Homeಕರ್ನಾಟಕ`ಅರಮನೆಯಲ್ಲಿ ಕುಳಿತರೆ ಆಮ್ಲಜನಕ ಸಿಗದು' - ಸಿಎಂಗೆ ಶಾಸಕ ಎಚ್. ಕೆ. ಪಾಟೀಲ್ ಮುಖಾಮುಖಿ ಕ್ಲಾಸ್!

`ಅರಮನೆಯಲ್ಲಿ ಕುಳಿತರೆ ಆಮ್ಲಜನಕ ಸಿಗದು’ – ಸಿಎಂಗೆ ಶಾಸಕ ಎಚ್. ಕೆ. ಪಾಟೀಲ್ ಮುಖಾಮುಖಿ ಕ್ಲಾಸ್!

- Advertisement -
- Advertisement -

ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಜೆಡಿಎಸ್‌ನ ಕುಮಾರಸ್ವಾಮಿ ಕೊರೊನಾ ನಿರ್ವಹಣೆಗೆ ಸಂಬಂಧಿಸಿದಂತೆ ದಿನವೂ ರಾಜ್ಯ ಸರ್ಕಾರವನ್ನು ಎಚ್ಚರಿಸುತ್ತ ಬಂದಿದ್ದಾರೆ. ಇನ್ನೊಂದು ಕಡೆ ಅಸಂಖ್ಯಾತ ಸಾಮಾಜಿಕ ಸಂಘಟನೆಗಳು ಪ್ರತಿನಿತ್ಯ ಕೋವಿಡ್ ಸಂತ್ರಸ್ತರು ಮತ್ತು ಕುಟುಂಬಗಳಿಗೆ ನೆರವು ನೀಡುತ್ತಿವೆ. ಜೊತೆಗೇ ಪ್ರತಿದಿನ ಹಲವು ನಿರ್ಣಾಯಕ ಪ್ರಶ್ನೆಗಳನ್ನು ಕೇಳುತ್ತಿವೆ. ಆದರೆ, ದುರುದ್ದೇಶದಲ್ಲಿ ಬಿಬಿಎಂಪಿ ಕೋವಿಡ್ ರೂಮ್ ಹೊಕ್ಕ ಸಂಸದ ತೇಜಸ್ವಿ ಸೂರ್ಯ ಮತ್ತು ಪಟಾಲಂನ ಮಾತು ಕೇಳಿ ಸರ್ಕಾರ ಕ್ರಮ ಜರುಗಿಸಿದೆ.

ಆದರೆ ಯಾವುದೋ ಗೊಂದಲದಲ್ಲಿರುವ, ಅಸಹಾಯಕತೆಯಲ್ಲಿರುವಂತೆ ಕಾಣುವ ಸಿಎಂ ಯಡಿಯೂರಪ್ಪ ಏನನ್ನೂ ಸ್ಪಷ್ಟವಾಗಿ ಹೇಳುತ್ತಿಲ್ಲ.

ನಿನ್ನೆ ಬುಧವಾರ, ಆಕ್ಸಿಜನ್ ಪಡೆದುಕೊಳ್ಳುವ ಬಗೆಯನ್ನು ನೇರ ಯಡಿಯೂರಪ್ಪರಿಗೆ ವಿವರಿಸಿರುವ, ಅದಕ್ಕೆ ಅಗತ್ಯವಾದ ವೈಜ್ಞಾನಿಕ ಮತ್ತು ಕಾರ್ಯಸಾಧ್ಯವಾದ ವಿವರಗಳನ್ನು ನೀಡಿ ಬಂದಿರುವ ಮಾಜಿ ಸಚಿವ, ಗದಗಿನ ಹಾಲಿ ಶಾಸಕ ಎಚ್.ಕೆ ಪಾಟೀಲರಿಗೆ, ‘ನೀವು ಆಕ್ಸಿಜನ್ ಕುರಿತು ವಿವರಿಸುವಾಗ ಸಿಎಂ ಸಾಹೇಬರ ಭಾವ, ಮನಸ್ಥಿತಿ ಹೇಗಿತ್ತು?’ ಎಂದು ನಾನುಗೌರಿ.ಕಾಂ ಪ್ರಶ್ನೆ ಮಾಡಿತು.

