯ ಹಾಡಿ, ನಿಜವಾದ ಪ್ರಜಾಪ್ರಭುತ್ವ ಸ್ಥಾಪನೆಗೆ ತೊಡಗುವುದು ಅವರ ರಾಜಕೀಯ ಇಳಿ ಜೀವನವನ್ನು ಕೊಂಚ ಮುತ್ಸದ್ಧಿತನಕ್ಕೆ ತಂದು ನಿಲ್ಲಿಸಬಹುದು. ಹಾಗೆಂದೇ ನಾನು ವಿನಂತಿಸಿಕೊಳ್ಳುತ್ತೇನೆ.

ಮುಖ್ಯಮಂತ್ರಿ ಕುಮಾರಸ್ವಾಮಿಯವರು ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಇತ್ತೀಚೆಗೆ ಭೇಟಿ ಮಾಡಿದಾಗ, “ನಿಮ್ಮದೂ ಕುಟುಂಬ ರಾಜಕೀಯ, ನಮ್ಮದೂ ಕುಟುಂಬ ರಾಜಕೀಯ. ಅಷ್ಟೇಅಲ್ಲ ಆಂಧ್ರದಲ್ಲಿ, ತೆಲಂಗಾಣದಲ್ಲಿ, ಹರಿಯಾಣದಲ್ಲಿ, ಮದ್ರಾಸ್ ಪ್ರಾಂತ್ಯದಲ್ಲಿ ನಡೆಯುತ್ತಿರುವುದು ಕುಟುಂಬ ರಾಜಕೀಯ. ಅದಕ್ಯಾಕೆ ತಲೆ ಕೆಡಿಸಿಕೊಳ್ಳುತ್ತೀರಿ? ನೀವು ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯಿರಿ’ ಎಂದು ಹೇಳಿ ಬಂದಿದ್ದಾರೆಂದು ಪತ್ರಿಕೆಯಲ್ಲಿ ವರದಿಯಾಗಿದೆ.

ಕುಟುಂಬ ರಾಜಕೀಯ ನಮ್ಮ ದೇಶಕ್ಕೆ ಅಂಟಿರುವ ಮಹಾವ್ಯಾಧಿ. ಇದನ್ನು ಸಮರ್ಥಿಸಿಕೊಳ್ಳುವವರೂ ಇದ್ದಾರೆ ಎಂಬುದು ದೇಶದ ದುರ್ದೈವ.

ನಮ್ಮ ಸಂವಿಧಾನವನ್ನು ರಚಿಸಿದವರು ಭಾರತವು ಪ್ರಜಾತಂತ್ರವನ್ನು ಪಾಲಿಸುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ನಮ್ಮ ಸ್ವಾತಂತ್ರ್ಯ ಸಂಗ್ರಾಮ ನಡೆದಾಗ 562 ಸಂಸ್ಥಾನಿಕ ರಾಜರುಗಳಿದ್ದರು. ನಾವಷ್ಟೇ ಪೃಥ್ವೀಪತಿಗಳೆಂದು ಅವರು ಭಾವಿಸಿದ್ದರು. ಈ ಪೃಥ್ವೀಪತಿಗಳು ದೇವರ ಅಂಶ ಎಂದು ಅಂದಿನ ಸಮಾಜ ಒಪ್ಪಿಕೊಂಡಿತ್ತು. ಇಂಗ್ಲೆಂಡಿನಲ್ಲಿ ಒಂದು ಭಾವನೆಯಿತ್ತು. ಅದೆಂದರೆ The King does no wrong! ರಾಜನು ತಪ್ಪೇ ಮಾಡುವುದಿಲ್ಲ, ತಪ್ಪು ಮಾಡಿದರೂ ಅದನ್ನು ಪ್ರಶ್ನಿಸುವ ಹಕ್ಕು ಪ್ರಜೆಗಿಲ್ಲ ಎಂದೇ ಇದಕ್ಕೆ ಅರ್ಥ.

