Homeರಾಜಕೀಯಕುಮಾರಸ್ವಾಮಿ ಪಾಕ್ ಪರವಂತೆ!: ಇದು ಟೈಮ್ಸ್ ನೌ ಹಬ್ಬಿಸಿದ ಹಸೀ ಸುಳ್ಳು

ಕುಮಾರಸ್ವಾಮಿ ಪಾಕ್ ಪರವಂತೆ!: ಇದು ಟೈಮ್ಸ್ ನೌ ಹಬ್ಬಿಸಿದ ಹಸೀ ಸುಳ್ಳು

- Advertisement -
- Advertisement -

ಮಿಥ್ಯ: ಕರ್ನಾಟಕದ ಮುಖ್ಯಮಂತ್ರಿ ಪುಲ್ವಾಮ ವಿಷಯವಾಗಿ ಮಾತನಾಡುವಾಗ ಪಾಕಿಸ್ತಾನದ ಪರ ಮಾತಾಡಿಬಿಟ್ಟರಂತೆ! ಇದು ಟೈಮ್ಸ್ ನೌ ಎಂಬ ಚಾನೆಲ್ಲಿನ ಎಕ್ಸ್‌ಕ್ಲೂಸಿವ್ ವರದಿ. ಈ ಚಾನೆಲ್ ಪ್ರಕಾರ, ಪಾಕಿಸ್ತಾನವನ್ನು ಒಂದು ಭಯೋತ್ಪಾದಕ ದೇಶ ಅಂತ ಘೋಷಿಸಬೇಕಲ್ಲ ಎಂಬ ಪ್ರಶ್ನೆಗೆ ಕುಮಾರಸ್ವಾಮಿ ಉತ್ತರಿಸಲು ನಿರಾಕರಿಸಿದರಂತೆ! ’ಮೊದಲು ನಮ್ಮ ದೇಶದಲ್ಲಿನ ಭಯೋತ್ಪಾದಕ ಸಮಸ್ಯೆಯನ್ನು ಸಾಲ್ವ್ ಮಾಡಿಕೊಳ್ಳೋಣ’ ಅಂದರಂತೆ.

ಕುಮಾರಸ್ವಾಮಿ ವಿರುದ್ಧ ಟೈಮ್ಸ್ ನೌ ಅಪಪ್ರಚಾರ

ಇದನ್ನೇ ಇಟ್ಟುಕೊಂಡು ಮೊನ್ನೆ ಟೈಮ್ಸ್ ನೌ ಅರ್ಧ ಘಂಟೆ ಬ್ರೇಕಿಂಗ್ ಹೊಡೆಯಿತು. ಅದರಲ್ಲಿ ಅದು ಪದೇಪದೇ ’ಕಾಂಗ್ರೆಸ್‌ನ ಮೈತ್ರಿ ಪಕ್ಷದ ಕುಮಾರಸ್ವಾಮಿ’ ಎಂದು ಒತ್ತಿ ಒತ್ತಿ ಹೇಳುತ್ತಲೇ ಇತ್ತು! ಇಷ್ಟಕ್ಕೇ ಕಾಯುತ್ತಿದ್ದ ಭಕ್ತರು ಈ ಕ್ಲಿಪ್ ಇಟ್ಟುಕೊಂಡು ಜಾಲತಾಣಗಳಲ್ಲಿ ತಮ್ಮ ನಿತ್ಯದ ’ದಂಧೆ’ ಶುರು ಹಚ್ಚಿಕೊಂಡಿದ್ದಾರೆ.
ಸತ್ಯ: ಕುಮಾರಸ್ವಾಮಿ ಹಾಗೆಲ್ಲ ಹೇಳುವುದು ಸಾಧ್ಯವೇ ಇಲ್ಲ ಎಂಬುದು ಕನ್ನಡಿಗರಿಗೆ ಗೊತ್ತು. ಕುಮಾರಸ್ವಾಮಿ ಕನ್ನಡದಲ್ಲಿ ಹೇಳಿದ್ದನ್ನು ಆ ಚಾನೆಲ್‌ನ ವರದಿಗಾರ/ರ್ತಿ ತಪ್ಪಾಗಿ ಅನುವಾದ ಮಾಡಿದರಾ? ಪ್ರಶ್ನೆ ಅಷ್ಟು ಸರಳವಾಗಿಲ್ಲ. ಟೈಮ್ಸ್ ನೌ ಮತ್ತು ರಿಪಬ್ಲಿಕ್ ಟಿವಿಗಳಿಗೆ ಹೀಗೆಲ್ಲ ತಿರುಚಿ ಒದರುವುದೇ ಒಂದು ದಂಧೆ. ಅವೆಲ್ಲ ಬಿಜೆಪಿಯ ಪೇಯ್ಡ್ ಚಾನೆಲ್‌ಗಳು.