ಇದನ್ನೂ ಓದಿ: ‘ಬೆಡ್‌ ಬ್ಲಾಕ್‌’ ವಿವಾದ: ಬಿಬಿಎಂಪಿ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಬರೆದ ಭಾವನಾತ್ಮಕ ಪತ್ರ

‘ಒಂಥರಾ ಅಸಹಾಕತೆಯಿದೆ, ಇನ್ನೊಂದು ಕಡೆ ಒಳ ರಾಜಕಾರಣದ ಒತ್ತಡವಿದೆ. ರಾಜ್ಯದಲ್ಲಿ ಆಕ್ಸಿಜನ್ ಸಮಸ್ಯೆ ಬಗ್ಗೆ ಅವರಲ್ಲಿ ವಿವರವಾದ ಮಾಹಿತಿ ಇಲ್ಲ’ ಎಂದು ಪಾಟೀಲ್ ಹೇಳಿದರು.

‘ಸಂಗ್ರಹಣೆ ಸಮಸ್ಯೆ ಇದೆ, ಸಾಗಾಣಿಕೆ ಸಮಸ್ಯೆ ಇದೆ ಎಂದು ಮುಖ್ಯಮಂತ್ರಿ ಹೇಳುತ್ತ ಹೋದರು. ಇದು ಅವರ ಅಜ್ಞಾನವೋ ಅಥವಾ ಟೆನ್ಸನ್ನೋ? ಇಲ್ಲಾ ಈ ತಜ್ಞರ ಸಮಿತಿ ಆಕ್ಸಿಜನ್ ಕುರಿತ ವಾಸ್ತವವನ್ನು ಅವರಿಗೆ ತಿಳಿಸಲಿಲ್ಲವೋ? ’ಅರಮನೆಯಲ್ಲಿ ಕುಳಿತರೆ ಆಮ್ಲಜನಕ ಸಿಗದು’ ಎಂಬುದನ್ನು ಅವರಿಗೆ ಹೇಳಿದೆ. ವಿಧಾನಸೌಧದ ಮೂರನೇ ಮಹಡಿ ಮೇಲೆ ನಿಂತು ನೋಡಿದರೆ ಅಲ್ಲಿಂದಲೇ ಆಕ್ಸಿಜನ್ ಸಂಗ್ರಹಿಸಬಹುದಾದ ಮೂರು ಸ್ಥಳಗಳು ಗೋಚರಿಸುತ್ತವೆ ಎಂಬುದನ್ನೂ ಸಿಎಂ ಅವರಿಗೆ ಹೇಳಿದ್ದೇನೆ.

ಆದರೆ, ಒಟ್ಟಿನಲ್ಲಿ ಈ ಸರ್ಕಾರಕ್ಕೆ ಮೊದಲನೆದಾಗಿ, ರಾಜಕೀಯ ಇಚ್ಛಾಶಕ್ತಿಯಿಲ್ಲ. ಎರಡನೇದಾಗಿ, ಈ ಸರ್ಕಾರದ ಬಳಿ ಸುಸೂತ್ರ ಯೋಜನೆಗಳಿಲ್ಲ, ಸಚಿವರ ನಡುವೆ ಸಮನ್ವತೆಯೇ ಇಲ್ಲ. ಮೂರನೇದಾಗಿ, ಅವರ ಪಕ್ಷದ ಆಂತರಿಕ ಭಿನ್ನಮತವನ್ನು ಈ ಬಿಕ್ಕಟ್ಟಿನ ಸಮಯದಲ್ಲೂ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವ ಹೀನ ಕೆಲಸ ನಡೆದಿದೆ’ ಎಂದರು