ಈ ರಾಜರುಗಳಿಗೆ, ತಾವು ಆಳ್ವಿಕೆ ಮಾಡುವ ಈ ರಾಜ್ಯವೆಲ್ಲ ತನ್ನ ಸ್ವತ್ತು, ಇದನ್ನು ಪ್ರಶ್ನಿಸುವ ಹಕ್ಕು ಯಾವ ಪ್ರಜೆಗೂ ಇಲ್ಲ ಎಂಬ ಭಾವನೆ ಇತ್ತು. ಸ್ವಾತಂತ್ರ್ಯ ಬಂದನಂತರ ಸರ್ದಾರ್ ಪಟೇಲರು ಈ 562 ರಾಜರಿಂದಲೂ ರಾಜತ್ವ ಅಧಿಕಾರ ಕಿತ್ತುಕೊಂಡು ಸಂಸ್ಥಾನಗಳಲ್ಲಿ ಪ್ರಜಾರಾಜ್ಯ ಸ್ಥಾಪಿಸಿದರು. ಸ್ವಾತಂತ್ರ್ಯ ಪ್ರಾಪ್ತವಾದ ಈ 72 ವರ್ಷಗಳಲ್ಲಿ ರಾಜಕೀಯ ಬದಲಾಗುತ್ತಾ ಬಂತು. ನೆಹರೂ ಸಂತತಿಯವರು ಕಾಂಗ್ರೆಸ್ಸಿನ ಚುಕ್ಕಾಣಿ ಹಿಡಿದರು. ಅವರನ್ನು ಅನುಸರಿಸಿ ಒಂದೊಂದು ರಾಜ್ಯದಲ್ಲೂ ಒಂದೊಂದು ಮನೆತನದವರೂ ತಾವು ರಚಿಸಿದ ರಾಜಕೀಯ ಪಕ್ಷವನ್ನು ತಮ್ಮ ಕುಟುಂಬ ರಾಜಕೀಯವಾಗಿ ಪರಿವರ್ತನೆ ಮಾಡಿದರು.

ಆದರೆ ಹಾಗೆಂದು ಅವರ್ಯಾರು ಇದನ್ನು ಜಗಜ್ಜಾಹೀರು ಮಾಡಲಿಲ್ಲ. ಚಾಣಾಕ್ಷತೆಯಿಂದ ಕುಟುಂಬ ರಾಜಕೀಯವನ್ನು ಬೆಳೆಸುತ್ತಾ ಬಂದರು. ಮೊದಮೊದಲು ನಮ್ಮದು ಕುಟುಂಬ ರಾಜಕೀಯ ಎಂಬುದನ್ನು ಸಮರ್ಥನೆ ಮಾಡುತ್ತಲೂ ಹಿಂಜರಿಯುತ್ತಿದ್ದರು. ಪ್ರಜಾಪ್ರಭುತ್ವ ತತ್ವಗಳನ್ನೇ ಆಚರಣೆಗೆ ತಂದಿದ್ದೇವೆ ಎಂಬ ಭ್ರಾಂತಿ ಹುಟ್ಟಿಸಿ ತಮ್ಮ ನಿಲುವನ್ನು ಸಮರ್ಥಿಸಿಕೊಳ್ಳಲೂ ಮುಂದಾದರು. ನಮ್ಮ ಮನೆಯವರಿಗೆ ಒಬ್ಬಿಬ್ಬರಿಗೆ ರಾಜಕೀಯ ಪ್ರವೇಶಿಸಲು ಅವಕಾಶ ಕೊಟ್ಟ ಮಾತ್ರಕ್ಕೆ ಇದನ್ನು ಕುಟುಂಬ ರಾಜಕೀಯ ಎಂದು ಏಕೆ ಬೊಬ್ಬೆ ಹೊಡೆಯುತ್ತೀರಿ ಎಂದರು. ಕಾಲಕ್ರಮೇಣ ಮನೆಮಂದಿಗೆಲ್ಲ ಚುನಾವಣೆಗೆ ಸೀಟು ನೀಡಲು ಆರಂಭಿಸಿದಾಗ ಜನಕ್ಕೆ ಇವರ ಹುನ್ನಾರ ಗೊತ್ತಾಯಿತು.

ಜಾತಿಯ ಹೆಸರಿನಲ್ಲಿ ರಾಜಕೀಯ ಮಾಡಿ, ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆಂದು ಜನ ತಿರುಗಿಬಿದ್ದರು. ಚುನಾವಣೆಯಲ್ಲಿ ಆ ಮನೆತನದ ಕೆಲವರನ್ನು ಪರಾಭವಗೊಳಿಸಲು ಉದ್ಯುಕ್ತರಾದರು. ಈಗ ಲೋಕಕ್ಕೆ ಗೊತ್ತಾಯಿತು, ಇವರೆಲ್ಲ ಕುಟುಂಬ ರಾಜಕೀಯಕ್ಕೆ ಪ್ರಜಾಪ್ರಭುತ್ವವನ್ನು ಬಲಿ ಕೊಡುತ್ತಿದ್ದಾರೆಂಬುದು. ಆದರೆ ಕುಟುಂಬ ರಾಜಕೀಯ ನಡೆಸಿದವರಿಗೆ ಈಗ ತಮ್ಮನ್ನು ಸಮರ್ಥಿಸಿಕೊಳ್ಳುವ ಧೈರ್ಯ ಬಂದಿದೆ. ರಾಹುಲ್ ಗಾಂಧಿಗೆ ಕುಮಾರಸ್ವಾಮಿಯವರು ಕುಟುಂಬ ರಾಜಕಾರಣದ ಧೈರ್ಯ ತುಂಬಿ ಬಂದಿದ್ದಾರೆ ಎನ್ನುವ ಸುದ್ದಿ ಇದನ್ನು ಸಾಬೀತು ಮಾಡುತ್ತದೆ.