ಕುಮಾರಸ್ವಾಮಿ ಹೇಳಿದ್ದಿಷ್ಟೇ:
’ಪುಲ್ವಾಮಾದ ಮಾಸ್ಟರ್‌ಮೈಂಡ್‌ನನ್ನು ಹೊಡೆದು ಹಾಕಿದ್ದು ಒಳ್ಳೆಯದೇ, ಆದರೆ ಆ ಸೈನಿಕರ ಸಾವಿನ ನೋವು ಹಾಗೇ ಇದೆ. ಇಂಥದ್ದು ಸಂಭವಿಸದಂತೆ ನಾವೆಲ್ಲ ಎಚ್ಚರ ವಹಿಸಬೇಕು. ಅದು ಸರ್ಕಾರದ ಜವಾಬ್ದಾರಿ…. ’

ಟೈಮ್ಸ್ ನೌ ವಿರುದ್ಧ ಕನ್ನಡಿಗರ ಆಕ್ರೋಶ

’ಪಾಕಿಸ್ತಾನವನ್ನು ಭಯೋತ್ಪಾದಕ ದೇಶ ಎಂದು ಘೋಷಿಸಿವುದು ಒಂದು ಭಾಗವಷ್ಟೇ. ಅದಕ್ಕಿಂತ ಮುಖ್ಯವಾಗಿ ಈ ದೇಶದಲ್ಲಿ ನಡೆಯುತ್ತಿರುವ ಭಯೋತ್ಪಾದಕ ಚಟುವಟಿಕೆಗಳನ್ನು ನಾಶ ಮಾಡಬೇಕು. ಅದನ್ನು ಗನ್ ಬಳಸಿಯೋ ಅಥವಾ ಅವರನ್ನು ವಿಶ್ವಾಸಕ್ಕೆ ತಂದುಕೊಂಡೋ ಮಾಡಬೇಕು. ಅದು ಕೇಂದ್ರದ ಜವಾಬ್ದಾರಿ…’ ಎಲ್ಲೂ ಕುಮಾರಸ್ವಾಮಿ ಪಾಕ್ ಪರ ಮಾತನಾಡಿಯೇ ಇಲ್ಲ.