ಯಡಿಯೂರಪ್ಪನವರಿಗೆ ಹೇಳಿದ್ದನ್ನು ಅವರು ಲಿಖಿತ ರೂಪದ ಮನವಿಯಲ್ಲೂ ಹೇಳಿದರು. ಯಡಿಯೂರಪ್ಪ ಮನೆಯ ಹೊರಗಡೆ ಮಾಧ್ಯಮಗಳ ಮುಂದೆ ಎಲ್ಲವನ್ನೂ ತಿಳಿಸಿದರು. ’ಅರಮನೆಯಲ್ಲಿ ಕುಳಿತರೆ ಆಮ್ಲಜನಕ ಸಿಗದು’ ಎಂದೂ ಹೇಳಿದರು. ಆದರೆ ತೇಜಸ್ವಿ ಸೂರ್ಯ ಎಂಬ ಪಲಾಯನವಾದಿ, ಕುತಂತ್ರಿ ಸಂಸದನ ಹಿಂದೆ ಸುತ್ತುತ್ತಿದ್ದ ಮಾಧ್ಯಮಗಳಿಗೆ ಎಚ್. ಕೆ. ಪಾಟೀಲ್ ಹೇಳಿದ್ದು ಮುಖ್ಯ ಅನಿಸಲೇ ಇಲ್ಲ.

ಇದನ್ನೂ ಓದಿ: ತೇಜಸ್ವಿ ಸೂರ್ಯ, ನಿಮ್ಮ ಮೆದುಳಲ್ಲಿರುವ ಕೋಮು ವೈರಸ್‌ ಕೊರೊನಾಗಿಂತಲೂ ಅಪಾಯಕಾರಿ, ಚಿಕಿತ್ಸೆ ಪಡ್ಕೊಳ್ಳಿ: ಸಿದ್ದರಾಮಯ್ಯ

ತೇಜಸ್ವಿ ಸೂರ್ಯನಂತೆ ಎಲ್ಲಿಗೋ ಎಚ್. ಕೆ. ಪಾಟೀಲ್ ನುಗ್ಗಲಿಲ್ಲ, ಅವರು ದೇಶದ ಹಲವು ವಿಜ್ಞಾನಿಗಳು, ವೈದ್ಯರು, ಇಂಜಿನಿಯರ್‌ಗಳು ಮತ್ತು ನೀತಿ ನಿರೂಪಕರನ್ನು ಮಾತನಾಡಿಸಿ ಈ ಮನವಿ ತಯಾರಿಸಿದರು.
ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಪ್ರೊ. ಭ್ರಮರ್ ಮುಖರ್ಜಿಯನ್ನು ಉಲ್ಲೇಖಿಸಿದ ಅವರು, ಮೇ ಮಧ್ಯದ ಹೊತ್ತಿಗೆ, 8-15 ಲಕ್ಷ ದೈನಿಕ ಪಾಸಿಟಿವ್ ಪ್ರಕರಣಗಳು ಮತ್ತು ಸುಮಾರು 4,500 ಸಾವುಗಳು ಸಂಭವಿಸಬಹುದು ಎಂದು ಯಡಿಯೂರಪ್ಪನವರಿಗೆ ಹೇಳಿದ್ದಾರೆ.

ಬಳ್ಳಾರಿ, ಕೊಪ್ಪಳ ಮತ್ತು ರಾಜ್ಯಗಳ ವಿವಿಧ ಭಾಗಗಳಲ್ಲಿ ದಿನವೂ ಉತ್ಪಾದನೆಯಾಗುವ ಆಮ್ಲಜನಕ ಪ್ರಮಾಣವನ್ನು ಮತ್ತು ಆ ಸ್ಥಾವರಗಳ ಒಟ್ಟು ಸಾಮರ್ಥ್ಯದ ಮಾಹಿತಿಯನ್ನು ಕೆಮಿಕಲ್ ಇಂಜಿನಿಯರ್ ಡಾ. ಅರುಣ್ ಪಾಟೀಲ್ ಮತ್ತು ಕೆಲವು ಸಣ್ಣ ಉದ್ಯಮಿಗಳ ಮೂಲಕ ಪಡೆದು, ನಿಖರ ಮಾಹಿತಿ ಒದಗಿಸಿರುವ ಎಚ್.ಕೆ.ಪಾಟೀಲರು, ಈ ಸ್ಥಾವರಗಳಿಂದ ಗರಿಷ್ಠ ಉತ್ಪಾದನೆ ಹೇಗೆ ಮಾಡಬಹುದು ಎಂಬುದನ್ನು ವಿಜ್ಞಾನಿಗಳು, ಇಂಜಿನಿಯರ್‌ಗಳ ಉಲ್ಲೇಖಗಳೊಂದಿಗೆ ವಿವರಿಸಿದ್ದಾರೆ.