ಇದು ನಿಜವೇ ಆಗಿದ್ದರೆ, ಭಾರತದ ಪ್ರಜಾಪ್ರಭುತ್ವಕ್ಕೆ ಇದೊಂದು ದೊಡ್ಡ ದುರಂತವಾಗಲಿದೆ. ಜನ ಅಜ್ಞಾನಿಗಳು, ಅಸಹಾಯಕರು, ಅವರನ್ನು ತುಳಿದಷ್ಟು ನಮ್ಮ ಬೇಳೆ ಬೇಯಿಸಿ ಕೊಳ್ಳಬಹುದು ಎಂದು ಈ ಕುಟುಂಬ ರಾಜಕಾರಣದ ಫಲಾನುಭವಿಗಳು ಭಾವಿಸಿರುವಂತಿದೆ.

ಬಹುಶಃ ದೇವೇಗೌಡರಿಗೆ ತಮ್ಮ ಸೋಲಿಗೆ ಕಾರಣ ತಮ್ಮ ಕುಟುಂಬ ರಾಜಕಾರಣ ಎಂಬುದು ಈಗ ಮನವರಿಕೆಯಾಗಿರಬಹುದು. ಆದರೆ ಅದನ್ನು ಅವರೆಲ್ಲು ಬಹಿರಂಗವಾಗಿ ಒಪ್ಪಿಕೊಳ್ಳುತ್ತಿಲ್ಲವಷ್ಟೆ. ಅವರು ಇತ್ತೀಚಿನ ಸಭೆ ಸಮ್ಮೇಳನಗಳಲ್ಲಿ ಅಧಿಕಾರವನ್ನು ಎಲ್ಲ ಕೋಮಿನ ನಾಯಕರೊಡನೆ ಹಂಚಿಕೊಳ್ಳುವ ಮಾತನಾಡುತ್ತಿದ್ದಾರೆ. ಕುಟುಂಬ ರಾಜಕೀಯ ಮುಂದುವರೆಸುತ್ತಾ, ಈ ಸೋಗಲಾಡಿ ನೀತಿಯನ್ನು ಅನುಷ್ಠಾನಕ್ಕೆ ತರುವ ಉದ್ದೇಶ ಅವರದಾಗಿರಬಹುದು. ಜನರನ್ನು ಒಂದು ಸಾರಿಯೋ, ಎರಡು ಸಾರಿಯೋ ಯಾಮಾರಿಸಬಹುದು. ಅವರನ್ನು ಸದಾಕಾಲ ವಂಚಿಸಲು ಸಾಧ್ಯವಿಲ್ಲ ಎಂಬ ಗಾದೆ ಇದೆ.

ದೇವೇಗೌಡರು ಇನ್ನು ಮುಂದಾದರೂ ಕುಟುಂಬ ರಾಜಕೀಯಕ್ಕೆ ವಿದಾಯ ಹಾಡಿ, ನಿಜವಾದ ಪ್ರಜಾಪ್ರಭುತ್ವ ಸ್ಥಾಪನೆಗೆ ತೊಡಗುವುದು ಅವರ ರಾಜಕೀಯ ಇಳಿ ಜೀವನವನ್ನು ಕೊಂಚ ಮುತ್ಸದ್ಧಿತನಕ್ಕೆ ತಂದು ನಿಲ್ಲಿಸಬಹುದು. ಹಾಗೆಂದೇ ನಾನು ವಿನಂತಿಸಿಕೊಳ್ಳುತ್ತೇನೆ.