ಇದೆಲ್ಲವನ್ನೂ ಕುಮಾರಸ್ವಾಮಿ ಕನ್ನಡದಲ್ಲೇ ಹೇಳಿದ್ದಾರೆ. ಆದರೆ ’ಅನುವಾದ’ದ ದ ಸಮಸ್ಯೆಯಿಂದ ಟೈಮ್ಸ್ ನೌ ತಪ್ಪು ಮಾಡಿತೇ? ಇಲ್ಲ, ಖಂಡಿತ ಇಲ್ಲ. ಅದು ಬಿಜೆಪಿ ಪರ ಅಲೆ ಸೃಷ್ಟಿಸಲು ಎಂತಹ ಹೀನ ಕೆಲಸಕ್ಕೂ ರೆಡಿ. ಅದು ಬೇಕೆಂತಲೇ ಇದನ್ನು ಮಾಡಿದೆ-ಅದರ ಪೇಮೇಂಟ್ ಹೆಚ್ಚಿಸಿಕೊಳ್ಳಲು! ಹಲವಾರು ಕನ್ನಡಿಗರು, ’ನಿಮಗೆ ಅನುವಾದವೇ ಗೊತ್ತಿಲ್ಲವಾ?’ ಎಂದು ಉಗಿದ ಮೇಲಷ್ಟೇ ಟೈಮ್ಸ್ ನೌ ಎಲ್ಲ ಮುಚ್ಚಿಕೊಂಡು ಆ ಸುದ್ದಿಯನ್ನು ಡ್ರಾಪ್ ಮಾಡಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋವಾ ನೈಟ್ ಕ್ಲಬ್ ಮಾಲೀಕರ ಮಧ್ಯಂತರ ಜಾಮೀನು ನಿರಾಕರಿಸಿದ ದೆಹಲಿ ನ್ಯಾಯಾಲಯ: ಥೈಲ್ಯಾಂಡ್‌ನಿಂದಲೂ ಗಡಿಪಾರು ಪ್ರಕ್ರಿಯೆ ಆರಂಭ 

ನವದೆಹಲಿ: ಕಳೆದ ವಾರ ಕನಿಷ್ಠ 25 ಜನರ ಸಾವಿಗೆ ಕಾರಣವಾಗಿದ್ದ, ಗೋವಾದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಮತ್ತು ಗೌರವ್ ಲುಥ್ರಾಸ್ ಅವರ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು...

ಮಾದಕ ದ್ರವ್ಯ ಬಳಕೆ-ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ: ಪರಮೇಶ್ವರ್

ಮಾದಕ ದ್ರವ್ಯ ಬಳಕೆಯ ದುಷ್ಪರಿಣಾಮ, ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ, ಪೊಲೀಸ್ ಠಾಣೆಗಳಲ್ಲಿ ನಿಯಮಿತವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗಿರುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ಗುರುವಾರ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ...

ದುಡ್ಡು ಕೊಟ್ಟವರಿಗೆ ರಾಜಾತಿಥ್ಯ, ಪೌರತ್ವಕ್ಕೆ ರಹದಾರಿ : ಏನಿದು ‘ಟ್ರಂಪ್ ಗೋಲ್ಡ್ ಕಾರ್ಡ್’

ಟ್ರಂಪ್ ಆಡಳಿತವು ಬುಧವಾರ (ಡಿಸೆಂಬರ್ 10) ಔಪಚಾರಿಕವಾಗಿ 'ಟ್ರಂಪ್ ಗೋಲ್ಡ್ ಕಾರ್ಡ್'ಗಾಗಿ ಅರ್ಜಿಗಳನ್ನು ಸ್ವೀಕರಿಸಲು ಪ್ರಾರಂಭಿಸಿದೆ. ಇದನ್ನು ಅಮೆರಿಕ ಸರ್ಕಾರ ಕನಿಷ್ಠ 1 ಮಿಲಿಯನ್ ಡಾಲರ್ ಪಾವತಿಸುವ ಜನರಿಗೆ ನೀಡಲು ಯೋಜಿಸಿದೆ. 'ಟ್ರಂಪ್ ಗೋಲ್ಡ್...

ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಜೈಲು ಶಿಕ್ಷೆ ಅಮಾನತು ಮನವಿ ನಿರಾಕರಿಸಿದ ಸುಪ್ರೀಂ ಕೋರ್ಟ್

1996 ರ ಮಾದಕ ದ್ರವ್ಯ ವಶ ಪ್ರಕರಣದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರ 20 ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದರಿಂದ ಗುರುವಾರ ಅವರ ಬಿಡುಗಡೆಗಾಗಿನ ಪ್ರಯತ್ನ...