’ಸಂಗ್ರಹಣೆ ಮತ್ತು ಸಾಗಾಣಿಕೆ ಕಷ್ಟವಾಗಿದೆ’ ಎಂಬ ಯಡಿಯೂರಪ್ಪನವರ ಅಪ್ರಬುದ್ಧ ಅಸಹಾಯಕತೆಗೂ, ಶಾಸಕ ಪಾಟೀಲ್ ಪರಿಹಾರ ಸೂಚಿಸಿದ್ದಾರೆ. ರಾಜ್ಯದಲ್ಲಿ 17 ಲಕ್ಷ ಲೀಟರ್ ದ್ರವ ಆಮ್ಲಜನಕ ಶೇಖರಿಸುವ ಸಾಮರ್ಥ್ಯವಿದೆ ಎಂಬುದನ್ನು ಸಿಎಂಗೆ ವಿವರಿಸಿದ ಅವರು, ಯಾವ ಯಾವ ಪಾಯಿಂಟ್‌ಗಳಲ್ಲಿ ಶೇಖರಣೆ ಮಾಡಬಹುದೆಂಬ ವಿವರಣೆ ನೀಡಿದ್ದಾರೆ.

ಇದನ್ನೂ ಓದಿ: ಕೋವಿಡ್ ಎರಡನೆ ಅಲೆಯ ಸುನಾಮಿ; ಸಕಾರಾತ್ಮಕವಾಗಿ ಮುನ್ನಡೆಯಬೇಕು, ಸರಕಾರಾತ್ಮಕವಾಗಿಯಲ್ಲ

ಸಾಗಾಣಿಕೆ ಸಮಸ್ಯೆ ಕುರಿತು ತಜ್ಞರೊಂದಿಗೆ ಮಾತನಾಡಿರುವ ಅವರು, ನೈಟ್ರೋಜನ್ ಟ್ಯಾಂಕರುಗಳ ವಾಲ್ವ್ ಚೇಂಜ್ ಮಾಡಿ, ಅದಕ್ಕೆ ಕಾಪರ್ (ಸತುವಿನ) ವಾಲ್ವ್ ಹಾಕಿದರೆ ಸಮಸ್ಯೆ ಬಗೆಹರಿದಂತೆ. ಇದು ಎರಡು ದಿನದ ಕೆಲಸ ಎಂದಿದ್ದಾರೆ.

ನಾನುಗೌರಿ.ಕಾಂ ಜೊತೆ ಈ ವಿಷಯವಾಗಿ ಮಾತನಾಡಿದ ಅವರು, “ನಮ್ಮ ವಾಯುಸೇನೆಯ ವಿಮಾನಗಳನ್ಮು ಯಾವುದೋ ಕಾರಣಕ್ಕೆ ಮನರಂಜನೆಗೆ ಹಾರಿಸುತ್ತದೆ ಕೇಂದ್ರ ಸರ್ಕಾರ. ಈಗ ರಾಜ್ಯ ಸರ್ಕಾರವು, ಕೇಂದ್ರ ಮತ್ತು ಮೋದಿಯವರಿಗೆ ವಾಯುದಳದ ವಿಮಾನ ಒದಗಿಸಲು ಒತ್ತಡ ಹಾಕಬೇಕು. ದುಬಾರಿ ಸೇನಾ ವಿಮಾನಗಳು ಮೇಲಿನಿಂದ ಹೂ ಚೆಲ್ಲುವುದಕ್ಕಲ್ಲ, ಜನರು ಸಾಯುತ್ತಿರುವಾಗ ಅವನ್ನು ಆಕ್ಸಿಜನ್ ಪೂರೈಕೆಗೆ ಬಳಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಳ್ಳಾರಿಯ ತೋರಣಘಟ್ಟ ವಿಮಾನ ನಿಲ್ದಾಣದಿಂದ ದ್ರವ ಆಮ್ಲಜನಕದ ಟ್ಯಾಂಕರ್‌ಗಳನ್ನು ಏರ್ ಕಾರ್ಗೊದಲ್ಲಿ ಕಳಿಸಿದರೆ ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣ ತಲುಪಲು ಒಂದು ತಾಸೂ ಹಿಡಿಯುವುದಿಲ್ಲ. ನಂತರ ಮಾರತ್‌ಹಳ್ಳಿಯ ಸಂಗ್ರಾಹಾರ ಮತ್ತು ಐಐಎಸ್‌ಸಿಯ ಯು. ಅರ್. ರಾವ್ ಸಂಗ್ರಹಾರಕ್ಕೆ ಕಳಿಸುವುದೇನೂ ಸಮಸ್ಯೆ ಅಲ್ಲ ಎಂದರು.