ಈ ಸಾರಿ ಲೋಕಸಭೆ ಚುನಾವಣೆಯ ಫಲಿತಾಂಶ ನೋಡಿ ಕರ್ನಾಟಕದ ಜನ (ಇದ್ದಕ್ಕಿದ್ದ ಹಾಗೆ) ಮತಾಂಧರಾಗಿ ಬಿಟ್ಟಿದ್ದಾರೆ ಎಂಬ ತೀರ್ಮಾನಕ್ಕೆ ಬರಬೇಡಿ. ಕನ್ನಡ ಸಂಸ್ಕೃತಿಯನ್ನು ಮೈಗೂಡಿಸಿಕೊಂಡ ಅನೇಕ ಶ್ರೇಷ್ಠ ಕವಿಗಳು, ಬರಹಗಾರರು, ವಿಚಾರವಂತರು, ಕಲಾವಿದರು, ಕರ್ನಾಟಕದಲ್ಲಿದ್ದಾರೆ. ಇವರ್ಯಾರು partian ಗಳಲ್ಲ. ಇಂದಿರಾಗಾಂಧಿ ತನ್ನ ಪ್ರಧಾನಿ ಸ್ಥಾನ ಅಭದ್ರವೆಂದೆನಿಸಿದಾಗ ತನ್ನ ಮಕ್ಕಳನ್ನೇ ಅಧಿಕಾರಕ್ಕೆ ತರುವ ವಿಚಾರ ಮಾಡಿದರು. ಅಲ್ಲಿಂದ ಆರಂಭವಾಯಿತು ಕುಟುಂಬ ರಾಜಕಾರಣ. ದೇವೇಗೌಡರು ತನ್ನ ಮಗನನ್ನು ರಾಜಕೀಯಕ್ಕೆ ತಂದಿದ್ದು ಅವರನ್ನು ಗದ್ದುಗೆಗೆ ಕೂಡಿಸುವ ದೃಷ್ಟಿಯಿಂದ. ಭಾಜಪ ಜೊತೆ ಮೈತ್ರಿ ಮಾಡಿಕೊಂಡಿದ್ದು ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡುವ ಏಕೈಕ ಉದ್ದೇಶದಿಂದ. ಆಮೇಲೆ ತಮ್ಮ ಕುಟುಂಬದ ರೇವಣ್ಣ, ಅನಿತಾ, ಭವಾನಿ, ಪ್ರಜ್ವಲ್, ನಿಖಿಲ್ ಕುಮಾರಸ್ವಾಮಿ ಹೀಗೆ ಎಲ್ಲರನ್ನೂ ಒಬ್ಬೊಬ್ಬರನ್ನಾಗಿ ರಾಜಕೀಯಕ್ಕೆ ಎಳೆದರು. ರಾಜಕೀಯ ಸಮ್ಮೇಳನ ನಡೆಸಿ, ಅಲ್ಲಿ ‘ನನ್ನನ್ನೂ ಜನ ಕುಟುಂಬ ರಾಜಕೀಯ ಮಾಡುವವನು ಎಂದು ಜರಿಯುತ್ತಾರೆ’ ಎಂದು ಹೇಳಿ ‘ಗಳಗಳ’ ಅತ್ತುಬಿಟ್ಟರು. ಪತ್ರಿಕಾಗೋಷ್ಠಿಯ ಮುಂದೆಯೂ ದೃಶ್ಯ ಮಾಧ್ಯಮಗಳ ಮುಂದೆಯೂ ಅಳುತ್ತಾ ತಮ್ಮ ಅಳಲನ್ನು ತೋಡಿಕೊಂಡರು. ಮುಂದೆ ಪಾರ್ಲಿಮೆಂಟ್ ಚುನಾವಣೆ ಹತ್ತಿರ ಬರುತ್ತಿದ್ದಂತೆ, ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾ ದಳದ ಮಧ್ಯೆ ಘರ್ಷಣೆ ಆರಂಭವಾಯಿತು. ಇದು ಸಾಲದೆಂಬಂತೆ, ಕಾಂಗ್ರೆಸ್ಸಿನ ಅತೃಪ್ತ ಶಾಸಕರು ಸರ್ಕಾರದ ಇರುವಿಗೆ ಭಂಗ ಬರುವಂತೆ ರೆಸಾರ್ಟ್ ರಾಜಕೀಯಕ್ಕೆ ಮುಂದಾದರು. ಇದೆಲ್ಲ ಕಾರಣದಿಂದ ಕಾಂಗ್ರೆಸ್ ಮತ್ತು ಜಾತ್ಯಾತೀತ ಜನತಾ ದಳ ಅಭ್ಯರ್ಥಿಗಳೆಲ್ಲರೂ ಚುನಾವಣೆಯಲ್ಲಿ ಸೋತರು.

ಈ ಯಾದವಿ ಕಲಹ ಕರ್ನಾಟಕದ ಘಟಾನುಘಟಿ ನಾಯಕರೆಲ್ಲರನ್ನು ಆಹುತಿ ತೆಗೆದುಕೊಂಡಿತು.

ತತ್ವ ರಹಿತ ರಾಜಕೀಯ ಮಾಡುವುದು ಸಪ್ತ ಸಾಮಾಜಿಕ ಪಾತಕಗಳಲ್ಲಿ ಒಂದು ಎಂದು ಗಾಂಧೀಜಿ ಹೇಳಿದ್ದಾರೆ. ಆದರೆ, ಈಗ ಭಾರತದಲ್ಲಿ ಆಚರಣೆಯಲ್ಲಿರುವುದು ಅದೇ ತತ್ವರಹಿತ, ಸ್ವಾರ್ಥಹಿತದ ರಾಜಕೀಯ ಎನ್ನುವ ದುರಂತವನ್ನು ನಾವೆಲ್ಲರೂ
ಒಪ್ಪಿಕೊಳ್ಳಲೇಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...