ಅರುಣಾಚಲ ಪ್ರದೇಶ: ಟ್ರಕ್ ಕಂದಕಕ್ಕೆ ಉರುಳಿ ಅಸ್ಸಾಂ ಮೂಲದ 21 ಕಾರ್ಮಿಕರು ಸಾವನ್ನಪ್ಪಿರುವ ಶಂಕೆ, 18 ಮೃತದೇಹಗಳು ಪತ್ತೆ

ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯಲ್ಲಿ ಅಸ್ಸಾಂನಿಂದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಆಳವಾದ ಕಂದಕಕ್ಕೆ ಉರುಳಿದ್ದು, 21 ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಇಲ್ಲಿಯವರೆಗೆ 18 ಶವಗಳನ್ನು ಹೊರತೆಗೆಯಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.  ಡಿಸೆಂಬರ್ 8ನೇ...

ಜಾರ್ಖಂಡ್‌ನ 27 ಮಕ್ಕಳು ನೇಪಾಳಕ್ಕೆ ಕಳ್ಳಸಾಗಣೆ; ತನಿಖೆ ಆರಂಭಿಸಿದ ಪೊಲೀಸರು

ಉತ್ತಮ ಶಿಕ್ಷಣ ಒದಗಿಸುವ ನೆಪದಲ್ಲಿ 27 ಮಕ್ಕಳನ್ನು ನೇಪಾಳಕ್ಕೆ ಕಳ್ಳಸಾಗಣೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಪೊಲೀಸರು ಗುರುವಾರ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಕ್ಕಳನ್ನು...

ಉಮರ್ ಖಾಲಿದ್‌ಗೆ 14 ದಿನಗಳ ಮಧ್ಯಂತರ ಜಾಮೀನು; ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ಅವಕಾಶ

ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರಿಗೆ ಡಿಸೆಂಬರ್ 27 ರಂದು ನಿಗದಿಯಾಗಿದ್ದ ತಮ್ಮ ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ಡಿಸೆಂಬರ್ 16 ರಿಂದ 29 ರವರೆಗೆ 14 ದಿನಗಳ ಕಾಲ ಮಧ್ಯಂತರ ಜಾಮೀನು ನೀಡಲಾಯಿತು....

ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ; ಕೋಮುವಾದವನ್ನಲ್ಲ: ಮಮತಾ ಬ್ಯಾನರ್ಜಿ

ನಾನು ಕೋಮುವಾದದಲ್ಲಿ ನಂಬಿಕೆ ಇಡುವುದಿಲ್ಲ. ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ. ಚುನಾವಣೆ ಸಮೀಪಿಸಿದಾಗಲೆಲ್ಲಾ, ಬಿಜೆಪಿ ಹಣವನ್ನು ಬಳಸಿ ಇತರ ರಾಜ್ಯಗಳಿಂದ ಜನರನ್ನು ಕರೆತಂದು ಸಾರ್ವಜನಿಕರನ್ನು ವಿಭಜಿಸಲು ಪ್ರಯತ್ನಿಸುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ...

ಅತ್ಯಾಚಾರ ಪ್ರಕರಣದ ವಿಚಾರಣೆ ವರ್ಗಾವಣೆ ಕೋರಿ ಪ್ರಜ್ವಲ್ ರೇವಣ್ಣ ಮನವಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ಬೆಂಗಳೂರಿನ 81ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರು ವಿಚಾರಣೆ ನಡೆಸುತ್ತಿರುವ ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳನ್ನು ಬೇರೆ ಸೆಷನ್ಸ್‌ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್‌...

ಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಲಕ್ಷ ಕಂಠ ಗೀತಾ ಪಾರಾಯಣ (ಸುಮಾರು 5 ಲಕ್ಷ ಜನರಿಂದ ಭಗವದ್ಗೀತೆ ಪಾರಾಯಣ) ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಬಡ ಮುಸ್ಲಿಂ ವ್ಯಾಪಾರಿಗೆ ಥಳಿಸಿದ ಘಟನೆ ಭಾನುವಾರ (ಡಿಸೆಂಬರ್ 7) ಕೋಲ್ಕತ್ತಾದ ಬ್ರಿಗೇಡ್...