ಇದನ್ನೂ ಓದಿ: ಬೆಂಬಲಿಗರನ್ನು ಸೆಳೆಯಲು ‘ಪಾಕಿಸ್ತಾನಿ’ ಯುವತಿಯ ಫೋಟೊ ಬಳಸುತ್ತಿರುವ BJP ಐಟಿ ಸೆಲ್!

’ಆದರೆ ರಾಜಕೀಯ ಇಚ್ಛಾಶಕ್ತಿಯೇ ಇಲ್ಲದ, ಇಂತಹ ದುರಂತದ ಸಮಯದಲ್ಲೂ ಕೇಂದ್ರ ಸರ್ಕಾರದ ಮುಂದೆ ಹಕ್ಕು ಮಂಡಿಸದ ರಾಜ್ಯ ಸರ್ಕಾರ ನಿರ್ಜೀವವಾಗಿದೆ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.

`ನೀವು ವಿರೋಧ ಪಕ್ಷದವರಾಗಿ ಇಂತಹ ಪಾಸಿಟಿವ್ ಸಲಹೆ ನೀಡ್ತಾ ಇದ್ದೀರಾ…ಹೈಕೋರ್ಟ್ ಕೂಡ ಕೇಂದ್ರಕ್ಕೆ ರಾಜ್ಯದ ಪಾಲಿನ ಆಕ್ಸಿಜನ್ ಒದಗಿಸಿ ಎಂದು ತರಾಟೆಗೆ ತೆಗೆದುಕೊಂಡಿದೆ.. ಆದರೆ ನಮ್ಮ 25 ಬಿಜೆಪಿ ಸಂಸದರು ಧ್ವನಿ ಎತ್ತಾನೇ ಇಲ್ವಲ್ಲ?’ ಎಂಬ ಪ್ರಶ್ನೆಗೆ ಉತ್ತರಿಸಿದ ಎಚ್ ಕೆ ಪಾಟೀಲ್, `ಈ ಬಗ್ಗೆ ಏನು ಹೇಳಬೇಕೋ ತಿಳಿಯದಾಗಿದೆ. ಅವರ (ಬಿಜೆಪಿ) ಭಾಷೆಯಲ್ಲಿ ಬಯ್ಯೋದೊಂದೇ ಬಾಕಿ ಉಳಿದಿದೆ’ ಎಂದರು.

ದಿಢೀರನೆ ಬಂದು ಕಲ್ಲು ತೂರಿ ಪರಾರಿ ಆಗಿರುವ ಸಂಸದ ತೇಜಸ್ವಿ ಸೂರ್ಯ ಅವರ ಬಗ್ಗೆ ಕೇಳಿದಾಗ, “ಇಂತಹ ನೀಚರನ್ನು ಇಟ್ಟುಕೊಂಡು ಕೋವಿಡ್ ನಿಯಂತ್ರಣ ಸಾಧ್ಯವೇ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಅವರ ಮನವಿಯನ್ನು ಅಂದರೆ ಯಡಿಯೂರಪ್ಪನವರಿಗೆ ಅವರು ಹೇಳಿದ್ದನ್ನು ಇಲ್ಲಿ ಹಾಕಿದ್ದೇವೆ, ಓದಿ..

ಇದನ್ನೂ ಓದಿ: ‘ಬೆನ್ನೆಲುಬಿಲ್ಲದ ಮೋದಿ’ ‘ಡೈಪರ್‌ ಸೂರ್ಯ ಎಕ್ಸ್‌ಪೋಸ್ಡ್’- ಟ್ವಿಟರ್‌ನಲ್ಲಿ BJP ವಿರೋಧಿ ಹವಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...